Homeಚಳವಳಿಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಲು ಒತ್ತಾಯ

ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಲು ಒತ್ತಾಯ

ಕೇಂದ್ರ/ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಇರಬೇಕು.

- Advertisement -
- Advertisement -

ಹಲವು ಕನ್ನಡಪರ ಸಂಘಟನೆಗಳು ಸೇರಿ ಮೇ 3ರಂದು KarnatakaJobsForKannadigas ಹ್ಯಾಷ್ ಟ್ಯಾಗ್ ಬಳಸಿ ಟ್ವಿಟರ್ ನಲ್ಲಿ ಟ್ರೆಂಡ್ ಮಾಡುವ ಮೂಲಕ ಮೂಲಕ ಗಮನಸೆಳೆದಿದ್ದರು. ಈ ಅಭಿಯಾನಕ್ಕೆ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಟ್ವೀಟ್ ಮಾಡುವ ಮೂಲಕ ಬೆಂಬಲ ಸೂಚಿಸಿದ್ದರು. ಅದರ ಮುಂದುವರಿದ ಭಾಗವಾಗಿ “ಕರ್ನಾಟಕ ರಣಧೀರ ಪಡೆ, ಕರುನಾಡ ಸೇವಕರು ಮತ್ತು ಇತರ ಕನ್ನಡಪರ ಸಂಘಟನೆಗಳು ಇಂದು ಬೆಂಗಳೂರಿನ ಮೈಸೂರು ಬ್ಯಾಂಕು ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಹೋರಾಟವನ್ನು ಹಂತ ಹಂತವಾಗಿ ಗಟ್ಟಿಗೊಳಿಸಲು ತೀರ್ಮಾನಿಸಿದ್ದಾರೆ.

ಆ ಮೂಲಕ ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕಟ್ಟುನಿಟ್ಟಾಗಿ ಕನ್ನಡಿಗರಿಗೆ ಮೀಸಲಾತಿ ನೀಡಲು ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಮತ್ತು ಈ ಬಗ್ಗೆ ಹಕ್ಕೊತ್ತಾಯ ಮಂಡಿಸಲು ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಚಾಲ್ತಿಯಲ್ಲಿಟ್ಟಿದ್ದಾರೆ.

ಹರೀಶ್ ಕುಮಾರ್ ಬಿ

ಕರ್ನಾಟಕದ ಯುವಜನತೆ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ನಿರುದ್ಯೋಗ ಸಮಸ್ಯೆ ಪ್ರಮುಖವಾದುದು. ಸಾಕಷ್ಟು ಉದ್ಯೋಗ ಸೃಷ್ಟಿಯಾಗದೇ ಇರುವುದು ಒಂದೆಡೆಯಾದರೆ ಇನ್ನೊಂದೆಡೆ ಇಲ್ಲಿ ಸೃಷ್ಟಿಯಾದ ಉದ್ಯೋಗಗಳನ್ನು ಪರಭಾಷಿಕರು ಬಂದು ಕಬಳಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ನಮ್ಮ ನೆಲದಲ್ಲಿನ ಉದ್ಯೋಗ ನಮ್ಮವರಿಗೆ ಸಿಗದಂತಾಗಿದೆ. ರಾಜ್ಯದ ಸಂಪನ್ಮೂಲಗಳನ್ನು ಬಳಸಿಕೊಂಡು ಇಲ್ಲಿಯೇ ಬೀಡುಬಿಟ್ಟಿದ್ದರೂ ಇಲ್ಲಿನ ಬಹುರಾಷ್ತ್ರೀಯ ಕಂಪನಿಗಳು, ಬ್ಯಾಂಕುಗಳು ಮತ್ತು ಇತರ ಉದ್ಯಮಗಳು ಕನ್ನಡಿಗರಿಗೆ ಕೆಲಸ ಕೊಡಲು ಮೀನಮೇಷ ಎಣಿಸುತ್ತಿವೆ ಎಂದು ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷರಾದ ಹರೀಶ್ ಕುಮಾರ್.ಬಿ ಅಭಿಪ್ರಾಯಪಟ್ಟಿದ್ದಾರೆ.

