Homeಫ್ಯಾಕ್ಟ್‌ಚೆಕ್ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ನಟಿ ಕಂಗನಾ ರಾಣಾವತ್‌ಗೆ ಬೆಂಬಲ ನೀಡಲು ಕರ್ಣಿಸೇನಾದ 1,000 ಕಾರುಗಳ ಬೆಂಗಾವಲು ಪಡೆ ಮುಂಬೈಗೆ ಹೊರಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ  ಹೋಲಿಸಿದ್ದು, ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಹೇಳಿಕೆಗಳಿಂದ ವಿವಾದ ಸೃಷ್ಟಿಸಿದ್ದಾರೆ. ಇದರಿಂದ ಅವರ ಮೇಲೆ ಶಿವಸೇನೆ ನೇತೃತ್ವದ ಮಹಾರಾಷ್ಟರ ಸರ್ಕಾರ ತಿರುಗಿಬಿದ್ದಿದ್ದು, ವಿವಾದವು ಕಂಗನಾ v/s ಶಿವಸೇನೆ ಎನ್ನುವ ಮಟ್ಟಿಗೆ ಬಂದಿದೆ.

ಈ ವಿವಾದದ ನಂತರ ಮುಂಬೈಯಲ್ಲಿರುವ ಕಂಗನಾಗೆ ಸೇರಿರುವ ಮಣಿಕರ್ಣಿಕಾ ಫಿಲ್ಮಂ ಕಚೇರಿಯನ್ನು ಬಿಎಂಸಿ ಧ್ವಂಸಗೊಳಿಸಲು ಹೋಗಿದ್ದು, ಪ್ರತಿಕಾರದ ಕೃತ್ಯ ಎನಿಸಿಕೊಂಡಿತ್ತು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಕಂಗನಾಗೆ ಬೆಂಬಲ ತೋರಿಸಲು ಬಲಪಂಥೀಯ ಸಂಘಟನೆ ಕರ್ಣಿಸೇನಾದ ಗುಂಪು ಮುಂಬೈಗೆ ಪ್ರಯಾಣಿಸುತ್ತಿದೆ ಎಂಬ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿವೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಈ ಚಿತ್ರಗಳು, ವಿಡಿಯೋಗಳು ಒಂದಕ್ಕೊಂದು ಸಂಬಂಧವಿಲ್ಲದ ಚಿತ್ರಗಳಾಗಿದ್ದು, ಕರ್ಣಿಸೇನಾ ನಟಿಗೆ ಬೆಂಬಲ ನೀಡಲು 1,000 ಕಾರುಗಳ ಬೆಂಗಾವಲು ಪಡೆಯೊಂದಿಗೆ ಹೋಗುತ್ತಿರುವುದು ಸುಳ್ಳು ಸುದ್ದಿಯಾಗಿದೆ.

’ದಿ ಕ್ವಿಂಟ್‌’ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ ತಿಳಿದು ಬಂದ ವಿಷಯವೆಂದರೇ, ಈ ಚಿತ್ರಗಳು ಮತ್ತು ವೀಡಿಯೊಗಳು 2016 ರ ಹಳೆಯ ಚಿತ್ರಗಳಾಗಿವೆ. ಈ ಚಿತ್ರಗಳಿಗೂ ಕರ್ಣಿಸೇನಾ ಕಂಗನಾಗೆ ಬೆಂಬಲ ನೀಡುತ್ತಿದೆ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ.

PC: facebook

ಈ ಚಿತ್ರಗಳು ಮತ್ತು ವೀಡಿಯೊಗಳ ಪ್ರಕಾರ “ಕಂಗನಾ ರಾಣಾವತ್ ಅವರ ಗೌರವಾರ್ಥವಾಗಿ, ಕರ್ಣಿಸೇನಾ ಮಹಾರಾಷ್ಟ್ರಕ್ಕೆ 1,000 ಕಾರುಗಳ ಬೆಂಗಾವಲಿನಲ್ಲಿ ಹೊರಟಿದೆ” ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್ ಚೆಕ್‌ನಲ್ಲಿ ಕಂಡಿದ್ದೇನು..?

ದಿ ಕ್ವಿಂಟ್ ನಡೆಸಿದ ಫ್ಯಾಕ್ಟ್‌ಚೆಕ್ ಪ್ರಕಾರ ತಿಳಿದುಬಂದದ್ದೇನೆಂದರೆ, ಈ ಚಿತ್ರಗಳು ತುಂಬ ಹಳೆಯ ಮತ್ತು ಕರ್ಣಿಸೇನಾದಿಂದ ಕಂಗನಾಗೆ ಬೆಂಬಲ ಪ್ರದರ್ಶನಕ್ಕೂ ಯಾವುದೇ ಸಂಬಂಧವಿಲ್ಲದ ಚಿತ್ರಗಳು ಎಂದು.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಚಿತ್ರಗಳನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ ಸಿಕ್ಕ ಮಾಹಿತಿಗಳು ಹೀಗಿವೆ.

