Homeಕರ್ನಾಟಕದುಷ್ಟ ಜಿಂದಾಲ್ ಪಾದಕ್ಕೆ ಮತ್ತೆ 3667 ಎಕರೆ ಧಾರೆಯೆರೆಯುತ್ತಿರುವ ಭ್ರಷ್ಟ ಸರ್ಕಾರ.

ದುಷ್ಟ ಜಿಂದಾಲ್ ಪಾದಕ್ಕೆ ಮತ್ತೆ 3667 ಎಕರೆ ಧಾರೆಯೆರೆಯುತ್ತಿರುವ ಭ್ರಷ್ಟ ಸರ್ಕಾರ.

ಬಡವರಿಗೆ ವಸತಿ ವಿಚಾರ ಬಂದ ಕೂಡಲೇ ಎಲ್ಲಿದೆ ಭೂಮಿ? ಎನ್ನುವ ಸರ್ಕಾರ ಈಗ ಜಿಂದಾಲ್‍ನವರಿಗೆ ನೀಡುವಾಗ ಮಾತ್ರ ಎಲ್ಲಿದೆ ಭೂಮಿ ಎನ್ನುವುದಿಲ್ಲ. ಅಲ್ಲಿನ ರೈತರ ವಿರೋಧದ ನಡುವೆಯೂ ಭೂಮಿ ವಶಪಡಿಸಿಕೊಂಡು ಜಿಂದಾಲ್ ಪಾದಕ್ಕೆ ಅರ್ಪಿಸುವ ಗುಲಾಮಗಿರಿ ಕೆಲಸ ಮಾಡುತ್ತಿದ್ದಾರೆ.

- Advertisement -
- Advertisement -

| ಮುತ್ತುರಾಜು |

ಬಳ್ಳಾರಿ ಜಿಲ್ಲೆಯಲ್ಲಿ ಬಲಾಢ್ಯವಾಗಿ ಬೇರೂರಿರುವ ಜಿಂದಾಲ್ ಸ್ಟೀಲ್ ವಕ್ರ್ಸ್ ಕಂಪನಿಯ ಅಕ್ರಮ, ಅನೀತಿಗಳಿಗೆ ಕೊನೆಯಿಲ್ಲದಂತಾಗಿದೆ. ಅಧಿಕಾರ ದುರುಪಯೋಗ ಮತ್ತು ಕಾನೂನು ಬಾಹಿರ ಚಟುವಟಿಕೆಗಳಿಂದಲೇ ಕೊಬ್ಬಿರುವ ಈ ಕಂಪನಿಗೆ ಹೇಳೋರು ಕೇಳೋರು ಇಲ್ಲದ ಕಾರಣ ತನ್ನ ಇನ್ನಿಲ್ಲದ ಕರ್ಮಕಾಂಡಗಳನ್ನು ಅವ್ಯಾವತವಾಗಿ ಮುಂದುವರೆಸಿದೆ. ಅನಿಯಂತ್ರಿತ ಪರಿಸರ ನಾಶ, ಕಾರ್ಮಿಕರಿಗೆ ಕಿರುಕುಳ ಇತ್ಯಾದಿಗಳಿಂದ ಕುಖ್ಯಾತಿಗೆ ಒಳಗಾಗಿದ್ದ ಕಂಪನಿಯ ಪಾದಕ್ಕೆ ಇಂದು ಮತ್ತೆ 3667ಎಕರೆ ಭೂಮಿಯನ್ನು ಅರ್ಪಿಸುವ ಕೆಲಸಕ್ಕೆ ಭ್ರಷ್ಟ ರಾಜ್ಯ ಸರ್ಕಾರ ಮುಂದಾಗಿದೆ. ಅಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಸರ್ಕಾರ ಭೂಮಿ ನೀಡಲು ಮುಂದಾಗಿರುವುದರಿಂದ ಜಿಲ್ಲೆಯ ಜನರ ಆಕ್ರೋಶಕ್ಕೆ ತುತ್ತಾಗಿದೆ.

