Homeಕರ್ನಾಟಕದುಷ್ಟ ಜಿಂದಾಲ್ ಪಾದಕ್ಕೆ ಮತ್ತೆ 3667 ಎಕರೆ ಧಾರೆಯೆರೆಯುತ್ತಿರುವ ಭ್ರಷ್ಟ ಸರ್ಕಾರ.

ದುಷ್ಟ ಜಿಂದಾಲ್ ಪಾದಕ್ಕೆ ಮತ್ತೆ 3667 ಎಕರೆ ಧಾರೆಯೆರೆಯುತ್ತಿರುವ ಭ್ರಷ್ಟ ಸರ್ಕಾರ.

ಬಡವರಿಗೆ ವಸತಿ ವಿಚಾರ ಬಂದ ಕೂಡಲೇ ಎಲ್ಲಿದೆ ಭೂಮಿ? ಎನ್ನುವ ಸರ್ಕಾರ ಈಗ ಜಿಂದಾಲ್‍ನವರಿಗೆ ನೀಡುವಾಗ ಮಾತ್ರ ಎಲ್ಲಿದೆ ಭೂಮಿ ಎನ್ನುವುದಿಲ್ಲ. ಅಲ್ಲಿನ ರೈತರ ವಿರೋಧದ ನಡುವೆಯೂ ಭೂಮಿ ವಶಪಡಿಸಿಕೊಂಡು ಜಿಂದಾಲ್ ಪಾದಕ್ಕೆ ಅರ್ಪಿಸುವ ಗುಲಾಮಗಿರಿ ಕೆಲಸ ಮಾಡುತ್ತಿದ್ದಾರೆ.

- Advertisement -
- Advertisement -

| ಮುತ್ತುರಾಜು |

ಬಳ್ಳಾರಿ ಜಿಲ್ಲೆಯಲ್ಲಿ ಬಲಾಢ್ಯವಾಗಿ ಬೇರೂರಿರುವ ಜಿಂದಾಲ್ ಸ್ಟೀಲ್ ವಕ್ರ್ಸ್ ಕಂಪನಿಯ ಅಕ್ರಮ, ಅನೀತಿಗಳಿಗೆ ಕೊನೆಯಿಲ್ಲದಂತಾಗಿದೆ. ಅಧಿಕಾರ ದುರುಪಯೋಗ ಮತ್ತು ಕಾನೂನು ಬಾಹಿರ ಚಟುವಟಿಕೆಗಳಿಂದಲೇ ಕೊಬ್ಬಿರುವ ಈ ಕಂಪನಿಗೆ ಹೇಳೋರು ಕೇಳೋರು ಇಲ್ಲದ ಕಾರಣ ತನ್ನ ಇನ್ನಿಲ್ಲದ ಕರ್ಮಕಾಂಡಗಳನ್ನು ಅವ್ಯಾವತವಾಗಿ ಮುಂದುವರೆಸಿದೆ. ಅನಿಯಂತ್ರಿತ ಪರಿಸರ ನಾಶ, ಕಾರ್ಮಿಕರಿಗೆ ಕಿರುಕುಳ ಇತ್ಯಾದಿಗಳಿಂದ ಕುಖ್ಯಾತಿಗೆ ಒಳಗಾಗಿದ್ದ ಕಂಪನಿಯ ಪಾದಕ್ಕೆ ಇಂದು ಮತ್ತೆ 3667ಎಕರೆ ಭೂಮಿಯನ್ನು ಅರ್ಪಿಸುವ ಕೆಲಸಕ್ಕೆ ಭ್ರಷ್ಟ ರಾಜ್ಯ ಸರ್ಕಾರ ಮುಂದಾಗಿದೆ. ಅಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಸರ್ಕಾರ ಭೂಮಿ ನೀಡಲು ಮುಂದಾಗಿರುವುದರಿಂದ ಜಿಲ್ಲೆಯ ಜನರ ಆಕ್ರೋಶಕ್ಕೆ ತುತ್ತಾಗಿದೆ.

