Homeಎಕಾನಮಿಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಾದ ಭಾರೀ ಅನ್ಯಾಯ : ಪರಿಹಾರವೇನು

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಾದ ಭಾರೀ ಅನ್ಯಾಯ : ಪರಿಹಾರವೇನು

ಕರ್ನಾಟಕ ಮೊದಲಿನಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ನೇರ ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯ ನಂತರ ಮೂರನೇ ಸ್ಥಾನದಲ್ಲಿದೆ.

- Advertisement -
- Advertisement -

ನಮಗೆಲ್ಲಾ ತಿಳಿದಿರುವ ಹಾಗೆ ನಮ್ಮ ದೇಶ ಭಾರತ ಹಲವು ರಾಜ್ಯಗಳು ಸೇರಿ ಆಗಿರುವಂತದು. ಹಾಗೆಯೇ ನಮ್ಮ ಕರ್ನಾಟಕ ರಾಜ್ಯವೂ ಭಾರತದ ಅವಿಭಾಜ್ಯ ಅಂಗ.

ಇಡೀ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ಹೊತ್ತ ಭಾರತದ ಕೇಂದ್ರ ಸರ್ಕಾರ ದೇಶದ ಎಲ್ಲಾ ರಾಜ್ಯಗಳ ಸಮಗ್ರ ಅಭಿವೃದ್ಧಿಗೆ ಅವುಗಳ ಅಗತ್ಯಕ್ಕನುಗುಣವಾಗಿ ಆರ್ಥಿಕ ಬೆಂಬಲವನ್ನು ಕೊಡುವ ಕರ್ತವ್ಯ ನಿಭಾಯಿಸಬೇಕಾಗಿರುತ್ತದೆ.

ಕೇಂದ್ರದ ಬೆಂಬಲವನ್ನು ಸದುಪಯೋಗಿಸಿಕೊಳ್ಳುವ ರಾಜ್ಯಗಳು ಸಮಗ್ರ ಅಭಿವೃದ್ಧಿ ಹೊಂದುತ್ತಾ ಅದರ ಫಲವಾಗಿ ತಮ್ಮ ರಾಜ್ಯಗಳಲ್ಲಿ ಹೆಚ್ಚು ಹೆಚ್ಚು ತೆರಿಗೆ ಸಂಗ್ರಹಿಸಲು ಶಕ್ತವಾಗುತ್ತವೆ. ಹೊಸ ಜಿಎಸ್ಟಿ ಪದ್ಧತಿ ಜಾರಿಗೆ ಬಂದಮೇಲೆ ಅಬಕಾರಿ ಸುಂಕ, ಪೆಟ್ರೋಲ್ ಸುಂಕ ಮತ್ತಿತರ ಕೆಲ ತೆರಿಗೆ ಹೊರತುಪಡಿಸಿ ಬಹುತೇಕ ಉಳಿದೆಲ್ಲಾ ವಲಯದ ತೆರಿಗೆಯನ್ನೂ ರಾಜ್ಯಗಳು ಕೇಂದ್ರಕ್ಕೆ ತಲುಪಿಸಿ ಅಲ್ಲಿಂದ ತಮ್ಮ ಪಾಲಿನ ಜಿಎಸ್ಟಿ ತೆರಿಗೆ ಪಾಲನ್ನು ಪಡೆದು ಅದನ್ನು ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸುತ್ತವೆ.

ಹೀಗೆ ತಮ್ಮ ಪ್ರಯತ್ನ ಮತ್ತು ಕೇಂದ್ರದ ಆರ್ಥಿಕ ಬೆಂಬಲ ಇವೆರಡನ್ನೂ ಬಳಸಿ ಅಭಿವೃದ್ಧಿಯ ದಾರಿಯಲ್ಲಿ ಸರಿಯಾಗಿ ಮುನ್ನಡೆಯುತ್ತಿರುವಂತ ರಾಜ್ಯಗಳು ದೇಶದ ಒಟ್ಟಾರೆ ಅಭಿವೃದ್ಧಿಗೆ ಉತ್ತಮ ಕೊಡುಗೆಯನ್ನು ನೀಡುತ್ತಿರುತ್ತವೆ. ಅಂತಹ ರಾಜ್ಯಗಳನ್ನು ಗುರುತಿಸಿ ಅವುಗಳಿಗೆ ಮತ್ತಷ್ಟು ಉತ್ತೇಜನ ನೀಡುವುದು ಕೇಂದ್ರದ ಆದ್ಯ ಕರ್ತವ್ಯವಾಗಿರಬೇಕಾಗಿರುತ್ತದೆ.

