Homeಎಕಾನಮಿಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಾದ ಭಾರೀ ಅನ್ಯಾಯ : ಪರಿಹಾರವೇನು

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಾದ ಭಾರೀ ಅನ್ಯಾಯ : ಪರಿಹಾರವೇನು

ಕರ್ನಾಟಕ ಮೊದಲಿನಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ನೇರ ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯ ನಂತರ ಮೂರನೇ ಸ್ಥಾನದಲ್ಲಿದೆ.

- Advertisement -
- Advertisement -

ನಮಗೆಲ್ಲಾ ತಿಳಿದಿರುವ ಹಾಗೆ ನಮ್ಮ ದೇಶ ಭಾರತ ಹಲವು ರಾಜ್ಯಗಳು ಸೇರಿ ಆಗಿರುವಂತದು. ಹಾಗೆಯೇ ನಮ್ಮ ಕರ್ನಾಟಕ ರಾಜ್ಯವೂ ಭಾರತದ ಅವಿಭಾಜ್ಯ ಅಂಗ.

ಇಡೀ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ಹೊತ್ತ ಭಾರತದ ಕೇಂದ್ರ ಸರ್ಕಾರ ದೇಶದ ಎಲ್ಲಾ ರಾಜ್ಯಗಳ ಸಮಗ್ರ ಅಭಿವೃದ್ಧಿಗೆ ಅವುಗಳ ಅಗತ್ಯಕ್ಕನುಗುಣವಾಗಿ ಆರ್ಥಿಕ ಬೆಂಬಲವನ್ನು ಕೊಡುವ ಕರ್ತವ್ಯ ನಿಭಾಯಿಸಬೇಕಾಗಿರುತ್ತದೆ.

ಕೇಂದ್ರದ ಬೆಂಬಲವನ್ನು ಸದುಪಯೋಗಿಸಿಕೊಳ್ಳುವ ರಾಜ್ಯಗಳು ಸಮಗ್ರ ಅಭಿವೃದ್ಧಿ ಹೊಂದುತ್ತಾ ಅದರ ಫಲವಾಗಿ ತಮ್ಮ ರಾಜ್ಯಗಳಲ್ಲಿ ಹೆಚ್ಚು ಹೆಚ್ಚು ತೆರಿಗೆ ಸಂಗ್ರಹಿಸಲು ಶಕ್ತವಾಗುತ್ತವೆ. ಹೊಸ ಜಿಎಸ್ಟಿ ಪದ್ಧತಿ ಜಾರಿಗೆ ಬಂದಮೇಲೆ ಅಬಕಾರಿ ಸುಂಕ, ಪೆಟ್ರೋಲ್ ಸುಂಕ ಮತ್ತಿತರ ಕೆಲ ತೆರಿಗೆ ಹೊರತುಪಡಿಸಿ ಬಹುತೇಕ ಉಳಿದೆಲ್ಲಾ ವಲಯದ ತೆರಿಗೆಯನ್ನೂ ರಾಜ್ಯಗಳು ಕೇಂದ್ರಕ್ಕೆ ತಲುಪಿಸಿ ಅಲ್ಲಿಂದ ತಮ್ಮ ಪಾಲಿನ ಜಿಎಸ್ಟಿ ತೆರಿಗೆ ಪಾಲನ್ನು ಪಡೆದು ಅದನ್ನು ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸುತ್ತವೆ.

ಹೀಗೆ ತಮ್ಮ ಪ್ರಯತ್ನ ಮತ್ತು ಕೇಂದ್ರದ ಆರ್ಥಿಕ ಬೆಂಬಲ ಇವೆರಡನ್ನೂ ಬಳಸಿ ಅಭಿವೃದ್ಧಿಯ ದಾರಿಯಲ್ಲಿ ಸರಿಯಾಗಿ ಮುನ್ನಡೆಯುತ್ತಿರುವಂತ ರಾಜ್ಯಗಳು ದೇಶದ ಒಟ್ಟಾರೆ ಅಭಿವೃದ್ಧಿಗೆ ಉತ್ತಮ ಕೊಡುಗೆಯನ್ನು ನೀಡುತ್ತಿರುತ್ತವೆ. ಅಂತಹ ರಾಜ್ಯಗಳನ್ನು ಗುರುತಿಸಿ ಅವುಗಳಿಗೆ ಮತ್ತಷ್ಟು ಉತ್ತೇಜನ ನೀಡುವುದು ಕೇಂದ್ರದ ಆದ್ಯ ಕರ್ತವ್ಯವಾಗಿರಬೇಕಾಗಿರುತ್ತದೆ.

