Homeಕರ್ನಾಟಕರೈತಪರ ಹೋರಾಟದಲ್ಲಿ ನಾವು ಹಿಂದುಳಿದಿಲ್ಲ - ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ ಕರವೇ

ರೈತಪರ ಹೋರಾಟದಲ್ಲಿ ನಾವು ಹಿಂದುಳಿದಿಲ್ಲ – ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ ಕರವೇ

80 ರ ದಶಕದಲ್ಲಿ ಇಡೀ ದೇಶದ ರೈತರ ಆಂದೋಲನವನ್ನು ವಿಶ್ವ ರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ದೇಶದ ನಾನಾ ರೈತ ಸಂಘಟನೆಗಳ ಐಕ್ಯ ಸಮಿತಿಯನ್ನು ರಚಿಸಿ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು- ಟಿ.ಎ ನಾರಾಯಣ ಗೌಡ

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿರುವ ಕರ್ನಾಟಕ ರಕ್ಷಣಾ ವೇದಿಕೆ, ಫೆಬ್ರವರಿ 6 ರಂದು #KarnatakaWithFarmersProtest  ಎಂಬ ಟ್ವಿಟರ್ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಕುರಿತು ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣ ಗೌಡ, “ರೈತಪರ ಹೋರಾಟದಲ್ಲಿ ಕರ್ನಾಟಕ ಹಿಂದುಳಿದಿಲ್ಲ” ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಾರಾಯಣ ಗೌಡ, “ನಾಳೆ ಶನಿವಾರ (6-2-2021)ರಂದು ಸಂಜೆ ಐದು ಗಂಟೆಯಿಂದ ಕರ್ನಾಟಕ ರಕ್ಷಣಾ ವೇದಿಕೆ #ರೈತಹೋರಾಟದೊಂದಿಗೆ ಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. ಎಲ್ಲ ಕನ್ನಡದ ಮನಸುಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ವಿನಂತಿಸುತ್ತೇನೆ.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

“ಇದು ಐತಿಹಾಸಿಕ ಸಂದರ್ಭ, ನಮ್ಮ ನಾಡು ರೈತರ ಜತೆ ಇದೆ ಎಂಬುದನ್ನು ಸಾರಿಸಾರಿ ಹೇಳೋಣ. ಒಕ್ಕೂಟ ಸರ್ಕಾರ ರೈತರ ಹೋರಾಟವನ್ನು ದಮನ ಮಾಡಲು ಪ್ರತಿಭಟನಾ ಸ್ಥಳಕ್ಕೆ ವಿದ್ಯುತ್, ನೀರು ಸರಬರಾಜು ನಿಲ್ಲಿಸಿದೆ. ಹಲವು ಹಂತಗಳ ಬ್ಯಾರಿಕೇಡು, ಮುಳ್ಳುಬೇಲಿಗಳ ಕೋಟೆಯನ್ನೇ ಕಟ್ಟಿ ರೈತರನ್ನು ಉಸಿರುಗಟ್ಟಿಸುವ ಕಾರ್ಯ ಮಾಡುತ್ತಿದೆ. ರೈತ ಮುಖಂಡರ ಮೇಲೆ ಸುಳ್ಳು ಕೇಸುಗಳನ್ನು ಹೂಡಿ ಬಂಧಿಸಲಾಗುತ್ತಿದೆ. ಹಲವು ರಾಜ್ಯಗಳಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಿ, ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಇದನ್ನು ನಾವು ಪ್ರತಿಭಟಿಸಬೇಕಿದೆ. ದೆಹಲಿಯಲ್ಲಿ ನಡೆಯುತ್ತಿರುವ ದೇಶದ ರೈತರ ಐತಿಹಾಸಿಕ ಹೋರಾಟಕ್ಕೆ ಈಗ ಜಗತ್ತಿನಾದ್ಯಂತ ಬೆಂಬಲ ಲಭ್ಯವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಸಂದರ್ಭದಲ್ಲಿ ನಾವೆಲ್ಲರೂ ಒಂದೇ ಧ್ವನಿಯಲ್ಲಿ ರೈತರ ಹೋರಾಟವನ್ನು ಬೆಂಬಲಿಸಬೇಕಿದೆ. ಕರ್ನಾಟಕ ರಾಜ್ಯವು ಈ ದೊಡ್ಡ ಆಂದೋಲನದ ಜತೆ ಇದೆ ಎಂಬುದನ್ನು ಮತ್ತೆ ಮತ್ತೆ ಹೇಳಬೇಕಿದೆ. ದೆಹಲಿಯಲ್ಲಿ ಕೊರೆಯುವ ಚಳಿಯಲ್ಲಿ ತಿಂಗಳುಗಳಿಂದ ಪ್ರತಿಭಟನೆಯಲ್ಲಿ ತೊಡಗಿರುವ ಅನ್ನದಾತರಿಗೆ ನೈತಿಕ ಬೆಂಬಲ ವ್ಯಕ್ತಪಡಿಬೇಕಿದೆ. ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿಕೊಂಡು ಬಂದಿದೆ. ಬೆಂಗಳೂರೂ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ನಾವು ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದ್ದೆವು. ಮುಂದೆಯೂ ಸಹ ಹಲವಾರು ಹೋರಾಟಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