ಆದರೆ, ನಮ್ಮ ಕರ್ನಾಟಕದ ವಿಷಯದಲ್ಲಿ ಆಗುತ್ತಿರುವುದು ಇದಕ್ಕೆ ತದ್ವಿರುದ್ಧವಾಗಿದೆ. ಕರ್ನಾಟಕ ಮೊದಲಿನಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ನೇರ ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯ ನಂತರ ಮೂರನೇ ಸ್ಥಾನದಲ್ಲಿದೆ. ದೇಶದ ಒಟ್ಟು ನೇರ ತೆರಿಗೆಯಲ್ಲಿ ಶೇ. 61ರಷ್ಟು ಈ ಮೂರು ರಾಜ್ಯಗಳಿಂದಲೇ ಬರುತ್ತಿದೆ ಮತ್ತು ದೇಶದ ಒಟ್ಟು ತೆರಿಗೆಯಲ್ಲಿ ನೇರ ತೆರಿಗೆಯ ಪಾಲು ಶೇ. 50ಕ್ಕಿಂತ ಹೆಚ್ಚಿದೆ.

ಇದು ಕರ್ನಾಟಕದ ಅಭಿವೃದ್ಧಿಯ ವೇಗವನ್ನು ಒಂದು ಮಟ್ಟಿಗೆ ತೋರುತ್ತದೆ. ಆರ್ಥಿಕತೆಯ ಜೊತೆಗೆ ಕರ್ನಾಟಕವು ಮಾನವ ಅಭಿವೃದ್ಧಿಯಲ್ಲೂ ಗಮನಾರ್ಹ ಬೆಳವಣಿಗೆ ಸಾಧಿಸಿದೆ. 1971 ರಿಂದ 2011 ರ ನಡುವೆ ಜನಸಂಖ್ಯೆ ಸ್ಫೋಟವನ್ನು ಕರ್ನಾಟಕ ಗಮನಾರ್ಹವಾಗಿ ತಡೆದಿದ್ದು 2011 ರ ವೇಳೆಗೆ ಒಂದು ಆರೋಗ್ಯಕರ ಜನಸಂಖ್ಯಾ ಬೆಳವಣಿಗೆಯ ಹಂತವನ್ನು ತಲುಪಿದೆ.

ಆದರೆ, ಕರ್ನಾಟಕದ ಈ ಸಮಗ್ರ ಅಭಿವೃದ್ಧಿಯೇ ಈ ರಾಜ್ಯಕ್ಕೆ ಈಗ ಮುಳುವಾಗಿ ಪರಿಣಮಿಸಿದೆ. ನಮ್ಮ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ಕೊಡಬೇಕಿದ್ದ ಕೇಂದ್ರವು ಅದರ ಬದಲಿಗೆ ಕೇಂದ್ರದ ಅನುದಾನದಲ್ಲಿ ಕಡಿತ ಮಾಡುವ ಮೂಲಕ ಶಿಕ್ಷೆ ವಿಧಿಸಿದೆ. ಹದಿನೈದನೇ ಹಣಕಾಸು ಆಯೋಗವು ರಾಜ್ಯಗಳಿಗೆ ಕೇಂದ್ರದ ಅನುದಾನ ನಿಗದಿ ಮಾಡಲು 2011 ರ ಜನಸಂಖ್ಯೆಯನ್ನು ಮಾನದಂಡವನ್ನಾಗಿ ಪರಿಗಣಿಸಿದೆ. 2011 ರ ಜನಗಣತಿಯ ಪ್ರಕಾರ ಹೆಚ್ಚಿನ ಜನಸಂಖ್ಯೆ ಇರುವ ರಾಜ್ಯಕ್ಕೆ ಹೆಚ್ಚಿನ ಅನುದಾನ. ಅಂದರೆ, ಸರಿಯಾದ ಅಭಿವೃದ್ಧಿ ಮಾರ್ಗದಲ್ಲಿ ಸಾಗಿ ಜನಸಂಖ್ಯೆಯನ್ನು ನಿಯಂತ್ರಿಸಿದ ಕರ್ನಾಟಕದಂತ ರಾಜ್ಯಕ್ಕೆ ಮತ್ತೂ ಹೆಚ್ಚಿನ ಪ್ರೋತ್ಸಾಹ ಕೊಡುವ ಬದಲು ಶಿಕ್ಷೆ ವಿಧಿಸಿದಂತಾಗಿದೆ.