ಆದರೆ, ನಮ್ಮ ಕರ್ನಾಟಕದ ವಿಷಯದಲ್ಲಿ ಆಗುತ್ತಿರುವುದು ಇದಕ್ಕೆ ತದ್ವಿರುದ್ಧವಾಗಿದೆ. ಕರ್ನಾಟಕ ಮೊದಲಿನಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ನೇರ ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯ ನಂತರ ಮೂರನೇ ಸ್ಥಾನದಲ್ಲಿದೆ. ದೇಶದ ಒಟ್ಟು ನೇರ ತೆರಿಗೆಯಲ್ಲಿ ಶೇ. 61ರಷ್ಟು ಈ ಮೂರು ರಾಜ್ಯಗಳಿಂದಲೇ ಬರುತ್ತಿದೆ ಮತ್ತು ದೇಶದ ಒಟ್ಟು ತೆರಿಗೆಯಲ್ಲಿ ನೇರ ತೆರಿಗೆಯ ಪಾಲು ಶೇ. 50ಕ್ಕಿಂತ ಹೆಚ್ಚಿದೆ.

ಇದು ಕರ್ನಾಟಕದ ಅಭಿವೃದ್ಧಿಯ ವೇಗವನ್ನು ಒಂದು ಮಟ್ಟಿಗೆ ತೋರುತ್ತದೆ. ಆರ್ಥಿಕತೆಯ ಜೊತೆಗೆ ಕರ್ನಾಟಕವು ಮಾನವ ಅಭಿವೃದ್ಧಿಯಲ್ಲೂ ಗಮನಾರ್ಹ ಬೆಳವಣಿಗೆ ಸಾಧಿಸಿದೆ. 1971 ರಿಂದ 2011 ರ ನಡುವೆ ಜನಸಂಖ್ಯೆ ಸ್ಫೋಟವನ್ನು ಕರ್ನಾಟಕ ಗಮನಾರ್ಹವಾಗಿ ತಡೆದಿದ್ದು 2011 ರ ವೇಳೆಗೆ ಒಂದು ಆರೋಗ್ಯಕರ ಜನಸಂಖ್ಯಾ ಬೆಳವಣಿಗೆಯ ಹಂತವನ್ನು ತಲುಪಿದೆ.

ಆದರೆ, ಕರ್ನಾಟಕದ ಈ ಸಮಗ್ರ ಅಭಿವೃದ್ಧಿಯೇ ಈ ರಾಜ್ಯಕ್ಕೆ ಈಗ ಮುಳುವಾಗಿ ಪರಿಣಮಿಸಿದೆ. ನಮ್ಮ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ಕೊಡಬೇಕಿದ್ದ ಕೇಂದ್ರವು ಅದರ ಬದಲಿಗೆ ಕೇಂದ್ರದ ಅನುದಾನದಲ್ಲಿ ಕಡಿತ ಮಾಡುವ ಮೂಲಕ ಶಿಕ್ಷೆ ವಿಧಿಸಿದೆ. ಹದಿನೈದನೇ ಹಣಕಾಸು ಆಯೋಗವು ರಾಜ್ಯಗಳಿಗೆ ಕೇಂದ್ರದ ಅನುದಾನ ನಿಗದಿ ಮಾಡಲು 2011 ರ ಜನಸಂಖ್ಯೆಯನ್ನು ಮಾನದಂಡವನ್ನಾಗಿ ಪರಿಗಣಿಸಿದೆ. 2011 ರ ಜನಗಣತಿಯ ಪ್ರಕಾರ ಹೆಚ್ಚಿನ ಜನಸಂಖ್ಯೆ ಇರುವ ರಾಜ್ಯಕ್ಕೆ ಹೆಚ್ಚಿನ ಅನುದಾನ. ಅಂದರೆ, ಸರಿಯಾದ ಅಭಿವೃದ್ಧಿ ಮಾರ್ಗದಲ್ಲಿ ಸಾಗಿ ಜನಸಂಖ್ಯೆಯನ್ನು ನಿಯಂತ್ರಿಸಿದ ಕರ್ನಾಟಕದಂತ ರಾಜ್ಯಕ್ಕೆ ಮತ್ತೂ ಹೆಚ್ಚಿನ ಪ್ರೋತ್ಸಾಹ ಕೊಡುವ ಬದಲು ಶಿಕ್ಷೆ ವಿಧಿಸಿದಂತಾಗಿದೆ.

