Homeಎಕಾನಮಿಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಾದ ಭಾರೀ ಅನ್ಯಾಯ : ಪರಿಹಾರವೇನು

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಾದ ಭಾರೀ ಅನ್ಯಾಯ : ಪರಿಹಾರವೇನು

ಕರ್ನಾಟಕ ಮೊದಲಿನಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ನೇರ ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯ ನಂತರ ಮೂರನೇ ಸ್ಥಾನದಲ್ಲಿದೆ.

- Advertisement -
- Advertisement -

ನಮಗೆಲ್ಲಾ ತಿಳಿದಿರುವ ಹಾಗೆ ನಮ್ಮ ದೇಶ ಭಾರತ ಹಲವು ರಾಜ್ಯಗಳು ಸೇರಿ ಆಗಿರುವಂತದು. ಹಾಗೆಯೇ ನಮ್ಮ ಕರ್ನಾಟಕ ರಾಜ್ಯವೂ ಭಾರತದ ಅವಿಭಾಜ್ಯ ಅಂಗ.

ಇಡೀ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ಹೊತ್ತ ಭಾರತದ ಕೇಂದ್ರ ಸರ್ಕಾರ ದೇಶದ ಎಲ್ಲಾ ರಾಜ್ಯಗಳ ಸಮಗ್ರ ಅಭಿವೃದ್ಧಿಗೆ ಅವುಗಳ ಅಗತ್ಯಕ್ಕನುಗುಣವಾಗಿ ಆರ್ಥಿಕ ಬೆಂಬಲವನ್ನು ಕೊಡುವ ಕರ್ತವ್ಯ ನಿಭಾಯಿಸಬೇಕಾಗಿರುತ್ತದೆ.

ಕೇಂದ್ರದ ಬೆಂಬಲವನ್ನು ಸದುಪಯೋಗಿಸಿಕೊಳ್ಳುವ ರಾಜ್ಯಗಳು ಸಮಗ್ರ ಅಭಿವೃದ್ಧಿ ಹೊಂದುತ್ತಾ ಅದರ ಫಲವಾಗಿ ತಮ್ಮ ರಾಜ್ಯಗಳಲ್ಲಿ ಹೆಚ್ಚು ಹೆಚ್ಚು ತೆರಿಗೆ ಸಂಗ್ರಹಿಸಲು ಶಕ್ತವಾಗುತ್ತವೆ. ಹೊಸ ಜಿಎಸ್ಟಿ ಪದ್ಧತಿ ಜಾರಿಗೆ ಬಂದಮೇಲೆ ಅಬಕಾರಿ ಸುಂಕ, ಪೆಟ್ರೋಲ್ ಸುಂಕ ಮತ್ತಿತರ ಕೆಲ ತೆರಿಗೆ ಹೊರತುಪಡಿಸಿ ಬಹುತೇಕ ಉಳಿದೆಲ್ಲಾ ವಲಯದ ತೆರಿಗೆಯನ್ನೂ ರಾಜ್ಯಗಳು ಕೇಂದ್ರಕ್ಕೆ ತಲುಪಿಸಿ ಅಲ್ಲಿಂದ ತಮ್ಮ ಪಾಲಿನ ಜಿಎಸ್ಟಿ ತೆರಿಗೆ ಪಾಲನ್ನು ಪಡೆದು ಅದನ್ನು ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸುತ್ತವೆ.

ಹೀಗೆ ತಮ್ಮ ಪ್ರಯತ್ನ ಮತ್ತು ಕೇಂದ್ರದ ಆರ್ಥಿಕ ಬೆಂಬಲ ಇವೆರಡನ್ನೂ ಬಳಸಿ ಅಭಿವೃದ್ಧಿಯ ದಾರಿಯಲ್ಲಿ ಸರಿಯಾಗಿ ಮುನ್ನಡೆಯುತ್ತಿರುವಂತ ರಾಜ್ಯಗಳು ದೇಶದ ಒಟ್ಟಾರೆ ಅಭಿವೃದ್ಧಿಗೆ ಉತ್ತಮ ಕೊಡುಗೆಯನ್ನು ನೀಡುತ್ತಿರುತ್ತವೆ. ಅಂತಹ ರಾಜ್ಯಗಳನ್ನು ಗುರುತಿಸಿ ಅವುಗಳಿಗೆ ಮತ್ತಷ್ಟು ಉತ್ತೇಜನ ನೀಡುವುದು ಕೇಂದ್ರದ ಆದ್ಯ ಕರ್ತವ್ಯವಾಗಿರಬೇಕಾಗಿರುತ್ತದೆ.