ಈ ಹೊಸ ಮಾನದಂಡವನ್ನು ಅನುಸರಿಸಿದ ಕೇಂದ್ರ ಸರ್ಕಾರ ಈ ಸಾರಿಯ 2020-21 ರ ಬಜೆಟ್ ನಲ್ಲಿ ಹೋದ ವರ್ಷಕ್ಕಿಂತ 5,495 ಕೋಟಿ ರೂಪಾಯಿಗಳಷ್ಟು ಕಡಿಮೆ ಅನುದಾನವನ್ನು ಕರ್ನಾಟಕಕ್ಕೆ ನಿಗದಿಪಡಿಸಿದೆ. 2019-20 ರಲ್ಲಿ ಕೇಂದ್ರದ ತೆರಿಗೆಯಲ್ಲಿ ರಾಜ್ಯದ ಪಾಲು 36,675 ಕೋಟಿ ರೂಪಾಯಿಗಳಾಗಿದ್ದರೆ ಈ ವರ್ಷ ಅದನ್ನು 31,180 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ.

ಇದರಿಂದಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮನಗಂಡ ಹಣಕಾಸು ಆಯೋಗವೇ ಕೊರತೆ ಬೀಳುವ 5,495 ಕೋಟಿಗಳನ್ನು ವಿಶೇಷ ಅನುದಾನದ ಅಡಿಯಲ್ಲಿ ಕೊಡಬೇಕೆಂದು ಹೇಳಿದ್ದರೂ ಕೂಡ ಕೇಂದ್ರ ಸರ್ಕಾರ ಕೊಡುವ ಮನಸ್ಸು ಮಾಡುತ್ತಿಲ್ಲ.

ಇನ್ನು ಈ ಹೊಸ ಫಾರ್ಮುಲಾದಿಂದಾಗಿ ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ ಕನಿಷ್ಟ ಮೂವತ್ತು ಸಾವಿರ ಕೋಟಿಗಳಷ್ಟು ಅನುದಾನದ ಕೊರತೆ ಬೀಳಲಿದ್ದು ರಾಜ್ಯದ ಅಭಿವೃದ್ಧಿಗೆ ಭಾರೀ ತೊಂದರೆಯಾಗಲಿದೆ.

ಇದರ ಜೊತೆಗೆ, ಈ 2019-20 ರ ಸಾಲಿನಲ್ಲಿ ಕರ್ನಾಟಕದ ಪಾಲಿಗೆ ಬರಬೇಕಿದ್ದ ಜಿಎಸ್ಟಿಯಲ್ಲಿ ಅಂದಾಜು ಹತ್ತುಸಾವಿರ ಕೋಟಿ ರೂಪಾಯಿಗಳಷ್ಟನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಆರ್ಥಿಕ ಹಿಂಜರಿತದ ನಡುವೆಯೂ ಕರ್ನಾಟಕ ರಾಜ್ಯದಲ್ಲಿ ತೆರಿಗೆ ಸಂಗ್ರಹ ಉತ್ತಮವಾಗಿಯೇ ಇದೆ (ಮೋಟಾರು ವಾಹನ ಮತ್ತು ಸ್ಟ್ಯಾಂಪ್ ಸುಂಕ ಹೊರತುಪಡಿಸಿ). ಆದರೂ ಕೇಂದ್ರ ರಾಜ್ಯದ ಪಾಲಿನ ಜಿಎಸ್ಟಿ ಹಣವನ್ನು ಯಾವಾಗ ಕೊಡಲಾಗುವುದೆಂದು ಹೇಳುತ್ತಿಲ್ಲ.

