Homeಕರ್ನಾಟಕವಿಧಾನಪರಿಷತ್ ಚುನಾವಣೆ: ಮೂರು ಪಕ್ಷಗಳಿಂದ 11 ಮಂದಿ ಅವಿರೋಧ ಆಯ್ಕೆ

ವಿಧಾನಪರಿಷತ್ ಚುನಾವಣೆ: ಮೂರು ಪಕ್ಷಗಳಿಂದ 11 ಮಂದಿ ಅವಿರೋಧ ಆಯ್ಕೆ

ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3 ಹಾಗೂ ಜೆಡಿಎಸ್‌ನಿಂದ ಓರ್ವ ಸದಸ್ಯ ಆಯ್ಕೆಯಾಗಿದ್ದಾರೆ

- Advertisement -
- Advertisement -

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಮೂರು ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು ಚುನಾವಣಾಧಿಕಾರಿಯಾಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ನಿಂದ ಎನ್‌.ಎಸ್‌ ಭೋಸರಾಜು, ಐವನ್ ಡಿಸೋಜ, ಕೆ.ಗೋವಿಂದರಾಜ್, ಜಗದೇವ ಗುತ್ತೇದಾರ್, ಡಾ.ಯತೀಂದ್ರ, ಎ.ವಸಂತಕುಮಾರ್, ಬಿಲ್ಕಿಸ್ ಭಾನು, ಬಿಜೆಯಿಂದ ಸಿ.ಟಿ ರವಿ, ಎನ್‌.ರವಿಕುಮಾರ್ ಮತ್ತು ಎಂ.ಜಿ ಮುಳೆ, ಜೆಡಿಎಸ್‌ನಿಂದ ಟಿ.ಎನ್‌.ಜವರಾಯಿಗೌಡ ಅವರು ಆಯ್ಕೆಯಾಗಿದ್ದಾರೆ.

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ಜೂ.13ರಂದು ಚುನಾವಣೆ ನಡೆಯಬೇಕಿತ್ತು. 11 ಸ್ಥಾನಗಳಿಗೆ ಒಟ್ಟು 12 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಆಸಿಫ್ ಪಾಷಾ ಎಂಬವರು ಸಲ್ಲಿಕೆ ಮಾಡಿದ್ದ ನಾಮಪತ್ರದಲ್ಲಿ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿತ್ತು. ಗುರುವಾರ (ಜೂ.6) ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು. ಆದರೆ, ಯಾರೊಬ್ಬರೂ ನಾಮಪತ್ರ ಹಿಂಪಡೆಯದೆ ಇದ್ದುದ್ದರಿಂದ ಕಣದಲ್ಲಿದ್ದ ಎಲ್ಲ 11 ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಮಂದಿ ಸಾವು: 13 ಜನರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...

‘ನಾವು Gen Z’ ಎಂಬುದು ‘ನನ್ನಪ್ಪ ಯಾರು ಗೊತ್ತಾ?’ ಎಂಬಂತಾಗಬಾರದು: ಒಮರ್ ಅಬ್ದುಲ್ಲಾ

ಸಣ್ಣಪುಟ್ಟ ಅಸಮಾಧಾನ ಅಥವಾ ಭಿನ್ನಾಪ್ರಾಯಗಳು ಎದುರಾದಾಗಲೆಲ್ಲ 'ನಾವು Gen Z' (ಜೆನ್ ಝೀ) ಎಂದು ಹೇಳಿಕೊಳ್ಳುವುದು, 'ನನ್ನಪ್ಪ ಯಾರು ಗೊತ್ತಾ?' (ಜಾಂತೇ ನಹೀನ್ ಹೋ, ಮೇರಾ ಬಾಪ್ ಕೌನ್ ಹೈ) ಎಂಬ ಹಳೆಯ...

ಪಶ್ಚಿಮ ಬಂಗಾಳ | ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಗೆಲುವು

ವಿಧಾನಸಭಾ ಚುನಾವಣೆ ನಂತರ ಪಕ್ಷದಲ್ಲಿ ಉಂಟಾದ ಬಂಡಾಯ, ಪಕ್ಷಾಂತರಗಳು, ಕಾನೂನು ಪ್ರಕರಣಗಳು ಮತ್ತು ರಾಜಕೀಯ ಆರೋಪಗಳಿಂದ ಸಾಲು ಸಾಲು ಹಿನ್ನಡೆಗಳನ್ನು ಎದುರಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಕೊನೆಗೂ...