Homeಫ್ಯಾಕ್ಟ್‌ಚೆಕ್ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ನಟಿ ಕಂಗನಾ ರಾಣಾವತ್‌ಗೆ ಬೆಂಬಲ ನೀಡಲು ಕರ್ಣಿಸೇನಾದ 1,000 ಕಾರುಗಳ ಬೆಂಗಾವಲು ಪಡೆ ಮುಂಬೈಗೆ ಹೊರಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ  ಹೋಲಿಸಿದ್ದು, ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಹೇಳಿಕೆಗಳಿಂದ ವಿವಾದ ಸೃಷ್ಟಿಸಿದ್ದಾರೆ. ಇದರಿಂದ ಅವರ ಮೇಲೆ ಶಿವಸೇನೆ ನೇತೃತ್ವದ ಮಹಾರಾಷ್ಟರ ಸರ್ಕಾರ ತಿರುಗಿಬಿದ್ದಿದ್ದು, ವಿವಾದವು ಕಂಗನಾ v/s ಶಿವಸೇನೆ ಎನ್ನುವ ಮಟ್ಟಿಗೆ ಬಂದಿದೆ.

ಈ ವಿವಾದದ ನಂತರ ಮುಂಬೈಯಲ್ಲಿರುವ ಕಂಗನಾಗೆ ಸೇರಿರುವ ಮಣಿಕರ್ಣಿಕಾ ಫಿಲ್ಮಂ ಕಚೇರಿಯನ್ನು ಬಿಎಂಸಿ ಧ್ವಂಸಗೊಳಿಸಲು ಹೋಗಿದ್ದು, ಪ್ರತಿಕಾರದ ಕೃತ್ಯ ಎನಿಸಿಕೊಂಡಿತ್ತು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಕಂಗನಾಗೆ ಬೆಂಬಲ ತೋರಿಸಲು ಬಲಪಂಥೀಯ ಸಂಘಟನೆ ಕರ್ಣಿಸೇನಾದ ಗುಂಪು ಮುಂಬೈಗೆ ಪ್ರಯಾಣಿಸುತ್ತಿದೆ ಎಂಬ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿವೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಈ ಚಿತ್ರಗಳು, ವಿಡಿಯೋಗಳು ಒಂದಕ್ಕೊಂದು ಸಂಬಂಧವಿಲ್ಲದ ಚಿತ್ರಗಳಾಗಿದ್ದು, ಕರ್ಣಿಸೇನಾ ನಟಿಗೆ ಬೆಂಬಲ ನೀಡಲು 1,000 ಕಾರುಗಳ ಬೆಂಗಾವಲು ಪಡೆಯೊಂದಿಗೆ ಹೋಗುತ್ತಿರುವುದು ಸುಳ್ಳು ಸುದ್ದಿಯಾಗಿದೆ.

’ದಿ ಕ್ವಿಂಟ್‌’ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ ತಿಳಿದು ಬಂದ ವಿಷಯವೆಂದರೇ, ಈ ಚಿತ್ರಗಳು ಮತ್ತು ವೀಡಿಯೊಗಳು 2016 ರ ಹಳೆಯ ಚಿತ್ರಗಳಾಗಿವೆ. ಈ ಚಿತ್ರಗಳಿಗೂ ಕರ್ಣಿಸೇನಾ ಕಂಗನಾಗೆ ಬೆಂಬಲ ನೀಡುತ್ತಿದೆ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ.

PC: facebook

ಈ ಚಿತ್ರಗಳು ಮತ್ತು ವೀಡಿಯೊಗಳ ಪ್ರಕಾರ “ಕಂಗನಾ ರಾಣಾವತ್ ಅವರ ಗೌರವಾರ್ಥವಾಗಿ, ಕರ್ಣಿಸೇನಾ ಮಹಾರಾಷ್ಟ್ರಕ್ಕೆ 1,000 ಕಾರುಗಳ ಬೆಂಗಾವಲಿನಲ್ಲಿ ಹೊರಟಿದೆ” ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್ ಚೆಕ್‌ನಲ್ಲಿ ಕಂಡಿದ್ದೇನು..?

ದಿ ಕ್ವಿಂಟ್ ನಡೆಸಿದ ಫ್ಯಾಕ್ಟ್‌ಚೆಕ್ ಪ್ರಕಾರ ತಿಳಿದುಬಂದದ್ದೇನೆಂದರೆ, ಈ ಚಿತ್ರಗಳು ತುಂಬ ಹಳೆಯ ಮತ್ತು ಕರ್ಣಿಸೇನಾದಿಂದ ಕಂಗನಾಗೆ ಬೆಂಬಲ ಪ್ರದರ್ಶನಕ್ಕೂ ಯಾವುದೇ ಸಂಬಂಧವಿಲ್ಲದ ಚಿತ್ರಗಳು ಎಂದು.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಚಿತ್ರಗಳನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ ಸಿಕ್ಕ ಮಾಹಿತಿಗಳು ಹೀಗಿವೆ.

