Homeಫ್ಯಾಕ್ಟ್‌ಚೆಕ್ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ನಟಿ ಕಂಗನಾ ರಾಣಾವತ್‌ಗೆ ಬೆಂಬಲ ನೀಡಲು ಕರ್ಣಿಸೇನಾದ 1,000 ಕಾರುಗಳ ಬೆಂಗಾವಲು ಪಡೆ ಮುಂಬೈಗೆ ಹೊರಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ  ಹೋಲಿಸಿದ್ದು, ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಹೇಳಿಕೆಗಳಿಂದ ವಿವಾದ ಸೃಷ್ಟಿಸಿದ್ದಾರೆ. ಇದರಿಂದ ಅವರ ಮೇಲೆ ಶಿವಸೇನೆ ನೇತೃತ್ವದ ಮಹಾರಾಷ್ಟರ ಸರ್ಕಾರ ತಿರುಗಿಬಿದ್ದಿದ್ದು, ವಿವಾದವು ಕಂಗನಾ v/s ಶಿವಸೇನೆ ಎನ್ನುವ ಮಟ್ಟಿಗೆ ಬಂದಿದೆ.

ಈ ವಿವಾದದ ನಂತರ ಮುಂಬೈಯಲ್ಲಿರುವ ಕಂಗನಾಗೆ ಸೇರಿರುವ ಮಣಿಕರ್ಣಿಕಾ ಫಿಲ್ಮಂ ಕಚೇರಿಯನ್ನು ಬಿಎಂಸಿ ಧ್ವಂಸಗೊಳಿಸಲು ಹೋಗಿದ್ದು, ಪ್ರತಿಕಾರದ ಕೃತ್ಯ ಎನಿಸಿಕೊಂಡಿತ್ತು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಕಂಗನಾಗೆ ಬೆಂಬಲ ತೋರಿಸಲು ಬಲಪಂಥೀಯ ಸಂಘಟನೆ ಕರ್ಣಿಸೇನಾದ ಗುಂಪು ಮುಂಬೈಗೆ ಪ್ರಯಾಣಿಸುತ್ತಿದೆ ಎಂಬ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿವೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಈ ಚಿತ್ರಗಳು, ವಿಡಿಯೋಗಳು ಒಂದಕ್ಕೊಂದು ಸಂಬಂಧವಿಲ್ಲದ ಚಿತ್ರಗಳಾಗಿದ್ದು, ಕರ್ಣಿಸೇನಾ ನಟಿಗೆ ಬೆಂಬಲ ನೀಡಲು 1,000 ಕಾರುಗಳ ಬೆಂಗಾವಲು ಪಡೆಯೊಂದಿಗೆ ಹೋಗುತ್ತಿರುವುದು ಸುಳ್ಳು ಸುದ್ದಿಯಾಗಿದೆ.

’ದಿ ಕ್ವಿಂಟ್‌’ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ ತಿಳಿದು ಬಂದ ವಿಷಯವೆಂದರೇ, ಈ ಚಿತ್ರಗಳು ಮತ್ತು ವೀಡಿಯೊಗಳು 2016 ರ ಹಳೆಯ ಚಿತ್ರಗಳಾಗಿವೆ. ಈ ಚಿತ್ರಗಳಿಗೂ ಕರ್ಣಿಸೇನಾ ಕಂಗನಾಗೆ ಬೆಂಬಲ ನೀಡುತ್ತಿದೆ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ.

PC: facebook

ಈ ಚಿತ್ರಗಳು ಮತ್ತು ವೀಡಿಯೊಗಳ ಪ್ರಕಾರ “ಕಂಗನಾ ರಾಣಾವತ್ ಅವರ ಗೌರವಾರ್ಥವಾಗಿ, ಕರ್ಣಿಸೇನಾ ಮಹಾರಾಷ್ಟ್ರಕ್ಕೆ 1,000 ಕಾರುಗಳ ಬೆಂಗಾವಲಿನಲ್ಲಿ ಹೊರಟಿದೆ” ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್ ಚೆಕ್‌ನಲ್ಲಿ ಕಂಡಿದ್ದೇನು..?

ದಿ ಕ್ವಿಂಟ್ ನಡೆಸಿದ ಫ್ಯಾಕ್ಟ್‌ಚೆಕ್ ಪ್ರಕಾರ ತಿಳಿದುಬಂದದ್ದೇನೆಂದರೆ, ಈ ಚಿತ್ರಗಳು ತುಂಬ ಹಳೆಯ ಮತ್ತು ಕರ್ಣಿಸೇನಾದಿಂದ ಕಂಗನಾಗೆ ಬೆಂಬಲ ಪ್ರದರ್ಶನಕ್ಕೂ ಯಾವುದೇ ಸಂಬಂಧವಿಲ್ಲದ ಚಿತ್ರಗಳು ಎಂದು.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಚಿತ್ರಗಳನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ ಸಿಕ್ಕ ಮಾಹಿತಿಗಳು ಹೀಗಿವೆ.