ಬಳ್ಳಾರಿ-ಹೋಸಪೇಟೆ ಮಧ್ಯದಲ್ಲಿರುವ ತೋರಣಗಲ್ಲು ಎಂಬಲ್ಲಿರುವ ಜೆಎಸ್‍ಡಬ್ಲು ಕಂಪನಿಯು ಭಾರತದಲ್ಲಿ ಉಕ್ಕು ತಯಾರಿಸುವ 2ನೇ ಅತಿದೊಡ್ಡ ಖಾಸಗಿ ಕಂಪನಿ. ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಇದು 1994 ರಲ್ಲಿ ಜಿಂದಾಲ್ ವಿಜಯನಗರ್ ಸ್ಟೀಲ್ ಲಿಮಿಟೆಡ್ ಹೆಸರಿನಲ್ಲಿ ಆರಂಭಗೊಂಡಿದೆ. ನಂತರ 2005 ರಲ್ಲಿ ಜಿಂದಾಲ್ ಐರನ್ ಅಂಡ್ ಸ್ಟೀಲ್ ಕಂಪನಿ ಜೊತೆ ವಿಲೀನವಾಗುವುದರೊಂದಿಗೆ ಹಾಲಿ ಜೆಎಸ್‍ಡಬ್ಲು ಲಿಮಿಟೆಡ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸಜ್ಜನ್ ಜಿಂದಾಲ್

ಕಳ್ಳ ಮಾರ್ಗದಲ್ಲಿ ಆರಂಭ:
ಇದರ ಆರಂಭವೇ ಕಳ್ಳ ಮಾರ್ಗದಿಂದ ಶುರುವಾಗಿದೆ. ಬಳ್ಳಾರಿ ಸ್ಟೀಲ್ಸ್ ಅಂಡ್ ಅಲಾಯ್ಸ್ ಲಿಮಿಟೆಡ್ (ಬಿಎಸ್‍ಎಎಲ್) ಎಂಬ ಖಾಸಗಿ ಕಂಪನಿಗೆ ಹಲವು ವರ್ಷಗಳ ಹಿಂದೆ ಉಕ್ಕು ಕಾರ್ಖಾನೆ ಸ್ಥಾಪನೆಗೆಂದು ಅಂದಿನ ಸರ್ಕಾರ 1000 ಎಕರೆಗೂ ಹೆಚ್ಚು ಭೂಮಿಯನ್ನು ರೈತರಿಂದ ಬಲವಂತವಾಗಿ ಅಗ್ಗದ ಬೆಲೆಯಲ್ಲಿ ಕಸಿದು, ಮಂಜೂರು ಮಾಡಲಾಯಿತು. ಕೆಲಸ ಆರಂಭಿಸದೇ ಆ ಕಂಪನಿ ಅದರ ಮೇಲೆ 200 ಕೋಟಿ ರೂ. ಬ್ಯಾಂಕ್ ಸಾಲ ಎತ್ತಿಕೊಂಡು ನಂತರ ಅದೇ ಭೂಮಿಯನ್ನು ಜಿಂದಾಲ್ ಕಂಪನಿಗೆ ಹಸ್ತಾಂತರಿಸಿತು. ಇದು ನೂರಕ್ಕೆ ನೂರು ಕಾಯ್ದೆಬಾಹಿರ. ಆದರೆ ಯಾರು ಕೇಳುತ್ತಾರೆ? ಕಂಪನಿ ಮಾಲೀಕ ಸಜ್ಜನ್ ಜಿಂದಾಲ್‍ಗಾಗಿ ತನ್ನ ಕಡುವೈರಿ ಎಂದು ಭಾಷಣ ಬಿಗಿಯುವ ಪಾಕಿಸ್ತಾನಕ್ಕೆ ದೇಶದ ಪ್ರಧಾನಿಯೇ ಹೋಗಿ ಬರುತ್ತಿರುವಾಗ ಇದರ ಬಗ್ಗೆ ರಾಜ್ಯ ಸರ್ಕಾರವೆಲ್ಲಿ ತಲೆ ಕೆಡಿಸಿಕೊಳ್ಳುತ್ತದೆ ಹೇಳಿ?

ಈಗ ಜಿಂದಾಲ್ ಇಲ್ಲಿ ಉಕ್ಕು ಘಟಕ ಸ್ಥಾಪಿಸುವ ಬದಲು ಅದನ್ನು ಬ್ಯಾಂಕ್ ಸಾಲ ಎತ್ತುವ ಸಟ್ಟಾಬಾಜಿಗೆ ಬಳಸಲು ಯತ್ನಿಸುತ್ತಿದೆ, ಅದನ್ನು ಕಾಯ್ದೆ ಪ್ರಕಾರ ರೈತರಿಗೆ ಹಿಂದಿರುಗಿಸಬೇಕು ಎಂದು ಬಳ್ಳಾರಿಯ ಹಲವು ಸಂಘಟನೆಗಳು ಹೋರಾಟಕ್ಕಿಳಿದಿವೆ. ಇದಲ್ಲದೆ ಸ್ವತಃ ಜಿಂದಾಲ್‍ಗೇನೇ ಉಕ್ಕು ಕಾರ್ಖಾನೆ ಸ್ಥಾಪಿಸಲು 500 ಎಕರೆ ಸಾಕಾಗಿದ್ದ ಕಡೆ 4000 ಎಕರೆ ಮಂಜೂರು ಮಾಡಿಕೊಡಲಾಗಿದೆ. ಈ ರೀತಿ ಆರಂಭವಾಗಿರುವ ಕಾರ್ಖಾನೆ ನಿಯತ್ತಾಗಿ ಕೆಲಸ ಮಾಡುತ್ತಿದೆಯ ಅಂದರೆ ಅದೂ ಇಲ್ಲ. ಸ್ಥಳೀಯರಿಗೆ ಕೆಲಸ ಕೊಡದೆ ವಂಚಿಸಿರುವುದಲ್ಲದೇ ಇರುವ ಕಾರ್ಮಿಕರನ್ನು ಸಹ ಜೀತದಾಳುಗಳ ರೀತಿ ದುಡಿಸಿಕೊಳ್ಳುತ್ತಿದೆ.

