Homeಕರ್ನಾಟಕಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು – ‘ಉದ್ಯೋಗಕ್ಕಾಗಿ ಯುವಜನರು’ ಏನು ಹೇಳುತ್ತಾರೆ?

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು – ‘ಉದ್ಯೋಗಕ್ಕಾಗಿ ಯುವಜನರು’ ಏನು ಹೇಳುತ್ತಾರೆ?

- Advertisement -
- Advertisement -

ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗಾಗಿ ಎಂದು ಟ್ವಿಟ್ಟರ್ ಟ್ರೆಂಡಿಂಗ್ಗೆ ಕರೆ ಎನ್ನುವ ಈ ಸಂದೇಶಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tweetನ ಲಿಂಕ್:

ಹಲವು ಕನ್ನಡ ಹೋರಾಟಗಾರರು ಈ ಒಂದು ಪ್ರಚಾರಾಂದೋಲನಕ್ಕೆ ಕರೆ ಕೊಟ್ಟಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಕಾರ್ಯಕರ್ತರನ್ನು ನಾನುಗೌರಿ.ಕಾಂ ಮಾತಾಡಿಸಿತು. ಅವರೇನು ಹೇಳುತ್ತಾರೆ ಬನ್ನಿ ನೋಡೋಣ.

‘ನಮ್ಮ ದೇಶ ಮಾತ್ರವಲ್ಲದೇ ಇಡೀ ಪ್ರಪಂಚಾದ್ಯಂತ ಇಂದು ನಿರುದ್ಯೋಗ ದೊಡ್ಡ ಮಟ್ಟದಲ್ಲಿ ಕಾಡುತ್ತಿದೆ. ಇಂತಹಸಂದರ್ಭದಲ್ಲಿ ದೇಶಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ನಿರುದ್ಯೋಗದ ಪ್ರಮಾಣ ಕಡಿಮೆಯೇ ಇದೆ. ಆದರೆಕರ್ನಾಟಕದಲ್ಲಿರುವ ಬಹುಪಾಲು ಉದ್ಯೋಗಗಳು ಅಭದ್ರವಾದವುಗಳಾಗಿವೆ. ಯಾವುದೇ ಸೌಲಭ್ಯಗಳಿಲ್ಲದೆ, ಕಡಿಮೆಸಂಬಳಕ್ಕೆ ದುಡಿಸಿಕೊಳ್ಳುವುದಲ್ಲದೇ ಇದರ ವಿರುದ್ಧ ದನಿಯೆತ್ತಿದ್ದರೆ ಅವರು ಕೆಲಸ ಕಳೆದುಕೊಳ್ಳಬೇಕಾದ ಅತಂತ್ರಸ್ಥಿತಿಯಲ್ಲಿದ್ದಾರೆ.’ ಎಂದು ಮಾತು ಶುರು ಮಾಡಿದ ಉದ್ಯೋಗಕ್ಕಾಗಿ ಯುವಜನರು ಸಂಚಾಲಕರಾದ ಸರೋವರ್ ಬೆಂಕಿಕೆರೆ ಅದನ್ನು ವಿಸ್ತರಿಸಿದರು.

‘ಇಂತಹ ಸಂದರ್ಭದಲ್ಲಿಯೇ ಕರ್ನಾಟಕಕ್ಕೇ ಅದರಲ್ಲೂ ಬೆಂಗಳೂರಿಗೆ ಹೊರಗಿನಿಂದ ಉದ್ಯೋಗ ಅರಸಿ ಬರುತ್ತಿರುವವಸಂಖ್ಯೆ ಬಹಳ ಹೆಚ್ಚಾಗಿದೆ. ಮುಖ್ಯವಾಗಿ ಉತ್ತರಪ್ರದೇಶ, ಬಿಹಾರ, ಗುಜರಾತ್ ಸೇರಿದಂತೆ ಉತ್ತರ ಭಾರತದ ಜನರುಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರಿನತ್ತ ವಲಸೆ ಬರುತ್ತಿದ್ದಾರೆ. ಉದ್ಯೋಗ ಹುಡುಕುವವರ ಸಂಖ್ಯೆ ಹೆಚ್ಚಾದಷ್ಟು ಉದ್ಯೋಗಭದ್ರತೆ ಕಡಿಮೆಯಾಗುತ್ತಿದೆ.’