ಆದರೆ, ನಮ್ಮ ಕರ್ನಾಟಕದ ವಿಷಯದಲ್ಲಿ ಆಗುತ್ತಿರುವುದು ಇದಕ್ಕೆ ತದ್ವಿರುದ್ಧವಾಗಿದೆ. ಕರ್ನಾಟಕ ಮೊದಲಿನಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ನೇರ ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯ ನಂತರ ಮೂರನೇ ಸ್ಥಾನದಲ್ಲಿದೆ. ದೇಶದ ಒಟ್ಟು ನೇರ ತೆರಿಗೆಯಲ್ಲಿ ಶೇ. 61ರಷ್ಟು ಈ ಮೂರು ರಾಜ್ಯಗಳಿಂದಲೇ ಬರುತ್ತಿದೆ ಮತ್ತು ದೇಶದ ಒಟ್ಟು ತೆರಿಗೆಯಲ್ಲಿ ನೇರ ತೆರಿಗೆಯ ಪಾಲು ಶೇ. 50ಕ್ಕಿಂತ ಹೆಚ್ಚಿದೆ.

ಇದು ಕರ್ನಾಟಕದ ಅಭಿವೃದ್ಧಿಯ ವೇಗವನ್ನು ಒಂದು ಮಟ್ಟಿಗೆ ತೋರುತ್ತದೆ. ಆರ್ಥಿಕತೆಯ ಜೊತೆಗೆ ಕರ್ನಾಟಕವು ಮಾನವ ಅಭಿವೃದ್ಧಿಯಲ್ಲೂ ಗಮನಾರ್ಹ ಬೆಳವಣಿಗೆ ಸಾಧಿಸಿದೆ. 1971 ರಿಂದ 2011 ರ ನಡುವೆ ಜನಸಂಖ್ಯೆ ಸ್ಫೋಟವನ್ನು ಕರ್ನಾಟಕ ಗಮನಾರ್ಹವಾಗಿ ತಡೆದಿದ್ದು 2011 ರ ವೇಳೆಗೆ ಒಂದು ಆರೋಗ್ಯಕರ ಜನಸಂಖ್ಯಾ ಬೆಳವಣಿಗೆಯ ಹಂತವನ್ನು ತಲುಪಿದೆ.

ಆದರೆ, ಕರ್ನಾಟಕದ ಈ ಸಮಗ್ರ ಅಭಿವೃದ್ಧಿಯೇ ಈ ರಾಜ್ಯಕ್ಕೆ ಈಗ ಮುಳುವಾಗಿ ಪರಿಣಮಿಸಿದೆ. ನಮ್ಮ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ಕೊಡಬೇಕಿದ್ದ ಕೇಂದ್ರವು ಅದರ ಬದಲಿಗೆ ಕೇಂದ್ರದ ಅನುದಾನದಲ್ಲಿ ಕಡಿತ ಮಾಡುವ ಮೂಲಕ ಶಿಕ್ಷೆ ವಿಧಿಸಿದೆ. ಹದಿನೈದನೇ ಹಣಕಾಸು ಆಯೋಗವು ರಾಜ್ಯಗಳಿಗೆ ಕೇಂದ್ರದ ಅನುದಾನ ನಿಗದಿ ಮಾಡಲು 2011 ರ ಜನಸಂಖ್ಯೆಯನ್ನು ಮಾನದಂಡವನ್ನಾಗಿ ಪರಿಗಣಿಸಿದೆ. 2011 ರ ಜನಗಣತಿಯ ಪ್ರಕಾರ ಹೆಚ್ಚಿನ ಜನಸಂಖ್ಯೆ ಇರುವ ರಾಜ್ಯಕ್ಕೆ ಹೆಚ್ಚಿನ ಅನುದಾನ. ಅಂದರೆ, ಸರಿಯಾದ ಅಭಿವೃದ್ಧಿ ಮಾರ್ಗದಲ್ಲಿ ಸಾಗಿ ಜನಸಂಖ್ಯೆಯನ್ನು ನಿಯಂತ್ರಿಸಿದ ಕರ್ನಾಟಕದಂತ ರಾಜ್ಯಕ್ಕೆ ಮತ್ತೂ ಹೆಚ್ಚಿನ ಪ್ರೋತ್ಸಾಹ ಕೊಡುವ ಬದಲು ಶಿಕ್ಷೆ ವಿಧಿಸಿದಂತಾಗಿದೆ.