 

ರೂಪೇಶ್ ರಾಜಣ್ಣ

ಎಚ್ಚೆತ್ತ ಕನ್ನಡಿಗರು ಇದೇ ತಿಂಗಳ 3ನೇ ತಾರೀಖಿನಂದು ನಡೆಸಿದ #KarnatakaJobsForKannadigas ಟ್ವಿಟರ್ ಅಭಿಯಾನಕ್ಕೆ ಬೆಂಬಲ ಸೂಚಿಸುತ್ತಾ ನಮ್ಮ ಮುಖ್ಯಮಂತ್ರಿಯವರು “ಕನ್ನಡಿಗರ ಹಕ್ಕೊತ್ತಾಯ ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು” ಎಂದು ಹೇಳಿದ್ದರು. ಆ ನಂತರ ನಾವು ಸಮಸ್ತ ಕನ್ನಡಿಗರ ಪರವಾಗಿ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದು ನಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದ್ದೆವು. ನಮ್ಮ ನೆಲದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ನಮ್ಮವರಿಗೇ ಸಿಗಬೇಕು ಎಂದು ಸ್ಪಷ್ಟವಾಗಿ ಕೇಳುವ ನಿಟ್ಟಿನಲ್ಲಿ ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ವಿಧಾನಸೌಧದವರೆಗೆ ಮಾನವ ಸರಪಳಿ ರಚಿಸುತ್ತಾ ಮತ್ತೊಮ್ಮೆ ನಮ್ಮ ಹಕ್ಕೊತ್ತಾಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೆನಪಿಸಬಯಸುತ್ತೇವೆ ಎಂದು ಕರುನಾಡ ಸೇವಕರು ರಾಜ್ಯಾಧ್ಯಕ್ಷರಾದ ರೂಪೇಶ್ ರಾಜಣ್ಣ ಹೇಳಿದ್ದಾರೆ.

ಈ ಹೋರಾಟದ ಪ್ರಮುಖವಾದ ಹಕ್ಕೊತ್ತಾಯಗಳು ಕೆಳಗಿನಂತಿವೆ.
1.ಎಲ್ಲಾ ಖಾಸಗಿ ವಲಯದ ಉದ್ಯಮಗಳಿಗೆ ರಾಜ್ಯ ಸರ್ಕಾರ ಹಲವು ಮೂಲಭೂತ(ನೆಲ,ಜಲ,ವಿದ್ಯುತ್, ರಸ್ತೆ ಮುಂತಾದ) ಸವಲತ್ತುಗಳನ್ನು ನೀಡುತ್ತಿರುವುದರಿಂದ ಕಟ್ಟುನಿಟ್ಟಾಗಿ ಸರೋಜಿನಿ ಮಹಿಷಿ ವರದಿ ಅನ್ವಯ ’ಸಿ’ ಮತ್ತು ’ಡಿ’ ವರ್ಗದ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಮತ್ತು ಉನ್ನತ ಹುದ್ದೆಗಳಲ್ಲಿ ಕನಿಷ್ಠ 80%ರಷ್ಟು ಉದ್ಯೋಗಗಳು ಸ್ಥಳಿಯರಿಗೆ(ಕನ್ನಡಿಗರಿಗೆ) ಮೀಸಲಿಡಲು ಕರಾರು ಪತ್ರದಲ್ಲೇ ಪೂರ್ವಷರತ್ತು ಹಾಕಬೇಕು. ಇಲ್ಲಿನ ಐಟಿ ಉದ್ಯಮಗಳಿಗೆ ರಾಜ್ಯದ ಇಂಜಿನಿಯರಿಂಗ್/ಮ್ಯಾನೇಜ್ಮೆಂಟ್ ಕಾಲೇಜುಗಳಿಂದಲೇ ಕ್ಯಾಂಪಸ್ ನೇಮಕಾತಿ ಮಾಡಿಕೊಳ್ಳಲು ಸೂಚಿಸಬೇಕು.

2.ಮಹಾರಾಷ್ಟ್ರದಲ್ಲಿ ಇರುವಂತೆ ರಾಜ್ಯ ಸರ್ಕಾರ ಸ್ಥಳೀಯರಿಗೆ ನಿಗದಿಪಡಿಸಿದ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವ ಬಗ್ಗೆ ರಾಜ್ಯದ ಖಾಸಗಿ ಉದ್ದಿಮೆಗಳಿಂದ ಪ್ರತಿವರ್ಷ ಘೋಷಣೆ ಪತ್ರ ಪಡೆಯಬೇಕು. ಅಭ್ಯರ್ಥಿಗಳನ್ನು ಸ್ಥಳೀಯರು ಎಂದು ಪರಿಗಣಿಸಲು 15 ವರ್ಷಗಳ ಕಾಲ ಅವರು ರಾಜ್ಯದಲ್ಲಿ ವಾಸವಾಗಿದ್ದಲ್ಲದೇ ರಾಜ್ಯಭಾಷೆಯಾದ ಕನ್ನಡದಲ್ಲಿ ಮಾತನಾಡಲು,ಓದಲು ಮತ್ತು ಬರೆಯಲು ಬರಬೇಕು.