ಚಿತ್ರ 1

PC: facebook

ಈ ಚಿತ್ರ ಮಾರ್ಚ್ 1, 2017 ರ ಚಿತ್ರವಾಗಿದ್ದು, ಟ್ವಿಟ್ಟರ್‌ನಲ್ಲಿ ಸಿಗುತ್ತದೆ. ಗುಜರಾತಿ ಶೀರ್ಷಿಕೆಯೊಂದಿಗೆ ಇರುವ ಈ ಚಿತ್ರದಲ್ಲಿ “ದಕ್ಷಿಣ ಭಾರತದ ಚಿತ್ರದ ಮಾದರಿಯಲ್ಲಿ ವಧುವನ್ನು ಕರೆತರಲು ತಾರಾದ್‌ನ ವರನೊಬ್ಬ 30 ಸ್ಕಾರ್ಪಿಯೋಗಳನ್ನು ಬಳಸಿಕೊಂಡಿದ್ದಾನೆ, ವಾವ್ ಉತ್ತರ ಗುಜರಾತ್ ವಾವ್” ಎಂದು ಬರೆಯಲಾಗಿದೆ.

ಚಿತ್ರ 2

PC; facebook

ಎರಡನೇ ಚಿತ್ರವನ್ನು ಕೂಡ ಗೂಗಲ್‌ನಲ್ಲಿ ಹುಡುಕಾಡಿದಾಗ ಅದು ನಮ್ಮನ್ನು 2016 ರಷ್ಟು ಹಿಂದಕ್ಕೆ ಕರೆದುಕೊಂಡು ಹೋಗುತ್ತದೆ. ಈ ಚಿತ್ರವನ್ನು 2016 ರಲ್ಲಿ ಬಾರ್ಮರ್ ಕಾಂಗ್ರೆಸ್ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಚಿತ್ರ 3

ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಈ ಚಿತ್ರವನ್ನು ಒಳಗೊಂಡ ಹಲವಾರು ವಿಡಿಯೋಗಳು ದೊರಕಿವೆ. ಈ ಚಿತ್ರ ಕರ್ಣಿ ಸೇನೆಯ ಗುಜರಾತ್ ಮುಖ್ಯಸ್ಥ ರಾಜ್ ಸಿಂಗ್ ಶೇಖಾವತ್ ಅವರ ಬೆಂಗಾವಲು ಪಡೆಯದ್ದಾಗಿದೆ.

ವೈರಲ್ ಆದ ಈ ಚಿತ್ರವನ್ನು ಶ್ರೀ ರಾಷ್ಟ್ರೀಯ ರಜಪೂತ ಕರ್ಣಿಸೇನಾ ಫೇಸ್‌ಬುಕ್ ಪುಟದಲ್ಲಿ 22 ಡಿಸೆಂಬರ್ 2019 ರಂದು ಪೋಸ್ಟ್  ಮಾಡಲಾಗಿದೆ. ಜೊತೆಗೆ “ಈ ಚಿತ್ರವನ್ನು ಗುಜರಾತ್‌ನ ಗಾಂಧಿನಗರದಲ್ಲಿ ಕ್ಲಿಕ್ಕಿಸಲಾಗಿದೆ” ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ವಿಡಿಯೋ

ಈ ವೈರಲ್ ಚಿತ್ರಗಳ ಜೊತೆಗೆ, ಕೆಲವು ವೈರಲ್ ಪೋಸ್ಟ್‌ಗಳು ಅದೇ ಸುಳ್ಳುನ್ನು ಹರಡಲು ಹಲವು ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಇನ್ವಿಡ್ ಗೂಗಲ್ ಕ್ರೋಮ್ ವಿಸ್ತರಣೆಯನ್ನು ಬಳಸಿಕೊಂಡು ವೀಡಿಯೊವನ್ನು ಅನೇಕ ಕೀಫ್ರೇಮ್‌ಗಳಾಗಿ ವಿಂಗಡಿಸಿ ನೋಡಿದಾಗ ಇದು ಜಮ್ಮು ಮತ್ತು ಕಾಶ್ಮೀರದ ಚಿತ್ರ ಎಂದು ತಿಳಿಯುತ್ತದೆ.

2018 ರ ಅಕ್ಟೋಬರ್ 25 ರಂದು ಜಮ್ಮುವಿನಲ್ಲಿ ನಡೆಸಲಾದ ಮಹಾರಾಜ ಹರಿಸಿಂಗ್ ಜನ್ಮದಿನದ ಅಂಗವಾಗಿ ನಡೆದ ರ್‍ಯಾಲಿಯ ಚಿತ್ರವಾಗಿದೆ. ಇದನ್ನು ವಿಶಾಲ್ ಸಿಂಗ್ ಎನ್ನುವವರು ತಮ್ಮ ಯೂಟ್ಯೂಬ್ ಅಕೌಂಟ್‌ನಲ್ಲಿ ಶೇರ್ ಮಾಡಿದ್ದಾರೆ.

PC: Youtube

ಒಟ್ಟಿನಲ್ಲಿ ಈ ಎಲ್ಲಾ ವಿಡಿಯೋ ಮತ್ತು ಚಿತ್ರಗಳಿಗೆ ಕರ್ಣಿಸೇನಾ ಹಾಗೂ ಕಂಗನಾ ರಾಣಾವತ್‌ಗೆ ಬೆಂಬಲ ಪ್ರದರ್ಶನ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ. ವೈರಲ್ ಆದ ಚಿತ್ರಗಳು, ವಿಡಿಯೋಗಳು ಸುಮಾರು ನಾಲ್ಕು ವರ್ಷಗಳ ಹಿಂದಿನದ್ದಾಗಿದೆ.


ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...