HomeUncategorizedಕರ್ನಾಟಕದ ಸಾರ್ವಭೌಮತೆಗೆ ಧಕ್ಕೆ ತರಲು ಅವಕಾಶ ನೀಡುವುದಿಲ್ಲ: ಸೋನಿಯಾ ಗಾಂಧಿ ಹೇಳಿಕೆಗೆ ಬಿಜೆಪಿ ಆಯೋಗಕ್ಕೆ ದೂರು

ಕರ್ನಾಟಕದ ಸಾರ್ವಭೌಮತೆಗೆ ಧಕ್ಕೆ ತರಲು ಅವಕಾಶ ನೀಡುವುದಿಲ್ಲ: ಸೋನಿಯಾ ಗಾಂಧಿ ಹೇಳಿಕೆಗೆ ಬಿಜೆಪಿ ಆಯೋಗಕ್ಕೆ ದೂರು

- Advertisement -
- Advertisement -

”ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ”  ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕದ ಚುನಾವಣಾ ರ‍್ಯಾಲಿಯಲ್ಲಿ ಹೇಳಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಸೋಮವಾರ ಭಾರತ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

”6.5 ಕೋಟಿ ಕನ್ನಡಿಗರಿಗೆ ಸೋನಿಯಾ ಗಾಂಧಿ ಗಟ್ಟಿ ಸಂದೇಶ ರವಾನಿಸಿದ್ದಾರೆ. ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಕಾಂಗ್ರೆಸ್ ಯಾರಿಗೂ ಅವಕಾಶ ನೀಡುವುದಿಲ್ಲ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸೋಮವಾರ, ಕೇಂದ್ರ ಸಚಿವ ಭೂಪೇಂದರ್ ಯಾದವ್ ನೇತೃತ್ವದ ಬಿಜೆಪಿಯ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಸೋನಿಯಾ ಗಾಂಧಿ ವಿರುದ್ಧ ತಕ್ಷಣ ಮತ್ತು ದೃಢವಾದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದು ಕಾಂಗ್ರೆಸ್‌ ಮಾನ್ಯತೆಯನ್ನೂ ರದ್ದು ಮಾಡಬೇಕು ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

”ಕರ್ನಾಟಕದಲ್ಲಿನ ಸೌಹಾರ್ದತೆ ಮತ್ತು ಶಾಂತಿಯನ್ನು ಕದಡುವುದಕ್ಕಾಗಿ ಕೇವಲ ಕೆಲವು ಆಯ್ದ ಸಮುದಾಯಗಳು ಅಥವಾ ಗುಂಪುಗಳ ಮತಗಳು ಗಳಿಸುವುದು ಕಾಂಗ್ರೆಸ್ ಉದ್ದೇಶವಾಗಿದೆ. ಅವರ ಏಕೈಕ ಉದ್ದೇಶವು ಭಾರತೀಯ ರಾಜ್ಯದ ಅಸ್ತಿತ್ವವನ್ನು ಅಡ್ಡಿಪಡಿಸುವುದಾಗಿದೆ” ಎಂದು ಬಿಜೆಪಿ ಆರೋಪಿಸಿದೆ.

”ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು “ತುಕ್ಡೆ ತುಕ್ಡೆ ಗ್ಯಾಂಗ್” ನಂತಹ ಪ್ರತ್ಯೇಕತಾವಾದಿ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ” ಎಂದು ಹಿಂದುತ್ವವಾದಿ ಪಕ್ಷ ಬಿಜೆಪಿ ಆರೋಪ ಮಾಡಿದೆ.

”ಕರ್ನಾಟಕವು ಭಾರತದ ಒಕ್ಕೂಟದಲ್ಲಿ ಅತ್ಯಂತ ಪ್ರಮುಖ ರಾಜ್ಯವಾಗಿದೆ ಮತ್ತು ಅದರ ಸಾರ್ವಭೌಮತ್ವವನ್ನು ರಕ್ಷಿಸುವ ಬಗ್ಗೆ ಮಾತನಾಡುವುದು ಪ್ರತ್ಯೇಕತೆಯ ಕರೆಗೆ ಸಮಾನವಾಗಿರುತ್ತದೆ ಮತ್ತು ಇದು ಅಪಾಯಕಾರಿ ಮತ್ತು ಹಾನಿಕಾರಕ ಪರಿಣಾಮಗಳಿಂದ ತುಂಬಿದೆ” ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ: ಧರ್ಮದ ಹೆಸರಲ್ಲಿ ಮೋದಿ ಮತಯಾಚನೆ, ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಆಯೋಗಕ್ಕೆ ಕಾಂಗ್ರೆಸ್ ದೂರು

ಭಾನುವಾರ, ಮೈಸೂರಿನಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋನಿಯಾ ಗಾಂಧಿಯವರ ಟೀಕೆಗಳನ್ನು ಉಲ್ಲೇಖಿಸಿದರು. ಕಾಂಗ್ರೆಸ್‌ಗೆ ”ತುಕ್ಡೆ-ತುಕ್ಡೆ ಗ್ಯಾಂಗ್” ನ ‘ರೋಗ’ ಹೆಚ್ಚಾಗಿದೆ ಎಂದು ಆರೋಪಿಸಿದರು.

ಬಿಜೆಪಿಯು ತನ್ನ ಪ್ರತಿಪಕ್ಷಗಳು ಮತ್ತು ಸರ್ಕಾರವನ್ನು ಟೀಕಿಸುವವರನ್ನು ದೇಶವಿರೋಧಿಗಳು ಎಂದು ಹೇಳುತ್ತದೆ ಮತ್ತು ಅವರಿಗೆ ”ತುಕ್ಡೆ ತುಕ್ಡೆ ಗ್ಯಾಂಗ್” ಎಂದು ಲೇಬಲ್ ಮಾಡುತ್ತದೆ. ಆದರೆ, ಜನವರಿ 2020ರಲ್ಲಿ, ಕೇಂದ್ರ ಗೃಹ ಸಚಿವಾಲಯವು ಮಾಹಿತಿ ಹಕ್ಕು ಅರ್ಜಿಗೆ ಪ್ರತಿಕ್ರಿಯೆಯಾಗಿ ಭಾರತದಲ್ಲಿ ಅಂತಹ ಯಾವುದೇ ದೇಶವಿಭಜನೆ ಮಾಡುವ ಗ್ಯಾಂಗ್ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...