Homeಫ್ಯಾಕ್ಟ್‌ಚೆಕ್ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ನಟಿ ಕಂಗನಾ ರಾಣಾವತ್‌ಗೆ ಬೆಂಬಲ ನೀಡಲು ಕರ್ಣಿಸೇನಾದ 1,000 ಕಾರುಗಳ ಬೆಂಗಾವಲು ಪಡೆ ಮುಂಬೈಗೆ ಹೊರಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ  ಹೋಲಿಸಿದ್ದು, ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಹೇಳಿಕೆಗಳಿಂದ ವಿವಾದ ಸೃಷ್ಟಿಸಿದ್ದಾರೆ. ಇದರಿಂದ ಅವರ ಮೇಲೆ ಶಿವಸೇನೆ ನೇತೃತ್ವದ ಮಹಾರಾಷ್ಟರ ಸರ್ಕಾರ ತಿರುಗಿಬಿದ್ದಿದ್ದು, ವಿವಾದವು ಕಂಗನಾ v/s ಶಿವಸೇನೆ ಎನ್ನುವ ಮಟ್ಟಿಗೆ ಬಂದಿದೆ.

ಈ ವಿವಾದದ ನಂತರ ಮುಂಬೈಯಲ್ಲಿರುವ ಕಂಗನಾಗೆ ಸೇರಿರುವ ಮಣಿಕರ್ಣಿಕಾ ಫಿಲ್ಮಂ ಕಚೇರಿಯನ್ನು ಬಿಎಂಸಿ ಧ್ವಂಸಗೊಳಿಸಲು ಹೋಗಿದ್ದು, ಪ್ರತಿಕಾರದ ಕೃತ್ಯ ಎನಿಸಿಕೊಂಡಿತ್ತು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಕಂಗನಾಗೆ ಬೆಂಬಲ ತೋರಿಸಲು ಬಲಪಂಥೀಯ ಸಂಘಟನೆ ಕರ್ಣಿಸೇನಾದ ಗುಂಪು ಮುಂಬೈಗೆ ಪ್ರಯಾಣಿಸುತ್ತಿದೆ ಎಂಬ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿವೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಈ ಚಿತ್ರಗಳು, ವಿಡಿಯೋಗಳು ಒಂದಕ್ಕೊಂದು ಸಂಬಂಧವಿಲ್ಲದ ಚಿತ್ರಗಳಾಗಿದ್ದು, ಕರ್ಣಿಸೇನಾ ನಟಿಗೆ ಬೆಂಬಲ ನೀಡಲು 1,000 ಕಾರುಗಳ ಬೆಂಗಾವಲು ಪಡೆಯೊಂದಿಗೆ ಹೋಗುತ್ತಿರುವುದು ಸುಳ್ಳು ಸುದ್ದಿಯಾಗಿದೆ.

’ದಿ ಕ್ವಿಂಟ್‌’ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ ತಿಳಿದು ಬಂದ ವಿಷಯವೆಂದರೇ, ಈ ಚಿತ್ರಗಳು ಮತ್ತು ವೀಡಿಯೊಗಳು 2016 ರ ಹಳೆಯ ಚಿತ್ರಗಳಾಗಿವೆ. ಈ ಚಿತ್ರಗಳಿಗೂ ಕರ್ಣಿಸೇನಾ ಕಂಗನಾಗೆ ಬೆಂಬಲ ನೀಡುತ್ತಿದೆ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ.

PC: facebook

ಈ ಚಿತ್ರಗಳು ಮತ್ತು ವೀಡಿಯೊಗಳ ಪ್ರಕಾರ “ಕಂಗನಾ ರಾಣಾವತ್ ಅವರ ಗೌರವಾರ್ಥವಾಗಿ, ಕರ್ಣಿಸೇನಾ ಮಹಾರಾಷ್ಟ್ರಕ್ಕೆ 1,000 ಕಾರುಗಳ ಬೆಂಗಾವಲಿನಲ್ಲಿ ಹೊರಟಿದೆ” ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್ ಚೆಕ್‌ನಲ್ಲಿ ಕಂಡಿದ್ದೇನು..?

ದಿ ಕ್ವಿಂಟ್ ನಡೆಸಿದ ಫ್ಯಾಕ್ಟ್‌ಚೆಕ್ ಪ್ರಕಾರ ತಿಳಿದುಬಂದದ್ದೇನೆಂದರೆ, ಈ ಚಿತ್ರಗಳು ತುಂಬ ಹಳೆಯ ಮತ್ತು ಕರ್ಣಿಸೇನಾದಿಂದ ಕಂಗನಾಗೆ ಬೆಂಬಲ ಪ್ರದರ್ಶನಕ್ಕೂ ಯಾವುದೇ ಸಂಬಂಧವಿಲ್ಲದ ಚಿತ್ರಗಳು ಎಂದು.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಚಿತ್ರಗಳನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ ಸಿಕ್ಕ ಮಾಹಿತಿಗಳು ಹೀಗಿವೆ.