ಇದರಿಂದಾಗಿ, ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಭಾರೀ ಹಣದ ಕೊರತೆ ಬೀಳಲಿದೆ. ರಸ್ತೆಗಳ ಅಗಲೀಕರಣ, ಕುಡಿಯುವ ನೀರಿನ ಯೋಜನೆಗಳು, ತ್ಯಾಜ್ಯ ನಿರ್ವಹಣೆ, ಶಿಕ್ಷಣ ಮತ್ತು ಆರೋಗ್ಯ ಉನ್ನತೀಕರಣದಂತಹ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ಬೀಳಲಿದೆ. ಅಭಿವೃದ್ಧಿ ಯೋಜನೆಗಳಿರಲಿ, ಈಗ ಸರ್ಕಾರ ನಡೆಸುತ್ತಿರುವ ಹಲವಾರು ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೇ ಹಣಕಾಸಿನ ಕೊರತೆ ಉಂಟಾಗುತ್ತದೆ.

ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ, ಕರ್ನಾಟಕದಲ್ಲಿ ಪ್ರವಾಹದಿಂದ ಆದ ನಷ್ಟ ಅಂದಾಜು 38,000 ಕೋಟಿ ರೂಪಾಯಿಗಳು. ಆದರೆ ಕೇಂದ್ರ ಸರ್ಕಾರ ಅದರಲ್ಲಿನ ಶೇಕಡಾ ಹತ್ತರಷ್ಟನ್ನೂ ಬಿಡುಗಡೆ ಮಾಡಲಿಲ್ಲ. ಅದರಿಂದಾಗಿ ಇಂದಿಗೂ ಪ್ರವಾಹ ಸಂತ್ರಸ್ತ ಮಕ್ಕಳು ಹಾಳುಬಿದ್ದ ಶಾಲೆಗಳಲ್ಲಿಯೇ ಕಲಿಯುವಂತ ಪರಿಸ್ಥಿತಿ ಇದೆ.

ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಅತ್ಯಗತ್ಯ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಅತ್ಯವಶ್ಯ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಸಾಲ ಮಾಡಬೇಕಾಗುತ್ತದೆ.

ಆದರೆ ಆರ್ಥಿಕ ನಿಯಮಗಳ ಪ್ರಕಾರ (FRBM – Fiscal responsibility and budget management) ರಾಜ್ಯ ಸರ್ಕಾರ ತನ್ನ ರಾಜ್ಯದ ಒಟ್ಟು ಜಿಡಿಪಿಯ ಗರಿಷ್ಟ (ಕರ್ನಾಟಕದ ಜಿಡಿಪಿ ಒಟ್ಟು 18 ಲಕ್ಷ ಕೋಟಿ ರೂಪಾಯಿಗಳು) ಶೇ.3 ರಷ್ಟು ಮಾತ್ರ ಸಾಲ ಮಾಡಬಹುದು.

ರಾಜ್ಯದ ಸಾಲ ಜಿಡಿಪಿಯ ಶೇ. 3 ರ ಮಿತಿಯೊಳಗಿದ್ದರೆ ಅದನ್ನು ಆರೋಗ್ಯಕರ ಆರ್ಥಿಕತೆ ಎಂದು ಪರಿಗಣಿಸಲಾಗುತ್ತದೆ. ಈಗ ಕರ್ನಾಟಕದ ಸಾಲ 42,000 ಕೋಟಿಗಳಷ್ಟಿದ್ದು ಗರಿಷ್ಠ 54,000 ಕೋಟಿಯ ತನಕ ಸಾಲ ಮಾಡಬಹುದಾಗಿರುತ್ತದೆ. ಅಂದರೆ ಈಗ ರಾಜ್ಯ ಸರ್ಕಾರ ಇನ್ನೂ 12,000 ಕೋಟಿಗಳಷ್ಟು ಸಾಲಮಾಡಬಹುದು. ಆದರೆ, ಅಷ್ಟು ದುಡ್ಡು ರಾಜ್ಯದ ಅಭಿವೃದ್ಧಿ ಕಾರ್ಯಕ್ಕೆ ಸಾಲದಿರುವುದರಿಂದ ಸರ್ಕಾರ FRBM ಮಿತಿಯನ್ನು ಮೀರಿ ಸಾಲ ಮಾಡಬೇಕಾಗುತ್ತದೆ. ಇದು ರಾಜ್ಯದ ಆರ್ಥಿಕತೆಯನ್ನು ಮತ್ತೂ ದುರ್ಬಲಗೊಳಿಸಲಿದೆ.