‘ಕಡಿಮೆ ಸಂಬಳಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವುದರಿಂದ ಕಂಪನಿಗಳು ಹೆಚ್ಚು ಲಾಭ ಮಾಡಲುಸಾಧ್ಯವಾಗುವುದಲ್ಲದೇ ಅವರು ಸಂಘ ಕಟ್ಟಿಕೊಂಡು ಹಕ್ಕು ಕೇಳುವಂತಿಲ್ಲ. ಒಂದು ವೇಳೆ ಯಾರಾದರೂ ನೌಕರರುಪ್ರತಿಭಟಿಸಲು ಮುಂದಾದರೆ ಅವರನ್ನು ಸುಲಭವಾಗಿ ಕೆಲಸದಿಂದ ವಜಾ ಮಾಡಬಹುದು. ಏಕೆಂದರೆ ಇನ್ನೂ ಕಡಿಮೆಸಂಬಳ ಕೊಟ್ಟರೂ ಸಹ ಕೆಲಸಕ್ಕೆ ಸೇರಲು ಹೊರಗಡೆ ದೊಡ್ಡ ದಂಡೇ ಕಾಯುತ್ತಿದೆಯಲ್ಲ?’

ಆದರೆ ‘ಉತ್ತರ ಭಾರತದ ಈ ಜನರು ವಲಸೆಯಿಂದ ಅವರಿಗೂ ನಮಗೂ ಇಬ್ಬರಿಗೂ ಅಪಾಯಗಳಿವೆ’ ಎನ್ನುತ್ತಾರೆ ಉದ್ಯೋಗಕ್ಕಾಗಿ ಯುವಜನರು ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಾಟ್ಟ. ‘ಬಹಳಷ್ಟು ಕಂಪನಿಗಳು ಬೇರೆರಾಜ್ಯದ ಜನರಿಗೆ ಮೊದಲ ಆದ್ಯತೆ ನೀಡುತ್ತಾರೆ. ಏಕೆಂದರೆ ಅವರು ಪರಕೀಯರಾದ್ದರಿಂದ ಒಗ್ಗಟ್ಟು ಇರುವುದಿಲ್ಲ, ಸಂಘಕಟ್ಟುವುದಿಲ್ಲ ಎಂಬುದಾಗಿದೆ. ಇದರಿಂದ ಅವರ ಕಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳುವುದಲ್ಲದೇ ಕಡಿಮೆ ಸಂಬಳಕ್ಕೆಜೀತ ಮಾಡಿಸಬಹದು. ಇಲ್ಲಿನ ಸ್ಥಳೀಯರಾದರೆ ಮೋಸ ಮಾಡಲು ಸಾಧ್ಯವಿಲ್ಲ, ಸುಲಭಕ್ಕೆ ಕೆಲಸದಿಂದ ತೆಗೆಯಲುಸಾಧ್ಯವಿಲ್ಲವೆಂಬ ಮನೋಭಾವ ಬಹಳಷ್ಟು ಕಂಪನಿಗಳದು’.

‘ಒಟ್ಟಾರೆಯಾಗಿ ಲಾಭ, ಅತಿಹೆಚ್ಚಿನ ಲಾಭಕ್ಕಾಗಿ ಈ ಬಂಡವಾಳಶಾಹಿ ಕಂಪನಿಗಳು ಸರ್ಕಾರಗಳ ಬೆಂಬಲದೊಂದಿಗೆಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ ನಿರುದ್ಯೋಗ, ಅರೆ ನಿರುದ್ಯೋಗ ಹೆಚ್ಚಳಗೊಳ್ಳಲು ಕಾರಣರಾಗುತ್ತಿದ್ದಾರೆ. ಇನ್ನುಸರ್ಕಾರಗಳು ಸಹ ಚುನಾವಣಾ ಸಂದರ್ಭದಲ್ಲಿ ಉದ್ಯೋಗ ಸೃಷ್ಟಿಯ ಭರವಸೆಗಳನ್ನು ನೀಡುವುದು ಬಿಟ್ಟರೆನಿಜವಾಗಿಯೂ ಸುಭದ್ರ ಉದ್ಯೋಗ ಸೃಷ್ಟಿಸುವತ್ತ ಗಮನ ಹರಿಸುತ್ತಿಲ್ಲ. ಇದರಿಂದ ನರಳುವವರು ಬಡವರು,ಹಿಂದುಳಿದವರು, ಮಹಿಳೆಯರು ಮತ್ತು ತಳಸಮುದಾಯದವರೇ ಆಗಿದ್ದಾರೆ’.

