Homeಕರ್ನಾಟಕಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು – ‘ಉದ್ಯೋಗಕ್ಕಾಗಿ ಯುವಜನರು’ ಏನು ಹೇಳುತ್ತಾರೆ?

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು – ‘ಉದ್ಯೋಗಕ್ಕಾಗಿ ಯುವಜನರು’ ಏನು ಹೇಳುತ್ತಾರೆ?

- Advertisement -
- Advertisement -

ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗಾಗಿ ಎಂದು ಟ್ವಿಟ್ಟರ್ ಟ್ರೆಂಡಿಂಗ್ಗೆ ಕರೆ ಎನ್ನುವ ಈ ಸಂದೇಶಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tweetನ ಲಿಂಕ್:

ಹಲವು ಕನ್ನಡ ಹೋರಾಟಗಾರರು ಈ ಒಂದು ಪ್ರಚಾರಾಂದೋಲನಕ್ಕೆ ಕರೆ ಕೊಟ್ಟಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಕಾರ್ಯಕರ್ತರನ್ನು ನಾನುಗೌರಿ.ಕಾಂ ಮಾತಾಡಿಸಿತು. ಅವರೇನು ಹೇಳುತ್ತಾರೆ ಬನ್ನಿ ನೋಡೋಣ.

‘ನಮ್ಮ ದೇಶ ಮಾತ್ರವಲ್ಲದೇ ಇಡೀ ಪ್ರಪಂಚಾದ್ಯಂತ ಇಂದು ನಿರುದ್ಯೋಗ ದೊಡ್ಡ ಮಟ್ಟದಲ್ಲಿ ಕಾಡುತ್ತಿದೆ. ಇಂತಹಸಂದರ್ಭದಲ್ಲಿ ದೇಶಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ನಿರುದ್ಯೋಗದ ಪ್ರಮಾಣ ಕಡಿಮೆಯೇ ಇದೆ. ಆದರೆಕರ್ನಾಟಕದಲ್ಲಿರುವ ಬಹುಪಾಲು ಉದ್ಯೋಗಗಳು ಅಭದ್ರವಾದವುಗಳಾಗಿವೆ. ಯಾವುದೇ ಸೌಲಭ್ಯಗಳಿಲ್ಲದೆ, ಕಡಿಮೆಸಂಬಳಕ್ಕೆ ದುಡಿಸಿಕೊಳ್ಳುವುದಲ್ಲದೇ ಇದರ ವಿರುದ್ಧ ದನಿಯೆತ್ತಿದ್ದರೆ ಅವರು ಕೆಲಸ ಕಳೆದುಕೊಳ್ಳಬೇಕಾದ ಅತಂತ್ರಸ್ಥಿತಿಯಲ್ಲಿದ್ದಾರೆ.’ ಎಂದು ಮಾತು ಶುರು ಮಾಡಿದ ಉದ್ಯೋಗಕ್ಕಾಗಿ ಯುವಜನರು ಸಂಚಾಲಕರಾದ ಸರೋವರ್ ಬೆಂಕಿಕೆರೆ ಅದನ್ನು ವಿಸ್ತರಿಸಿದರು.

‘ಇಂತಹ ಸಂದರ್ಭದಲ್ಲಿಯೇ ಕರ್ನಾಟಕಕ್ಕೇ ಅದರಲ್ಲೂ ಬೆಂಗಳೂರಿಗೆ ಹೊರಗಿನಿಂದ ಉದ್ಯೋಗ ಅರಸಿ ಬರುತ್ತಿರುವವಸಂಖ್ಯೆ ಬಹಳ ಹೆಚ್ಚಾಗಿದೆ. ಮುಖ್ಯವಾಗಿ ಉತ್ತರಪ್ರದೇಶ, ಬಿಹಾರ, ಗುಜರಾತ್ ಸೇರಿದಂತೆ ಉತ್ತರ ಭಾರತದ ಜನರುಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರಿನತ್ತ ವಲಸೆ ಬರುತ್ತಿದ್ದಾರೆ. ಉದ್ಯೋಗ ಹುಡುಕುವವರ ಸಂಖ್ಯೆ ಹೆಚ್ಚಾದಷ್ಟು ಉದ್ಯೋಗಭದ್ರತೆ ಕಡಿಮೆಯಾಗುತ್ತಿದೆ.’

