Homeಕರ್ನಾಟಕಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು – ‘ಉದ್ಯೋಗಕ್ಕಾಗಿ ಯುವಜನರು’ ಏನು ಹೇಳುತ್ತಾರೆ?

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು – ‘ಉದ್ಯೋಗಕ್ಕಾಗಿ ಯುವಜನರು’ ಏನು ಹೇಳುತ್ತಾರೆ?

- Advertisement -
- Advertisement -

ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗಾಗಿ ಎಂದು ಟ್ವಿಟ್ಟರ್ ಟ್ರೆಂಡಿಂಗ್ಗೆ ಕರೆ ಎನ್ನುವ ಈ ಸಂದೇಶಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tweetನ ಲಿಂಕ್:

ಹಲವು ಕನ್ನಡ ಹೋರಾಟಗಾರರು ಈ ಒಂದು ಪ್ರಚಾರಾಂದೋಲನಕ್ಕೆ ಕರೆ ಕೊಟ್ಟಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಕಾರ್ಯಕರ್ತರನ್ನು ನಾನುಗೌರಿ.ಕಾಂ ಮಾತಾಡಿಸಿತು. ಅವರೇನು ಹೇಳುತ್ತಾರೆ ಬನ್ನಿ ನೋಡೋಣ.

‘ನಮ್ಮ ದೇಶ ಮಾತ್ರವಲ್ಲದೇ ಇಡೀ ಪ್ರಪಂಚಾದ್ಯಂತ ಇಂದು ನಿರುದ್ಯೋಗ ದೊಡ್ಡ ಮಟ್ಟದಲ್ಲಿ ಕಾಡುತ್ತಿದೆ. ಇಂತಹಸಂದರ್ಭದಲ್ಲಿ ದೇಶಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ನಿರುದ್ಯೋಗದ ಪ್ರಮಾಣ ಕಡಿಮೆಯೇ ಇದೆ. ಆದರೆಕರ್ನಾಟಕದಲ್ಲಿರುವ ಬಹುಪಾಲು ಉದ್ಯೋಗಗಳು ಅಭದ್ರವಾದವುಗಳಾಗಿವೆ. ಯಾವುದೇ ಸೌಲಭ್ಯಗಳಿಲ್ಲದೆ, ಕಡಿಮೆಸಂಬಳಕ್ಕೆ ದುಡಿಸಿಕೊಳ್ಳುವುದಲ್ಲದೇ ಇದರ ವಿರುದ್ಧ ದನಿಯೆತ್ತಿದ್ದರೆ ಅವರು ಕೆಲಸ ಕಳೆದುಕೊಳ್ಳಬೇಕಾದ ಅತಂತ್ರಸ್ಥಿತಿಯಲ್ಲಿದ್ದಾರೆ.’ ಎಂದು ಮಾತು ಶುರು ಮಾಡಿದ ಉದ್ಯೋಗಕ್ಕಾಗಿ ಯುವಜನರು ಸಂಚಾಲಕರಾದ ಸರೋವರ್ ಬೆಂಕಿಕೆರೆ ಅದನ್ನು ವಿಸ್ತರಿಸಿದರು.

‘ಇಂತಹ ಸಂದರ್ಭದಲ್ಲಿಯೇ ಕರ್ನಾಟಕಕ್ಕೇ ಅದರಲ್ಲೂ ಬೆಂಗಳೂರಿಗೆ ಹೊರಗಿನಿಂದ ಉದ್ಯೋಗ ಅರಸಿ ಬರುತ್ತಿರುವವಸಂಖ್ಯೆ ಬಹಳ ಹೆಚ್ಚಾಗಿದೆ. ಮುಖ್ಯವಾಗಿ ಉತ್ತರಪ್ರದೇಶ, ಬಿಹಾರ, ಗುಜರಾತ್ ಸೇರಿದಂತೆ ಉತ್ತರ ಭಾರತದ ಜನರುಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರಿನತ್ತ ವಲಸೆ ಬರುತ್ತಿದ್ದಾರೆ. ಉದ್ಯೋಗ ಹುಡುಕುವವರ ಸಂಖ್ಯೆ ಹೆಚ್ಚಾದಷ್ಟು ಉದ್ಯೋಗಭದ್ರತೆ ಕಡಿಮೆಯಾಗುತ್ತಿದೆ.’

