Homeಫ್ಯಾಕ್ಟ್‌ಚೆಕ್ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ನಟಿ ಕಂಗನಾ ರಾಣಾವತ್‌ಗೆ ಬೆಂಬಲ ನೀಡಲು ಕರ್ಣಿಸೇನಾದ 1,000 ಕಾರುಗಳ ಬೆಂಗಾವಲು ಪಡೆ ಮುಂಬೈಗೆ ಹೊರಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ  ಹೋಲಿಸಿದ್ದು, ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಹೇಳಿಕೆಗಳಿಂದ ವಿವಾದ ಸೃಷ್ಟಿಸಿದ್ದಾರೆ. ಇದರಿಂದ ಅವರ ಮೇಲೆ ಶಿವಸೇನೆ ನೇತೃತ್ವದ ಮಹಾರಾಷ್ಟರ ಸರ್ಕಾರ ತಿರುಗಿಬಿದ್ದಿದ್ದು, ವಿವಾದವು ಕಂಗನಾ v/s ಶಿವಸೇನೆ ಎನ್ನುವ ಮಟ್ಟಿಗೆ ಬಂದಿದೆ.

ಈ ವಿವಾದದ ನಂತರ ಮುಂಬೈಯಲ್ಲಿರುವ ಕಂಗನಾಗೆ ಸೇರಿರುವ ಮಣಿಕರ್ಣಿಕಾ ಫಿಲ್ಮಂ ಕಚೇರಿಯನ್ನು ಬಿಎಂಸಿ ಧ್ವಂಸಗೊಳಿಸಲು ಹೋಗಿದ್ದು, ಪ್ರತಿಕಾರದ ಕೃತ್ಯ ಎನಿಸಿಕೊಂಡಿತ್ತು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಕಂಗನಾಗೆ ಬೆಂಬಲ ತೋರಿಸಲು ಬಲಪಂಥೀಯ ಸಂಘಟನೆ ಕರ್ಣಿಸೇನಾದ ಗುಂಪು ಮುಂಬೈಗೆ ಪ್ರಯಾಣಿಸುತ್ತಿದೆ ಎಂಬ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿವೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಈ ಚಿತ್ರಗಳು, ವಿಡಿಯೋಗಳು ಒಂದಕ್ಕೊಂದು ಸಂಬಂಧವಿಲ್ಲದ ಚಿತ್ರಗಳಾಗಿದ್ದು, ಕರ್ಣಿಸೇನಾ ನಟಿಗೆ ಬೆಂಬಲ ನೀಡಲು 1,000 ಕಾರುಗಳ ಬೆಂಗಾವಲು ಪಡೆಯೊಂದಿಗೆ ಹೋಗುತ್ತಿರುವುದು ಸುಳ್ಳು ಸುದ್ದಿಯಾಗಿದೆ.

’ದಿ ಕ್ವಿಂಟ್‌’ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ ತಿಳಿದು ಬಂದ ವಿಷಯವೆಂದರೇ, ಈ ಚಿತ್ರಗಳು ಮತ್ತು ವೀಡಿಯೊಗಳು 2016 ರ ಹಳೆಯ ಚಿತ್ರಗಳಾಗಿವೆ. ಈ ಚಿತ್ರಗಳಿಗೂ ಕರ್ಣಿಸೇನಾ ಕಂಗನಾಗೆ ಬೆಂಬಲ ನೀಡುತ್ತಿದೆ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ.

PC: facebook

ಈ ಚಿತ್ರಗಳು ಮತ್ತು ವೀಡಿಯೊಗಳ ಪ್ರಕಾರ “ಕಂಗನಾ ರಾಣಾವತ್ ಅವರ ಗೌರವಾರ್ಥವಾಗಿ, ಕರ್ಣಿಸೇನಾ ಮಹಾರಾಷ್ಟ್ರಕ್ಕೆ 1,000 ಕಾರುಗಳ ಬೆಂಗಾವಲಿನಲ್ಲಿ ಹೊರಟಿದೆ” ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್ ಚೆಕ್‌ನಲ್ಲಿ ಕಂಡಿದ್ದೇನು..?

ದಿ ಕ್ವಿಂಟ್ ನಡೆಸಿದ ಫ್ಯಾಕ್ಟ್‌ಚೆಕ್ ಪ್ರಕಾರ ತಿಳಿದುಬಂದದ್ದೇನೆಂದರೆ, ಈ ಚಿತ್ರಗಳು ತುಂಬ ಹಳೆಯ ಮತ್ತು ಕರ್ಣಿಸೇನಾದಿಂದ ಕಂಗನಾಗೆ ಬೆಂಬಲ ಪ್ರದರ್ಶನಕ್ಕೂ ಯಾವುದೇ ಸಂಬಂಧವಿಲ್ಲದ ಚಿತ್ರಗಳು ಎಂದು.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಚಿತ್ರಗಳನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ ಸಿಕ್ಕ ಮಾಹಿತಿಗಳು ಹೀಗಿವೆ.

