Homeಕರ್ನಾಟಕಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು – ‘ಉದ್ಯೋಗಕ್ಕಾಗಿ ಯುವಜನರು’ ಏನು ಹೇಳುತ್ತಾರೆ?

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು – ‘ಉದ್ಯೋಗಕ್ಕಾಗಿ ಯುವಜನರು’ ಏನು ಹೇಳುತ್ತಾರೆ?

- Advertisement -
- Advertisement -

ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗಾಗಿ ಎಂದು ಟ್ವಿಟ್ಟರ್ ಟ್ರೆಂಡಿಂಗ್ಗೆ ಕರೆ ಎನ್ನುವ ಈ ಸಂದೇಶಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tweetನ ಲಿಂಕ್:

ಹಲವು ಕನ್ನಡ ಹೋರಾಟಗಾರರು ಈ ಒಂದು ಪ್ರಚಾರಾಂದೋಲನಕ್ಕೆ ಕರೆ ಕೊಟ್ಟಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಕಾರ್ಯಕರ್ತರನ್ನು ನಾನುಗೌರಿ.ಕಾಂ ಮಾತಾಡಿಸಿತು. ಅವರೇನು ಹೇಳುತ್ತಾರೆ ಬನ್ನಿ ನೋಡೋಣ.

‘ನಮ್ಮ ದೇಶ ಮಾತ್ರವಲ್ಲದೇ ಇಡೀ ಪ್ರಪಂಚಾದ್ಯಂತ ಇಂದು ನಿರುದ್ಯೋಗ ದೊಡ್ಡ ಮಟ್ಟದಲ್ಲಿ ಕಾಡುತ್ತಿದೆ. ಇಂತಹಸಂದರ್ಭದಲ್ಲಿ ದೇಶಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ನಿರುದ್ಯೋಗದ ಪ್ರಮಾಣ ಕಡಿಮೆಯೇ ಇದೆ. ಆದರೆಕರ್ನಾಟಕದಲ್ಲಿರುವ ಬಹುಪಾಲು ಉದ್ಯೋಗಗಳು ಅಭದ್ರವಾದವುಗಳಾಗಿವೆ. ಯಾವುದೇ ಸೌಲಭ್ಯಗಳಿಲ್ಲದೆ, ಕಡಿಮೆಸಂಬಳಕ್ಕೆ ದುಡಿಸಿಕೊಳ್ಳುವುದಲ್ಲದೇ ಇದರ ವಿರುದ್ಧ ದನಿಯೆತ್ತಿದ್ದರೆ ಅವರು ಕೆಲಸ ಕಳೆದುಕೊಳ್ಳಬೇಕಾದ ಅತಂತ್ರಸ್ಥಿತಿಯಲ್ಲಿದ್ದಾರೆ.’ ಎಂದು ಮಾತು ಶುರು ಮಾಡಿದ ಉದ್ಯೋಗಕ್ಕಾಗಿ ಯುವಜನರು ಸಂಚಾಲಕರಾದ ಸರೋವರ್ ಬೆಂಕಿಕೆರೆ ಅದನ್ನು ವಿಸ್ತರಿಸಿದರು.

‘ಇಂತಹ ಸಂದರ್ಭದಲ್ಲಿಯೇ ಕರ್ನಾಟಕಕ್ಕೇ ಅದರಲ್ಲೂ ಬೆಂಗಳೂರಿಗೆ ಹೊರಗಿನಿಂದ ಉದ್ಯೋಗ ಅರಸಿ ಬರುತ್ತಿರುವವಸಂಖ್ಯೆ ಬಹಳ ಹೆಚ್ಚಾಗಿದೆ. ಮುಖ್ಯವಾಗಿ ಉತ್ತರಪ್ರದೇಶ, ಬಿಹಾರ, ಗುಜರಾತ್ ಸೇರಿದಂತೆ ಉತ್ತರ ಭಾರತದ ಜನರುಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರಿನತ್ತ ವಲಸೆ ಬರುತ್ತಿದ್ದಾರೆ. ಉದ್ಯೋಗ ಹುಡುಕುವವರ ಸಂಖ್ಯೆ ಹೆಚ್ಚಾದಷ್ಟು ಉದ್ಯೋಗಭದ್ರತೆ ಕಡಿಮೆಯಾಗುತ್ತಿದೆ.’

