Homeಫ್ಯಾಕ್ಟ್‌ಚೆಕ್ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ನಟಿ ಕಂಗನಾ ರಾಣಾವತ್‌ಗೆ ಬೆಂಬಲ ನೀಡಲು ಕರ್ಣಿಸೇನಾದ 1,000 ಕಾರುಗಳ ಬೆಂಗಾವಲು ಪಡೆ ಮುಂಬೈಗೆ ಹೊರಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ  ಹೋಲಿಸಿದ್ದು, ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಹೇಳಿಕೆಗಳಿಂದ ವಿವಾದ ಸೃಷ್ಟಿಸಿದ್ದಾರೆ. ಇದರಿಂದ ಅವರ ಮೇಲೆ ಶಿವಸೇನೆ ನೇತೃತ್ವದ ಮಹಾರಾಷ್ಟರ ಸರ್ಕಾರ ತಿರುಗಿಬಿದ್ದಿದ್ದು, ವಿವಾದವು ಕಂಗನಾ v/s ಶಿವಸೇನೆ ಎನ್ನುವ ಮಟ್ಟಿಗೆ ಬಂದಿದೆ.

ಈ ವಿವಾದದ ನಂತರ ಮುಂಬೈಯಲ್ಲಿರುವ ಕಂಗನಾಗೆ ಸೇರಿರುವ ಮಣಿಕರ್ಣಿಕಾ ಫಿಲ್ಮಂ ಕಚೇರಿಯನ್ನು ಬಿಎಂಸಿ ಧ್ವಂಸಗೊಳಿಸಲು ಹೋಗಿದ್ದು, ಪ್ರತಿಕಾರದ ಕೃತ್ಯ ಎನಿಸಿಕೊಂಡಿತ್ತು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಕಂಗನಾಗೆ ಬೆಂಬಲ ತೋರಿಸಲು ಬಲಪಂಥೀಯ ಸಂಘಟನೆ ಕರ್ಣಿಸೇನಾದ ಗುಂಪು ಮುಂಬೈಗೆ ಪ್ರಯಾಣಿಸುತ್ತಿದೆ ಎಂಬ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿವೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಈ ಚಿತ್ರಗಳು, ವಿಡಿಯೋಗಳು ಒಂದಕ್ಕೊಂದು ಸಂಬಂಧವಿಲ್ಲದ ಚಿತ್ರಗಳಾಗಿದ್ದು, ಕರ್ಣಿಸೇನಾ ನಟಿಗೆ ಬೆಂಬಲ ನೀಡಲು 1,000 ಕಾರುಗಳ ಬೆಂಗಾವಲು ಪಡೆಯೊಂದಿಗೆ ಹೋಗುತ್ತಿರುವುದು ಸುಳ್ಳು ಸುದ್ದಿಯಾಗಿದೆ.

’ದಿ ಕ್ವಿಂಟ್‌’ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ ತಿಳಿದು ಬಂದ ವಿಷಯವೆಂದರೇ, ಈ ಚಿತ್ರಗಳು ಮತ್ತು ವೀಡಿಯೊಗಳು 2016 ರ ಹಳೆಯ ಚಿತ್ರಗಳಾಗಿವೆ. ಈ ಚಿತ್ರಗಳಿಗೂ ಕರ್ಣಿಸೇನಾ ಕಂಗನಾಗೆ ಬೆಂಬಲ ನೀಡುತ್ತಿದೆ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ.

PC: facebook

ಈ ಚಿತ್ರಗಳು ಮತ್ತು ವೀಡಿಯೊಗಳ ಪ್ರಕಾರ “ಕಂಗನಾ ರಾಣಾವತ್ ಅವರ ಗೌರವಾರ್ಥವಾಗಿ, ಕರ್ಣಿಸೇನಾ ಮಹಾರಾಷ್ಟ್ರಕ್ಕೆ 1,000 ಕಾರುಗಳ ಬೆಂಗಾವಲಿನಲ್ಲಿ ಹೊರಟಿದೆ” ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್ ಚೆಕ್‌ನಲ್ಲಿ ಕಂಡಿದ್ದೇನು..?

ದಿ ಕ್ವಿಂಟ್ ನಡೆಸಿದ ಫ್ಯಾಕ್ಟ್‌ಚೆಕ್ ಪ್ರಕಾರ ತಿಳಿದುಬಂದದ್ದೇನೆಂದರೆ, ಈ ಚಿತ್ರಗಳು ತುಂಬ ಹಳೆಯ ಮತ್ತು ಕರ್ಣಿಸೇನಾದಿಂದ ಕಂಗನಾಗೆ ಬೆಂಬಲ ಪ್ರದರ್ಶನಕ್ಕೂ ಯಾವುದೇ ಸಂಬಂಧವಿಲ್ಲದ ಚಿತ್ರಗಳು ಎಂದು.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಚಿತ್ರಗಳನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ ಸಿಕ್ಕ ಮಾಹಿತಿಗಳು ಹೀಗಿವೆ.

