Homeಚಳವಳಿಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

- Advertisement -
- Advertisement -
| ಬಿ. ಶ್ರೀಪಾದ ಭಟ್ |

ಓದುಗರಿಗೆ ಸೂಚನೆ:
ಈ ಲೇಖನದ ನಿರೂಪಣೆ ಡಿ.ಎನ್.ಶಂಕರಬಟ್ ಅವರ ಬಾಶಾ ಪ್ರಯೋಗಕ್ಕೆ ಒಳಪಟ್ಟಿದೆ. ಮಹಾಪ್ರಾಣದ ಬಳಕೆ, ಷ-ಶ ಬಳಕೆ ಸೇರಿದಂತೆ ಕೆಲವು ಹೊಸ ಸಂಗತಿಗಳನ್ನು ಅವರು ಬಲವಾಗಿ ಪ್ರತಿಪಾದಿಸುತ್ತಿದ್ದು, ಕೆಲವು ಲೇಕಕರು ಅದನ್ನು ಅನುಸರಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಈ ಲೇಕನದಲ್ಲಿನ ಬಾಶೆಯ ಬಳಕೆಯಲ್ಲಿ ನಿಮಗೆ ಕಂಡುಬರುವ ವ್ಯತ್ಯಾಸವನ್ನು, ಪ್ರೂಫ್ ವ್ಯತ್ಯಾಸ ಎಂದು ಬಗೆಯಬಾರದೆಂದು ಕೋರುತ್ತೇವೆ.

ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಕೊಡಬೇಕು, ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಅವಕಾಶ ಕೊಡಬೇಕು ಎನ್ನುವ ಮಾತಿನಲ್ಲಿ ಸಹಮತ ಇದೆ. ಆದ್ರೆ ಇದು ಕೇವಲ ಬಾವನಾತ್ಮಕ ನೆಲೆಯ ಮಾದರಿಗೆ ಸೀಮಿತಗೊಂಡರೆ ಉಪಯೋಗವಿಲ್ಲ. ಇದು ಸಮಾಜೋ-ಆರ್ಥಿಕ ಆಯಾಮಗಳನ್ನ ಒಳಗೊಳ್ಳಬೇಕು. ಮೊನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅದಿಕಾರಿಗಳು ಹಿರಿಯ ಪ್ರಾಥಮಿಕ ಶಾಲೆಗಳಿಗೆ 10,000 ಶಿಕ್ಷಕರ ನೇಮಕಾತಿ ಸಾದ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದಕ್ಕೆ ಅವರು ಗುಣಮಟ್ಟದ ಅಬ್ಯರ್ಥಿಗಳು ದೊರೆಯುತ್ತಿಲ್ಲ ಎಂದು ಕಾರಣ ನೀಡಿದರು.
ಕರ್ನಾಟಕದಲ್ಲಿಯೆ ಪದವಿ ಶಿಕ್ಷಣ ಪಡೆದು, ನಂತರ ಬಿಎಡ್ ಮುಗಿಸಿ ನಂತರ ಟಿಇಟಿ ಮುಗಿಸಿ ನಂತರ ಸಿಇಟಿ ಅರ್ಹತಾ ಪರೀಕ್ಷೆ ಬರೆಯುವ ಲಕ್ಷಾಂತರ ಕನ್ನಡಿಗರಲ್ಲಿ ಅರ್ಹತೆ ಇರುವವರು ದೊರಕುತ್ತಿಲ್ಲ ಎಂದರೆ ಇದು ಉಡಾಫೆ ಮತ್ತು ಬೇಜವಬ್ದಾರಿಯ ಮಾತು. ಅಬ್ಯರ್ಥಿಗಳು ಎಲ್ಲಾ ಹಂತದ ಶಿಕ್ಷಣವನ್ನು ಕರ್ನಾಟಕದಲ್ಲಿಯೆ ಪಡೆದುಕೊಳ್ಳುತ್ತಾರೆ. ಆದರೆ ಗುಣಮಟ್ಟದ ಅಬ್ಯರ್ಥಿಗಳು ದೊರಕುತ್ತಿಲ್ಲವೆಂದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರ ತಾನು ನೀಡುತ್ತಿರುವ ಶಿಕ್ಷಣವೆ ಕಳಪೆ ಗುಣಮಟ್ಟದ್ದು ಎಂದು ಒಪ್ಪಿಕೊಳ್ಳುತ್ತಿದ್ದಾರೆಯೆ? ಗುಣಮಟ್ಟದ ಅಬ್ಯರ್ಥಿಗೋಸ್ಕರ ಇನ್ನೂ ಎಶ್ಟು ಹಂತದ ಪರೀಕ್ಷೆಗಳನ್ನ ನಡೆಸುತ್ತಾರೆ? ಇಲ್ಲಿ ಸರಕಾರದ ನಿಜದ ಉದ್ದೇಶವೇನು? ಇಲ್ಲಿ ಕನ್ನಡಿಗ ಅಬ್ಯರ್ಥಿಗಳಿದ್ದರೂ ನೇಮಕಾತಿ ಆಗುತ್ತಿಲ್ಲ. ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಸಾವಿರಾರು ಬ್ಯಾಕ್ ಲಾಗ್ ಹುದ್ದೆಗಳು (ಪ್ರವರ್ಗ) ಖಾಲಿ ಇವೆ. ಆದರೆ ಅವುಗಳಿಗೆ  ನೇಮಕಾತಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿ ಅಬ್ಯರ್ಥಿಗಳೆಲ್ಲರೂ ಸಹಜವಾಗಿಯೆ ಕನ್ನಡಿಗರು ಆಗಿರುತ್ತಾರೆ. ಇದನ್ನು ಪ್ರಶ್ನಿಸಿ ಹೋರಾಟ ಮಾಡಬೇಕು. ಈ ಬಿಕ್ಕಟ್ಟು ಬಗೆಹರಿಯದೆ  ಕನ್ನಡಿಗರಿಗೆ ಮಾತ್ರ ಉದ್ಯೋಗ ಎನ್ನುವುದು ಮೇಲ್ಮಟ್ಟದಲ್ಲಿ ಉಳಿದುಕೊಂಡುಬಿಡುತ್ತದೆ.
ಮತ್ತೊಂದೆಡೆ ದುಡಿಯುವ ವರ್ಗದ ಜನರು ಯಾಕೆ ತಮ್ಮ ಹುಟ್ಟಿದ ಊರನ್ನು ತೊರೆದು ಹೊಟ್ಟೆಪಾಡಿಗೆ ಬೇರೆ ಊರಿಗೆ, ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತಾರೆ? ಇಲ್ಲಿ ಸರಕಾರದ ವೈಫಲ್ಯದ ಪಾತ್ರವೆಶ್ಟು? ಅದರ ದಿವಾಳಿ ಎದ್ದ ಆರ್ಥಿಕ ನೀತಿಗಳು ಈ ನಿರುದ್ಯೋಗಕ್ಕೆ, ವಲಸೆಗೆ ಮೂಲ ಕಾರಣ. ಇದಕ್ಕೆ ಮೊದಲು ಪರಿಹಾರ ಕಂಡುಕೊಳ್ಳಬೇಕು. ಇನ್ನು ಸರಕಾರಗಳು ಸ್ಥಳೀಯವಾಗಿ ಪರ್ಯಾಯ ಉದ್ಯೋಗಗಳನ್ನ ಸೃಶ್ಟಿ ಮಾಡದೆ ಇರುವುದು ಅಲ್ಲಿನ ಸ್ಥಳೀಯರು ವಲಸೆ ಹೋಗಲು ಮುಖ್ಯ ಕಾರಣಗಳಲ್ಲೊಂದು. ಉದಾಹರಣೆಗೆ ಕಲ್ಬುರ್ಗಿ ಜಿಲ್ಲೆಯ ಮುಖ್ಯ ಬೆಳೆ ತೊಗರಿ. ಆದರೆ ಬೆಳೆದ ತೊಗರಿಯನ್ನು ಬೇಳೆಯಾಗಿ ಪರಿವರ್ತಿಸಲು ಪಕ್ಕದ ಮಹರಾಶ್ಟ್ರ ರಾಜ್ಯಕ್ಕೆ ಕಳುಹಿಸಬೇಕು. ಅದರ ಬದಲು ಸರಕಾರವು ಈ ತೊಗರಿಯ ಬೇಳೆಯಾಗಿ ಪರಿವರ್ತಿಸುವ ಉದ್ಯಮವನ್ನ ಕಲ್ಬುರ್ಗಿಯಲ್ಲಿಯೆ ಸ್ಥಾಪಿಸಬೇಕು. ಆಗ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕುತ್ತದೆ. ಅವರು ಬೇರೆ ಊರು, ರಾಜ್ಯಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ಇದು ಬೇರೆ ರಾಜ್ಯಗಳಿಂದ ಬರುವ ವಲಸಿಗರಿಗೂ ಅನ್ವಯಿಸುತ್ತದೆ. ಇದೊಂದು ಉದಾಹರಣೆ. ಇಂತಹ ನೂರಾರು ಅವಕಾಶಗಳಿವೆ. ಉದ್ಯೋಗ ಅವಕಾಶಗಳ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಬೇಕು.
ಇನ್ನು ಸರಕಾರಿ ಉದ್ಯೋಗ ಅವಕಾಶಗಳ ಪ್ರಮಾಣವೆಶ್ಟು? ಶೇಕಡ 2% ಕ್ಕಿಂತಲೂ ಕಡಿಮೆ. ನಿರುದ್ಯೋಗಿ  ಕನ್ನಡಿಗರೆಶ್ಟು? ಲಕ್ಷಗಳ ಸಂಖ್ಯೆಯಲ್ಲಿದ್ದಾರೆ. ಹಾಗಿದ್ದಲ್ಲಿ ಉದ್ಯೋಗ ಅವಕಾಶ ಮತ್ತು ಉದ್ಯೋಗಾಂಕ್ಷಿಗಳ ಅನುಪಾತದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಇದಕ್ಕೆ ಪರಿಹಾರವೇನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದೆ ಹೋದರೆ ಮಿಕ್ಕಂತೆ ಎಲ್ಲವೂ ರಬಸದ ಹಾಗೆ ಬಂದು ಹೀಗೆ ತೇಲಿ ಹೋಗುವ ಮಾತುಗಳಾಗುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...