‘ಈ ಹಿನ್ನೆಲೆಯಲ್ಲಿ ತಮಿಳು ನಾಡಿನಲ್ಲಿ, ಅಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ತಮಿಳರಿಗೆ ಮೀಸಲಾಗಬೇಕೆಂದು ಆಗ್ರಹಿಸಿಹೋರಾಟ ಆರಂಭಿಸಿದ್ದಾರೆ. ಹಿಂದಿ ವಿರುದ್ಧದ ಹೋರಾಟ, ಏಕ ಸಂಸ್ಕøತಿಯ ವಿರುದ್ಧದ ಹೋರಾಟದಲ್ಲಿ ಮೊದಲಿಗರಾಗಿರುವ ದ್ರಾವಿಡರಿಂದ ಸ್ಫೂರ್ತಿ ಪಡೆದು ಕನ್ನಡ ನಾಡಿನಲ್ಲೂ ಇದನ್ನು ಪಸರಿಸಲು ಕನ್ನಡ ಅಭಿಮಾನಿಗಳುಮುಂದಾಗಿದ್ದಾರೆ. ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂಬುದು ಅವರ ಆಶಯ. ಇದಕ್ಕೆ ನಮ್ಮ ಬೆಂಬಲವೂ ಇದೆ, ಆದರೆ ಇದು ಸ್ಥಳೀಯರು ವರ್ಸಸ್ ಹೊರಗಿನವರು ಎಂಬ ಸಂಘರ್ಷಕ್ಕೆ ಕಾರಣವಾಗುವ ಬದಲು, ನಿರುದ್ಯೋಗದ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಮಧ್ಯಪ್ರವೇಶಿಸಿದರು ಸರೋವರ್.

‘ಒಟ್ಟಾರೆ ಉದ್ಯೋಗಗಳ ಸಂಖ್ಯೆ ಹೆಚ್ಚಾದಲ್ಲಿ ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ ಉದ್ಯೋಗಗಳುಸೃಷ್ಟಿಯಾಗುವುದರ ಬದಲಿಗೆ ಕಡಿತವಾಗುತ್ತಿರುವುದರಿಂದ ಈ ಸಮಸ್ಯೆ ದಿನೇ ದಿನೇ ಉಲ್ಭಣಗೊಳ್ಳುತ್ತಿದೆ. ಕೆಲವೊಮ್ಮೆಈ ಸಮಸ್ಯೆಗೆ ಸರ್ಕಾರವನ್ನು, ಅವರ ಆರ್ಥಿಕ ನೀತಿಗಳನ್ನು ಟೀಕಿಸುವುದರ ಬದಲು ಬೇರೆ ರಾಜ್ಯದ ವಲಸಿಗರನ್ನುದೂಷಿಸುವುದು ನಡೆದಿದೆ. ಇದು ಸರಿಯಾದುದ್ದಲ್ಲ. ಅವರು ಸಹ ಸರ್ಕಾರದ ನಿರ್ಲಕ್ಷ್ಯತನದ ಕಾರಣದಿಂದಾದ ಬಡವರೆಹೊರತು ಮತ್ಯಾರು ಅಲ್ಲ. ಒಟ್ಟಾರೆ ನಮ್ಮ ಪಾಲಿಸಿಗಳು ಬದಲಾಗದ ಹೊರತು ಪರಿಸ್ಥಿತಿ ಬದಲಾಗುವುದಿಲ್ಲ ಅನ್ನುವುದಕಟುವಾಸ್ತವವಾಗಿದೆ.