ಬಳ್ಳಾರಿ-ಹೋಸಪೇಟೆ ಮಧ್ಯದಲ್ಲಿರುವ ತೋರಣಗಲ್ಲು ಎಂಬಲ್ಲಿರುವ ಜೆಎಸ್‍ಡಬ್ಲು ಕಂಪನಿಯು ಭಾರತದಲ್ಲಿ ಉಕ್ಕು ತಯಾರಿಸುವ 2ನೇ ಅತಿದೊಡ್ಡ ಖಾಸಗಿ ಕಂಪನಿ. ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಇದು 1994 ರಲ್ಲಿ ಜಿಂದಾಲ್ ವಿಜಯನಗರ್ ಸ್ಟೀಲ್ ಲಿಮಿಟೆಡ್ ಹೆಸರಿನಲ್ಲಿ ಆರಂಭಗೊಂಡಿದೆ. ನಂತರ 2005 ರಲ್ಲಿ ಜಿಂದಾಲ್ ಐರನ್ ಅಂಡ್ ಸ್ಟೀಲ್ ಕಂಪನಿ ಜೊತೆ ವಿಲೀನವಾಗುವುದರೊಂದಿಗೆ ಹಾಲಿ ಜೆಎಸ್‍ಡಬ್ಲು ಲಿಮಿಟೆಡ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸಜ್ಜನ್ ಜಿಂದಾಲ್

ಕಳ್ಳ ಮಾರ್ಗದಲ್ಲಿ ಆರಂಭ:
ಇದರ ಆರಂಭವೇ ಕಳ್ಳ ಮಾರ್ಗದಿಂದ ಶುರುವಾಗಿದೆ. ಬಳ್ಳಾರಿ ಸ್ಟೀಲ್ಸ್ ಅಂಡ್ ಅಲಾಯ್ಸ್ ಲಿಮಿಟೆಡ್ (ಬಿಎಸ್‍ಎಎಲ್) ಎಂಬ ಖಾಸಗಿ ಕಂಪನಿಗೆ ಹಲವು ವರ್ಷಗಳ ಹಿಂದೆ ಉಕ್ಕು ಕಾರ್ಖಾನೆ ಸ್ಥಾಪನೆಗೆಂದು ಅಂದಿನ ಸರ್ಕಾರ 1000 ಎಕರೆಗೂ ಹೆಚ್ಚು ಭೂಮಿಯನ್ನು ರೈತರಿಂದ ಬಲವಂತವಾಗಿ ಅಗ್ಗದ ಬೆಲೆಯಲ್ಲಿ ಕಸಿದು, ಮಂಜೂರು ಮಾಡಲಾಯಿತು. ಕೆಲಸ ಆರಂಭಿಸದೇ ಆ ಕಂಪನಿ ಅದರ ಮೇಲೆ 200 ಕೋಟಿ ರೂ. ಬ್ಯಾಂಕ್ ಸಾಲ ಎತ್ತಿಕೊಂಡು ನಂತರ ಅದೇ ಭೂಮಿಯನ್ನು ಜಿಂದಾಲ್ ಕಂಪನಿಗೆ ಹಸ್ತಾಂತರಿಸಿತು. ಇದು ನೂರಕ್ಕೆ ನೂರು ಕಾಯ್ದೆಬಾಹಿರ. ಆದರೆ ಯಾರು ಕೇಳುತ್ತಾರೆ? ಕಂಪನಿ ಮಾಲೀಕ ಸಜ್ಜನ್ ಜಿಂದಾಲ್‍ಗಾಗಿ ತನ್ನ ಕಡುವೈರಿ ಎಂದು ಭಾಷಣ ಬಿಗಿಯುವ ಪಾಕಿಸ್ತಾನಕ್ಕೆ ದೇಶದ ಪ್ರಧಾನಿಯೇ ಹೋಗಿ ಬರುತ್ತಿರುವಾಗ ಇದರ ಬಗ್ಗೆ ರಾಜ್ಯ ಸರ್ಕಾರವೆಲ್ಲಿ ತಲೆ ಕೆಡಿಸಿಕೊಳ್ಳುತ್ತದೆ ಹೇಳಿ?

ಈಗ ಜಿಂದಾಲ್ ಇಲ್ಲಿ ಉಕ್ಕು ಘಟಕ ಸ್ಥಾಪಿಸುವ ಬದಲು ಅದನ್ನು ಬ್ಯಾಂಕ್ ಸಾಲ ಎತ್ತುವ ಸಟ್ಟಾಬಾಜಿಗೆ ಬಳಸಲು ಯತ್ನಿಸುತ್ತಿದೆ, ಅದನ್ನು ಕಾಯ್ದೆ ಪ್ರಕಾರ ರೈತರಿಗೆ ಹಿಂದಿರುಗಿಸಬೇಕು ಎಂದು ಬಳ್ಳಾರಿಯ ಹಲವು ಸಂಘಟನೆಗಳು ಹೋರಾಟಕ್ಕಿಳಿದಿವೆ. ಇದಲ್ಲದೆ ಸ್ವತಃ ಜಿಂದಾಲ್‍ಗೇನೇ ಉಕ್ಕು ಕಾರ್ಖಾನೆ ಸ್ಥಾಪಿಸಲು 500 ಎಕರೆ ಸಾಕಾಗಿದ್ದ ಕಡೆ 4000 ಎಕರೆ ಮಂಜೂರು ಮಾಡಿಕೊಡಲಾಗಿದೆ. ಈ ರೀತಿ ಆರಂಭವಾಗಿರುವ ಕಾರ್ಖಾನೆ ನಿಯತ್ತಾಗಿ ಕೆಲಸ ಮಾಡುತ್ತಿದೆಯ ಅಂದರೆ ಅದೂ ಇಲ್ಲ. ಸ್ಥಳೀಯರಿಗೆ ಕೆಲಸ ಕೊಡದೆ ವಂಚಿಸಿರುವುದಲ್ಲದೇ ಇರುವ ಕಾರ್ಮಿಕರನ್ನು ಸಹ ಜೀತದಾಳುಗಳ ರೀತಿ ದುಡಿಸಿಕೊಳ್ಳುತ್ತಿದೆ.