‘ಕಡಿಮೆ ಸಂಬಳಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವುದರಿಂದ ಕಂಪನಿಗಳು ಹೆಚ್ಚು ಲಾಭ ಮಾಡಲುಸಾಧ್ಯವಾಗುವುದಲ್ಲದೇ ಅವರು ಸಂಘ ಕಟ್ಟಿಕೊಂಡು ಹಕ್ಕು ಕೇಳುವಂತಿಲ್ಲ. ಒಂದು ವೇಳೆ ಯಾರಾದರೂ ನೌಕರರುಪ್ರತಿಭಟಿಸಲು ಮುಂದಾದರೆ ಅವರನ್ನು ಸುಲಭವಾಗಿ ಕೆಲಸದಿಂದ ವಜಾ ಮಾಡಬಹುದು. ಏಕೆಂದರೆ ಇನ್ನೂ ಕಡಿಮೆಸಂಬಳ ಕೊಟ್ಟರೂ ಸಹ ಕೆಲಸಕ್ಕೆ ಸೇರಲು ಹೊರಗಡೆ ದೊಡ್ಡ ದಂಡೇ ಕಾಯುತ್ತಿದೆಯಲ್ಲ?’

ಆದರೆ ‘ಉತ್ತರ ಭಾರತದ ಈ ಜನರು ವಲಸೆಯಿಂದ ಅವರಿಗೂ ನಮಗೂ ಇಬ್ಬರಿಗೂ ಅಪಾಯಗಳಿವೆ’ ಎನ್ನುತ್ತಾರೆ ಉದ್ಯೋಗಕ್ಕಾಗಿ ಯುವಜನರು ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಾಟ್ಟ. ‘ಬಹಳಷ್ಟು ಕಂಪನಿಗಳು ಬೇರೆರಾಜ್ಯದ ಜನರಿಗೆ ಮೊದಲ ಆದ್ಯತೆ ನೀಡುತ್ತಾರೆ. ಏಕೆಂದರೆ ಅವರು ಪರಕೀಯರಾದ್ದರಿಂದ ಒಗ್ಗಟ್ಟು ಇರುವುದಿಲ್ಲ, ಸಂಘಕಟ್ಟುವುದಿಲ್ಲ ಎಂಬುದಾಗಿದೆ. ಇದರಿಂದ ಅವರ ಕಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳುವುದಲ್ಲದೇ ಕಡಿಮೆ ಸಂಬಳಕ್ಕೆಜೀತ ಮಾಡಿಸಬಹದು. ಇಲ್ಲಿನ ಸ್ಥಳೀಯರಾದರೆ ಮೋಸ ಮಾಡಲು ಸಾಧ್ಯವಿಲ್ಲ, ಸುಲಭಕ್ಕೆ ಕೆಲಸದಿಂದ ತೆಗೆಯಲುಸಾಧ್ಯವಿಲ್ಲವೆಂಬ ಮನೋಭಾವ ಬಹಳಷ್ಟು ಕಂಪನಿಗಳದು’.

‘ಒಟ್ಟಾರೆಯಾಗಿ ಲಾಭ, ಅತಿಹೆಚ್ಚಿನ ಲಾಭಕ್ಕಾಗಿ ಈ ಬಂಡವಾಳಶಾಹಿ ಕಂಪನಿಗಳು ಸರ್ಕಾರಗಳ ಬೆಂಬಲದೊಂದಿಗೆಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ ನಿರುದ್ಯೋಗ, ಅರೆ ನಿರುದ್ಯೋಗ ಹೆಚ್ಚಳಗೊಳ್ಳಲು ಕಾರಣರಾಗುತ್ತಿದ್ದಾರೆ. ಇನ್ನುಸರ್ಕಾರಗಳು ಸಹ ಚುನಾವಣಾ ಸಂದರ್ಭದಲ್ಲಿ ಉದ್ಯೋಗ ಸೃಷ್ಟಿಯ ಭರವಸೆಗಳನ್ನು ನೀಡುವುದು ಬಿಟ್ಟರೆನಿಜವಾಗಿಯೂ ಸುಭದ್ರ ಉದ್ಯೋಗ ಸೃಷ್ಟಿಸುವತ್ತ ಗಮನ ಹರಿಸುತ್ತಿಲ್ಲ. ಇದರಿಂದ ನರಳುವವರು ಬಡವರು,ಹಿಂದುಳಿದವರು, ಮಹಿಳೆಯರು ಮತ್ತು ತಳಸಮುದಾಯದವರೇ ಆಗಿದ್ದಾರೆ’.