ಈ ಹೊಸ ಮಾನದಂಡವನ್ನು ಅನುಸರಿಸಿದ ಕೇಂದ್ರ ಸರ್ಕಾರ ಈ ಸಾರಿಯ 2020-21 ರ ಬಜೆಟ್ ನಲ್ಲಿ ಹೋದ ವರ್ಷಕ್ಕಿಂತ 5,495 ಕೋಟಿ ರೂಪಾಯಿಗಳಷ್ಟು ಕಡಿಮೆ ಅನುದಾನವನ್ನು ಕರ್ನಾಟಕಕ್ಕೆ ನಿಗದಿಪಡಿಸಿದೆ. 2019-20 ರಲ್ಲಿ ಕೇಂದ್ರದ ತೆರಿಗೆಯಲ್ಲಿ ರಾಜ್ಯದ ಪಾಲು 36,675 ಕೋಟಿ ರೂಪಾಯಿಗಳಾಗಿದ್ದರೆ ಈ ವರ್ಷ ಅದನ್ನು 31,180 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ.

ಇದರಿಂದಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮನಗಂಡ ಹಣಕಾಸು ಆಯೋಗವೇ ಕೊರತೆ ಬೀಳುವ 5,495 ಕೋಟಿಗಳನ್ನು ವಿಶೇಷ ಅನುದಾನದ ಅಡಿಯಲ್ಲಿ ಕೊಡಬೇಕೆಂದು ಹೇಳಿದ್ದರೂ ಕೂಡ ಕೇಂದ್ರ ಸರ್ಕಾರ ಕೊಡುವ ಮನಸ್ಸು ಮಾಡುತ್ತಿಲ್ಲ.

ಇನ್ನು ಈ ಹೊಸ ಫಾರ್ಮುಲಾದಿಂದಾಗಿ ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ ಕನಿಷ್ಟ ಮೂವತ್ತು ಸಾವಿರ ಕೋಟಿಗಳಷ್ಟು ಅನುದಾನದ ಕೊರತೆ ಬೀಳಲಿದ್ದು ರಾಜ್ಯದ ಅಭಿವೃದ್ಧಿಗೆ ಭಾರೀ ತೊಂದರೆಯಾಗಲಿದೆ.

ಇದರ ಜೊತೆಗೆ, ಈ 2019-20 ರ ಸಾಲಿನಲ್ಲಿ ಕರ್ನಾಟಕದ ಪಾಲಿಗೆ ಬರಬೇಕಿದ್ದ ಜಿಎಸ್ಟಿಯಲ್ಲಿ ಅಂದಾಜು ಹತ್ತುಸಾವಿರ ಕೋಟಿ ರೂಪಾಯಿಗಳಷ್ಟನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಆರ್ಥಿಕ ಹಿಂಜರಿತದ ನಡುವೆಯೂ ಕರ್ನಾಟಕ ರಾಜ್ಯದಲ್ಲಿ ತೆರಿಗೆ ಸಂಗ್ರಹ ಉತ್ತಮವಾಗಿಯೇ ಇದೆ (ಮೋಟಾರು ವಾಹನ ಮತ್ತು ಸ್ಟ್ಯಾಂಪ್ ಸುಂಕ ಹೊರತುಪಡಿಸಿ). ಆದರೂ ಕೇಂದ್ರ ರಾಜ್ಯದ ಪಾಲಿನ ಜಿಎಸ್ಟಿ ಹಣವನ್ನು ಯಾವಾಗ ಕೊಡಲಾಗುವುದೆಂದು ಹೇಳುತ್ತಿಲ್ಲ.