‘ಕಡಿಮೆ ಸಂಬಳಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವುದರಿಂದ ಕಂಪನಿಗಳು ಹೆಚ್ಚು ಲಾಭ ಮಾಡಲುಸಾಧ್ಯವಾಗುವುದಲ್ಲದೇ ಅವರು ಸಂಘ ಕಟ್ಟಿಕೊಂಡು ಹಕ್ಕು ಕೇಳುವಂತಿಲ್ಲ. ಒಂದು ವೇಳೆ ಯಾರಾದರೂ ನೌಕರರುಪ್ರತಿಭಟಿಸಲು ಮುಂದಾದರೆ ಅವರನ್ನು ಸುಲಭವಾಗಿ ಕೆಲಸದಿಂದ ವಜಾ ಮಾಡಬಹುದು. ಏಕೆಂದರೆ ಇನ್ನೂ ಕಡಿಮೆಸಂಬಳ ಕೊಟ್ಟರೂ ಸಹ ಕೆಲಸಕ್ಕೆ ಸೇರಲು ಹೊರಗಡೆ ದೊಡ್ಡ ದಂಡೇ ಕಾಯುತ್ತಿದೆಯಲ್ಲ?’

ಆದರೆ ‘ಉತ್ತರ ಭಾರತದ ಈ ಜನರು ವಲಸೆಯಿಂದ ಅವರಿಗೂ ನಮಗೂ ಇಬ್ಬರಿಗೂ ಅಪಾಯಗಳಿವೆ’ ಎನ್ನುತ್ತಾರೆ ಉದ್ಯೋಗಕ್ಕಾಗಿ ಯುವಜನರು ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಾಟ್ಟ. ‘ಬಹಳಷ್ಟು ಕಂಪನಿಗಳು ಬೇರೆರಾಜ್ಯದ ಜನರಿಗೆ ಮೊದಲ ಆದ್ಯತೆ ನೀಡುತ್ತಾರೆ. ಏಕೆಂದರೆ ಅವರು ಪರಕೀಯರಾದ್ದರಿಂದ ಒಗ್ಗಟ್ಟು ಇರುವುದಿಲ್ಲ, ಸಂಘಕಟ್ಟುವುದಿಲ್ಲ ಎಂಬುದಾಗಿದೆ. ಇದರಿಂದ ಅವರ ಕಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳುವುದಲ್ಲದೇ ಕಡಿಮೆ ಸಂಬಳಕ್ಕೆಜೀತ ಮಾಡಿಸಬಹದು. ಇಲ್ಲಿನ ಸ್ಥಳೀಯರಾದರೆ ಮೋಸ ಮಾಡಲು ಸಾಧ್ಯವಿಲ್ಲ, ಸುಲಭಕ್ಕೆ ಕೆಲಸದಿಂದ ತೆಗೆಯಲುಸಾಧ್ಯವಿಲ್ಲವೆಂಬ ಮನೋಭಾವ ಬಹಳಷ್ಟು ಕಂಪನಿಗಳದು’.

‘ಒಟ್ಟಾರೆಯಾಗಿ ಲಾಭ, ಅತಿಹೆಚ್ಚಿನ ಲಾಭಕ್ಕಾಗಿ ಈ ಬಂಡವಾಳಶಾಹಿ ಕಂಪನಿಗಳು ಸರ್ಕಾರಗಳ ಬೆಂಬಲದೊಂದಿಗೆಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ ನಿರುದ್ಯೋಗ, ಅರೆ ನಿರುದ್ಯೋಗ ಹೆಚ್ಚಳಗೊಳ್ಳಲು ಕಾರಣರಾಗುತ್ತಿದ್ದಾರೆ. ಇನ್ನುಸರ್ಕಾರಗಳು ಸಹ ಚುನಾವಣಾ ಸಂದರ್ಭದಲ್ಲಿ ಉದ್ಯೋಗ ಸೃಷ್ಟಿಯ ಭರವಸೆಗಳನ್ನು ನೀಡುವುದು ಬಿಟ್ಟರೆನಿಜವಾಗಿಯೂ ಸುಭದ್ರ ಉದ್ಯೋಗ ಸೃಷ್ಟಿಸುವತ್ತ ಗಮನ ಹರಿಸುತ್ತಿಲ್ಲ. ಇದರಿಂದ ನರಳುವವರು ಬಡವರು,ಹಿಂದುಳಿದವರು, ಮಹಿಳೆಯರು ಮತ್ತು ತಳಸಮುದಾಯದವರೇ ಆಗಿದ್ದಾರೆ’.

