Homeಕರ್ನಾಟಕರೈತಪರ ಹೋರಾಟದಲ್ಲಿ ನಾವು ಹಿಂದುಳಿದಿಲ್ಲ - ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ ಕರವೇ

ರೈತಪರ ಹೋರಾಟದಲ್ಲಿ ನಾವು ಹಿಂದುಳಿದಿಲ್ಲ – ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ ಕರವೇ

80 ರ ದಶಕದಲ್ಲಿ ಇಡೀ ದೇಶದ ರೈತರ ಆಂದೋಲನವನ್ನು ವಿಶ್ವ ರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ದೇಶದ ನಾನಾ ರೈತ ಸಂಘಟನೆಗಳ ಐಕ್ಯ ಸಮಿತಿಯನ್ನು ರಚಿಸಿ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು- ಟಿ.ಎ ನಾರಾಯಣ ಗೌಡ

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿರುವ ಕರ್ನಾಟಕ ರಕ್ಷಣಾ ವೇದಿಕೆ, ಫೆಬ್ರವರಿ 6 ರಂದು #KarnatakaWithFarmersProtest  ಎಂಬ ಟ್ವಿಟರ್ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಕುರಿತು ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣ ಗೌಡ, “ರೈತಪರ ಹೋರಾಟದಲ್ಲಿ ಕರ್ನಾಟಕ ಹಿಂದುಳಿದಿಲ್ಲ” ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಾರಾಯಣ ಗೌಡ, “ನಾಳೆ ಶನಿವಾರ (6-2-2021)ರಂದು ಸಂಜೆ ಐದು ಗಂಟೆಯಿಂದ ಕರ್ನಾಟಕ ರಕ್ಷಣಾ ವೇದಿಕೆ #ರೈತಹೋರಾಟದೊಂದಿಗೆ ಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. ಎಲ್ಲ ಕನ್ನಡದ ಮನಸುಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ವಿನಂತಿಸುತ್ತೇನೆ.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

“ಇದು ಐತಿಹಾಸಿಕ ಸಂದರ್ಭ, ನಮ್ಮ ನಾಡು ರೈತರ ಜತೆ ಇದೆ ಎಂಬುದನ್ನು ಸಾರಿಸಾರಿ ಹೇಳೋಣ. ಒಕ್ಕೂಟ ಸರ್ಕಾರ ರೈತರ ಹೋರಾಟವನ್ನು ದಮನ ಮಾಡಲು ಪ್ರತಿಭಟನಾ ಸ್ಥಳಕ್ಕೆ ವಿದ್ಯುತ್, ನೀರು ಸರಬರಾಜು ನಿಲ್ಲಿಸಿದೆ. ಹಲವು ಹಂತಗಳ ಬ್ಯಾರಿಕೇಡು, ಮುಳ್ಳುಬೇಲಿಗಳ ಕೋಟೆಯನ್ನೇ ಕಟ್ಟಿ ರೈತರನ್ನು ಉಸಿರುಗಟ್ಟಿಸುವ ಕಾರ್ಯ ಮಾಡುತ್ತಿದೆ. ರೈತ ಮುಖಂಡರ ಮೇಲೆ ಸುಳ್ಳು ಕೇಸುಗಳನ್ನು ಹೂಡಿ ಬಂಧಿಸಲಾಗುತ್ತಿದೆ. ಹಲವು ರಾಜ್ಯಗಳಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಿ, ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಇದನ್ನು ನಾವು ಪ್ರತಿಭಟಿಸಬೇಕಿದೆ. ದೆಹಲಿಯಲ್ಲಿ ನಡೆಯುತ್ತಿರುವ ದೇಶದ ರೈತರ ಐತಿಹಾಸಿಕ ಹೋರಾಟಕ್ಕೆ ಈಗ ಜಗತ್ತಿನಾದ್ಯಂತ ಬೆಂಬಲ ಲಭ್ಯವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಸಂದರ್ಭದಲ್ಲಿ ನಾವೆಲ್ಲರೂ ಒಂದೇ ಧ್ವನಿಯಲ್ಲಿ ರೈತರ ಹೋರಾಟವನ್ನು ಬೆಂಬಲಿಸಬೇಕಿದೆ. ಕರ್ನಾಟಕ ರಾಜ್ಯವು ಈ ದೊಡ್ಡ ಆಂದೋಲನದ ಜತೆ ಇದೆ ಎಂಬುದನ್ನು ಮತ್ತೆ ಮತ್ತೆ ಹೇಳಬೇಕಿದೆ. ದೆಹಲಿಯಲ್ಲಿ ಕೊರೆಯುವ ಚಳಿಯಲ್ಲಿ ತಿಂಗಳುಗಳಿಂದ ಪ್ರತಿಭಟನೆಯಲ್ಲಿ ತೊಡಗಿರುವ ಅನ್ನದಾತರಿಗೆ ನೈತಿಕ ಬೆಂಬಲ ವ್ಯಕ್ತಪಡಿಬೇಕಿದೆ. ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿಕೊಂಡು ಬಂದಿದೆ. ಬೆಂಗಳೂರೂ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ನಾವು ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದ್ದೆವು. ಮುಂದೆಯೂ ಸಹ ಹಲವಾರು ಹೋರಾಟಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

