HomeUncategorizedಕರ್ನಾಟಕದ ಸಾರ್ವಭೌಮತೆಗೆ ಧಕ್ಕೆ ತರಲು ಅವಕಾಶ ನೀಡುವುದಿಲ್ಲ: ಸೋನಿಯಾ ಗಾಂಧಿ ಹೇಳಿಕೆಗೆ ಬಿಜೆಪಿ ಆಯೋಗಕ್ಕೆ ದೂರು

ಕರ್ನಾಟಕದ ಸಾರ್ವಭೌಮತೆಗೆ ಧಕ್ಕೆ ತರಲು ಅವಕಾಶ ನೀಡುವುದಿಲ್ಲ: ಸೋನಿಯಾ ಗಾಂಧಿ ಹೇಳಿಕೆಗೆ ಬಿಜೆಪಿ ಆಯೋಗಕ್ಕೆ ದೂರು

- Advertisement -
- Advertisement -

”ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ”  ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕದ ಚುನಾವಣಾ ರ‍್ಯಾಲಿಯಲ್ಲಿ ಹೇಳಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಸೋಮವಾರ ಭಾರತ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

”6.5 ಕೋಟಿ ಕನ್ನಡಿಗರಿಗೆ ಸೋನಿಯಾ ಗಾಂಧಿ ಗಟ್ಟಿ ಸಂದೇಶ ರವಾನಿಸಿದ್ದಾರೆ. ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಕಾಂಗ್ರೆಸ್ ಯಾರಿಗೂ ಅವಕಾಶ ನೀಡುವುದಿಲ್ಲ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸೋಮವಾರ, ಕೇಂದ್ರ ಸಚಿವ ಭೂಪೇಂದರ್ ಯಾದವ್ ನೇತೃತ್ವದ ಬಿಜೆಪಿಯ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಸೋನಿಯಾ ಗಾಂಧಿ ವಿರುದ್ಧ ತಕ್ಷಣ ಮತ್ತು ದೃಢವಾದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದು ಕಾಂಗ್ರೆಸ್‌ ಮಾನ್ಯತೆಯನ್ನೂ ರದ್ದು ಮಾಡಬೇಕು ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

”ಕರ್ನಾಟಕದಲ್ಲಿನ ಸೌಹಾರ್ದತೆ ಮತ್ತು ಶಾಂತಿಯನ್ನು ಕದಡುವುದಕ್ಕಾಗಿ ಕೇವಲ ಕೆಲವು ಆಯ್ದ ಸಮುದಾಯಗಳು ಅಥವಾ ಗುಂಪುಗಳ ಮತಗಳು ಗಳಿಸುವುದು ಕಾಂಗ್ರೆಸ್ ಉದ್ದೇಶವಾಗಿದೆ. ಅವರ ಏಕೈಕ ಉದ್ದೇಶವು ಭಾರತೀಯ ರಾಜ್ಯದ ಅಸ್ತಿತ್ವವನ್ನು ಅಡ್ಡಿಪಡಿಸುವುದಾಗಿದೆ” ಎಂದು ಬಿಜೆಪಿ ಆರೋಪಿಸಿದೆ.

”ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು “ತುಕ್ಡೆ ತುಕ್ಡೆ ಗ್ಯಾಂಗ್” ನಂತಹ ಪ್ರತ್ಯೇಕತಾವಾದಿ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ” ಎಂದು ಹಿಂದುತ್ವವಾದಿ ಪಕ್ಷ ಬಿಜೆಪಿ ಆರೋಪ ಮಾಡಿದೆ.

”ಕರ್ನಾಟಕವು ಭಾರತದ ಒಕ್ಕೂಟದಲ್ಲಿ ಅತ್ಯಂತ ಪ್ರಮುಖ ರಾಜ್ಯವಾಗಿದೆ ಮತ್ತು ಅದರ ಸಾರ್ವಭೌಮತ್ವವನ್ನು ರಕ್ಷಿಸುವ ಬಗ್ಗೆ ಮಾತನಾಡುವುದು ಪ್ರತ್ಯೇಕತೆಯ ಕರೆಗೆ ಸಮಾನವಾಗಿರುತ್ತದೆ ಮತ್ತು ಇದು ಅಪಾಯಕಾರಿ ಮತ್ತು ಹಾನಿಕಾರಕ ಪರಿಣಾಮಗಳಿಂದ ತುಂಬಿದೆ” ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ: ಧರ್ಮದ ಹೆಸರಲ್ಲಿ ಮೋದಿ ಮತಯಾಚನೆ, ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಆಯೋಗಕ್ಕೆ ಕಾಂಗ್ರೆಸ್ ದೂರು

ಭಾನುವಾರ, ಮೈಸೂರಿನಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋನಿಯಾ ಗಾಂಧಿಯವರ ಟೀಕೆಗಳನ್ನು ಉಲ್ಲೇಖಿಸಿದರು. ಕಾಂಗ್ರೆಸ್‌ಗೆ ”ತುಕ್ಡೆ-ತುಕ್ಡೆ ಗ್ಯಾಂಗ್” ನ ‘ರೋಗ’ ಹೆಚ್ಚಾಗಿದೆ ಎಂದು ಆರೋಪಿಸಿದರು.

ಬಿಜೆಪಿಯು ತನ್ನ ಪ್ರತಿಪಕ್ಷಗಳು ಮತ್ತು ಸರ್ಕಾರವನ್ನು ಟೀಕಿಸುವವರನ್ನು ದೇಶವಿರೋಧಿಗಳು ಎಂದು ಹೇಳುತ್ತದೆ ಮತ್ತು ಅವರಿಗೆ ”ತುಕ್ಡೆ ತುಕ್ಡೆ ಗ್ಯಾಂಗ್” ಎಂದು ಲೇಬಲ್ ಮಾಡುತ್ತದೆ. ಆದರೆ, ಜನವರಿ 2020ರಲ್ಲಿ, ಕೇಂದ್ರ ಗೃಹ ಸಚಿವಾಲಯವು ಮಾಹಿತಿ ಹಕ್ಕು ಅರ್ಜಿಗೆ ಪ್ರತಿಕ್ರಿಯೆಯಾಗಿ ಭಾರತದಲ್ಲಿ ಅಂತಹ ಯಾವುದೇ ದೇಶವಿಭಜನೆ ಮಾಡುವ ಗ್ಯಾಂಗ್ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...