Homeಫ್ಯಾಕ್ಟ್‌ಚೆಕ್ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ನಟಿ ಕಂಗನಾ ರಾಣಾವತ್‌ಗೆ ಬೆಂಬಲ ನೀಡಲು ಕರ್ಣಿಸೇನಾದ 1,000 ಕಾರುಗಳ ಬೆಂಗಾವಲು ಪಡೆ ಮುಂಬೈಗೆ ಹೊರಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ  ಹೋಲಿಸಿದ್ದು, ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಹೇಳಿಕೆಗಳಿಂದ ವಿವಾದ ಸೃಷ್ಟಿಸಿದ್ದಾರೆ. ಇದರಿಂದ ಅವರ ಮೇಲೆ ಶಿವಸೇನೆ ನೇತೃತ್ವದ ಮಹಾರಾಷ್ಟರ ಸರ್ಕಾರ ತಿರುಗಿಬಿದ್ದಿದ್ದು, ವಿವಾದವು ಕಂಗನಾ v/s ಶಿವಸೇನೆ ಎನ್ನುವ ಮಟ್ಟಿಗೆ ಬಂದಿದೆ.

ಈ ವಿವಾದದ ನಂತರ ಮುಂಬೈಯಲ್ಲಿರುವ ಕಂಗನಾಗೆ ಸೇರಿರುವ ಮಣಿಕರ್ಣಿಕಾ ಫಿಲ್ಮಂ ಕಚೇರಿಯನ್ನು ಬಿಎಂಸಿ ಧ್ವಂಸಗೊಳಿಸಲು ಹೋಗಿದ್ದು, ಪ್ರತಿಕಾರದ ಕೃತ್ಯ ಎನಿಸಿಕೊಂಡಿತ್ತು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಕಂಗನಾಗೆ ಬೆಂಬಲ ತೋರಿಸಲು ಬಲಪಂಥೀಯ ಸಂಘಟನೆ ಕರ್ಣಿಸೇನಾದ ಗುಂಪು ಮುಂಬೈಗೆ ಪ್ರಯಾಣಿಸುತ್ತಿದೆ ಎಂಬ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿವೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಈ ಚಿತ್ರಗಳು, ವಿಡಿಯೋಗಳು ಒಂದಕ್ಕೊಂದು ಸಂಬಂಧವಿಲ್ಲದ ಚಿತ್ರಗಳಾಗಿದ್ದು, ಕರ್ಣಿಸೇನಾ ನಟಿಗೆ ಬೆಂಬಲ ನೀಡಲು 1,000 ಕಾರುಗಳ ಬೆಂಗಾವಲು ಪಡೆಯೊಂದಿಗೆ ಹೋಗುತ್ತಿರುವುದು ಸುಳ್ಳು ಸುದ್ದಿಯಾಗಿದೆ.

’ದಿ ಕ್ವಿಂಟ್‌’ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ ತಿಳಿದು ಬಂದ ವಿಷಯವೆಂದರೇ, ಈ ಚಿತ್ರಗಳು ಮತ್ತು ವೀಡಿಯೊಗಳು 2016 ರ ಹಳೆಯ ಚಿತ್ರಗಳಾಗಿವೆ. ಈ ಚಿತ್ರಗಳಿಗೂ ಕರ್ಣಿಸೇನಾ ಕಂಗನಾಗೆ ಬೆಂಬಲ ನೀಡುತ್ತಿದೆ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ.

PC: facebook

ಈ ಚಿತ್ರಗಳು ಮತ್ತು ವೀಡಿಯೊಗಳ ಪ್ರಕಾರ “ಕಂಗನಾ ರಾಣಾವತ್ ಅವರ ಗೌರವಾರ್ಥವಾಗಿ, ಕರ್ಣಿಸೇನಾ ಮಹಾರಾಷ್ಟ್ರಕ್ಕೆ 1,000 ಕಾರುಗಳ ಬೆಂಗಾವಲಿನಲ್ಲಿ ಹೊರಟಿದೆ” ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್ ಚೆಕ್‌ನಲ್ಲಿ ಕಂಡಿದ್ದೇನು..?

ದಿ ಕ್ವಿಂಟ್ ನಡೆಸಿದ ಫ್ಯಾಕ್ಟ್‌ಚೆಕ್ ಪ್ರಕಾರ ತಿಳಿದುಬಂದದ್ದೇನೆಂದರೆ, ಈ ಚಿತ್ರಗಳು ತುಂಬ ಹಳೆಯ ಮತ್ತು ಕರ್ಣಿಸೇನಾದಿಂದ ಕಂಗನಾಗೆ ಬೆಂಬಲ ಪ್ರದರ್ಶನಕ್ಕೂ ಯಾವುದೇ ಸಂಬಂಧವಿಲ್ಲದ ಚಿತ್ರಗಳು ಎಂದು.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಚಿತ್ರಗಳನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ ಸಿಕ್ಕ ಮಾಹಿತಿಗಳು ಹೀಗಿವೆ.