ಒಕ್ಕೂಟ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಪ್ರಮಾಣಪತ್ರದಲ್ಲಿ ದಕ್ಷಿಣ ಭಾರತದ ರಾಜ್ಯಗಳು ಕೃಷಿ ಕಾಯ್ದೆಗಳ ಪರವಾಗಿ ಇವೆಯೆಂದೂ, ಈ ರಾಜ್ಯಗಳಲ್ಲಿ ಕೃಷಿ ಮಸೂದೆಗಳ ವಿರುದ್ಧ ಚಳವಳಿಯೇ ನಡೆದಿಲ್ಲವೆಂದು ಸುಳ್ಳು ಹೇಳಿದ್ದರು. ದಕ್ಷಿಣದ ರಾಜ್ಯಗಳೂ ಸಹ ಪ್ರತಿಭಟನೆ ನಡೆಸುತ್ತಿವೆ. ಇದನ್ನು ಗಟ್ಟಿಯಾಗಿ ಹೇಳೋಣ. ಜಾರಿಗೆ ತರಲಾಗಿರುವ ಕೃಷಿ ಕಾಯ್ದೆಗಳು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿವೆ. ಸಂವಿಧಾನದ ಪ್ರಕಾರ ಕೃಷಿ ವಿಷಯ ರಾಜ್ಯಪಟ್ಟಿಯಲ್ಲಿರುವ ವಿಷಯ. ಈ ಕುರಿತು ಕಾಯ್ದೆ ರೂಪಿಸುವ ಹಕ್ಕು ಒಕ್ಕೂಟ ಸರ್ಕಾರಕ್ಕೆ ಇಲ್ಲ. ಅದರ ಜತೆಗೆ ಜಾರಿಗೆ ತಂದಿರುವ ಕಾಯ್ದೆಗಳು ಕರಾಳವಾಗಿದ್ದು, ರೈತಸಂಕುಲವನ್ನು ಕಾರ್ಪೊರೇಟ್ ಶಕ್ತಿಗಳ ಗುಲಾಮರನ್ನಾಗಿಸುತ್ತವೆ ಎಂದು ಆರೋಪಿಸಿದ್ದಾರೆ.

“ಅನ್ನದಾತ ರೈತನ ಪರವಾದ ಹೋರಾಟದಲ್ಲಿ ಕರ್ನಾಟಕ ಎಂದೂ ಹಿಂದೆ ಬಿದ್ದಿಲ್ಲ. ಇಡೀ ದೇಶದ ರೈತರ ಆಂದೋಲನವನ್ನು ಎಂಭತ್ತರ ದಶಕದಲ್ಲಿ ಕರ್ನಾಟಕವೇ ಮುನ್ನಡೆಸಿತ್ತು ಎಂಬುದನ್ನು ಮರೆಯದಿರೋಣ. ವಿಶ್ವ ರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ದೇಶದ ನಾನಾ ರೈತ ಸಂಘಟನೆಗಳ ಐಕ್ಯ ಸಮಿತಿಯನ್ನು ರಚಿಸಿ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ರೈತವಿರೋಧಿಯೂ ಜನವಿರೋಧಿಯೂ ಆಗಿರುವ ಮೂರು ಕೃಷಿ ಮಸೂದೆಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು, ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಬಲ ನೀಡಬೇಕು ಎಂಬ ಬೇಡಿಕೆಗಳು ನ್ಯಾಯಪರವಾಗಿವೆ. ಒಕ್ಕೂಟ ಸರ್ಕಾರ ಹಠಮಾರಿತನ ಮುಂದುವರೆಸದೆ ಕೂಡಲೇ ಎರಡೂ ಬೇಡಿಕೆಗಳನ್ನು ಈಡೇರಿಸಬೇಕು. ದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿ ಶಮನವಾಗಲು ಇದೊಂದೇ ದಾರಿ. ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು, ಕನ್ನಡ, ಮಹಿಳಾ, ಪ್ರಗತಿಪರ, ರೈತ, ದಲಿತ, ಕಾರ್ಮಿಕ ಸಂಘಟನೆಗಳು, ಜನಪರ ಹೋರಾಟಗಾರರು ನಾಳಿನ ಟ್ವಿಟರ್ ಅಭಿಯಾನದಲ್ಲಿ ಪಾಲ್ಗೊಳ್ಳಬೇಕೆಂದು ಕೋರುತ್ತೇನೆ. ಇಡೀ ಕರ್ನಾಟಕವೇ ರೈತ ಹೋರಾಟವನ್ನು ಪೂರ್ಣ ಮನಸಿನಿಂದ ಬೆಂಬಲಿಸುತ್ತಿದೆ ಎಂಬ ಸ್ಪಷ್ಟ ಸಂದೇಶ ನೀಡುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ” ಎಂದು ವಿವರಿಸಿದರು.


ಇದನ್ನೂ ಓದಿ: ಪ್ರತ್ಯಕ್ಷದರ್ಶಿಯ ರೈತ ಪ್ರತಿಭಟನೆ ವರದಿ, ವಿಶ್ಲೇಷಣೆ; ಒಂದು ಹೆಜ್ಜೆ ಹಿಂದಕ್ಕೆ, ಎರಡು ಹೆಜ್ಜೆ ಮುಂದಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...