ಕಾರ್ಮಿಕ ವಿರೋಧಿ ಕಂಪನಿ:
ಕಂಪನಿಯು ಹೈದರಾಬಾದ್ ಕರ್ನಾಟಕ ಪ್ರದೇಶವಾದ ಬಳ್ಳಾರಿ ಜಿಲ್ಲೆಯಲ್ಲಿರುವುದರಿಂದ ಈ ವ್ಯಾಪ್ತಿಯ ಕಾರ್ಮಿಕರಿಗೆ ಶೇ.80 ರಷ್ಟನ್ನು ಇನ್ನು ಸಿ ಮತ್ತು ಡಿ ವೃಂದದ ಉದ್ಯೋಗಗಳನ್ನು ಪೂರ್ತಿ ಕನ್ನಡಿಗರಿಗೆ ನೀಡಬೇಕೆಂದು ನಿಯಮ ಹೇಳುತ್ತದೆ. ಅದರೆ ಈಗ ಇಲ್ಲಿ ಕಾರ್ಯನಿರ್ವಹಿಸುವ ಸ್ಥಳೀಯ ಕಾರ್ಮಿಕ ಸಂಖ್ಯೆ ಶೇ.10 ರಷ್ಟು ಮಾತ್ರ. ಇಲ್ಲಿನ ಕಾರ್ಮಿಕರನ್ನು ತೆಗೆದುಕೊಂಡರೆ ತಮ್ಮ ಹಕ್ಕುಗಳಿಗಾಗಿ ಸಂಘಟಿತರಾಗುತ್ತಾರೆ, ನ್ಯಾಯಬದ್ಧ ಸೌಲಭ್ಯಗಳನ್ನು ಕೇಳುತ್ತಾರೆ ಮತ್ತು ತಮ್ಮ ಮನಸ್ಸೊಇಚ್ಛೆ ಬಂದಷ್ಟು ದುಡಿಸಲು ಆಗುವುದಿಲ್ಲ ಎಂಬ ಕುತಂತ್ರದಿಂದ ಹೊರ ರಾಜ್ಯದವರನ್ನೆ ಹೆಚ್ಚಾಗಿ ನೇಮಿಸಿಕೊಳ್ಳಲಾಗುತ್ತಿದೆ. ಎಲ್ಲವೂ ಗುತ್ತಿಗೆ ಕೆಲಸವಾದ್ದರಿಂದ ಕಾರ್ಮಿಕರ ಶ್ರಮವನ್ನು ತಮಗೆ ಬೇಕಾದಷ್ಟು ಹೀರಿಕೊಂಡು 40-45 ವರ್ಷ ದಾಟಿದ ಕಾರ್ಮಿಕರನ್ನು ಕಿತ್ತು ಬಿಸಾಡುವುದು ಇಲ್ಲಿನ ಪದ್ಧತಿ. ಇಂತಹ ಪರಿಸ್ಥಿತಿಯಲ್ಲಿ ಕಾರ್ಮಿಕ ಸಂಘಟನೆಯೊಂದು ಇಲ್ಲಿನ ಕಾರ್ಮಿಕರನ್ನು ಸಂಘಟಿಸಲು ಮುಂದಾದಾಗ ಪರಿಸ್ಥಿತಿ ವಿಕೋಪಕ್ಕೆ ತಲುಪಿ ಕಾರ್ಮಿಕರು ಮತ್ತು ಮಾಲೀಕರ ನಡುವಿನ ಸಂಘರ್ಷ ಆರಂಭವಾಗಿತ್ತು.