ಒಕ್ಕೂಟ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಪ್ರಮಾಣಪತ್ರದಲ್ಲಿ ದಕ್ಷಿಣ ಭಾರತದ ರಾಜ್ಯಗಳು ಕೃಷಿ ಕಾಯ್ದೆಗಳ ಪರವಾಗಿ ಇವೆಯೆಂದೂ, ಈ ರಾಜ್ಯಗಳಲ್ಲಿ ಕೃಷಿ ಮಸೂದೆಗಳ ವಿರುದ್ಧ ಚಳವಳಿಯೇ ನಡೆದಿಲ್ಲವೆಂದು ಸುಳ್ಳು ಹೇಳಿದ್ದರು. ದಕ್ಷಿಣದ ರಾಜ್ಯಗಳೂ ಸಹ ಪ್ರತಿಭಟನೆ ನಡೆಸುತ್ತಿವೆ. ಇದನ್ನು ಗಟ್ಟಿಯಾಗಿ ಹೇಳೋಣ. ಜಾರಿಗೆ ತರಲಾಗಿರುವ ಕೃಷಿ ಕಾಯ್ದೆಗಳು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿವೆ. ಸಂವಿಧಾನದ ಪ್ರಕಾರ ಕೃಷಿ ವಿಷಯ ರಾಜ್ಯಪಟ್ಟಿಯಲ್ಲಿರುವ ವಿಷಯ. ಈ ಕುರಿತು ಕಾಯ್ದೆ ರೂಪಿಸುವ ಹಕ್ಕು ಒಕ್ಕೂಟ ಸರ್ಕಾರಕ್ಕೆ ಇಲ್ಲ. ಅದರ ಜತೆಗೆ ಜಾರಿಗೆ ತಂದಿರುವ ಕಾಯ್ದೆಗಳು ಕರಾಳವಾಗಿದ್ದು, ರೈತಸಂಕುಲವನ್ನು ಕಾರ್ಪೊರೇಟ್ ಶಕ್ತಿಗಳ ಗುಲಾಮರನ್ನಾಗಿಸುತ್ತವೆ ಎಂದು ಆರೋಪಿಸಿದ್ದಾರೆ.

“ಅನ್ನದಾತ ರೈತನ ಪರವಾದ ಹೋರಾಟದಲ್ಲಿ ಕರ್ನಾಟಕ ಎಂದೂ ಹಿಂದೆ ಬಿದ್ದಿಲ್ಲ. ಇಡೀ ದೇಶದ ರೈತರ ಆಂದೋಲನವನ್ನು ಎಂಭತ್ತರ ದಶಕದಲ್ಲಿ ಕರ್ನಾಟಕವೇ ಮುನ್ನಡೆಸಿತ್ತು ಎಂಬುದನ್ನು ಮರೆಯದಿರೋಣ. ವಿಶ್ವ ರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ದೇಶದ ನಾನಾ ರೈತ ಸಂಘಟನೆಗಳ ಐಕ್ಯ ಸಮಿತಿಯನ್ನು ರಚಿಸಿ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ರೈತವಿರೋಧಿಯೂ ಜನವಿರೋಧಿಯೂ ಆಗಿರುವ ಮೂರು ಕೃಷಿ ಮಸೂದೆಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು, ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಬಲ ನೀಡಬೇಕು ಎಂಬ ಬೇಡಿಕೆಗಳು ನ್ಯಾಯಪರವಾಗಿವೆ. ಒಕ್ಕೂಟ ಸರ್ಕಾರ ಹಠಮಾರಿತನ ಮುಂದುವರೆಸದೆ ಕೂಡಲೇ ಎರಡೂ ಬೇಡಿಕೆಗಳನ್ನು ಈಡೇರಿಸಬೇಕು. ದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿ ಶಮನವಾಗಲು ಇದೊಂದೇ ದಾರಿ. ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು, ಕನ್ನಡ, ಮಹಿಳಾ, ಪ್ರಗತಿಪರ, ರೈತ, ದಲಿತ, ಕಾರ್ಮಿಕ ಸಂಘಟನೆಗಳು, ಜನಪರ ಹೋರಾಟಗಾರರು ನಾಳಿನ ಟ್ವಿಟರ್ ಅಭಿಯಾನದಲ್ಲಿ ಪಾಲ್ಗೊಳ್ಳಬೇಕೆಂದು ಕೋರುತ್ತೇನೆ. ಇಡೀ ಕರ್ನಾಟಕವೇ ರೈತ ಹೋರಾಟವನ್ನು ಪೂರ್ಣ ಮನಸಿನಿಂದ ಬೆಂಬಲಿಸುತ್ತಿದೆ ಎಂಬ ಸ್ಪಷ್ಟ ಸಂದೇಶ ನೀಡುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ” ಎಂದು ವಿವರಿಸಿದರು.


ಇದನ್ನೂ ಓದಿ: ಪ್ರತ್ಯಕ್ಷದರ್ಶಿಯ ರೈತ ಪ್ರತಿಭಟನೆ ವರದಿ, ವಿಶ್ಲೇಷಣೆ; ಒಂದು ಹೆಜ್ಜೆ ಹಿಂದಕ್ಕೆ, ಎರಡು ಹೆಜ್ಜೆ ಮುಂದಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...