ಇದರಿಂದಾಗಿ, ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಭಾರೀ ಹಣದ ಕೊರತೆ ಬೀಳಲಿದೆ. ರಸ್ತೆಗಳ ಅಗಲೀಕರಣ, ಕುಡಿಯುವ ನೀರಿನ ಯೋಜನೆಗಳು, ತ್ಯಾಜ್ಯ ನಿರ್ವಹಣೆ, ಶಿಕ್ಷಣ ಮತ್ತು ಆರೋಗ್ಯ ಉನ್ನತೀಕರಣದಂತಹ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ಬೀಳಲಿದೆ. ಅಭಿವೃದ್ಧಿ ಯೋಜನೆಗಳಿರಲಿ, ಈಗ ಸರ್ಕಾರ ನಡೆಸುತ್ತಿರುವ ಹಲವಾರು ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೇ ಹಣಕಾಸಿನ ಕೊರತೆ ಉಂಟಾಗುತ್ತದೆ.

ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ, ಕರ್ನಾಟಕದಲ್ಲಿ ಪ್ರವಾಹದಿಂದ ಆದ ನಷ್ಟ ಅಂದಾಜು 38,000 ಕೋಟಿ ರೂಪಾಯಿಗಳು. ಆದರೆ ಕೇಂದ್ರ ಸರ್ಕಾರ ಅದರಲ್ಲಿನ ಶೇಕಡಾ ಹತ್ತರಷ್ಟನ್ನೂ ಬಿಡುಗಡೆ ಮಾಡಲಿಲ್ಲ. ಅದರಿಂದಾಗಿ ಇಂದಿಗೂ ಪ್ರವಾಹ ಸಂತ್ರಸ್ತ ಮಕ್ಕಳು ಹಾಳುಬಿದ್ದ ಶಾಲೆಗಳಲ್ಲಿಯೇ ಕಲಿಯುವಂತ ಪರಿಸ್ಥಿತಿ ಇದೆ.

ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಅತ್ಯಗತ್ಯ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಅತ್ಯವಶ್ಯ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಸಾಲ ಮಾಡಬೇಕಾಗುತ್ತದೆ.

ಆದರೆ ಆರ್ಥಿಕ ನಿಯಮಗಳ ಪ್ರಕಾರ (FRBM – Fiscal responsibility and budget management) ರಾಜ್ಯ ಸರ್ಕಾರ ತನ್ನ ರಾಜ್ಯದ ಒಟ್ಟು ಜಿಡಿಪಿಯ ಗರಿಷ್ಟ (ಕರ್ನಾಟಕದ ಜಿಡಿಪಿ ಒಟ್ಟು 18 ಲಕ್ಷ ಕೋಟಿ ರೂಪಾಯಿಗಳು) ಶೇ.3 ರಷ್ಟು ಮಾತ್ರ ಸಾಲ ಮಾಡಬಹುದು.

ರಾಜ್ಯದ ಸಾಲ ಜಿಡಿಪಿಯ ಶೇ. 3 ರ ಮಿತಿಯೊಳಗಿದ್ದರೆ ಅದನ್ನು ಆರೋಗ್ಯಕರ ಆರ್ಥಿಕತೆ ಎಂದು ಪರಿಗಣಿಸಲಾಗುತ್ತದೆ. ಈಗ ಕರ್ನಾಟಕದ ಸಾಲ 42,000 ಕೋಟಿಗಳಷ್ಟಿದ್ದು ಗರಿಷ್ಠ 54,000 ಕೋಟಿಯ ತನಕ ಸಾಲ ಮಾಡಬಹುದಾಗಿರುತ್ತದೆ. ಅಂದರೆ ಈಗ ರಾಜ್ಯ ಸರ್ಕಾರ ಇನ್ನೂ 12,000 ಕೋಟಿಗಳಷ್ಟು ಸಾಲಮಾಡಬಹುದು. ಆದರೆ, ಅಷ್ಟು ದುಡ್ಡು ರಾಜ್ಯದ ಅಭಿವೃದ್ಧಿ ಕಾರ್ಯಕ್ಕೆ ಸಾಲದಿರುವುದರಿಂದ ಸರ್ಕಾರ FRBM ಮಿತಿಯನ್ನು ಮೀರಿ ಸಾಲ ಮಾಡಬೇಕಾಗುತ್ತದೆ. ಇದು ರಾಜ್ಯದ ಆರ್ಥಿಕತೆಯನ್ನು ಮತ್ತೂ ದುರ್ಬಲಗೊಳಿಸಲಿದೆ.