‘ಈ ಹಿನ್ನೆಲೆಯಲ್ಲಿ ತಮಿಳು ನಾಡಿನಲ್ಲಿ, ಅಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ತಮಿಳರಿಗೆ ಮೀಸಲಾಗಬೇಕೆಂದು ಆಗ್ರಹಿಸಿಹೋರಾಟ ಆರಂಭಿಸಿದ್ದಾರೆ. ಹಿಂದಿ ವಿರುದ್ಧದ ಹೋರಾಟ, ಏಕ ಸಂಸ್ಕøತಿಯ ವಿರುದ್ಧದ ಹೋರಾಟದಲ್ಲಿ ಮೊದಲಿಗರಾಗಿರುವ ದ್ರಾವಿಡರಿಂದ ಸ್ಫೂರ್ತಿ ಪಡೆದು ಕನ್ನಡ ನಾಡಿನಲ್ಲೂ ಇದನ್ನು ಪಸರಿಸಲು ಕನ್ನಡ ಅಭಿಮಾನಿಗಳುಮುಂದಾಗಿದ್ದಾರೆ. ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂಬುದು ಅವರ ಆಶಯ. ಇದಕ್ಕೆ ನಮ್ಮ ಬೆಂಬಲವೂ ಇದೆ, ಆದರೆ ಇದು ಸ್ಥಳೀಯರು ವರ್ಸಸ್ ಹೊರಗಿನವರು ಎಂಬ ಸಂಘರ್ಷಕ್ಕೆ ಕಾರಣವಾಗುವ ಬದಲು, ನಿರುದ್ಯೋಗದ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಮಧ್ಯಪ್ರವೇಶಿಸಿದರು ಸರೋವರ್.

‘ಒಟ್ಟಾರೆ ಉದ್ಯೋಗಗಳ ಸಂಖ್ಯೆ ಹೆಚ್ಚಾದಲ್ಲಿ ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ ಉದ್ಯೋಗಗಳುಸೃಷ್ಟಿಯಾಗುವುದರ ಬದಲಿಗೆ ಕಡಿತವಾಗುತ್ತಿರುವುದರಿಂದ ಈ ಸಮಸ್ಯೆ ದಿನೇ ದಿನೇ ಉಲ್ಭಣಗೊಳ್ಳುತ್ತಿದೆ. ಕೆಲವೊಮ್ಮೆಈ ಸಮಸ್ಯೆಗೆ ಸರ್ಕಾರವನ್ನು, ಅವರ ಆರ್ಥಿಕ ನೀತಿಗಳನ್ನು ಟೀಕಿಸುವುದರ ಬದಲು ಬೇರೆ ರಾಜ್ಯದ ವಲಸಿಗರನ್ನುದೂಷಿಸುವುದು ನಡೆದಿದೆ. ಇದು ಸರಿಯಾದುದ್ದಲ್ಲ. ಅವರು ಸಹ ಸರ್ಕಾರದ ನಿರ್ಲಕ್ಷ್ಯತನದ ಕಾರಣದಿಂದಾದ ಬಡವರೆಹೊರತು ಮತ್ಯಾರು ಅಲ್ಲ. ಒಟ್ಟಾರೆ ನಮ್ಮ ಪಾಲಿಸಿಗಳು ಬದಲಾಗದ ಹೊರತು ಪರಿಸ್ಥಿತಿ ಬದಲಾಗುವುದಿಲ್ಲ ಅನ್ನುವುದಕಟುವಾಸ್ತವವಾಗಿದೆ.

