Homeಚಳವಳಿಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

- Advertisement -
- Advertisement -
| ಬಿ. ಶ್ರೀಪಾದ ಭಟ್ |

ಓದುಗರಿಗೆ ಸೂಚನೆ:
ಈ ಲೇಖನದ ನಿರೂಪಣೆ ಡಿ.ಎನ್.ಶಂಕರಬಟ್ ಅವರ ಬಾಶಾ ಪ್ರಯೋಗಕ್ಕೆ ಒಳಪಟ್ಟಿದೆ. ಮಹಾಪ್ರಾಣದ ಬಳಕೆ, ಷ-ಶ ಬಳಕೆ ಸೇರಿದಂತೆ ಕೆಲವು ಹೊಸ ಸಂಗತಿಗಳನ್ನು ಅವರು ಬಲವಾಗಿ ಪ್ರತಿಪಾದಿಸುತ್ತಿದ್ದು, ಕೆಲವು ಲೇಕಕರು ಅದನ್ನು ಅನುಸರಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಈ ಲೇಕನದಲ್ಲಿನ ಬಾಶೆಯ ಬಳಕೆಯಲ್ಲಿ ನಿಮಗೆ ಕಂಡುಬರುವ ವ್ಯತ್ಯಾಸವನ್ನು, ಪ್ರೂಫ್ ವ್ಯತ್ಯಾಸ ಎಂದು ಬಗೆಯಬಾರದೆಂದು ಕೋರುತ್ತೇವೆ.

ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಕೊಡಬೇಕು, ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಅವಕಾಶ ಕೊಡಬೇಕು ಎನ್ನುವ ಮಾತಿನಲ್ಲಿ ಸಹಮತ ಇದೆ. ಆದ್ರೆ ಇದು ಕೇವಲ ಬಾವನಾತ್ಮಕ ನೆಲೆಯ ಮಾದರಿಗೆ ಸೀಮಿತಗೊಂಡರೆ ಉಪಯೋಗವಿಲ್ಲ. ಇದು ಸಮಾಜೋ-ಆರ್ಥಿಕ ಆಯಾಮಗಳನ್ನ ಒಳಗೊಳ್ಳಬೇಕು. ಮೊನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅದಿಕಾರಿಗಳು ಹಿರಿಯ ಪ್ರಾಥಮಿಕ ಶಾಲೆಗಳಿಗೆ 10,000 ಶಿಕ್ಷಕರ ನೇಮಕಾತಿ ಸಾದ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದಕ್ಕೆ ಅವರು ಗುಣಮಟ್ಟದ ಅಬ್ಯರ್ಥಿಗಳು ದೊರೆಯುತ್ತಿಲ್ಲ ಎಂದು ಕಾರಣ ನೀಡಿದರು.
ಕರ್ನಾಟಕದಲ್ಲಿಯೆ ಪದವಿ ಶಿಕ್ಷಣ ಪಡೆದು, ನಂತರ ಬಿಎಡ್ ಮುಗಿಸಿ ನಂತರ ಟಿಇಟಿ ಮುಗಿಸಿ ನಂತರ ಸಿಇಟಿ ಅರ್ಹತಾ ಪರೀಕ್ಷೆ ಬರೆಯುವ ಲಕ್ಷಾಂತರ ಕನ್ನಡಿಗರಲ್ಲಿ ಅರ್ಹತೆ ಇರುವವರು ದೊರಕುತ್ತಿಲ್ಲ ಎಂದರೆ ಇದು ಉಡಾಫೆ ಮತ್ತು ಬೇಜವಬ್ದಾರಿಯ ಮಾತು. ಅಬ್ಯರ್ಥಿಗಳು ಎಲ್ಲಾ ಹಂತದ ಶಿಕ್ಷಣವನ್ನು ಕರ್ನಾಟಕದಲ್ಲಿಯೆ ಪಡೆದುಕೊಳ್ಳುತ್ತಾರೆ. ಆದರೆ ಗುಣಮಟ್ಟದ ಅಬ್ಯರ್ಥಿಗಳು ದೊರಕುತ್ತಿಲ್ಲವೆಂದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರ ತಾನು ನೀಡುತ್ತಿರುವ ಶಿಕ್ಷಣವೆ ಕಳಪೆ ಗುಣಮಟ್ಟದ್ದು ಎಂದು ಒಪ್ಪಿಕೊಳ್ಳುತ್ತಿದ್ದಾರೆಯೆ? ಗುಣಮಟ್ಟದ ಅಬ್ಯರ್ಥಿಗೋಸ್ಕರ ಇನ್ನೂ ಎಶ್ಟು ಹಂತದ ಪರೀಕ್ಷೆಗಳನ್ನ ನಡೆಸುತ್ತಾರೆ? ಇಲ್ಲಿ ಸರಕಾರದ ನಿಜದ ಉದ್ದೇಶವೇನು? ಇಲ್ಲಿ ಕನ್ನಡಿಗ ಅಬ್ಯರ್ಥಿಗಳಿದ್ದರೂ ನೇಮಕಾತಿ ಆಗುತ್ತಿಲ್ಲ. ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಸಾವಿರಾರು ಬ್ಯಾಕ್ ಲಾಗ್ ಹುದ್ದೆಗಳು (ಪ್ರವರ್ಗ) ಖಾಲಿ ಇವೆ. ಆದರೆ ಅವುಗಳಿಗೆ  ನೇಮಕಾತಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿ ಅಬ್ಯರ್ಥಿಗಳೆಲ್ಲರೂ ಸಹಜವಾಗಿಯೆ ಕನ್ನಡಿಗರು ಆಗಿರುತ್ತಾರೆ. ಇದನ್ನು ಪ್ರಶ್ನಿಸಿ ಹೋರಾಟ ಮಾಡಬೇಕು. ಈ ಬಿಕ್ಕಟ್ಟು ಬಗೆಹರಿಯದೆ  ಕನ್ನಡಿಗರಿಗೆ ಮಾತ್ರ ಉದ್ಯೋಗ ಎನ್ನುವುದು ಮೇಲ್ಮಟ್ಟದಲ್ಲಿ ಉಳಿದುಕೊಂಡುಬಿಡುತ್ತದೆ.
ಮತ್ತೊಂದೆಡೆ ದುಡಿಯುವ ವರ್ಗದ ಜನರು ಯಾಕೆ ತಮ್ಮ ಹುಟ್ಟಿದ ಊರನ್ನು ತೊರೆದು ಹೊಟ್ಟೆಪಾಡಿಗೆ ಬೇರೆ ಊರಿಗೆ, ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತಾರೆ? ಇಲ್ಲಿ ಸರಕಾರದ ವೈಫಲ್ಯದ ಪಾತ್ರವೆಶ್ಟು? ಅದರ ದಿವಾಳಿ ಎದ್ದ ಆರ್ಥಿಕ ನೀತಿಗಳು ಈ ನಿರುದ್ಯೋಗಕ್ಕೆ, ವಲಸೆಗೆ ಮೂಲ ಕಾರಣ. ಇದಕ್ಕೆ ಮೊದಲು ಪರಿಹಾರ ಕಂಡುಕೊಳ್ಳಬೇಕು. ಇನ್ನು ಸರಕಾರಗಳು ಸ್ಥಳೀಯವಾಗಿ ಪರ್ಯಾಯ ಉದ್ಯೋಗಗಳನ್ನ ಸೃಶ್ಟಿ ಮಾಡದೆ ಇರುವುದು ಅಲ್ಲಿನ ಸ್ಥಳೀಯರು ವಲಸೆ ಹೋಗಲು ಮುಖ್ಯ ಕಾರಣಗಳಲ್ಲೊಂದು. ಉದಾಹರಣೆಗೆ ಕಲ್ಬುರ್ಗಿ ಜಿಲ್ಲೆಯ ಮುಖ್ಯ ಬೆಳೆ ತೊಗರಿ. ಆದರೆ ಬೆಳೆದ ತೊಗರಿಯನ್ನು ಬೇಳೆಯಾಗಿ ಪರಿವರ್ತಿಸಲು ಪಕ್ಕದ ಮಹರಾಶ್ಟ್ರ ರಾಜ್ಯಕ್ಕೆ ಕಳುಹಿಸಬೇಕು. ಅದರ ಬದಲು ಸರಕಾರವು ಈ ತೊಗರಿಯ ಬೇಳೆಯಾಗಿ ಪರಿವರ್ತಿಸುವ ಉದ್ಯಮವನ್ನ ಕಲ್ಬುರ್ಗಿಯಲ್ಲಿಯೆ ಸ್ಥಾಪಿಸಬೇಕು. ಆಗ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕುತ್ತದೆ. ಅವರು ಬೇರೆ ಊರು, ರಾಜ್ಯಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ಇದು ಬೇರೆ ರಾಜ್ಯಗಳಿಂದ ಬರುವ ವಲಸಿಗರಿಗೂ ಅನ್ವಯಿಸುತ್ತದೆ. ಇದೊಂದು ಉದಾಹರಣೆ. ಇಂತಹ ನೂರಾರು ಅವಕಾಶಗಳಿವೆ. ಉದ್ಯೋಗ ಅವಕಾಶಗಳ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಬೇಕು.
ಇನ್ನು ಸರಕಾರಿ ಉದ್ಯೋಗ ಅವಕಾಶಗಳ ಪ್ರಮಾಣವೆಶ್ಟು? ಶೇಕಡ 2% ಕ್ಕಿಂತಲೂ ಕಡಿಮೆ. ನಿರುದ್ಯೋಗಿ  ಕನ್ನಡಿಗರೆಶ್ಟು? ಲಕ್ಷಗಳ ಸಂಖ್ಯೆಯಲ್ಲಿದ್ದಾರೆ. ಹಾಗಿದ್ದಲ್ಲಿ ಉದ್ಯೋಗ ಅವಕಾಶ ಮತ್ತು ಉದ್ಯೋಗಾಂಕ್ಷಿಗಳ ಅನುಪಾತದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಇದಕ್ಕೆ ಪರಿಹಾರವೇನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದೆ ಹೋದರೆ ಮಿಕ್ಕಂತೆ ಎಲ್ಲವೂ ರಬಸದ ಹಾಗೆ ಬಂದು ಹೀಗೆ ತೇಲಿ ಹೋಗುವ ಮಾತುಗಳಾಗುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...