ಪರಿಸರ ವಿನಾಶ ಮತ್ತು ಜೆಎಸ್‍ಡಬ್ಲು ಡಾಂಬರ್ ಕಾರ್ಖಾನೆಯ ನಂತರ ಪೇಂಟ್ ಕಾರ್ಖಾನೆ
ಆದರೆ ಇದನ್ನು ಸರಿಪಡಿಸುವ ಗೋಜಿಗೆ ಹೋಗುವ ಬದಲು ಮತ್ತಷ್ಟು ಪರಿಸರ ನಾಶಕ್ಕೆ ಜೆಎಸ್‍ಡಬ್ಲು ಕೈಹಾಕಿತ್ತು. ಅದೇ ಜಿಂದಾಲ್ ಡಾಂಬಾರು ಕಾರ್ಖಾನೆ. ಸ್ಥಳೀಯರ ಸಾಕಷ್ಟು ವಿರೋಧದ ನಡುವೆ ಡಾಂಬಾರು ಕಾರ್ಖಾನೆ ಸ್ಥಾಪಿಸಿದ್ದ ಜಿಂದಾಲ್ ಈಗ ಪೇಂಟ್ ಕಾರ್ಖಾನೆ ಸ್ಥಾಪಿಸಲೆಂದು ಮತ್ತೆ 3667 ಎಕರೆ ಜಾಗಕ್ಕೆ ಕನ್ನ ಹಾಕಿದೆ. ತೋರಣಗಲ್ಲು ಗ್ರಾಮದ ಸರ್ವೇ ನಂಬರ್ 504, 505, 506, 515, 416 ಮತ್ತು ಮುಸಿನಾಯಕನಹಳ್ಳಿಯ ಸರ್ವೇ ನಂಬರ್ 17, 17, 19 ಮತ್ತು 21 ರಲ್ಲಿ ಹಾಲಿ ಪೇಂಟ್ ಕಂಪನಿ ಆರಂಭಿಸಲು ತಯಾರಿ ನಡೆಸಿದೆ. ವಾರ್ಷಿಕ 2 ಲಕ್ಷ ಲೀಟರ್ ನೀರು ಆಧಾರಿತ 40 ಸಾವಿರ ಟಿಆರ್‍ಪಿಎ ನೀರು ಆಧಾರಿತ ಎಮಲ್ಷನ್ ಕೋಪಾಲಿಮರ್ ಉತ್ಪಾದನೆ ಘಟಕ ಇದಾಗಿದೆ. ಪೇಂಟ್ ತಯಾರಿಕೆಯಲ್ಲಿ ಸಹಜವಾಗಿ ರಸಾಯನಿಕ ವಸ್ತುಗಳನ್ನು ಬಳಸುವುದರಿಂದ ಸುತ್ತಮುತ್ತಲಿನ ಪರಿಸರ ಮತ್ತಷ್ಟು ಹದಗೆಡಲಿದೆ ಎಂದು ಸ್ಥಳೀಯ ಜನರು ಆತಂಕ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಪತ್ರಿಭಟನೆ