ಒಟ್ಟಾರೆಯಾಗಿ, ಮೊದಲಿಂದಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕ ಕೇಂದ್ರ ಸರ್ಕಾರದ ಅವಕೃಪೆಯಿಂದಾಗಿ ಅನ್ಯಾಯವಾಗಿ ಆರ್ಥಿಕ ಕ್ಷೋಭೆಗೆ ಸಿಲುಕಿ ಅಭಿವೃದ್ಧಿ ಹೊಂದಲು ಕಷ್ಟಪಡುವಂತಹ ಸ್ಥಿತಿ ಎದುರಾಗಿದೆ. ಒಂದು ಕಡೆ ತಾನು ವೇಗವಾಗಿ ಸಮಗ್ರ ಅಭಿವೃದ್ಧಿ ಹೊಂದುತ್ತಾ ಮತ್ತೊಂದು ಕಡೆ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಕೇಂದ್ರದ ತಪ್ಪು ನೀತಿಯಿಂದಾಗಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಯಾವ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆಯೋ ಆ ಸರ್ಕಾರಗಳು ತಮ್ಮ ಪಾಲಿನ ಜಿಎಸ್ಟಿ ಹಣಕ್ಕೋಸ್ಕರ ಕೇಂದ್ರದ ಮೇಲೆ ಸುಪ್ರೀಂಕೋರ್ಟ್ ಮೊರೆಹೋಗುವ ಧಮಕಿ ಹಾಕಿವೆ. ಆದರೆ, ಬಿಜೆಪಿ ಆಡಳಿತ ಇರುವ ರಾಜ್ಯ ಸರ್ಕಾರಗಳು ತಮ್ಮದೇ ಪಕ್ಷದ ಕೇಂದ್ರ ಸರ್ಕಾರವನ್ನು ತಮ್ಮ ನ್ಯಾಯಯುತ ಪಾಲನ್ನು ಕನಿಷ್ಟ ಗಟ್ಟಿ ದನಿಯಲ್ಲಿಯೂ ಕೇಳಲಾಗದೆ ಉಳಿದಿವೆ (ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಆಗ ಕಾಂಗ್ರೆಸ್ ರಾಜ್ಯ ಸರ್ಕಾರಗಳ ಸ್ಥಿತಿಯೂ ಇದೇ ಆಗಿರುತ್ತಿತ್ತು). ನಮ್ಮ ಕರ್ನಾಟಕದಿಂದ ಇಪ್ಪತ್ತೈದು ಬಿಜೆಪಿ ಸಂಸದರಿದ್ದೂ ಕೂಡ ತನ್ನ ನ್ಯಾಯಯುತ ಪಾಲನ್ನು ಕೇಂದ್ರದಿಂದ ಪಡೆಯಲು ರಾಜ್ಯ ವಿಫಲವಾಗಿದೆ.

ಈ ಹಿನ್ನೆಲೆಯಲ್ಲಿ ನೋಡಿದಾಗ, ನಮ್ಮ ಕರ್ನಾಟಕಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ಪಾಲನ್ನು ಗಟ್ಟಿ ದನಿಯಲ್ಲಿ ಕೇಳಿ ದಕ್ಕಿಸಿಕೊಳ್ಳಬೇಕಾದರೆ ನಮ್ಮ ರಾಜ್ಯದ್ದೇ ಒಂದು ಸ್ವಾಭಿಮಾನಿ, ಪ್ರಾಮಾಣಿಕ, ಪ್ರಬಲ ಪ್ರಾದೇಶಿಕ ಪಕ್ಷ ಅನಿವಾರ್ಯವಾಗಿ ಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...