ಚಿತ್ರ 1

PC: facebook

ಈ ಚಿತ್ರ ಮಾರ್ಚ್ 1, 2017 ರ ಚಿತ್ರವಾಗಿದ್ದು, ಟ್ವಿಟ್ಟರ್‌ನಲ್ಲಿ ಸಿಗುತ್ತದೆ. ಗುಜರಾತಿ ಶೀರ್ಷಿಕೆಯೊಂದಿಗೆ ಇರುವ ಈ ಚಿತ್ರದಲ್ಲಿ “ದಕ್ಷಿಣ ಭಾರತದ ಚಿತ್ರದ ಮಾದರಿಯಲ್ಲಿ ವಧುವನ್ನು ಕರೆತರಲು ತಾರಾದ್‌ನ ವರನೊಬ್ಬ 30 ಸ್ಕಾರ್ಪಿಯೋಗಳನ್ನು ಬಳಸಿಕೊಂಡಿದ್ದಾನೆ, ವಾವ್ ಉತ್ತರ ಗುಜರಾತ್ ವಾವ್” ಎಂದು ಬರೆಯಲಾಗಿದೆ.

ಚಿತ್ರ 2

PC; facebook

ಎರಡನೇ ಚಿತ್ರವನ್ನು ಕೂಡ ಗೂಗಲ್‌ನಲ್ಲಿ ಹುಡುಕಾಡಿದಾಗ ಅದು ನಮ್ಮನ್ನು 2016 ರಷ್ಟು ಹಿಂದಕ್ಕೆ ಕರೆದುಕೊಂಡು ಹೋಗುತ್ತದೆ. ಈ ಚಿತ್ರವನ್ನು 2016 ರಲ್ಲಿ ಬಾರ್ಮರ್ ಕಾಂಗ್ರೆಸ್ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಚಿತ್ರ 3

ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಈ ಚಿತ್ರವನ್ನು ಒಳಗೊಂಡ ಹಲವಾರು ವಿಡಿಯೋಗಳು ದೊರಕಿವೆ. ಈ ಚಿತ್ರ ಕರ್ಣಿ ಸೇನೆಯ ಗುಜರಾತ್ ಮುಖ್ಯಸ್ಥ ರಾಜ್ ಸಿಂಗ್ ಶೇಖಾವತ್ ಅವರ ಬೆಂಗಾವಲು ಪಡೆಯದ್ದಾಗಿದೆ.

ವೈರಲ್ ಆದ ಈ ಚಿತ್ರವನ್ನು ಶ್ರೀ ರಾಷ್ಟ್ರೀಯ ರಜಪೂತ ಕರ್ಣಿಸೇನಾ ಫೇಸ್‌ಬುಕ್ ಪುಟದಲ್ಲಿ 22 ಡಿಸೆಂಬರ್ 2019 ರಂದು ಪೋಸ್ಟ್  ಮಾಡಲಾಗಿದೆ. ಜೊತೆಗೆ “ಈ ಚಿತ್ರವನ್ನು ಗುಜರಾತ್‌ನ ಗಾಂಧಿನಗರದಲ್ಲಿ ಕ್ಲಿಕ್ಕಿಸಲಾಗಿದೆ” ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ವಿಡಿಯೋ

ಈ ವೈರಲ್ ಚಿತ್ರಗಳ ಜೊತೆಗೆ, ಕೆಲವು ವೈರಲ್ ಪೋಸ್ಟ್‌ಗಳು ಅದೇ ಸುಳ್ಳುನ್ನು ಹರಡಲು ಹಲವು ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಇನ್ವಿಡ್ ಗೂಗಲ್ ಕ್ರೋಮ್ ವಿಸ್ತರಣೆಯನ್ನು ಬಳಸಿಕೊಂಡು ವೀಡಿಯೊವನ್ನು ಅನೇಕ ಕೀಫ್ರೇಮ್‌ಗಳಾಗಿ ವಿಂಗಡಿಸಿ ನೋಡಿದಾಗ ಇದು ಜಮ್ಮು ಮತ್ತು ಕಾಶ್ಮೀರದ ಚಿತ್ರ ಎಂದು ತಿಳಿಯುತ್ತದೆ.

2018 ರ ಅಕ್ಟೋಬರ್ 25 ರಂದು ಜಮ್ಮುವಿನಲ್ಲಿ ನಡೆಸಲಾದ ಮಹಾರಾಜ ಹರಿಸಿಂಗ್ ಜನ್ಮದಿನದ ಅಂಗವಾಗಿ ನಡೆದ ರ್‍ಯಾಲಿಯ ಚಿತ್ರವಾಗಿದೆ. ಇದನ್ನು ವಿಶಾಲ್ ಸಿಂಗ್ ಎನ್ನುವವರು ತಮ್ಮ ಯೂಟ್ಯೂಬ್ ಅಕೌಂಟ್‌ನಲ್ಲಿ ಶೇರ್ ಮಾಡಿದ್ದಾರೆ.

PC: Youtube

ಒಟ್ಟಿನಲ್ಲಿ ಈ ಎಲ್ಲಾ ವಿಡಿಯೋ ಮತ್ತು ಚಿತ್ರಗಳಿಗೆ ಕರ್ಣಿಸೇನಾ ಹಾಗೂ ಕಂಗನಾ ರಾಣಾವತ್‌ಗೆ ಬೆಂಬಲ ಪ್ರದರ್ಶನ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ. ವೈರಲ್ ಆದ ಚಿತ್ರಗಳು, ವಿಡಿಯೋಗಳು ಸುಮಾರು ನಾಲ್ಕು ವರ್ಷಗಳ ಹಿಂದಿನದ್ದಾಗಿದೆ.


ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...