ಈ ಹೊಸ ಮಾನದಂಡವನ್ನು ಅನುಸರಿಸಿದ ಕೇಂದ್ರ ಸರ್ಕಾರ ಈ ಸಾರಿಯ 2020-21 ರ ಬಜೆಟ್ ನಲ್ಲಿ ಹೋದ ವರ್ಷಕ್ಕಿಂತ 5,495 ಕೋಟಿ ರೂಪಾಯಿಗಳಷ್ಟು ಕಡಿಮೆ ಅನುದಾನವನ್ನು ಕರ್ನಾಟಕಕ್ಕೆ ನಿಗದಿಪಡಿಸಿದೆ. 2019-20 ರಲ್ಲಿ ಕೇಂದ್ರದ ತೆರಿಗೆಯಲ್ಲಿ ರಾಜ್ಯದ ಪಾಲು 36,675 ಕೋಟಿ ರೂಪಾಯಿಗಳಾಗಿದ್ದರೆ ಈ ವರ್ಷ ಅದನ್ನು 31,180 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ.

ಇದರಿಂದಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮನಗಂಡ ಹಣಕಾಸು ಆಯೋಗವೇ ಕೊರತೆ ಬೀಳುವ 5,495 ಕೋಟಿಗಳನ್ನು ವಿಶೇಷ ಅನುದಾನದ ಅಡಿಯಲ್ಲಿ ಕೊಡಬೇಕೆಂದು ಹೇಳಿದ್ದರೂ ಕೂಡ ಕೇಂದ್ರ ಸರ್ಕಾರ ಕೊಡುವ ಮನಸ್ಸು ಮಾಡುತ್ತಿಲ್ಲ.

ಇನ್ನು ಈ ಹೊಸ ಫಾರ್ಮುಲಾದಿಂದಾಗಿ ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ ಕನಿಷ್ಟ ಮೂವತ್ತು ಸಾವಿರ ಕೋಟಿಗಳಷ್ಟು ಅನುದಾನದ ಕೊರತೆ ಬೀಳಲಿದ್ದು ರಾಜ್ಯದ ಅಭಿವೃದ್ಧಿಗೆ ಭಾರೀ ತೊಂದರೆಯಾಗಲಿದೆ.

ಇದರ ಜೊತೆಗೆ, ಈ 2019-20 ರ ಸಾಲಿನಲ್ಲಿ ಕರ್ನಾಟಕದ ಪಾಲಿಗೆ ಬರಬೇಕಿದ್ದ ಜಿಎಸ್ಟಿಯಲ್ಲಿ ಅಂದಾಜು ಹತ್ತುಸಾವಿರ ಕೋಟಿ ರೂಪಾಯಿಗಳಷ್ಟನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಆರ್ಥಿಕ ಹಿಂಜರಿತದ ನಡುವೆಯೂ ಕರ್ನಾಟಕ ರಾಜ್ಯದಲ್ಲಿ ತೆರಿಗೆ ಸಂಗ್ರಹ ಉತ್ತಮವಾಗಿಯೇ ಇದೆ (ಮೋಟಾರು ವಾಹನ ಮತ್ತು ಸ್ಟ್ಯಾಂಪ್ ಸುಂಕ ಹೊರತುಪಡಿಸಿ). ಆದರೂ ಕೇಂದ್ರ ರಾಜ್ಯದ ಪಾಲಿನ ಜಿಎಸ್ಟಿ ಹಣವನ್ನು ಯಾವಾಗ ಕೊಡಲಾಗುವುದೆಂದು ಹೇಳುತ್ತಿಲ್ಲ.