ಚಿತ್ರ 1

PC: facebook

ಈ ಚಿತ್ರ ಮಾರ್ಚ್ 1, 2017 ರ ಚಿತ್ರವಾಗಿದ್ದು, ಟ್ವಿಟ್ಟರ್‌ನಲ್ಲಿ ಸಿಗುತ್ತದೆ. ಗುಜರಾತಿ ಶೀರ್ಷಿಕೆಯೊಂದಿಗೆ ಇರುವ ಈ ಚಿತ್ರದಲ್ಲಿ “ದಕ್ಷಿಣ ಭಾರತದ ಚಿತ್ರದ ಮಾದರಿಯಲ್ಲಿ ವಧುವನ್ನು ಕರೆತರಲು ತಾರಾದ್‌ನ ವರನೊಬ್ಬ 30 ಸ್ಕಾರ್ಪಿಯೋಗಳನ್ನು ಬಳಸಿಕೊಂಡಿದ್ದಾನೆ, ವಾವ್ ಉತ್ತರ ಗುಜರಾತ್ ವಾವ್” ಎಂದು ಬರೆಯಲಾಗಿದೆ.

ಚಿತ್ರ 2

PC; facebook

ಎರಡನೇ ಚಿತ್ರವನ್ನು ಕೂಡ ಗೂಗಲ್‌ನಲ್ಲಿ ಹುಡುಕಾಡಿದಾಗ ಅದು ನಮ್ಮನ್ನು 2016 ರಷ್ಟು ಹಿಂದಕ್ಕೆ ಕರೆದುಕೊಂಡು ಹೋಗುತ್ತದೆ. ಈ ಚಿತ್ರವನ್ನು 2016 ರಲ್ಲಿ ಬಾರ್ಮರ್ ಕಾಂಗ್ರೆಸ್ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಚಿತ್ರ 3

ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಈ ಚಿತ್ರವನ್ನು ಒಳಗೊಂಡ ಹಲವಾರು ವಿಡಿಯೋಗಳು ದೊರಕಿವೆ. ಈ ಚಿತ್ರ ಕರ್ಣಿ ಸೇನೆಯ ಗುಜರಾತ್ ಮುಖ್ಯಸ್ಥ ರಾಜ್ ಸಿಂಗ್ ಶೇಖಾವತ್ ಅವರ ಬೆಂಗಾವಲು ಪಡೆಯದ್ದಾಗಿದೆ.

ವೈರಲ್ ಆದ ಈ ಚಿತ್ರವನ್ನು ಶ್ರೀ ರಾಷ್ಟ್ರೀಯ ರಜಪೂತ ಕರ್ಣಿಸೇನಾ ಫೇಸ್‌ಬುಕ್ ಪುಟದಲ್ಲಿ 22 ಡಿಸೆಂಬರ್ 2019 ರಂದು ಪೋಸ್ಟ್  ಮಾಡಲಾಗಿದೆ. ಜೊತೆಗೆ “ಈ ಚಿತ್ರವನ್ನು ಗುಜರಾತ್‌ನ ಗಾಂಧಿನಗರದಲ್ಲಿ ಕ್ಲಿಕ್ಕಿಸಲಾಗಿದೆ” ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ವಿಡಿಯೋ

ಈ ವೈರಲ್ ಚಿತ್ರಗಳ ಜೊತೆಗೆ, ಕೆಲವು ವೈರಲ್ ಪೋಸ್ಟ್‌ಗಳು ಅದೇ ಸುಳ್ಳುನ್ನು ಹರಡಲು ಹಲವು ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಇನ್ವಿಡ್ ಗೂಗಲ್ ಕ್ರೋಮ್ ವಿಸ್ತರಣೆಯನ್ನು ಬಳಸಿಕೊಂಡು ವೀಡಿಯೊವನ್ನು ಅನೇಕ ಕೀಫ್ರೇಮ್‌ಗಳಾಗಿ ವಿಂಗಡಿಸಿ ನೋಡಿದಾಗ ಇದು ಜಮ್ಮು ಮತ್ತು ಕಾಶ್ಮೀರದ ಚಿತ್ರ ಎಂದು ತಿಳಿಯುತ್ತದೆ.

2018 ರ ಅಕ್ಟೋಬರ್ 25 ರಂದು ಜಮ್ಮುವಿನಲ್ಲಿ ನಡೆಸಲಾದ ಮಹಾರಾಜ ಹರಿಸಿಂಗ್ ಜನ್ಮದಿನದ ಅಂಗವಾಗಿ ನಡೆದ ರ್‍ಯಾಲಿಯ ಚಿತ್ರವಾಗಿದೆ. ಇದನ್ನು ವಿಶಾಲ್ ಸಿಂಗ್ ಎನ್ನುವವರು ತಮ್ಮ ಯೂಟ್ಯೂಬ್ ಅಕೌಂಟ್‌ನಲ್ಲಿ ಶೇರ್ ಮಾಡಿದ್ದಾರೆ.

PC: Youtube

ಒಟ್ಟಿನಲ್ಲಿ ಈ ಎಲ್ಲಾ ವಿಡಿಯೋ ಮತ್ತು ಚಿತ್ರಗಳಿಗೆ ಕರ್ಣಿಸೇನಾ ಹಾಗೂ ಕಂಗನಾ ರಾಣಾವತ್‌ಗೆ ಬೆಂಬಲ ಪ್ರದರ್ಶನ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ. ವೈರಲ್ ಆದ ಚಿತ್ರಗಳು, ವಿಡಿಯೋಗಳು ಸುಮಾರು ನಾಲ್ಕು ವರ್ಷಗಳ ಹಿಂದಿನದ್ದಾಗಿದೆ.


ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...