Homeಚಳವಳಿಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

- Advertisement -
- Advertisement -
| ಬಿ. ಶ್ರೀಪಾದ ಭಟ್ |

ಓದುಗರಿಗೆ ಸೂಚನೆ:
ಈ ಲೇಖನದ ನಿರೂಪಣೆ ಡಿ.ಎನ್.ಶಂಕರಬಟ್ ಅವರ ಬಾಶಾ ಪ್ರಯೋಗಕ್ಕೆ ಒಳಪಟ್ಟಿದೆ. ಮಹಾಪ್ರಾಣದ ಬಳಕೆ, ಷ-ಶ ಬಳಕೆ ಸೇರಿದಂತೆ ಕೆಲವು ಹೊಸ ಸಂಗತಿಗಳನ್ನು ಅವರು ಬಲವಾಗಿ ಪ್ರತಿಪಾದಿಸುತ್ತಿದ್ದು, ಕೆಲವು ಲೇಕಕರು ಅದನ್ನು ಅನುಸರಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಈ ಲೇಕನದಲ್ಲಿನ ಬಾಶೆಯ ಬಳಕೆಯಲ್ಲಿ ನಿಮಗೆ ಕಂಡುಬರುವ ವ್ಯತ್ಯಾಸವನ್ನು, ಪ್ರೂಫ್ ವ್ಯತ್ಯಾಸ ಎಂದು ಬಗೆಯಬಾರದೆಂದು ಕೋರುತ್ತೇವೆ.

ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಕೊಡಬೇಕು, ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಅವಕಾಶ ಕೊಡಬೇಕು ಎನ್ನುವ ಮಾತಿನಲ್ಲಿ ಸಹಮತ ಇದೆ. ಆದ್ರೆ ಇದು ಕೇವಲ ಬಾವನಾತ್ಮಕ ನೆಲೆಯ ಮಾದರಿಗೆ ಸೀಮಿತಗೊಂಡರೆ ಉಪಯೋಗವಿಲ್ಲ. ಇದು ಸಮಾಜೋ-ಆರ್ಥಿಕ ಆಯಾಮಗಳನ್ನ ಒಳಗೊಳ್ಳಬೇಕು. ಮೊನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅದಿಕಾರಿಗಳು ಹಿರಿಯ ಪ್ರಾಥಮಿಕ ಶಾಲೆಗಳಿಗೆ 10,000 ಶಿಕ್ಷಕರ ನೇಮಕಾತಿ ಸಾದ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದಕ್ಕೆ ಅವರು ಗುಣಮಟ್ಟದ ಅಬ್ಯರ್ಥಿಗಳು ದೊರೆಯುತ್ತಿಲ್ಲ ಎಂದು ಕಾರಣ ನೀಡಿದರು.
ಕರ್ನಾಟಕದಲ್ಲಿಯೆ ಪದವಿ ಶಿಕ್ಷಣ ಪಡೆದು, ನಂತರ ಬಿಎಡ್ ಮುಗಿಸಿ ನಂತರ ಟಿಇಟಿ ಮುಗಿಸಿ ನಂತರ ಸಿಇಟಿ ಅರ್ಹತಾ ಪರೀಕ್ಷೆ ಬರೆಯುವ ಲಕ್ಷಾಂತರ ಕನ್ನಡಿಗರಲ್ಲಿ ಅರ್ಹತೆ ಇರುವವರು ದೊರಕುತ್ತಿಲ್ಲ ಎಂದರೆ ಇದು ಉಡಾಫೆ ಮತ್ತು ಬೇಜವಬ್ದಾರಿಯ ಮಾತು. ಅಬ್ಯರ್ಥಿಗಳು ಎಲ್ಲಾ ಹಂತದ ಶಿಕ್ಷಣವನ್ನು ಕರ್ನಾಟಕದಲ್ಲಿಯೆ ಪಡೆದುಕೊಳ್ಳುತ್ತಾರೆ. ಆದರೆ ಗುಣಮಟ್ಟದ ಅಬ್ಯರ್ಥಿಗಳು ದೊರಕುತ್ತಿಲ್ಲವೆಂದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರ ತಾನು ನೀಡುತ್ತಿರುವ ಶಿಕ್ಷಣವೆ ಕಳಪೆ ಗುಣಮಟ್ಟದ್ದು ಎಂದು ಒಪ್ಪಿಕೊಳ್ಳುತ್ತಿದ್ದಾರೆಯೆ? ಗುಣಮಟ್ಟದ ಅಬ್ಯರ್ಥಿಗೋಸ್ಕರ ಇನ್ನೂ ಎಶ್ಟು ಹಂತದ ಪರೀಕ್ಷೆಗಳನ್ನ ನಡೆಸುತ್ತಾರೆ? ಇಲ್ಲಿ ಸರಕಾರದ ನಿಜದ ಉದ್ದೇಶವೇನು? ಇಲ್ಲಿ ಕನ್ನಡಿಗ ಅಬ್ಯರ್ಥಿಗಳಿದ್ದರೂ ನೇಮಕಾತಿ ಆಗುತ್ತಿಲ್ಲ. ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಸಾವಿರಾರು ಬ್ಯಾಕ್ ಲಾಗ್ ಹುದ್ದೆಗಳು (ಪ್ರವರ್ಗ) ಖಾಲಿ ಇವೆ. ಆದರೆ ಅವುಗಳಿಗೆ  ನೇಮಕಾತಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿ ಅಬ್ಯರ್ಥಿಗಳೆಲ್ಲರೂ ಸಹಜವಾಗಿಯೆ ಕನ್ನಡಿಗರು ಆಗಿರುತ್ತಾರೆ. ಇದನ್ನು ಪ್ರಶ್ನಿಸಿ ಹೋರಾಟ ಮಾಡಬೇಕು. ಈ ಬಿಕ್ಕಟ್ಟು ಬಗೆಹರಿಯದೆ  ಕನ್ನಡಿಗರಿಗೆ ಮಾತ್ರ ಉದ್ಯೋಗ ಎನ್ನುವುದು ಮೇಲ್ಮಟ್ಟದಲ್ಲಿ ಉಳಿದುಕೊಂಡುಬಿಡುತ್ತದೆ.
ಮತ್ತೊಂದೆಡೆ ದುಡಿಯುವ ವರ್ಗದ ಜನರು ಯಾಕೆ ತಮ್ಮ ಹುಟ್ಟಿದ ಊರನ್ನು ತೊರೆದು ಹೊಟ್ಟೆಪಾಡಿಗೆ ಬೇರೆ ಊರಿಗೆ, ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತಾರೆ? ಇಲ್ಲಿ ಸರಕಾರದ ವೈಫಲ್ಯದ ಪಾತ್ರವೆಶ್ಟು? ಅದರ ದಿವಾಳಿ ಎದ್ದ ಆರ್ಥಿಕ ನೀತಿಗಳು ಈ ನಿರುದ್ಯೋಗಕ್ಕೆ, ವಲಸೆಗೆ ಮೂಲ ಕಾರಣ. ಇದಕ್ಕೆ ಮೊದಲು ಪರಿಹಾರ ಕಂಡುಕೊಳ್ಳಬೇಕು. ಇನ್ನು ಸರಕಾರಗಳು ಸ್ಥಳೀಯವಾಗಿ ಪರ್ಯಾಯ ಉದ್ಯೋಗಗಳನ್ನ ಸೃಶ್ಟಿ ಮಾಡದೆ ಇರುವುದು ಅಲ್ಲಿನ ಸ್ಥಳೀಯರು ವಲಸೆ ಹೋಗಲು ಮುಖ್ಯ ಕಾರಣಗಳಲ್ಲೊಂದು. ಉದಾಹರಣೆಗೆ ಕಲ್ಬುರ್ಗಿ ಜಿಲ್ಲೆಯ ಮುಖ್ಯ ಬೆಳೆ ತೊಗರಿ. ಆದರೆ ಬೆಳೆದ ತೊಗರಿಯನ್ನು ಬೇಳೆಯಾಗಿ ಪರಿವರ್ತಿಸಲು ಪಕ್ಕದ ಮಹರಾಶ್ಟ್ರ ರಾಜ್ಯಕ್ಕೆ ಕಳುಹಿಸಬೇಕು. ಅದರ ಬದಲು ಸರಕಾರವು ಈ ತೊಗರಿಯ ಬೇಳೆಯಾಗಿ ಪರಿವರ್ತಿಸುವ ಉದ್ಯಮವನ್ನ ಕಲ್ಬುರ್ಗಿಯಲ್ಲಿಯೆ ಸ್ಥಾಪಿಸಬೇಕು. ಆಗ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕುತ್ತದೆ. ಅವರು ಬೇರೆ ಊರು, ರಾಜ್ಯಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ಇದು ಬೇರೆ ರಾಜ್ಯಗಳಿಂದ ಬರುವ ವಲಸಿಗರಿಗೂ ಅನ್ವಯಿಸುತ್ತದೆ. ಇದೊಂದು ಉದಾಹರಣೆ. ಇಂತಹ ನೂರಾರು ಅವಕಾಶಗಳಿವೆ. ಉದ್ಯೋಗ ಅವಕಾಶಗಳ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಬೇಕು.
ಇನ್ನು ಸರಕಾರಿ ಉದ್ಯೋಗ ಅವಕಾಶಗಳ ಪ್ರಮಾಣವೆಶ್ಟು? ಶೇಕಡ 2% ಕ್ಕಿಂತಲೂ ಕಡಿಮೆ. ನಿರುದ್ಯೋಗಿ  ಕನ್ನಡಿಗರೆಶ್ಟು? ಲಕ್ಷಗಳ ಸಂಖ್ಯೆಯಲ್ಲಿದ್ದಾರೆ. ಹಾಗಿದ್ದಲ್ಲಿ ಉದ್ಯೋಗ ಅವಕಾಶ ಮತ್ತು ಉದ್ಯೋಗಾಂಕ್ಷಿಗಳ ಅನುಪಾತದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಇದಕ್ಕೆ ಪರಿಹಾರವೇನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದೆ ಹೋದರೆ ಮಿಕ್ಕಂತೆ ಎಲ್ಲವೂ ರಬಸದ ಹಾಗೆ ಬಂದು ಹೀಗೆ ತೇಲಿ ಹೋಗುವ ಮಾತುಗಳಾಗುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...