ಇದರಿಂದಾಗಿ, ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಭಾರೀ ಹಣದ ಕೊರತೆ ಬೀಳಲಿದೆ. ರಸ್ತೆಗಳ ಅಗಲೀಕರಣ, ಕುಡಿಯುವ ನೀರಿನ ಯೋಜನೆಗಳು, ತ್ಯಾಜ್ಯ ನಿರ್ವಹಣೆ, ಶಿಕ್ಷಣ ಮತ್ತು ಆರೋಗ್ಯ ಉನ್ನತೀಕರಣದಂತಹ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ಬೀಳಲಿದೆ. ಅಭಿವೃದ್ಧಿ ಯೋಜನೆಗಳಿರಲಿ, ಈಗ ಸರ್ಕಾರ ನಡೆಸುತ್ತಿರುವ ಹಲವಾರು ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೇ ಹಣಕಾಸಿನ ಕೊರತೆ ಉಂಟಾಗುತ್ತದೆ.

ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ, ಕರ್ನಾಟಕದಲ್ಲಿ ಪ್ರವಾಹದಿಂದ ಆದ ನಷ್ಟ ಅಂದಾಜು 38,000 ಕೋಟಿ ರೂಪಾಯಿಗಳು. ಆದರೆ ಕೇಂದ್ರ ಸರ್ಕಾರ ಅದರಲ್ಲಿನ ಶೇಕಡಾ ಹತ್ತರಷ್ಟನ್ನೂ ಬಿಡುಗಡೆ ಮಾಡಲಿಲ್ಲ. ಅದರಿಂದಾಗಿ ಇಂದಿಗೂ ಪ್ರವಾಹ ಸಂತ್ರಸ್ತ ಮಕ್ಕಳು ಹಾಳುಬಿದ್ದ ಶಾಲೆಗಳಲ್ಲಿಯೇ ಕಲಿಯುವಂತ ಪರಿಸ್ಥಿತಿ ಇದೆ.

ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಅತ್ಯಗತ್ಯ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಅತ್ಯವಶ್ಯ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಸಾಲ ಮಾಡಬೇಕಾಗುತ್ತದೆ.

ಆದರೆ ಆರ್ಥಿಕ ನಿಯಮಗಳ ಪ್ರಕಾರ (FRBM – Fiscal responsibility and budget management) ರಾಜ್ಯ ಸರ್ಕಾರ ತನ್ನ ರಾಜ್ಯದ ಒಟ್ಟು ಜಿಡಿಪಿಯ ಗರಿಷ್ಟ (ಕರ್ನಾಟಕದ ಜಿಡಿಪಿ ಒಟ್ಟು 18 ಲಕ್ಷ ಕೋಟಿ ರೂಪಾಯಿಗಳು) ಶೇ.3 ರಷ್ಟು ಮಾತ್ರ ಸಾಲ ಮಾಡಬಹುದು.

ರಾಜ್ಯದ ಸಾಲ ಜಿಡಿಪಿಯ ಶೇ. 3 ರ ಮಿತಿಯೊಳಗಿದ್ದರೆ ಅದನ್ನು ಆರೋಗ್ಯಕರ ಆರ್ಥಿಕತೆ ಎಂದು ಪರಿಗಣಿಸಲಾಗುತ್ತದೆ. ಈಗ ಕರ್ನಾಟಕದ ಸಾಲ 42,000 ಕೋಟಿಗಳಷ್ಟಿದ್ದು ಗರಿಷ್ಠ 54,000 ಕೋಟಿಯ ತನಕ ಸಾಲ ಮಾಡಬಹುದಾಗಿರುತ್ತದೆ. ಅಂದರೆ ಈಗ ರಾಜ್ಯ ಸರ್ಕಾರ ಇನ್ನೂ 12,000 ಕೋಟಿಗಳಷ್ಟು ಸಾಲಮಾಡಬಹುದು. ಆದರೆ, ಅಷ್ಟು ದುಡ್ಡು ರಾಜ್ಯದ ಅಭಿವೃದ್ಧಿ ಕಾರ್ಯಕ್ಕೆ ಸಾಲದಿರುವುದರಿಂದ ಸರ್ಕಾರ FRBM ಮಿತಿಯನ್ನು ಮೀರಿ ಸಾಲ ಮಾಡಬೇಕಾಗುತ್ತದೆ. ಇದು ರಾಜ್ಯದ ಆರ್ಥಿಕತೆಯನ್ನು ಮತ್ತೂ ದುರ್ಬಲಗೊಳಿಸಲಿದೆ.