‘ಈ ಹಿನ್ನೆಲೆಯಲ್ಲಿ ತಮಿಳು ನಾಡಿನಲ್ಲಿ, ಅಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ತಮಿಳರಿಗೆ ಮೀಸಲಾಗಬೇಕೆಂದು ಆಗ್ರಹಿಸಿಹೋರಾಟ ಆರಂಭಿಸಿದ್ದಾರೆ. ಹಿಂದಿ ವಿರುದ್ಧದ ಹೋರಾಟ, ಏಕ ಸಂಸ್ಕøತಿಯ ವಿರುದ್ಧದ ಹೋರಾಟದಲ್ಲಿ ಮೊದಲಿಗರಾಗಿರುವ ದ್ರಾವಿಡರಿಂದ ಸ್ಫೂರ್ತಿ ಪಡೆದು ಕನ್ನಡ ನಾಡಿನಲ್ಲೂ ಇದನ್ನು ಪಸರಿಸಲು ಕನ್ನಡ ಅಭಿಮಾನಿಗಳುಮುಂದಾಗಿದ್ದಾರೆ. ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂಬುದು ಅವರ ಆಶಯ. ಇದಕ್ಕೆ ನಮ್ಮ ಬೆಂಬಲವೂ ಇದೆ, ಆದರೆ ಇದು ಸ್ಥಳೀಯರು ವರ್ಸಸ್ ಹೊರಗಿನವರು ಎಂಬ ಸಂಘರ್ಷಕ್ಕೆ ಕಾರಣವಾಗುವ ಬದಲು, ನಿರುದ್ಯೋಗದ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಮಧ್ಯಪ್ರವೇಶಿಸಿದರು ಸರೋವರ್.

‘ಒಟ್ಟಾರೆ ಉದ್ಯೋಗಗಳ ಸಂಖ್ಯೆ ಹೆಚ್ಚಾದಲ್ಲಿ ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ ಉದ್ಯೋಗಗಳುಸೃಷ್ಟಿಯಾಗುವುದರ ಬದಲಿಗೆ ಕಡಿತವಾಗುತ್ತಿರುವುದರಿಂದ ಈ ಸಮಸ್ಯೆ ದಿನೇ ದಿನೇ ಉಲ್ಭಣಗೊಳ್ಳುತ್ತಿದೆ. ಕೆಲವೊಮ್ಮೆಈ ಸಮಸ್ಯೆಗೆ ಸರ್ಕಾರವನ್ನು, ಅವರ ಆರ್ಥಿಕ ನೀತಿಗಳನ್ನು ಟೀಕಿಸುವುದರ ಬದಲು ಬೇರೆ ರಾಜ್ಯದ ವಲಸಿಗರನ್ನುದೂಷಿಸುವುದು ನಡೆದಿದೆ. ಇದು ಸರಿಯಾದುದ್ದಲ್ಲ. ಅವರು ಸಹ ಸರ್ಕಾರದ ನಿರ್ಲಕ್ಷ್ಯತನದ ಕಾರಣದಿಂದಾದ ಬಡವರೆಹೊರತು ಮತ್ಯಾರು ಅಲ್ಲ. ಒಟ್ಟಾರೆ ನಮ್ಮ ಪಾಲಿಸಿಗಳು ಬದಲಾಗದ ಹೊರತು ಪರಿಸ್ಥಿತಿ ಬದಲಾಗುವುದಿಲ್ಲ ಅನ್ನುವುದಕಟುವಾಸ್ತವವಾಗಿದೆ.