ಈ ಕುರಿತು ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ಸಿಪಿಐ-ಎಂ, ರೈತ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಈ ಯೋಜನೆಗೆ ತೀವ್ರ ವಿರೋಧ ತೋರಿದ್ದಾರೆ. ಇದೇ ಜಿಂದಾಲ್ ಎಂಬ ಮಹಾಮಾರಿ ಕಂಪನಿಯಿಂದ ಸಾಕಷ್ಟು ಪರಿಸರ ಈಗಾಗಲೇ ಹಾಳಾಗಿದ್ದು ಹಲವಾರು ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಮುಂದಾದರು ಪರಿಸರಕ್ಕೆ ಅಪಾಯ ಒಡ್ಡುವ ಕಂಪನಿಗಳು ಬೇಡ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಇಂತಹ ವಿರೋಧವನ್ನು ಮೊದಲೇ ನಿರೀಕ್ಷಿಸಿದ್ದ ಕಂಪನಿಯು ತನ್ನ ನವರಂಗಿ ಆಟವನ್ನು ಇಲ್ಲಿಯೂ ಪ್ರದರ್ಶಿಸಿದೆ. ಮೊದಲೇ ಕೆಲವು ಗ್ರಾಮಸ್ಥರನ್ನು ಬುಕ್ ಮಾಡಿಕೊಂಡು ಹಣದ ಆಮಿಷ ತೋರಿಸಿ ಸಭೆಯಲ್ಲಿ ಕಂಪನಿ ಪರ ವಾದಿಸುವಂತೆ ಪುಸಲಾಯಿಸಿದ್ದಾರೆ. ಅಂತೆಯೇ ಸಭೆಯಲ್ಲಿ ಕೆಲವರು ಮಾತನಾಡಿ, ಕಾರ್ಖಾನೆಗಳ ಸ್ಥಾಪನೆಯಿಂದ ಈ ಭಾಗದ ನಿರುದ್ಯೋಗಿಗಳಿಗೆ ಕೆಲಸ ಸಿಗುವುದು ಅಲ್ಲದೇ ಕಂಪನಿಗಳು ಹೆಚ್ಚು ತೆರಿಗೆ ಕಟ್ಟುವುದರಿಂದ ಗ್ರಾಮದ ಅಭಿವೃದ್ದಿಯೂ ಸಹ ಆಗಲಿದೆ ಎಂದು ಕಂಪನಿಯವರು ಹೇಳಿದಂತೆ ಉರುಹೊಡೆದಿದ್ದನ್ನು ಸಭೆಯಲ್ಲಿ ಒಂದೇ ಸಮನೆ ಉಸುರಿದ್ದಾರೆ. ಅಲ್ಲಿಗೆ ಎಲ್ಲಾ ಮುಗಿಸಿ ಈಗ ಪೇಂಟ್ ಕಾರ್ಖಾನೆ ಕೂಡ ತಯಾರಾಗಿದೆ. ಇನ್ನು ಕಾರ್ಯಾರಂಭ ಮಾಡಿಲ್ಲ ಅಷ್ಟೇ. ಒಟ್ಟಿನಲ್ಲಿ ಅಲ್ಲಿನ ರೈತರು ಮತ್ತು ಸ್ಥಳೀಯರು ಈ ಕಾರ್ಖಾನೆಯ ವಿರುದ್ಧ ಕಳೆದ 10 ವರ್ಷಗಳಿಂದ ಬಂದರೂ ಇಲ್ಲಿನ ಎಂಪಿ ಎಮ್ಮೆಲ್ಲೆಗಳು ಜಿಂದಾಲ್‍ಗೆ ಬುಕ್ ಆಗಿರುವುದರಿಂದ ಯಾವುದೇ ಪ್ರಯೋಜವಾಗಿಲ್ಲ.

ಬಡವರಿಗಿಲ್ಲದ ಭೂಮಿ ಜಿಂದಾಲ್ ಹೇಗೆ?
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ಸರ್ಕಾರಕ್ಕೆ ಬಡವರಿಗೆ ಭೂಮಿ ಮತ್ತು ವಸತಿ ನೀಡಬೇಕೆಂದು ಹೋರಾಡುತ್ತಾ ಬಂದಿದೆ. ಸಿದ್ದರಾಮನ್ಯನವರ ಸರ್ಕಾರ ಇದ್ದಾಗಿನಿಂದಲೂ ಕಾಗೋಡು ತಿಮ್ಮಪ್ಪನವರು ಸಚಿವರಾಗಿದ್ದಾಗಿನಿಂದಲೂ ಹೋರಾಟ ನಡೆಸಿದೆ. ಸ್ವತಂತ್ರ ಸೇನಾನಿ ದೊರೆಸ್ವಾಮಿಯವರು ಇದರ ನೇತೃತ್ವ ವಹಿಸಿದ್ದಾರೆ. ಇವರ ಹೋರಾಟದ ಫಲವಾಗಿ ರಾಜ್ಯಮಟ್ಟದ ಸರ್ಕಾರ ಮತ್ತು ಹೋರಾಟಗಾರರನ್ನೊಳಗೊಂಡ ಸಮಿತಿಯು ರಚನೆಯಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಆ ಸಭೆಗಳಲ್ಲಿ ಬಡವರಿಗೆ ವಸತಿ ವಿಚಾರ ಬಂದ ಕೂಡಲೇ ಎಲ್ಲಿದೆ ಭೂಮಿ? ಎನ್ನುವ ಸರ್ಕಾರ ಈಗ ಜಿಂದಾಲ್‍ನವರಿಗೆ ನೀಡುವಾಗ ಮಾತ್ರ ಎಲ್ಲಿದೆ ಭೂಮಿ ಎನ್ನುವುದಿಲ್ಲ. ಅಲ್ಲಿನ ರೈತರ ವಿರೋಧದ ನಡುವೆಯೂ ಭೂಮಿ ವಶಪಡಿಸಿಕೊಂಡು ಜಿಂದಾಲ್ ಪಾದಕ್ಕೆ ಅರ್ಪಿಸುವ ಗುಲಾಮಗಿರಿ ಕೆಲಸ ಮಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...