3.ರಾಜ್ಯದ ಸರ್ಕಾರಿ ವಲಯದ ಉದ್ಯಮಗಳಲ್ಲಿ ಎಲ್ಲ ಹುದ್ದೆಗಳಿಗೂ ಕನ್ನಡಿಗರನ್ನೇ ಆಯ್ಕೆ ಮಾಡಬೇಕು. ಅನಿವಾರ್ಯ ಸಂದರ್ಭದಲ್ಲಿ ಹೊರ ರಾಜ್ಯದವರನ್ನು ಆಯ್ಕೆ ಮಾಡಿಕೊಳ್ಳಬೇಕಾದರೆ ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆದು ನೇಮಕ ಮಾಡಿಕೊಳ್ಳಬೇಕು.

4.ರಾಜ್ಯದಲ್ಲಿ ವ್ಯವಹರಿಸುವ ಎಲ್ಲಾ ಬ್ಯಾಂಕುಗಳು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಾಗ ರಾಜ್ಯದ ಅಧಿಕೃತ ಭಾಷೆಯಾದ ಕನ್ನಡ ಭಾಷಾಜ್ಞಾನವನ್ನು ಕಡ್ಡಾಯಗೊಳಿಸಬೇಕು.ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಸಂಸ್ಥೆಯು ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯುವ ಅವಕಾಶವಿರಬೇಕು.

5.ರಾಜ್ಯ/ಕೇಂದ್ರ ಸರ್ಕಾರಿ ಉದ್ಯಮಗಳು ಹಾಗೂ ಇಲಾಖೆಗಳಲ್ಲಿ ದಿನಗೂಲಿ ಕೆಲಸಗಳಿಗೆ ಕಾರ್ಮಿಕರನ್ನು/ನೌಕರರನ್ನು ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಕನ್ನಡಿಗರನ್ನೇ ನೇಮಿಸಿಕೊಳ್ಳಬೇಕು. ಹೊರಗುತ್ತಿಗೆ ಸಂಸ್ಥೆಗಳಿಗೂ ಈ ಷರತ್ತು ವಿಧಿಸಬೇಕು.

6.ಕೇಂದ್ರ/ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಇರಬೇಕು.

ಇದನ್ನು ಓದಿ: ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ರಮಾನಂದ್ ಅಂಕೋಲ

ಉದ್ಯೋಗದ ವಿಚಾರದಲ್ಲಿ ಕನ್ನಡಿಗರ ಸ್ವಾಭಿಮಾನವನ್ನು ಬಡಿದೆಬ್ಬಿಸಲು ಜನಜಾಗೃತಿ ಆಗಬೇಕಾಗಿರುವುದು ಸಹ ಇಂದಿನ ತುರ್ತು ಸದ್ಯ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಕ್ರಿಯಾತ್ಮಕವಾಗಿ ಏನಾದರೂ ಮಾಡಲು ಅವರಿಗೆ ನೀತಿಸಂಹಿತೆ ಮುಗಿಯುವ ಮೇ23ರ ನಂತರವೂ ಒಂದೆರಡು ವಾರ ಸಮಯ ನೀಡಲು ನಾವು ಸಿದ್ದರಿದ್ದೇವೆ. ಆಗಲೂ ಸಹ ತಾವು ಕೊಟ್ಟ ಭರವಸೆಯನ್ನು ಈಡೇರಿಸಲು ಅವರು ಮುಂದಾಗದಿದ್ದರೆ ಹೋರಾಟಕ್ಕಿಳಿಯುವುದು ಅನಿವಾರ್ಯವಾಗುತ್ತದೆ ಎಂದು ಸರ್ಕಾರಕ್ಕೆ ಕರ್ನಾಟಕ ರಣಧೀರ ಪಡೆಯ ಖಜಾಂಚಿ ರಮಾನಂದ ಅಂಕೋಲಾ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...