ಆದರೆ ಇದೇ ಸಂದರ್ಭದಲ್ಲಿ ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ಈ ನಾಲ್ಕು ರಾಜ್ಯಗಳೇಉಳಿದೆಲ್ಲಾ ರಾಜ್ಯಗಳು ಕಟ್ಟುವಷ್ಟು ತೆರಿಗೆಯನ್ನು ಕಟ್ಟುತ್ತೇವೆ. ಆದರೆ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರುವ ಅನುದಾನದವಿಷಯದಲ್ಲಿ ಮಾತ್ರ ತಾರತಮ್ಯ ಮಾಡಲಾಗುತ್ತಿದೆ. ಒಂದು ಒಕ್ಕೂಟ ವ್ಯವಸ್ಥೆಯಾಗಿ ಸರಿಯಾಗಿ ನಡೆಸಿಕೊಳ್ಳಬೇಕಾದಕೇಂದ್ರ ಸರ್ಕಾರವು ಉತ್ತರದ ರಾಜ್ಯಗಳ ಕಣ್ಣಿಗೆ ಬೆಣ್ಣೆ, ದಕ್ಷಿಣದ ರಾಜ್ಯಗಳ ಕಣ್ಣಿಗೆ ಸುಣ್ಣ ಎಂಬ ರೀತಿ ವರ್ತಿಸುತ್ತಿದೆ.ರೈತರ ಸಾಲಮನ್ನಾ, ಅಂತರಾಜ್ಯ ನದಿಗಳ ವಿವಾದ, ಹಿಂದಿ ಹೇರಿಕೆಯ ವಿಷಯದಲ್ಲಿ ಇದು ಸ್ಪಷ್ಟವಾಗಿದೆ.’

ಇಂತಹ ಸಂದರ್ಭದಲ್ಲಿ ತಮಿಳುನಾಡು ಇದೆಲ್ಲದರ ವಿರುದ್ಧ ದನಿಯೆತ್ತುತ್ತಿದೆ. ಕರ್ನಾಟಕವೂ ಕೈಜೋಡಿಸುತ್ತಿದೆ. ಇದರಜೊತೆಗೇನೆ ಸ್ಥಳೀಯರು ಎಂದರೇನು, ಕರ್ನಾಟಕದವರು ಬೇರೆ ರಾಜ್ಯಕ್ಕೆ ವಲಸೆ ಹೋಗುವುದಿಲ್ಲವೇ? ಎಂಬ ಪ್ರಶ್ನೆಯೂಎದುರಾಗಿದೆ. ಇದರಿಂದ ಉದ್ಯೋಗದ ಕುರಿತು, ಸ್ಥಳೀಯತೆಯ ಕುರಿತು ಚರ್ಚೆಗೆ ಒಳ್ಳೆಯ ಸಂದರ್ಭ ಬಂದಿದೆ. ಹಾಗಾಗಿಎಲ್ಲಾ ದೃಷ್ಟಿಕೋನಗಳಿಂದಲೂ ಆರೋಗ್ಯ ಚರ್ಚೆ ನಡೆಸಲು ನಾನುಗೌರಿ.ಕಾಂ ವೇದಿಕೆ ಒದಗಿಸುತ್ತದೆ. ಓದುಗರು ಸಹಬರೆಯಬೇಕೆಂದು ಕೋರುತ್ತೇವೆ.

ನಿಮ್ಮ ಬರಹಗಳನ್ನು 7353770202ಗೆ ವಾಟ್ಸಾಪ್ ಮೂಲಕ ಅಥವಾ [email protected] ಗೆ ಇ-ಮೇಲ್ ಮೂಲಕ ಕಳಿಸಬಹುದು.

ಇದನ್ನು ಓದಿ

ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಕನ್ನಡಿಗರಿಗೆ ಮೀಸಲಿರಲಿ ಪ್ರಚಾರಾಂದೋಲನದ ಕುರಿತು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...