ಚಿತ್ರ 1

PC: facebook

ಈ ಚಿತ್ರ ಮಾರ್ಚ್ 1, 2017 ರ ಚಿತ್ರವಾಗಿದ್ದು, ಟ್ವಿಟ್ಟರ್‌ನಲ್ಲಿ ಸಿಗುತ್ತದೆ. ಗುಜರಾತಿ ಶೀರ್ಷಿಕೆಯೊಂದಿಗೆ ಇರುವ ಈ ಚಿತ್ರದಲ್ಲಿ “ದಕ್ಷಿಣ ಭಾರತದ ಚಿತ್ರದ ಮಾದರಿಯಲ್ಲಿ ವಧುವನ್ನು ಕರೆತರಲು ತಾರಾದ್‌ನ ವರನೊಬ್ಬ 30 ಸ್ಕಾರ್ಪಿಯೋಗಳನ್ನು ಬಳಸಿಕೊಂಡಿದ್ದಾನೆ, ವಾವ್ ಉತ್ತರ ಗುಜರಾತ್ ವಾವ್” ಎಂದು ಬರೆಯಲಾಗಿದೆ.

ಚಿತ್ರ 2

PC; facebook

ಎರಡನೇ ಚಿತ್ರವನ್ನು ಕೂಡ ಗೂಗಲ್‌ನಲ್ಲಿ ಹುಡುಕಾಡಿದಾಗ ಅದು ನಮ್ಮನ್ನು 2016 ರಷ್ಟು ಹಿಂದಕ್ಕೆ ಕರೆದುಕೊಂಡು ಹೋಗುತ್ತದೆ. ಈ ಚಿತ್ರವನ್ನು 2016 ರಲ್ಲಿ ಬಾರ್ಮರ್ ಕಾಂಗ್ರೆಸ್ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಚಿತ್ರ 3

ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಈ ಚಿತ್ರವನ್ನು ಒಳಗೊಂಡ ಹಲವಾರು ವಿಡಿಯೋಗಳು ದೊರಕಿವೆ. ಈ ಚಿತ್ರ ಕರ್ಣಿ ಸೇನೆಯ ಗುಜರಾತ್ ಮುಖ್ಯಸ್ಥ ರಾಜ್ ಸಿಂಗ್ ಶೇಖಾವತ್ ಅವರ ಬೆಂಗಾವಲು ಪಡೆಯದ್ದಾಗಿದೆ.

ವೈರಲ್ ಆದ ಈ ಚಿತ್ರವನ್ನು ಶ್ರೀ ರಾಷ್ಟ್ರೀಯ ರಜಪೂತ ಕರ್ಣಿಸೇನಾ ಫೇಸ್‌ಬುಕ್ ಪುಟದಲ್ಲಿ 22 ಡಿಸೆಂಬರ್ 2019 ರಂದು ಪೋಸ್ಟ್  ಮಾಡಲಾಗಿದೆ. ಜೊತೆಗೆ “ಈ ಚಿತ್ರವನ್ನು ಗುಜರಾತ್‌ನ ಗಾಂಧಿನಗರದಲ್ಲಿ ಕ್ಲಿಕ್ಕಿಸಲಾಗಿದೆ” ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ವಿಡಿಯೋ

ಈ ವೈರಲ್ ಚಿತ್ರಗಳ ಜೊತೆಗೆ, ಕೆಲವು ವೈರಲ್ ಪೋಸ್ಟ್‌ಗಳು ಅದೇ ಸುಳ್ಳುನ್ನು ಹರಡಲು ಹಲವು ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಇನ್ವಿಡ್ ಗೂಗಲ್ ಕ್ರೋಮ್ ವಿಸ್ತರಣೆಯನ್ನು ಬಳಸಿಕೊಂಡು ವೀಡಿಯೊವನ್ನು ಅನೇಕ ಕೀಫ್ರೇಮ್‌ಗಳಾಗಿ ವಿಂಗಡಿಸಿ ನೋಡಿದಾಗ ಇದು ಜಮ್ಮು ಮತ್ತು ಕಾಶ್ಮೀರದ ಚಿತ್ರ ಎಂದು ತಿಳಿಯುತ್ತದೆ.

2018 ರ ಅಕ್ಟೋಬರ್ 25 ರಂದು ಜಮ್ಮುವಿನಲ್ಲಿ ನಡೆಸಲಾದ ಮಹಾರಾಜ ಹರಿಸಿಂಗ್ ಜನ್ಮದಿನದ ಅಂಗವಾಗಿ ನಡೆದ ರ್‍ಯಾಲಿಯ ಚಿತ್ರವಾಗಿದೆ. ಇದನ್ನು ವಿಶಾಲ್ ಸಿಂಗ್ ಎನ್ನುವವರು ತಮ್ಮ ಯೂಟ್ಯೂಬ್ ಅಕೌಂಟ್‌ನಲ್ಲಿ ಶೇರ್ ಮಾಡಿದ್ದಾರೆ.

PC: Youtube

ಒಟ್ಟಿನಲ್ಲಿ ಈ ಎಲ್ಲಾ ವಿಡಿಯೋ ಮತ್ತು ಚಿತ್ರಗಳಿಗೆ ಕರ್ಣಿಸೇನಾ ಹಾಗೂ ಕಂಗನಾ ರಾಣಾವತ್‌ಗೆ ಬೆಂಬಲ ಪ್ರದರ್ಶನ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ. ವೈರಲ್ ಆದ ಚಿತ್ರಗಳು, ವಿಡಿಯೋಗಳು ಸುಮಾರು ನಾಲ್ಕು ವರ್ಷಗಳ ಹಿಂದಿನದ್ದಾಗಿದೆ.


ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...