Homeಚಳವಳಿಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

- Advertisement -
- Advertisement -
| ಬಿ. ಶ್ರೀಪಾದ ಭಟ್ |

ಓದುಗರಿಗೆ ಸೂಚನೆ:
ಈ ಲೇಖನದ ನಿರೂಪಣೆ ಡಿ.ಎನ್.ಶಂಕರಬಟ್ ಅವರ ಬಾಶಾ ಪ್ರಯೋಗಕ್ಕೆ ಒಳಪಟ್ಟಿದೆ. ಮಹಾಪ್ರಾಣದ ಬಳಕೆ, ಷ-ಶ ಬಳಕೆ ಸೇರಿದಂತೆ ಕೆಲವು ಹೊಸ ಸಂಗತಿಗಳನ್ನು ಅವರು ಬಲವಾಗಿ ಪ್ರತಿಪಾದಿಸುತ್ತಿದ್ದು, ಕೆಲವು ಲೇಕಕರು ಅದನ್ನು ಅನುಸರಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಈ ಲೇಕನದಲ್ಲಿನ ಬಾಶೆಯ ಬಳಕೆಯಲ್ಲಿ ನಿಮಗೆ ಕಂಡುಬರುವ ವ್ಯತ್ಯಾಸವನ್ನು, ಪ್ರೂಫ್ ವ್ಯತ್ಯಾಸ ಎಂದು ಬಗೆಯಬಾರದೆಂದು ಕೋರುತ್ತೇವೆ.

ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಕೊಡಬೇಕು, ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಅವಕಾಶ ಕೊಡಬೇಕು ಎನ್ನುವ ಮಾತಿನಲ್ಲಿ ಸಹಮತ ಇದೆ. ಆದ್ರೆ ಇದು ಕೇವಲ ಬಾವನಾತ್ಮಕ ನೆಲೆಯ ಮಾದರಿಗೆ ಸೀಮಿತಗೊಂಡರೆ ಉಪಯೋಗವಿಲ್ಲ. ಇದು ಸಮಾಜೋ-ಆರ್ಥಿಕ ಆಯಾಮಗಳನ್ನ ಒಳಗೊಳ್ಳಬೇಕು. ಮೊನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅದಿಕಾರಿಗಳು ಹಿರಿಯ ಪ್ರಾಥಮಿಕ ಶಾಲೆಗಳಿಗೆ 10,000 ಶಿಕ್ಷಕರ ನೇಮಕಾತಿ ಸಾದ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದಕ್ಕೆ ಅವರು ಗುಣಮಟ್ಟದ ಅಬ್ಯರ್ಥಿಗಳು ದೊರೆಯುತ್ತಿಲ್ಲ ಎಂದು ಕಾರಣ ನೀಡಿದರು.
ಕರ್ನಾಟಕದಲ್ಲಿಯೆ ಪದವಿ ಶಿಕ್ಷಣ ಪಡೆದು, ನಂತರ ಬಿಎಡ್ ಮುಗಿಸಿ ನಂತರ ಟಿಇಟಿ ಮುಗಿಸಿ ನಂತರ ಸಿಇಟಿ ಅರ್ಹತಾ ಪರೀಕ್ಷೆ ಬರೆಯುವ ಲಕ್ಷಾಂತರ ಕನ್ನಡಿಗರಲ್ಲಿ ಅರ್ಹತೆ ಇರುವವರು ದೊರಕುತ್ತಿಲ್ಲ ಎಂದರೆ ಇದು ಉಡಾಫೆ ಮತ್ತು ಬೇಜವಬ್ದಾರಿಯ ಮಾತು. ಅಬ್ಯರ್ಥಿಗಳು ಎಲ್ಲಾ ಹಂತದ ಶಿಕ್ಷಣವನ್ನು ಕರ್ನಾಟಕದಲ್ಲಿಯೆ ಪಡೆದುಕೊಳ್ಳುತ್ತಾರೆ. ಆದರೆ ಗುಣಮಟ್ಟದ ಅಬ್ಯರ್ಥಿಗಳು ದೊರಕುತ್ತಿಲ್ಲವೆಂದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರ ತಾನು ನೀಡುತ್ತಿರುವ ಶಿಕ್ಷಣವೆ ಕಳಪೆ ಗುಣಮಟ್ಟದ್ದು ಎಂದು ಒಪ್ಪಿಕೊಳ್ಳುತ್ತಿದ್ದಾರೆಯೆ? ಗುಣಮಟ್ಟದ ಅಬ್ಯರ್ಥಿಗೋಸ್ಕರ ಇನ್ನೂ ಎಶ್ಟು ಹಂತದ ಪರೀಕ್ಷೆಗಳನ್ನ ನಡೆಸುತ್ತಾರೆ? ಇಲ್ಲಿ ಸರಕಾರದ ನಿಜದ ಉದ್ದೇಶವೇನು? ಇಲ್ಲಿ ಕನ್ನಡಿಗ ಅಬ್ಯರ್ಥಿಗಳಿದ್ದರೂ ನೇಮಕಾತಿ ಆಗುತ್ತಿಲ್ಲ. ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಸಾವಿರಾರು ಬ್ಯಾಕ್ ಲಾಗ್ ಹುದ್ದೆಗಳು (ಪ್ರವರ್ಗ) ಖಾಲಿ ಇವೆ. ಆದರೆ ಅವುಗಳಿಗೆ  ನೇಮಕಾತಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿ ಅಬ್ಯರ್ಥಿಗಳೆಲ್ಲರೂ ಸಹಜವಾಗಿಯೆ ಕನ್ನಡಿಗರು ಆಗಿರುತ್ತಾರೆ. ಇದನ್ನು ಪ್ರಶ್ನಿಸಿ ಹೋರಾಟ ಮಾಡಬೇಕು. ಈ ಬಿಕ್ಕಟ್ಟು ಬಗೆಹರಿಯದೆ  ಕನ್ನಡಿಗರಿಗೆ ಮಾತ್ರ ಉದ್ಯೋಗ ಎನ್ನುವುದು ಮೇಲ್ಮಟ್ಟದಲ್ಲಿ ಉಳಿದುಕೊಂಡುಬಿಡುತ್ತದೆ.
ಮತ್ತೊಂದೆಡೆ ದುಡಿಯುವ ವರ್ಗದ ಜನರು ಯಾಕೆ ತಮ್ಮ ಹುಟ್ಟಿದ ಊರನ್ನು ತೊರೆದು ಹೊಟ್ಟೆಪಾಡಿಗೆ ಬೇರೆ ಊರಿಗೆ, ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತಾರೆ? ಇಲ್ಲಿ ಸರಕಾರದ ವೈಫಲ್ಯದ ಪಾತ್ರವೆಶ್ಟು? ಅದರ ದಿವಾಳಿ ಎದ್ದ ಆರ್ಥಿಕ ನೀತಿಗಳು ಈ ನಿರುದ್ಯೋಗಕ್ಕೆ, ವಲಸೆಗೆ ಮೂಲ ಕಾರಣ. ಇದಕ್ಕೆ ಮೊದಲು ಪರಿಹಾರ ಕಂಡುಕೊಳ್ಳಬೇಕು. ಇನ್ನು ಸರಕಾರಗಳು ಸ್ಥಳೀಯವಾಗಿ ಪರ್ಯಾಯ ಉದ್ಯೋಗಗಳನ್ನ ಸೃಶ್ಟಿ ಮಾಡದೆ ಇರುವುದು ಅಲ್ಲಿನ ಸ್ಥಳೀಯರು ವಲಸೆ ಹೋಗಲು ಮುಖ್ಯ ಕಾರಣಗಳಲ್ಲೊಂದು. ಉದಾಹರಣೆಗೆ ಕಲ್ಬುರ್ಗಿ ಜಿಲ್ಲೆಯ ಮುಖ್ಯ ಬೆಳೆ ತೊಗರಿ. ಆದರೆ ಬೆಳೆದ ತೊಗರಿಯನ್ನು ಬೇಳೆಯಾಗಿ ಪರಿವರ್ತಿಸಲು ಪಕ್ಕದ ಮಹರಾಶ್ಟ್ರ ರಾಜ್ಯಕ್ಕೆ ಕಳುಹಿಸಬೇಕು. ಅದರ ಬದಲು ಸರಕಾರವು ಈ ತೊಗರಿಯ ಬೇಳೆಯಾಗಿ ಪರಿವರ್ತಿಸುವ ಉದ್ಯಮವನ್ನ ಕಲ್ಬುರ್ಗಿಯಲ್ಲಿಯೆ ಸ್ಥಾಪಿಸಬೇಕು. ಆಗ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕುತ್ತದೆ. ಅವರು ಬೇರೆ ಊರು, ರಾಜ್ಯಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ಇದು ಬೇರೆ ರಾಜ್ಯಗಳಿಂದ ಬರುವ ವಲಸಿಗರಿಗೂ ಅನ್ವಯಿಸುತ್ತದೆ. ಇದೊಂದು ಉದಾಹರಣೆ. ಇಂತಹ ನೂರಾರು ಅವಕಾಶಗಳಿವೆ. ಉದ್ಯೋಗ ಅವಕಾಶಗಳ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಬೇಕು.
ಇನ್ನು ಸರಕಾರಿ ಉದ್ಯೋಗ ಅವಕಾಶಗಳ ಪ್ರಮಾಣವೆಶ್ಟು? ಶೇಕಡ 2% ಕ್ಕಿಂತಲೂ ಕಡಿಮೆ. ನಿರುದ್ಯೋಗಿ  ಕನ್ನಡಿಗರೆಶ್ಟು? ಲಕ್ಷಗಳ ಸಂಖ್ಯೆಯಲ್ಲಿದ್ದಾರೆ. ಹಾಗಿದ್ದಲ್ಲಿ ಉದ್ಯೋಗ ಅವಕಾಶ ಮತ್ತು ಉದ್ಯೋಗಾಂಕ್ಷಿಗಳ ಅನುಪಾತದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಇದಕ್ಕೆ ಪರಿಹಾರವೇನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದೆ ಹೋದರೆ ಮಿಕ್ಕಂತೆ ಎಲ್ಲವೂ ರಬಸದ ಹಾಗೆ ಬಂದು ಹೀಗೆ ತೇಲಿ ಹೋಗುವ ಮಾತುಗಳಾಗುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...