ಕಾರ್ಮಿಕ ವಿರೋಧಿ ಕಂಪನಿ:
ಕಂಪನಿಯು ಹೈದರಾಬಾದ್ ಕರ್ನಾಟಕ ಪ್ರದೇಶವಾದ ಬಳ್ಳಾರಿ ಜಿಲ್ಲೆಯಲ್ಲಿರುವುದರಿಂದ ಈ ವ್ಯಾಪ್ತಿಯ ಕಾರ್ಮಿಕರಿಗೆ ಶೇ.80 ರಷ್ಟನ್ನು ಇನ್ನು ಸಿ ಮತ್ತು ಡಿ ವೃಂದದ ಉದ್ಯೋಗಗಳನ್ನು ಪೂರ್ತಿ ಕನ್ನಡಿಗರಿಗೆ ನೀಡಬೇಕೆಂದು ನಿಯಮ ಹೇಳುತ್ತದೆ. ಅದರೆ ಈಗ ಇಲ್ಲಿ ಕಾರ್ಯನಿರ್ವಹಿಸುವ ಸ್ಥಳೀಯ ಕಾರ್ಮಿಕ ಸಂಖ್ಯೆ ಶೇ.10 ರಷ್ಟು ಮಾತ್ರ. ಇಲ್ಲಿನ ಕಾರ್ಮಿಕರನ್ನು ತೆಗೆದುಕೊಂಡರೆ ತಮ್ಮ ಹಕ್ಕುಗಳಿಗಾಗಿ ಸಂಘಟಿತರಾಗುತ್ತಾರೆ, ನ್ಯಾಯಬದ್ಧ ಸೌಲಭ್ಯಗಳನ್ನು ಕೇಳುತ್ತಾರೆ ಮತ್ತು ತಮ್ಮ ಮನಸ್ಸೊಇಚ್ಛೆ ಬಂದಷ್ಟು ದುಡಿಸಲು ಆಗುವುದಿಲ್ಲ ಎಂಬ ಕುತಂತ್ರದಿಂದ ಹೊರ ರಾಜ್ಯದವರನ್ನೆ ಹೆಚ್ಚಾಗಿ ನೇಮಿಸಿಕೊಳ್ಳಲಾಗುತ್ತಿದೆ. ಎಲ್ಲವೂ ಗುತ್ತಿಗೆ ಕೆಲಸವಾದ್ದರಿಂದ ಕಾರ್ಮಿಕರ ಶ್ರಮವನ್ನು ತಮಗೆ ಬೇಕಾದಷ್ಟು ಹೀರಿಕೊಂಡು 40-45 ವರ್ಷ ದಾಟಿದ ಕಾರ್ಮಿಕರನ್ನು ಕಿತ್ತು ಬಿಸಾಡುವುದು ಇಲ್ಲಿನ ಪದ್ಧತಿ. ಇಂತಹ ಪರಿಸ್ಥಿತಿಯಲ್ಲಿ ಕಾರ್ಮಿಕ ಸಂಘಟನೆಯೊಂದು ಇಲ್ಲಿನ ಕಾರ್ಮಿಕರನ್ನು ಸಂಘಟಿಸಲು ಮುಂದಾದಾಗ ಪರಿಸ್ಥಿತಿ ವಿಕೋಪಕ್ಕೆ ತಲುಪಿ ಕಾರ್ಮಿಕರು ಮತ್ತು ಮಾಲೀಕರ ನಡುವಿನ ಸಂಘರ್ಷ ಆರಂಭವಾಗಿತ್ತು.