ಒಟ್ಟಾರೆಯಾಗಿ, ಮೊದಲಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕ ಕೇಂದ್ರ ಸರ್ಕಾರದ ಅವಕೃಪೆಯಿಂದಾಗಿ ಅನ್ಯಾಯವಾಗಿ ಆರ್ಥಿಕ ಕ್ಷೋಭೆಗೆ ಸಿಲುಕಿ ಅಭಿವೃದ್ಧಿ ಹೊಂದಲು ಕಷ್ಟಪಡುವಂತಹ ಸ್ಥಿತಿ ಎದುರಾಗಿದೆ. ಒಂದು ಕಡೆ ತಾನು ವೇಗವಾಗಿ ಸಮಗ್ರ ಅಭಿವೃದ್ಧಿ ಹೊಂದುತ್ತಾ ಮತ್ತೊಂದು ಕಡೆ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಕೇಂದ್ರದ ತಪ್ಪು ನೀತಿಯಿಂದಾಗಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಯಾವ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆಯೋ ಆ ಸರ್ಕಾರಗಳು ತಮ್ಮ ಪಾಲಿನ ಜಿಎಸ್ಟಿ ಹಣಕ್ಕೋಸ್ಕರ ಕೇಂದ್ರದ ಮೇಲೆ ಸುಪ್ರೀಂಕೋರ್ಟ್ ಮೊರೆಹೋಗುವ ಧಮಕಿ ಹಾಕಿವೆ. ಆದರೆ, ಬಿಜೆಪಿ ಆಡಳಿತ ಇರುವ ರಾಜ್ಯ ಸರ್ಕಾರಗಳು ತಮ್ಮದೇ ಪಕ್ಷದ ಕೇಂದ್ರ ಸರ್ಕಾರವನ್ನು ತಮ್ಮ ನ್ಯಾಯಯುತ ಪಾಲನ್ನು ಕನಿಷ್ಟ ಗಟ್ಟಿ ದನಿಯಲ್ಲಿಯೂ ಕೇಳಲಾಗದೆ ಉಳಿದಿವೆ (ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಆಗ ಕಾಂಗ್ರೆಸ್ ರಾಜ್ಯ ಸರ್ಕಾರಗಳ ಸ್ಥಿತಿಯೂ ಇದೇ ಆಗಿರುತ್ತಿತ್ತು). ನಮ್ಮ ಕರ್ನಾಟಕದಿಂದ ಇಪ್ಪತ್ತೈದು ಬಿಜೆಪಿ ಸಂಸದರಿದ್ದೂ ಕೂಡ ತನ್ನ ನ್ಯಾಯಯುತ ಪಾಲನ್ನು ಕೇಂದ್ರದಿಂದ ಪಡೆಯಲು ರಾಜ್ಯ ವಿಫಲವಾಗಿದೆ.

ಈ ಹಿನ್ನೆಲೆಯಲ್ಲಿ ನೋಡಿದಾಗ, ನಮ್ಮ ಕರ್ನಾಟಕಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ಪಾಲನ್ನು ಗಟ್ಟಿ ದನಿಯಲ್ಲಿ ಕೇಳಿ ದಕ್ಕಿಸಿಕೊಳ್ಳಬೇಕಾದರೆ ನಮ್ಮ ರಾಜ್ಯದ್ದೇ ಒಂದು ಸ್ವಾಭಿಮಾನಿ, ಪ್ರಾಮಾಣಿಕ, ಪ್ರಬಲ ಪ್ರಾದೇಶಿಕ ಪಕ್ಷ ಅನಿವಾರ್ಯವಾಗಿ ಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...