ಚಿತ್ರ 1

PC: facebook

ಈ ಚಿತ್ರ ಮಾರ್ಚ್ 1, 2017 ರ ಚಿತ್ರವಾಗಿದ್ದು, ಟ್ವಿಟ್ಟರ್‌ನಲ್ಲಿ ಸಿಗುತ್ತದೆ. ಗುಜರಾತಿ ಶೀರ್ಷಿಕೆಯೊಂದಿಗೆ ಇರುವ ಈ ಚಿತ್ರದಲ್ಲಿ “ದಕ್ಷಿಣ ಭಾರತದ ಚಿತ್ರದ ಮಾದರಿಯಲ್ಲಿ ವಧುವನ್ನು ಕರೆತರಲು ತಾರಾದ್‌ನ ವರನೊಬ್ಬ 30 ಸ್ಕಾರ್ಪಿಯೋಗಳನ್ನು ಬಳಸಿಕೊಂಡಿದ್ದಾನೆ, ವಾವ್ ಉತ್ತರ ಗುಜರಾತ್ ವಾವ್” ಎಂದು ಬರೆಯಲಾಗಿದೆ.

ಚಿತ್ರ 2

PC; facebook

ಎರಡನೇ ಚಿತ್ರವನ್ನು ಕೂಡ ಗೂಗಲ್‌ನಲ್ಲಿ ಹುಡುಕಾಡಿದಾಗ ಅದು ನಮ್ಮನ್ನು 2016 ರಷ್ಟು ಹಿಂದಕ್ಕೆ ಕರೆದುಕೊಂಡು ಹೋಗುತ್ತದೆ. ಈ ಚಿತ್ರವನ್ನು 2016 ರಲ್ಲಿ ಬಾರ್ಮರ್ ಕಾಂಗ್ರೆಸ್ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಚಿತ್ರ 3

ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಈ ಚಿತ್ರವನ್ನು ಒಳಗೊಂಡ ಹಲವಾರು ವಿಡಿಯೋಗಳು ದೊರಕಿವೆ. ಈ ಚಿತ್ರ ಕರ್ಣಿ ಸೇನೆಯ ಗುಜರಾತ್ ಮುಖ್ಯಸ್ಥ ರಾಜ್ ಸಿಂಗ್ ಶೇಖಾವತ್ ಅವರ ಬೆಂಗಾವಲು ಪಡೆಯದ್ದಾಗಿದೆ.

ವೈರಲ್ ಆದ ಈ ಚಿತ್ರವನ್ನು ಶ್ರೀ ರಾಷ್ಟ್ರೀಯ ರಜಪೂತ ಕರ್ಣಿಸೇನಾ ಫೇಸ್‌ಬುಕ್ ಪುಟದಲ್ಲಿ 22 ಡಿಸೆಂಬರ್ 2019 ರಂದು ಪೋಸ್ಟ್  ಮಾಡಲಾಗಿದೆ. ಜೊತೆಗೆ “ಈ ಚಿತ್ರವನ್ನು ಗುಜರಾತ್‌ನ ಗಾಂಧಿನಗರದಲ್ಲಿ ಕ್ಲಿಕ್ಕಿಸಲಾಗಿದೆ” ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ವಿಡಿಯೋ

ಈ ವೈರಲ್ ಚಿತ್ರಗಳ ಜೊತೆಗೆ, ಕೆಲವು ವೈರಲ್ ಪೋಸ್ಟ್‌ಗಳು ಅದೇ ಸುಳ್ಳುನ್ನು ಹರಡಲು ಹಲವು ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಇನ್ವಿಡ್ ಗೂಗಲ್ ಕ್ರೋಮ್ ವಿಸ್ತರಣೆಯನ್ನು ಬಳಸಿಕೊಂಡು ವೀಡಿಯೊವನ್ನು ಅನೇಕ ಕೀಫ್ರೇಮ್‌ಗಳಾಗಿ ವಿಂಗಡಿಸಿ ನೋಡಿದಾಗ ಇದು ಜಮ್ಮು ಮತ್ತು ಕಾಶ್ಮೀರದ ಚಿತ್ರ ಎಂದು ತಿಳಿಯುತ್ತದೆ.

2018 ರ ಅಕ್ಟೋಬರ್ 25 ರಂದು ಜಮ್ಮುವಿನಲ್ಲಿ ನಡೆಸಲಾದ ಮಹಾರಾಜ ಹರಿಸಿಂಗ್ ಜನ್ಮದಿನದ ಅಂಗವಾಗಿ ನಡೆದ ರ್‍ಯಾಲಿಯ ಚಿತ್ರವಾಗಿದೆ. ಇದನ್ನು ವಿಶಾಲ್ ಸಿಂಗ್ ಎನ್ನುವವರು ತಮ್ಮ ಯೂಟ್ಯೂಬ್ ಅಕೌಂಟ್‌ನಲ್ಲಿ ಶೇರ್ ಮಾಡಿದ್ದಾರೆ.

PC: Youtube

ಒಟ್ಟಿನಲ್ಲಿ ಈ ಎಲ್ಲಾ ವಿಡಿಯೋ ಮತ್ತು ಚಿತ್ರಗಳಿಗೆ ಕರ್ಣಿಸೇನಾ ಹಾಗೂ ಕಂಗನಾ ರಾಣಾವತ್‌ಗೆ ಬೆಂಬಲ ಪ್ರದರ್ಶನ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ. ವೈರಲ್ ಆದ ಚಿತ್ರಗಳು, ವಿಡಿಯೋಗಳು ಸುಮಾರು ನಾಲ್ಕು ವರ್ಷಗಳ ಹಿಂದಿನದ್ದಾಗಿದೆ.


ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...