ಪರಿಸರ ವಿನಾಶ ಮತ್ತು ಜೆಎಸ್‍ಡಬ್ಲು ಡಾಂಬರ್ ಕಾರ್ಖಾನೆಯ ನಂತರ ಪೇಂಟ್ ಕಾರ್ಖಾನೆ
ಆದರೆ ಇದನ್ನು ಸರಿಪಡಿಸುವ ಗೋಜಿಗೆ ಹೋಗುವ ಬದಲು ಮತ್ತಷ್ಟು ಪರಿಸರ ನಾಶಕ್ಕೆ ಜೆಎಸ್‍ಡಬ್ಲು ಕೈಹಾಕಿತ್ತು. ಅದೇ ಜಿಂದಾಲ್ ಡಾಂಬಾರು ಕಾರ್ಖಾನೆ. ಸ್ಥಳೀಯರ ಸಾಕಷ್ಟು ವಿರೋಧದ ನಡುವೆ ಡಾಂಬಾರು ಕಾರ್ಖಾನೆ ಸ್ಥಾಪಿಸಿದ್ದ ಜಿಂದಾಲ್ ಈಗ ಪೇಂಟ್ ಕಾರ್ಖಾನೆ ಸ್ಥಾಪಿಸಲೆಂದು ಮತ್ತೆ 3667 ಎಕರೆ ಜಾಗಕ್ಕೆ ಕನ್ನ ಹಾಕಿದೆ. ತೋರಣಗಲ್ಲು ಗ್ರಾಮದ ಸರ್ವೇ ನಂಬರ್ 504, 505, 506, 515, 416 ಮತ್ತು ಮುಸಿನಾಯಕನಹಳ್ಳಿಯ ಸರ್ವೇ ನಂಬರ್ 17, 17, 19 ಮತ್ತು 21 ರಲ್ಲಿ ಹಾಲಿ ಪೇಂಟ್ ಕಂಪನಿ ಆರಂಭಿಸಲು ತಯಾರಿ ನಡೆಸಿದೆ. ವಾರ್ಷಿಕ 2 ಲಕ್ಷ ಲೀಟರ್ ನೀರು ಆಧಾರಿತ 40 ಸಾವಿರ ಟಿಆರ್‍ಪಿಎ ನೀರು ಆಧಾರಿತ ಎಮಲ್ಷನ್ ಕೋಪಾಲಿಮರ್ ಉತ್ಪಾದನೆ ಘಟಕ ಇದಾಗಿದೆ. ಪೇಂಟ್ ತಯಾರಿಕೆಯಲ್ಲಿ ಸಹಜವಾಗಿ ರಸಾಯನಿಕ ವಸ್ತುಗಳನ್ನು ಬಳಸುವುದರಿಂದ ಸುತ್ತಮುತ್ತಲಿನ ಪರಿಸರ ಮತ್ತಷ್ಟು ಹದಗೆಡಲಿದೆ ಎಂದು ಸ್ಥಳೀಯ ಜನರು ಆತಂಕ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಪತ್ರಿಭಟನೆ