ಆದರೆ ಇದೇ ಸಂದರ್ಭದಲ್ಲಿ ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ಈ ನಾಲ್ಕು ರಾಜ್ಯಗಳೇಉಳಿದೆಲ್ಲಾ ರಾಜ್ಯಗಳು ಕಟ್ಟುವಷ್ಟು ತೆರಿಗೆಯನ್ನು ಕಟ್ಟುತ್ತೇವೆ. ಆದರೆ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರುವ ಅನುದಾನದವಿಷಯದಲ್ಲಿ ಮಾತ್ರ ತಾರತಮ್ಯ ಮಾಡಲಾಗುತ್ತಿದೆ. ಒಂದು ಒಕ್ಕೂಟ ವ್ಯವಸ್ಥೆಯಾಗಿ ಸರಿಯಾಗಿ ನಡೆಸಿಕೊಳ್ಳಬೇಕಾದಕೇಂದ್ರ ಸರ್ಕಾರವು ಉತ್ತರದ ರಾಜ್ಯಗಳ ಕಣ್ಣಿಗೆ ಬೆಣ್ಣೆ, ದಕ್ಷಿಣದ ರಾಜ್ಯಗಳ ಕಣ್ಣಿಗೆ ಸುಣ್ಣ ಎಂಬ ರೀತಿ ವರ್ತಿಸುತ್ತಿದೆ.ರೈತರ ಸಾಲಮನ್ನಾ, ಅಂತರಾಜ್ಯ ನದಿಗಳ ವಿವಾದ, ಹಿಂದಿ ಹೇರಿಕೆಯ ವಿಷಯದಲ್ಲಿ ಇದು ಸ್ಪಷ್ಟವಾಗಿದೆ.’

ಇಂತಹ ಸಂದರ್ಭದಲ್ಲಿ ತಮಿಳುನಾಡು ಇದೆಲ್ಲದರ ವಿರುದ್ಧ ದನಿಯೆತ್ತುತ್ತಿದೆ. ಕರ್ನಾಟಕವೂ ಕೈಜೋಡಿಸುತ್ತಿದೆ. ಇದರಜೊತೆಗೇನೆ ಸ್ಥಳೀಯರು ಎಂದರೇನು, ಕರ್ನಾಟಕದವರು ಬೇರೆ ರಾಜ್ಯಕ್ಕೆ ವಲಸೆ ಹೋಗುವುದಿಲ್ಲವೇ? ಎಂಬ ಪ್ರಶ್ನೆಯೂಎದುರಾಗಿದೆ. ಇದರಿಂದ ಉದ್ಯೋಗದ ಕುರಿತು, ಸ್ಥಳೀಯತೆಯ ಕುರಿತು ಚರ್ಚೆಗೆ ಒಳ್ಳೆಯ ಸಂದರ್ಭ ಬಂದಿದೆ. ಹಾಗಾಗಿಎಲ್ಲಾ ದೃಷ್ಟಿಕೋನಗಳಿಂದಲೂ ಆರೋಗ್ಯ ಚರ್ಚೆ ನಡೆಸಲು ನಾನುಗೌರಿ.ಕಾಂ ವೇದಿಕೆ ಒದಗಿಸುತ್ತದೆ. ಓದುಗರು ಸಹಬರೆಯಬೇಕೆಂದು ಕೋರುತ್ತೇವೆ.

ನಿಮ್ಮ ಬರಹಗಳನ್ನು 7353770202ಗೆ ವಾಟ್ಸಾಪ್ ಮೂಲಕ ಅಥವಾ [email protected] ಗೆ ಇ-ಮೇಲ್ ಮೂಲಕ ಕಳಿಸಬಹುದು.

ಇದನ್ನು ಓದಿ

ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಕನ್ನಡಿಗರಿಗೆ ಮೀಸಲಿರಲಿ ಪ್ರಚಾರಾಂದೋಲನದ ಕುರಿತು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...