‘ಕಡಿಮೆ ಸಂಬಳಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವುದರಿಂದ ಕಂಪನಿಗಳು ಹೆಚ್ಚು ಲಾಭ ಮಾಡಲುಸಾಧ್ಯವಾಗುವುದಲ್ಲದೇ ಅವರು ಸಂಘ ಕಟ್ಟಿಕೊಂಡು ಹಕ್ಕು ಕೇಳುವಂತಿಲ್ಲ. ಒಂದು ವೇಳೆ ಯಾರಾದರೂ ನೌಕರರುಪ್ರತಿಭಟಿಸಲು ಮುಂದಾದರೆ ಅವರನ್ನು ಸುಲಭವಾಗಿ ಕೆಲಸದಿಂದ ವಜಾ ಮಾಡಬಹುದು. ಏಕೆಂದರೆ ಇನ್ನೂ ಕಡಿಮೆಸಂಬಳ ಕೊಟ್ಟರೂ ಸಹ ಕೆಲಸಕ್ಕೆ ಸೇರಲು ಹೊರಗಡೆ ದೊಡ್ಡ ದಂಡೇ ಕಾಯುತ್ತಿದೆಯಲ್ಲ?’

ಆದರೆ ‘ಉತ್ತರ ಭಾರತದ ಈ ಜನರು ವಲಸೆಯಿಂದ ಅವರಿಗೂ ನಮಗೂ ಇಬ್ಬರಿಗೂ ಅಪಾಯಗಳಿವೆ’ ಎನ್ನುತ್ತಾರೆ ಉದ್ಯೋಗಕ್ಕಾಗಿ ಯುವಜನರು ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಾಟ್ಟ. ‘ಬಹಳಷ್ಟು ಕಂಪನಿಗಳು ಬೇರೆರಾಜ್ಯದ ಜನರಿಗೆ ಮೊದಲ ಆದ್ಯತೆ ನೀಡುತ್ತಾರೆ. ಏಕೆಂದರೆ ಅವರು ಪರಕೀಯರಾದ್ದರಿಂದ ಒಗ್ಗಟ್ಟು ಇರುವುದಿಲ್ಲ, ಸಂಘಕಟ್ಟುವುದಿಲ್ಲ ಎಂಬುದಾಗಿದೆ. ಇದರಿಂದ ಅವರ ಕಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳುವುದಲ್ಲದೇ ಕಡಿಮೆ ಸಂಬಳಕ್ಕೆಜೀತ ಮಾಡಿಸಬಹದು. ಇಲ್ಲಿನ ಸ್ಥಳೀಯರಾದರೆ ಮೋಸ ಮಾಡಲು ಸಾಧ್ಯವಿಲ್ಲ, ಸುಲಭಕ್ಕೆ ಕೆಲಸದಿಂದ ತೆಗೆಯಲುಸಾಧ್ಯವಿಲ್ಲವೆಂಬ ಮನೋಭಾವ ಬಹಳಷ್ಟು ಕಂಪನಿಗಳದು’.

‘ಒಟ್ಟಾರೆಯಾಗಿ ಲಾಭ, ಅತಿಹೆಚ್ಚಿನ ಲಾಭಕ್ಕಾಗಿ ಈ ಬಂಡವಾಳಶಾಹಿ ಕಂಪನಿಗಳು ಸರ್ಕಾರಗಳ ಬೆಂಬಲದೊಂದಿಗೆಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ ನಿರುದ್ಯೋಗ, ಅರೆ ನಿರುದ್ಯೋಗ ಹೆಚ್ಚಳಗೊಳ್ಳಲು ಕಾರಣರಾಗುತ್ತಿದ್ದಾರೆ. ಇನ್ನುಸರ್ಕಾರಗಳು ಸಹ ಚುನಾವಣಾ ಸಂದರ್ಭದಲ್ಲಿ ಉದ್ಯೋಗ ಸೃಷ್ಟಿಯ ಭರವಸೆಗಳನ್ನು ನೀಡುವುದು ಬಿಟ್ಟರೆನಿಜವಾಗಿಯೂ ಸುಭದ್ರ ಉದ್ಯೋಗ ಸೃಷ್ಟಿಸುವತ್ತ ಗಮನ ಹರಿಸುತ್ತಿಲ್ಲ. ಇದರಿಂದ ನರಳುವವರು ಬಡವರು,ಹಿಂದುಳಿದವರು, ಮಹಿಳೆಯರು ಮತ್ತು ತಳಸಮುದಾಯದವರೇ ಆಗಿದ್ದಾರೆ’.