ಒಟ್ಟಾರೆಯಾಗಿ, ಮೊದಲಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕ ಕೇಂದ್ರ ಸರ್ಕಾರದ ಅವಕೃಪೆಯಿಂದಾಗಿ ಅನ್ಯಾಯವಾಗಿ ಆರ್ಥಿಕ ಕ್ಷೋಭೆಗೆ ಸಿಲುಕಿ ಅಭಿವೃದ್ಧಿ ಹೊಂದಲು ಕಷ್ಟಪಡುವಂತಹ ಸ್ಥಿತಿ ಎದುರಾಗಿದೆ. ಒಂದು ಕಡೆ ತಾನು ವೇಗವಾಗಿ ಸಮಗ್ರ ಅಭಿವೃದ್ಧಿ ಹೊಂದುತ್ತಾ ಮತ್ತೊಂದು ಕಡೆ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಕೇಂದ್ರದ ತಪ್ಪು ನೀತಿಯಿಂದಾಗಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಯಾವ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆಯೋ ಆ ಸರ್ಕಾರಗಳು ತಮ್ಮ ಪಾಲಿನ ಜಿಎಸ್ಟಿ ಹಣಕ್ಕೋಸ್ಕರ ಕೇಂದ್ರದ ಮೇಲೆ ಸುಪ್ರೀಂಕೋರ್ಟ್ ಮೊರೆಹೋಗುವ ಧಮಕಿ ಹಾಕಿವೆ. ಆದರೆ, ಬಿಜೆಪಿ ಆಡಳಿತ ಇರುವ ರಾಜ್ಯ ಸರ್ಕಾರಗಳು ತಮ್ಮದೇ ಪಕ್ಷದ ಕೇಂದ್ರ ಸರ್ಕಾರವನ್ನು ತಮ್ಮ ನ್ಯಾಯಯುತ ಪಾಲನ್ನು ಕನಿಷ್ಟ ಗಟ್ಟಿ ದನಿಯಲ್ಲಿಯೂ ಕೇಳಲಾಗದೆ ಉಳಿದಿವೆ (ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಆಗ ಕಾಂಗ್ರೆಸ್ ರಾಜ್ಯ ಸರ್ಕಾರಗಳ ಸ್ಥಿತಿಯೂ ಇದೇ ಆಗಿರುತ್ತಿತ್ತು). ನಮ್ಮ ಕರ್ನಾಟಕದಿಂದ ಇಪ್ಪತ್ತೈದು ಬಿಜೆಪಿ ಸಂಸದರಿದ್ದೂ ಕೂಡ ತನ್ನ ನ್ಯಾಯಯುತ ಪಾಲನ್ನು ಕೇಂದ್ರದಿಂದ ಪಡೆಯಲು ರಾಜ್ಯ ವಿಫಲವಾಗಿದೆ.

ಈ ಹಿನ್ನೆಲೆಯಲ್ಲಿ ನೋಡಿದಾಗ, ನಮ್ಮ ಕರ್ನಾಟಕಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ಪಾಲನ್ನು ಗಟ್ಟಿ ದನಿಯಲ್ಲಿ ಕೇಳಿ ದಕ್ಕಿಸಿಕೊಳ್ಳಬೇಕಾದರೆ ನಮ್ಮ ರಾಜ್ಯದ್ದೇ ಒಂದು ಸ್ವಾಭಿಮಾನಿ, ಪ್ರಾಮಾಣಿಕ, ಪ್ರಬಲ ಪ್ರಾದೇಶಿಕ ಪಕ್ಷ ಅನಿವಾರ್ಯವಾಗಿ ಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...