ಚಿತ್ರ 1

PC: facebook

ಈ ಚಿತ್ರ ಮಾರ್ಚ್ 1, 2017 ರ ಚಿತ್ರವಾಗಿದ್ದು, ಟ್ವಿಟ್ಟರ್‌ನಲ್ಲಿ ಸಿಗುತ್ತದೆ. ಗುಜರಾತಿ ಶೀರ್ಷಿಕೆಯೊಂದಿಗೆ ಇರುವ ಈ ಚಿತ್ರದಲ್ಲಿ “ದಕ್ಷಿಣ ಭಾರತದ ಚಿತ್ರದ ಮಾದರಿಯಲ್ಲಿ ವಧುವನ್ನು ಕರೆತರಲು ತಾರಾದ್‌ನ ವರನೊಬ್ಬ 30 ಸ್ಕಾರ್ಪಿಯೋಗಳನ್ನು ಬಳಸಿಕೊಂಡಿದ್ದಾನೆ, ವಾವ್ ಉತ್ತರ ಗುಜರಾತ್ ವಾವ್” ಎಂದು ಬರೆಯಲಾಗಿದೆ.

ಚಿತ್ರ 2

PC; facebook

ಎರಡನೇ ಚಿತ್ರವನ್ನು ಕೂಡ ಗೂಗಲ್‌ನಲ್ಲಿ ಹುಡುಕಾಡಿದಾಗ ಅದು ನಮ್ಮನ್ನು 2016 ರಷ್ಟು ಹಿಂದಕ್ಕೆ ಕರೆದುಕೊಂಡು ಹೋಗುತ್ತದೆ. ಈ ಚಿತ್ರವನ್ನು 2016 ರಲ್ಲಿ ಬಾರ್ಮರ್ ಕಾಂಗ್ರೆಸ್ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಚಿತ್ರ 3

ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಈ ಚಿತ್ರವನ್ನು ಒಳಗೊಂಡ ಹಲವಾರು ವಿಡಿಯೋಗಳು ದೊರಕಿವೆ. ಈ ಚಿತ್ರ ಕರ್ಣಿ ಸೇನೆಯ ಗುಜರಾತ್ ಮುಖ್ಯಸ್ಥ ರಾಜ್ ಸಿಂಗ್ ಶೇಖಾವತ್ ಅವರ ಬೆಂಗಾವಲು ಪಡೆಯದ್ದಾಗಿದೆ.

ವೈರಲ್ ಆದ ಈ ಚಿತ್ರವನ್ನು ಶ್ರೀ ರಾಷ್ಟ್ರೀಯ ರಜಪೂತ ಕರ್ಣಿಸೇನಾ ಫೇಸ್‌ಬುಕ್ ಪುಟದಲ್ಲಿ 22 ಡಿಸೆಂಬರ್ 2019 ರಂದು ಪೋಸ್ಟ್  ಮಾಡಲಾಗಿದೆ. ಜೊತೆಗೆ “ಈ ಚಿತ್ರವನ್ನು ಗುಜರಾತ್‌ನ ಗಾಂಧಿನಗರದಲ್ಲಿ ಕ್ಲಿಕ್ಕಿಸಲಾಗಿದೆ” ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ವಿಡಿಯೋ

ಈ ವೈರಲ್ ಚಿತ್ರಗಳ ಜೊತೆಗೆ, ಕೆಲವು ವೈರಲ್ ಪೋಸ್ಟ್‌ಗಳು ಅದೇ ಸುಳ್ಳುನ್ನು ಹರಡಲು ಹಲವು ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಇನ್ವಿಡ್ ಗೂಗಲ್ ಕ್ರೋಮ್ ವಿಸ್ತರಣೆಯನ್ನು ಬಳಸಿಕೊಂಡು ವೀಡಿಯೊವನ್ನು ಅನೇಕ ಕೀಫ್ರೇಮ್‌ಗಳಾಗಿ ವಿಂಗಡಿಸಿ ನೋಡಿದಾಗ ಇದು ಜಮ್ಮು ಮತ್ತು ಕಾಶ್ಮೀರದ ಚಿತ್ರ ಎಂದು ತಿಳಿಯುತ್ತದೆ.

2018 ರ ಅಕ್ಟೋಬರ್ 25 ರಂದು ಜಮ್ಮುವಿನಲ್ಲಿ ನಡೆಸಲಾದ ಮಹಾರಾಜ ಹರಿಸಿಂಗ್ ಜನ್ಮದಿನದ ಅಂಗವಾಗಿ ನಡೆದ ರ್‍ಯಾಲಿಯ ಚಿತ್ರವಾಗಿದೆ. ಇದನ್ನು ವಿಶಾಲ್ ಸಿಂಗ್ ಎನ್ನುವವರು ತಮ್ಮ ಯೂಟ್ಯೂಬ್ ಅಕೌಂಟ್‌ನಲ್ಲಿ ಶೇರ್ ಮಾಡಿದ್ದಾರೆ.

PC: Youtube

ಒಟ್ಟಿನಲ್ಲಿ ಈ ಎಲ್ಲಾ ವಿಡಿಯೋ ಮತ್ತು ಚಿತ್ರಗಳಿಗೆ ಕರ್ಣಿಸೇನಾ ಹಾಗೂ ಕಂಗನಾ ರಾಣಾವತ್‌ಗೆ ಬೆಂಬಲ ಪ್ರದರ್ಶನ ಎಂಬ ಸುದ್ದಿಗೂ ಯಾವುದೇ ಸಂಬಂಧವಿಲ್ಲ. ವೈರಲ್ ಆದ ಚಿತ್ರಗಳು, ವಿಡಿಯೋಗಳು ಸುಮಾರು ನಾಲ್ಕು ವರ್ಷಗಳ ಹಿಂದಿನದ್ದಾಗಿದೆ.


ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...