‘ಈ ಹಿನ್ನೆಲೆಯಲ್ಲಿ ತಮಿಳು ನಾಡಿನಲ್ಲಿ, ಅಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ತಮಿಳರಿಗೆ ಮೀಸಲಾಗಬೇಕೆಂದು ಆಗ್ರಹಿಸಿಹೋರಾಟ ಆರಂಭಿಸಿದ್ದಾರೆ. ಹಿಂದಿ ವಿರುದ್ಧದ ಹೋರಾಟ, ಏಕ ಸಂಸ್ಕøತಿಯ ವಿರುದ್ಧದ ಹೋರಾಟದಲ್ಲಿ ಮೊದಲಿಗರಾಗಿರುವ ದ್ರಾವಿಡರಿಂದ ಸ್ಫೂರ್ತಿ ಪಡೆದು ಕನ್ನಡ ನಾಡಿನಲ್ಲೂ ಇದನ್ನು ಪಸರಿಸಲು ಕನ್ನಡ ಅಭಿಮಾನಿಗಳುಮುಂದಾಗಿದ್ದಾರೆ. ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂಬುದು ಅವರ ಆಶಯ. ಇದಕ್ಕೆ ನಮ್ಮ ಬೆಂಬಲವೂ ಇದೆ, ಆದರೆ ಇದು ಸ್ಥಳೀಯರು ವರ್ಸಸ್ ಹೊರಗಿನವರು ಎಂಬ ಸಂಘರ್ಷಕ್ಕೆ ಕಾರಣವಾಗುವ ಬದಲು, ನಿರುದ್ಯೋಗದ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಮಧ್ಯಪ್ರವೇಶಿಸಿದರು ಸರೋವರ್.

‘ಒಟ್ಟಾರೆ ಉದ್ಯೋಗಗಳ ಸಂಖ್ಯೆ ಹೆಚ್ಚಾದಲ್ಲಿ ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ ಉದ್ಯೋಗಗಳುಸೃಷ್ಟಿಯಾಗುವುದರ ಬದಲಿಗೆ ಕಡಿತವಾಗುತ್ತಿರುವುದರಿಂದ ಈ ಸಮಸ್ಯೆ ದಿನೇ ದಿನೇ ಉಲ್ಭಣಗೊಳ್ಳುತ್ತಿದೆ. ಕೆಲವೊಮ್ಮೆಈ ಸಮಸ್ಯೆಗೆ ಸರ್ಕಾರವನ್ನು, ಅವರ ಆರ್ಥಿಕ ನೀತಿಗಳನ್ನು ಟೀಕಿಸುವುದರ ಬದಲು ಬೇರೆ ರಾಜ್ಯದ ವಲಸಿಗರನ್ನುದೂಷಿಸುವುದು ನಡೆದಿದೆ. ಇದು ಸರಿಯಾದುದ್ದಲ್ಲ. ಅವರು ಸಹ ಸರ್ಕಾರದ ನಿರ್ಲಕ್ಷ್ಯತನದ ಕಾರಣದಿಂದಾದ ಬಡವರೆಹೊರತು ಮತ್ಯಾರು ಅಲ್ಲ. ಒಟ್ಟಾರೆ ನಮ್ಮ ಪಾಲಿಸಿಗಳು ಬದಲಾಗದ ಹೊರತು ಪರಿಸ್ಥಿತಿ ಬದಲಾಗುವುದಿಲ್ಲ ಅನ್ನುವುದಕಟುವಾಸ್ತವವಾಗಿದೆ.