ಆದರೆ ಇದೇ ಸಂದರ್ಭದಲ್ಲಿ ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ಈ ನಾಲ್ಕು ರಾಜ್ಯಗಳೇಉಳಿದೆಲ್ಲಾ ರಾಜ್ಯಗಳು ಕಟ್ಟುವಷ್ಟು ತೆರಿಗೆಯನ್ನು ಕಟ್ಟುತ್ತೇವೆ. ಆದರೆ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರುವ ಅನುದಾನದವಿಷಯದಲ್ಲಿ ಮಾತ್ರ ತಾರತಮ್ಯ ಮಾಡಲಾಗುತ್ತಿದೆ. ಒಂದು ಒಕ್ಕೂಟ ವ್ಯವಸ್ಥೆಯಾಗಿ ಸರಿಯಾಗಿ ನಡೆಸಿಕೊಳ್ಳಬೇಕಾದಕೇಂದ್ರ ಸರ್ಕಾರವು ಉತ್ತರದ ರಾಜ್ಯಗಳ ಕಣ್ಣಿಗೆ ಬೆಣ್ಣೆ, ದಕ್ಷಿಣದ ರಾಜ್ಯಗಳ ಕಣ್ಣಿಗೆ ಸುಣ್ಣ ಎಂಬ ರೀತಿ ವರ್ತಿಸುತ್ತಿದೆ.ರೈತರ ಸಾಲಮನ್ನಾ, ಅಂತರಾಜ್ಯ ನದಿಗಳ ವಿವಾದ, ಹಿಂದಿ ಹೇರಿಕೆಯ ವಿಷಯದಲ್ಲಿ ಇದು ಸ್ಪಷ್ಟವಾಗಿದೆ.’

ಇಂತಹ ಸಂದರ್ಭದಲ್ಲಿ ತಮಿಳುನಾಡು ಇದೆಲ್ಲದರ ವಿರುದ್ಧ ದನಿಯೆತ್ತುತ್ತಿದೆ. ಕರ್ನಾಟಕವೂ ಕೈಜೋಡಿಸುತ್ತಿದೆ. ಇದರಜೊತೆಗೇನೆ ಸ್ಥಳೀಯರು ಎಂದರೇನು, ಕರ್ನಾಟಕದವರು ಬೇರೆ ರಾಜ್ಯಕ್ಕೆ ವಲಸೆ ಹೋಗುವುದಿಲ್ಲವೇ? ಎಂಬ ಪ್ರಶ್ನೆಯೂಎದುರಾಗಿದೆ. ಇದರಿಂದ ಉದ್ಯೋಗದ ಕುರಿತು, ಸ್ಥಳೀಯತೆಯ ಕುರಿತು ಚರ್ಚೆಗೆ ಒಳ್ಳೆಯ ಸಂದರ್ಭ ಬಂದಿದೆ. ಹಾಗಾಗಿಎಲ್ಲಾ ದೃಷ್ಟಿಕೋನಗಳಿಂದಲೂ ಆರೋಗ್ಯ ಚರ್ಚೆ ನಡೆಸಲು ನಾನುಗೌರಿ.ಕಾಂ ವೇದಿಕೆ ಒದಗಿಸುತ್ತದೆ. ಓದುಗರು ಸಹಬರೆಯಬೇಕೆಂದು ಕೋರುತ್ತೇವೆ.

ನಿಮ್ಮ ಬರಹಗಳನ್ನು 7353770202ಗೆ ವಾಟ್ಸಾಪ್ ಮೂಲಕ ಅಥವಾ [email protected] ಗೆ ಇ-ಮೇಲ್ ಮೂಲಕ ಕಳಿಸಬಹುದು.

ಇದನ್ನು ಓದಿ

ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಕನ್ನಡಿಗರಿಗೆ ಮೀಸಲಿರಲಿ ಪ್ರಚಾರಾಂದೋಲನದ ಕುರಿತು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...