ಚಿತ್ರ 1

PC: facebook

ಈ ಚಿತ್ರ ಮಾರ್ಚ್ 1, 2017 ರ ಚಿತ್ರವಾಗಿದ್ದು, ಟ್ವಿಟ್ಟರ್‌ನಲ್ಲಿ ಸಿಗುತ್ತದೆ. ಗುಜರಾತಿ ಶೀರ್ಷಿಕೆಯೊಂದಿಗೆ ಇರುವ ಈ ಚಿತ್ರದಲ್ಲಿ “ದಕ್ಷಿಣ ಭಾರತದ ಚಿತ್ರದ ಮಾದರಿಯಲ್ಲಿ ವಧುವನ್ನು ಕರೆತರಲು ತಾರಾದ್‌ನ ವರನೊಬ್ಬ 30 ಸ್ಕಾರ್ಪಿಯೋಗಳನ್ನು ಬಳಸಿಕೊಂಡಿದ್ದಾನೆ, ವಾವ್ ಉತ್ತರ ಗುಜರಾತ್ ವಾವ್” ಎಂದು ಬರೆಯಲಾಗಿದೆ.

ಚಿತ್ರ 2

PC; facebook

ಎರಡನೇ ಚಿತ್ರವನ್ನು ಕೂಡ ಗೂಗಲ್‌ನಲ್ಲಿ ಹುಡುಕಾಡಿದಾಗ ಅದು ನಮ್ಮನ್ನು 2016 ರಷ್ಟು ಹಿಂದಕ್ಕೆ ಕರೆದುಕೊಂಡು ಹೋಗುತ್ತದೆ. ಈ ಚಿತ್ರವನ್ನು 2016 ರಲ್ಲಿ ಬಾರ್ಮರ್ ಕಾಂಗ್ರೆಸ್ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಚಿತ್ರ 3

ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಈ ಚಿತ್ರವನ್ನು ಒಳಗೊಂಡ ಹಲವಾರು ವಿಡಿಯೋಗಳು ದೊರಕಿವೆ. ಈ ಚಿತ್ರ ಕರ್ಣಿ ಸೇನೆಯ ಗುಜರಾತ್ ಮುಖ್ಯಸ್ಥ ರಾಜ್ ಸಿಂಗ್ ಶೇಖಾವತ್ ಅವರ ಬೆಂಗಾವಲು ಪಡೆಯದ್ದಾಗಿದೆ.

ವೈರಲ್ ಆದ ಈ ಚಿತ್ರವನ್ನು ಶ್ರೀ ರಾಷ್ಟ್ರೀಯ ರಜಪೂತ ಕರ್ಣಿಸೇನಾ ಫೇಸ್‌ಬುಕ್ ಪುಟದಲ್ಲಿ 22 ಡಿಸೆಂಬರ್ 2019 ರಂದು ಪೋಸ್ಟ್  ಮಾಡಲಾಗಿದೆ. ಜೊತೆಗೆ “ಈ ಚಿತ್ರವನ್ನು ಗುಜರಾತ್‌ನ ಗಾಂಧಿನಗರದಲ್ಲಿ ಕ್ಲಿಕ್ಕಿಸಲಾಗಿದೆ” ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ವಿಡಿಯೋ

ಈ ವೈರಲ್ ಚಿತ್ರಗಳ ಜೊತೆಗೆ, ಕೆಲವು ವೈರಲ್ ಪೋಸ್ಟ್‌ಗಳು ಅದೇ ಸುಳ್ಳುನ್ನು ಹರಡಲು ಹಲವು ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಇನ್ವಿಡ್ ಗೂಗಲ್ ಕ್ರೋಮ್ ವಿಸ್ತರಣೆಯನ್ನು ಬಳಸಿಕೊಂಡು ವೀಡಿಯೊವನ್ನು ಅನೇಕ ಕೀಫ್ರೇಮ್‌ಗಳಾಗಿ ವಿಂಗಡಿಸಿ ನೋಡಿದಾಗ ಇದು ಜಮ್ಮು ಮತ್ತು ಕಾಶ್ಮೀರದ ಚಿತ್ರ ಎಂದು ತಿಳಿಯುತ್ತದೆ.

2018 ರ ಅಕ್ಟೋಬರ್ 25 ರಂದು ಜಮ್ಮುವಿನಲ್ಲಿ ನಡೆಸಲಾದ ಮಹಾರಾಜ ಹರಿಸಿಂಗ್ ಜನ್ಮದಿನದ ಅಂಗವಾಗಿ ನಡೆದ ರ್‍ಯಾಲಿಯ ಚಿತ್ರವಾಗಿದೆ. ಇದನ್ನು ವಿಶಾಲ್ ಸಿಂಗ್ ಎನ್ನುವವರು ತಮ್ಮ ಯೂಟ್ಯೂಬ್ ಅಕೌಂಟ್‌ನಲ್ಲಿ ಶೇರ್ ಮಾಡಿದ್ದಾರೆ.

PC: Youtube

ಒಟ್ಟಿನಲ್ಲಿ ಈ ಎಲ್ಲಾ ವಿಡಿಯೋ ಮತ್ತು ಚಿತ್ರಗಳಿಗೆ ಕರ್ಣಿಸೇನಾ ಹಾಗೂ ಕಂಗನಾ ರಾಣಾವತ್‌ಗೆ ಬೆಂಬಲ ಪ್ರದರ್ಶನ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ. ವೈರಲ್ ಆದ ಚಿತ್ರಗಳು, ವಿಡಿಯೋಗಳು ಸುಮಾರು ನಾಲ್ಕು ವರ್ಷಗಳ ಹಿಂದಿನದ್ದಾಗಿದೆ.


ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...