ಈ ಕುರಿತು ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ಸಿಪಿಐ-ಎಂ, ರೈತ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಈ ಯೋಜನೆಗೆ ತೀವ್ರ ವಿರೋಧ ತೋರಿದ್ದಾರೆ. ಇದೇ ಜಿಂದಾಲ್ ಎಂಬ ಮಹಾಮಾರಿ ಕಂಪನಿಯಿಂದ ಸಾಕಷ್ಟು ಪರಿಸರ ಈಗಾಗಲೇ ಹಾಳಾಗಿದ್ದು ಹಲವಾರು ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಮುಂದಾದರು ಪರಿಸರಕ್ಕೆ ಅಪಾಯ ಒಡ್ಡುವ ಕಂಪನಿಗಳು ಬೇಡ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಇಂತಹ ವಿರೋಧವನ್ನು ಮೊದಲೇ ನಿರೀಕ್ಷಿಸಿದ್ದ ಕಂಪನಿಯು ತನ್ನ ನವರಂಗಿ ಆಟವನ್ನು ಇಲ್ಲಿಯೂ ಪ್ರದರ್ಶಿಸಿದೆ. ಮೊದಲೇ ಕೆಲವು ಗ್ರಾಮಸ್ಥರನ್ನು ಬುಕ್ ಮಾಡಿಕೊಂಡು ಹಣದ ಆಮಿಷ ತೋರಿಸಿ ಸಭೆಯಲ್ಲಿ ಕಂಪನಿ ಪರ ವಾದಿಸುವಂತೆ ಪುಸಲಾಯಿಸಿದ್ದಾರೆ. ಅಂತೆಯೇ ಸಭೆಯಲ್ಲಿ ಕೆಲವರು ಮಾತನಾಡಿ, ಕಾರ್ಖಾನೆಗಳ ಸ್ಥಾಪನೆಯಿಂದ ಈ ಭಾಗದ ನಿರುದ್ಯೋಗಿಗಳಿಗೆ ಕೆಲಸ ಸಿಗುವುದು ಅಲ್ಲದೇ ಕಂಪನಿಗಳು ಹೆಚ್ಚು ತೆರಿಗೆ ಕಟ್ಟುವುದರಿಂದ ಗ್ರಾಮದ ಅಭಿವೃದ್ದಿಯೂ ಸಹ ಆಗಲಿದೆ ಎಂದು ಕಂಪನಿಯವರು ಹೇಳಿದಂತೆ ಉರುಹೊಡೆದಿದ್ದನ್ನು ಸಭೆಯಲ್ಲಿ ಒಂದೇ ಸಮನೆ ಉಸುರಿದ್ದಾರೆ. ಅಲ್ಲಿಗೆ ಎಲ್ಲಾ ಮುಗಿಸಿ ಈಗ ಪೇಂಟ್ ಕಾರ್ಖಾನೆ ಕೂಡ ತಯಾರಾಗಿದೆ. ಇನ್ನು ಕಾರ್ಯಾರಂಭ ಮಾಡಿಲ್ಲ ಅಷ್ಟೇ. ಒಟ್ಟಿನಲ್ಲಿ ಅಲ್ಲಿನ ರೈತರು ಮತ್ತು ಸ್ಥಳೀಯರು ಈ ಕಾರ್ಖಾನೆಯ ವಿರುದ್ಧ ಕಳೆದ 10 ವರ್ಷಗಳಿಂದ ಬಂದರೂ ಇಲ್ಲಿನ ಎಂಪಿ ಎಮ್ಮೆಲ್ಲೆಗಳು ಜಿಂದಾಲ್‍ಗೆ ಬುಕ್ ಆಗಿರುವುದರಿಂದ ಯಾವುದೇ ಪ್ರಯೋಜವಾಗಿಲ್ಲ.

ಬಡವರಿಗಿಲ್ಲದ ಭೂಮಿ ಜಿಂದಾಲ್ ಹೇಗೆ?
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ಸರ್ಕಾರಕ್ಕೆ ಬಡವರಿಗೆ ಭೂಮಿ ಮತ್ತು ವಸತಿ ನೀಡಬೇಕೆಂದು ಹೋರಾಡುತ್ತಾ ಬಂದಿದೆ. ಸಿದ್ದರಾಮನ್ಯನವರ ಸರ್ಕಾರ ಇದ್ದಾಗಿನಿಂದಲೂ ಕಾಗೋಡು ತಿಮ್ಮಪ್ಪನವರು ಸಚಿವರಾಗಿದ್ದಾಗಿನಿಂದಲೂ ಹೋರಾಟ ನಡೆಸಿದೆ. ಸ್ವತಂತ್ರ ಸೇನಾನಿ ದೊರೆಸ್ವಾಮಿಯವರು ಇದರ ನೇತೃತ್ವ ವಹಿಸಿದ್ದಾರೆ. ಇವರ ಹೋರಾಟದ ಫಲವಾಗಿ ರಾಜ್ಯಮಟ್ಟದ ಸರ್ಕಾರ ಮತ್ತು ಹೋರಾಟಗಾರರನ್ನೊಳಗೊಂಡ ಸಮಿತಿಯು ರಚನೆಯಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಆ ಸಭೆಗಳಲ್ಲಿ ಬಡವರಿಗೆ ವಸತಿ ವಿಚಾರ ಬಂದ ಕೂಡಲೇ ಎಲ್ಲಿದೆ ಭೂಮಿ? ಎನ್ನುವ ಸರ್ಕಾರ ಈಗ ಜಿಂದಾಲ್‍ನವರಿಗೆ ನೀಡುವಾಗ ಮಾತ್ರ ಎಲ್ಲಿದೆ ಭೂಮಿ ಎನ್ನುವುದಿಲ್ಲ. ಅಲ್ಲಿನ ರೈತರ ವಿರೋಧದ ನಡುವೆಯೂ ಭೂಮಿ ವಶಪಡಿಸಿಕೊಂಡು ಜಿಂದಾಲ್ ಪಾದಕ್ಕೆ ಅರ್ಪಿಸುವ ಗುಲಾಮಗಿರಿ ಕೆಲಸ ಮಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...