Homeಚಳವಳಿಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

- Advertisement -
- Advertisement -
| ಬಿ. ಶ್ರೀಪಾದ ಭಟ್ |

ಓದುಗರಿಗೆ ಸೂಚನೆ:
ಈ ಲೇಖನದ ನಿರೂಪಣೆ ಡಿ.ಎನ್.ಶಂಕರಬಟ್ ಅವರ ಬಾಶಾ ಪ್ರಯೋಗಕ್ಕೆ ಒಳಪಟ್ಟಿದೆ. ಮಹಾಪ್ರಾಣದ ಬಳಕೆ, ಷ-ಶ ಬಳಕೆ ಸೇರಿದಂತೆ ಕೆಲವು ಹೊಸ ಸಂಗತಿಗಳನ್ನು ಅವರು ಬಲವಾಗಿ ಪ್ರತಿಪಾದಿಸುತ್ತಿದ್ದು, ಕೆಲವು ಲೇಕಕರು ಅದನ್ನು ಅನುಸರಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಈ ಲೇಕನದಲ್ಲಿನ ಬಾಶೆಯ ಬಳಕೆಯಲ್ಲಿ ನಿಮಗೆ ಕಂಡುಬರುವ ವ್ಯತ್ಯಾಸವನ್ನು, ಪ್ರೂಫ್ ವ್ಯತ್ಯಾಸ ಎಂದು ಬಗೆಯಬಾರದೆಂದು ಕೋರುತ್ತೇವೆ.

ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಕೊಡಬೇಕು, ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಅವಕಾಶ ಕೊಡಬೇಕು ಎನ್ನುವ ಮಾತಿನಲ್ಲಿ ಸಹಮತ ಇದೆ. ಆದ್ರೆ ಇದು ಕೇವಲ ಬಾವನಾತ್ಮಕ ನೆಲೆಯ ಮಾದರಿಗೆ ಸೀಮಿತಗೊಂಡರೆ ಉಪಯೋಗವಿಲ್ಲ. ಇದು ಸಮಾಜೋ-ಆರ್ಥಿಕ ಆಯಾಮಗಳನ್ನ ಒಳಗೊಳ್ಳಬೇಕು. ಮೊನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅದಿಕಾರಿಗಳು ಹಿರಿಯ ಪ್ರಾಥಮಿಕ ಶಾಲೆಗಳಿಗೆ 10,000 ಶಿಕ್ಷಕರ ನೇಮಕಾತಿ ಸಾದ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದಕ್ಕೆ ಅವರು ಗುಣಮಟ್ಟದ ಅಬ್ಯರ್ಥಿಗಳು ದೊರೆಯುತ್ತಿಲ್ಲ ಎಂದು ಕಾರಣ ನೀಡಿದರು.
ಕರ್ನಾಟಕದಲ್ಲಿಯೆ ಪದವಿ ಶಿಕ್ಷಣ ಪಡೆದು, ನಂತರ ಬಿಎಡ್ ಮುಗಿಸಿ ನಂತರ ಟಿಇಟಿ ಮುಗಿಸಿ ನಂತರ ಸಿಇಟಿ ಅರ್ಹತಾ ಪರೀಕ್ಷೆ ಬರೆಯುವ ಲಕ್ಷಾಂತರ ಕನ್ನಡಿಗರಲ್ಲಿ ಅರ್ಹತೆ ಇರುವವರು ದೊರಕುತ್ತಿಲ್ಲ ಎಂದರೆ ಇದು ಉಡಾಫೆ ಮತ್ತು ಬೇಜವಬ್ದಾರಿಯ ಮಾತು. ಅಬ್ಯರ್ಥಿಗಳು ಎಲ್ಲಾ ಹಂತದ ಶಿಕ್ಷಣವನ್ನು ಕರ್ನಾಟಕದಲ್ಲಿಯೆ ಪಡೆದುಕೊಳ್ಳುತ್ತಾರೆ. ಆದರೆ ಗುಣಮಟ್ಟದ ಅಬ್ಯರ್ಥಿಗಳು ದೊರಕುತ್ತಿಲ್ಲವೆಂದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರ ತಾನು ನೀಡುತ್ತಿರುವ ಶಿಕ್ಷಣವೆ ಕಳಪೆ ಗುಣಮಟ್ಟದ್ದು ಎಂದು ಒಪ್ಪಿಕೊಳ್ಳುತ್ತಿದ್ದಾರೆಯೆ? ಗುಣಮಟ್ಟದ ಅಬ್ಯರ್ಥಿಗೋಸ್ಕರ ಇನ್ನೂ ಎಶ್ಟು ಹಂತದ ಪರೀಕ್ಷೆಗಳನ್ನ ನಡೆಸುತ್ತಾರೆ? ಇಲ್ಲಿ ಸರಕಾರದ ನಿಜದ ಉದ್ದೇಶವೇನು? ಇಲ್ಲಿ ಕನ್ನಡಿಗ ಅಬ್ಯರ್ಥಿಗಳಿದ್ದರೂ ನೇಮಕಾತಿ ಆಗುತ್ತಿಲ್ಲ. ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಸಾವಿರಾರು ಬ್ಯಾಕ್ ಲಾಗ್ ಹುದ್ದೆಗಳು (ಪ್ರವರ್ಗ) ಖಾಲಿ ಇವೆ. ಆದರೆ ಅವುಗಳಿಗೆ  ನೇಮಕಾತಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿ ಅಬ್ಯರ್ಥಿಗಳೆಲ್ಲರೂ ಸಹಜವಾಗಿಯೆ ಕನ್ನಡಿಗರು ಆಗಿರುತ್ತಾರೆ. ಇದನ್ನು ಪ್ರಶ್ನಿಸಿ ಹೋರಾಟ ಮಾಡಬೇಕು. ಈ ಬಿಕ್ಕಟ್ಟು ಬಗೆಹರಿಯದೆ  ಕನ್ನಡಿಗರಿಗೆ ಮಾತ್ರ ಉದ್ಯೋಗ ಎನ್ನುವುದು ಮೇಲ್ಮಟ್ಟದಲ್ಲಿ ಉಳಿದುಕೊಂಡುಬಿಡುತ್ತದೆ.
ಮತ್ತೊಂದೆಡೆ ದುಡಿಯುವ ವರ್ಗದ ಜನರು ಯಾಕೆ ತಮ್ಮ ಹುಟ್ಟಿದ ಊರನ್ನು ತೊರೆದು ಹೊಟ್ಟೆಪಾಡಿಗೆ ಬೇರೆ ಊರಿಗೆ, ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತಾರೆ? ಇಲ್ಲಿ ಸರಕಾರದ ವೈಫಲ್ಯದ ಪಾತ್ರವೆಶ್ಟು? ಅದರ ದಿವಾಳಿ ಎದ್ದ ಆರ್ಥಿಕ ನೀತಿಗಳು ಈ ನಿರುದ್ಯೋಗಕ್ಕೆ, ವಲಸೆಗೆ ಮೂಲ ಕಾರಣ. ಇದಕ್ಕೆ ಮೊದಲು ಪರಿಹಾರ ಕಂಡುಕೊಳ್ಳಬೇಕು. ಇನ್ನು ಸರಕಾರಗಳು ಸ್ಥಳೀಯವಾಗಿ ಪರ್ಯಾಯ ಉದ್ಯೋಗಗಳನ್ನ ಸೃಶ್ಟಿ ಮಾಡದೆ ಇರುವುದು ಅಲ್ಲಿನ ಸ್ಥಳೀಯರು ವಲಸೆ ಹೋಗಲು ಮುಖ್ಯ ಕಾರಣಗಳಲ್ಲೊಂದು. ಉದಾಹರಣೆಗೆ ಕಲ್ಬುರ್ಗಿ ಜಿಲ್ಲೆಯ ಮುಖ್ಯ ಬೆಳೆ ತೊಗರಿ. ಆದರೆ ಬೆಳೆದ ತೊಗರಿಯನ್ನು ಬೇಳೆಯಾಗಿ ಪರಿವರ್ತಿಸಲು ಪಕ್ಕದ ಮಹರಾಶ್ಟ್ರ ರಾಜ್ಯಕ್ಕೆ ಕಳುಹಿಸಬೇಕು. ಅದರ ಬದಲು ಸರಕಾರವು ಈ ತೊಗರಿಯ ಬೇಳೆಯಾಗಿ ಪರಿವರ್ತಿಸುವ ಉದ್ಯಮವನ್ನ ಕಲ್ಬುರ್ಗಿಯಲ್ಲಿಯೆ ಸ್ಥಾಪಿಸಬೇಕು. ಆಗ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕುತ್ತದೆ. ಅವರು ಬೇರೆ ಊರು, ರಾಜ್ಯಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ಇದು ಬೇರೆ ರಾಜ್ಯಗಳಿಂದ ಬರುವ ವಲಸಿಗರಿಗೂ ಅನ್ವಯಿಸುತ್ತದೆ. ಇದೊಂದು ಉದಾಹರಣೆ. ಇಂತಹ ನೂರಾರು ಅವಕಾಶಗಳಿವೆ. ಉದ್ಯೋಗ ಅವಕಾಶಗಳ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಬೇಕು.
ಇನ್ನು ಸರಕಾರಿ ಉದ್ಯೋಗ ಅವಕಾಶಗಳ ಪ್ರಮಾಣವೆಶ್ಟು? ಶೇಕಡ 2% ಕ್ಕಿಂತಲೂ ಕಡಿಮೆ. ನಿರುದ್ಯೋಗಿ  ಕನ್ನಡಿಗರೆಶ್ಟು? ಲಕ್ಷಗಳ ಸಂಖ್ಯೆಯಲ್ಲಿದ್ದಾರೆ. ಹಾಗಿದ್ದಲ್ಲಿ ಉದ್ಯೋಗ ಅವಕಾಶ ಮತ್ತು ಉದ್ಯೋಗಾಂಕ್ಷಿಗಳ ಅನುಪಾತದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಇದಕ್ಕೆ ಪರಿಹಾರವೇನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದೆ ಹೋದರೆ ಮಿಕ್ಕಂತೆ ಎಲ್ಲವೂ ರಬಸದ ಹಾಗೆ ಬಂದು ಹೀಗೆ ತೇಲಿ ಹೋಗುವ ಮಾತುಗಳಾಗುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...