ಆದರೆ ಇದೇ ಸಂದರ್ಭದಲ್ಲಿ ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ಈ ನಾಲ್ಕು ರಾಜ್ಯಗಳೇಉಳಿದೆಲ್ಲಾ ರಾಜ್ಯಗಳು ಕಟ್ಟುವಷ್ಟು ತೆರಿಗೆಯನ್ನು ಕಟ್ಟುತ್ತೇವೆ. ಆದರೆ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರುವ ಅನುದಾನದವಿಷಯದಲ್ಲಿ ಮಾತ್ರ ತಾರತಮ್ಯ ಮಾಡಲಾಗುತ್ತಿದೆ. ಒಂದು ಒಕ್ಕೂಟ ವ್ಯವಸ್ಥೆಯಾಗಿ ಸರಿಯಾಗಿ ನಡೆಸಿಕೊಳ್ಳಬೇಕಾದಕೇಂದ್ರ ಸರ್ಕಾರವು ಉತ್ತರದ ರಾಜ್ಯಗಳ ಕಣ್ಣಿಗೆ ಬೆಣ್ಣೆ, ದಕ್ಷಿಣದ ರಾಜ್ಯಗಳ ಕಣ್ಣಿಗೆ ಸುಣ್ಣ ಎಂಬ ರೀತಿ ವರ್ತಿಸುತ್ತಿದೆ.ರೈತರ ಸಾಲಮನ್ನಾ, ಅಂತರಾಜ್ಯ ನದಿಗಳ ವಿವಾದ, ಹಿಂದಿ ಹೇರಿಕೆಯ ವಿಷಯದಲ್ಲಿ ಇದು ಸ್ಪಷ್ಟವಾಗಿದೆ.’

ಇಂತಹ ಸಂದರ್ಭದಲ್ಲಿ ತಮಿಳುನಾಡು ಇದೆಲ್ಲದರ ವಿರುದ್ಧ ದನಿಯೆತ್ತುತ್ತಿದೆ. ಕರ್ನಾಟಕವೂ ಕೈಜೋಡಿಸುತ್ತಿದೆ. ಇದರಜೊತೆಗೇನೆ ಸ್ಥಳೀಯರು ಎಂದರೇನು, ಕರ್ನಾಟಕದವರು ಬೇರೆ ರಾಜ್ಯಕ್ಕೆ ವಲಸೆ ಹೋಗುವುದಿಲ್ಲವೇ? ಎಂಬ ಪ್ರಶ್ನೆಯೂಎದುರಾಗಿದೆ. ಇದರಿಂದ ಉದ್ಯೋಗದ ಕುರಿತು, ಸ್ಥಳೀಯತೆಯ ಕುರಿತು ಚರ್ಚೆಗೆ ಒಳ್ಳೆಯ ಸಂದರ್ಭ ಬಂದಿದೆ. ಹಾಗಾಗಿಎಲ್ಲಾ ದೃಷ್ಟಿಕೋನಗಳಿಂದಲೂ ಆರೋಗ್ಯ ಚರ್ಚೆ ನಡೆಸಲು ನಾನುಗೌರಿ.ಕಾಂ ವೇದಿಕೆ ಒದಗಿಸುತ್ತದೆ. ಓದುಗರು ಸಹಬರೆಯಬೇಕೆಂದು ಕೋರುತ್ತೇವೆ.

ನಿಮ್ಮ ಬರಹಗಳನ್ನು 7353770202ಗೆ ವಾಟ್ಸಾಪ್ ಮೂಲಕ ಅಥವಾ [email protected] ಗೆ ಇ-ಮೇಲ್ ಮೂಲಕ ಕಳಿಸಬಹುದು.

ಇದನ್ನು ಓದಿ

ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಕನ್ನಡಿಗರಿಗೆ ಮೀಸಲಿರಲಿ ಪ್ರಚಾರಾಂದೋಲನದ ಕುರಿತು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...