Homeಕರ್ನಾಟಕಕಾರವಾರ: ಕಿಮ್ಸ್‌ನಲ್ಲಿ ವಿಡಿಯೋ-ಆಡಿಯೋ ಗುದುಮುರಿಗೆ!!

ಕಾರವಾರ: ಕಿಮ್ಸ್‌ನಲ್ಲಿ ವಿಡಿಯೋ-ಆಡಿಯೋ ಗುದುಮುರಿಗೆ!!

- Advertisement -
- Advertisement -

ಕಾರವಾರದ ಮೆಡಿಕಲ್ ಕಾಲೇಜು ಉರುಫ್ ಕಿಮ್ಸ್ ಗಲೀಜು-ಗಲಾಟೆ-ಗುಳುಂಗಳಿಂದ ಗಬ್ಬೆದ್ದು ನಾರುತ್ತಿದೆ. ಈ ಕಿಮ್ಸ್ ಶುರುವಾದಾಗಿಂದಲೂ ಅಲ್ಲಿ ಆಡಳಿತದಲ್ಲಿ ‘ಕಾರವಾರ ರಿಪಬ್ಲಿಕ್’ ಕಿಂಗ್‍ಗಳು ಕೈಯಾಡಿಸುತ್ತಲೇ ಬಂದಿದ್ದಾರೆ. ಆರಂಭದಲ್ಲಿ ತಮ್ಮೊಂದಿಗೆ ಹೊಂದಿಕೊಂಡಿದ್ದ, ನಂತರ ಸೆಟೆದು ನಿಂತಿದ್ದ ಡೀನ್ ಕಮ್ ಡೈರೆಕ್ಟರ್ ಡಾ| ದೊಡ್ಮನಿಯನ್ನು ಎತ್ತಗಂಡಿ ಮಾಡಿಸಿ ಅನರ್ಹ ಡಾ| ಗಜಾನನ ನಾಯಕ್‍ನನ್ನು ಇದೇ ಕಾರವಾರ್ ರಿಪಬ್ಲಿಕ್ ಪ್ರತಿಷ್ಠಾಪಿಸಿಕೊಂಡಿತ್ತು. ಆತನಿಂದ ಜಿಲ್ಲಾ ಆಸ್ಪತ್ರೆ ನಂದನವನವಾಗುತ್ತದೆ; ರೋಗಿಗಳಿಗೆ ತೊಂದರೆ-ಕೊರತೆಯೆಂಬುದೇ ಆಗುವುದಿಲ್ಲ ಎಂಬಂತೆ ರಿಪಬ್ಲಿಕ್ ಮಾಫಿಯಾ ಬಿಂಬಿಸಿತ್ತು. ಆದರೆ ಎಂದೂ ಕ್ಲಿನಿಕಲ್ ಪ್ರಾಕ್ಟೀಸ್ ಮಾಡದ ಡಾ| ಗಜಾನನ ವಕ್ಕರಿಸಿದ್ದೇ ತಡ, ಕಿಮ್ಸ್‍ನಲ್ಲಿ ಸರಣಿ ಅವಾಂತರ-ಅನಾಹುತ-ಆಧ್ವಾನ ಆಗಹತ್ತಿದೆ……..

ಕಿಮ್ಸ್‍ನ ಕೋವಿಡ್-19 ವಾರ್ಡ್‍ಂತೂ ರೌರವ ನರಕ. ವಾರ್ಡ್ ತುಂಬ ಕಸ-ಕೊಚ್ಚೆ ಶುದ್ಧ ಕುಡಿಯುವ ನೀರಿಗೂ ಗತಿಯಿಲ್ಲ. ಹೈಜೀನಿಕ್ ಊಟ-ತಿಂಡಿ ಕೇಳಲೇಬೇಡಿ. ಡಾಕ್ಟರ್-ದಾದಿಯರು ಬಂದರೆ ಬಂದರು, ಇಲ್ಲದಿದ್ದರೆ ಇಲ್ಲ. ಸ್ವಚ್ಛತಾ ಕರ್ಮಚಾರಿಗಳಂತೂ ಕಾಣುವುದೇ ಇಲ್ಲ. ಕಿಮ್ಸ್ ಡೈರೆಕ್ಟರ್ ಡಾ| ಗಜಾನನ ಮತ್ತು ವೈದ್ಯಕೀಯ ಅಧೀಕ್ಷರು, ಡಾ| ಕುಡ್ತರ್‍ಕರ್ ಪಿಪಿಇ ಕಿಟ್ ಧರಿಸಿ ವಾರ್ಡಿಗೆ ಹೋದದ್ದೇ ಇಲ್ಲ!! ರೋಗ ನಿರೋಧಕ ಶಕ್ತಿಯಿದ್ದ ರೋಗಿ ಕಿಮ್ಸ್‍ನಿಂದ ಬಚಾವಾಗಿ ಬರಬೇಕೇ ಹೊರತು ಇಲ್ಲಿಯ ಶುಶ್ರೂಷೆಯಿಂದ ಬದುಕಲು ಸಾಧ್ಯವೇ ಇಲ್ಲ. ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಉತ್ಸಾಹಿ ಐಎಎಸ್ ಅಧಿಕಾರಿ ಮಹಮ್ಮದ್ ರೋಷನ್ ಕೋವಿಡ್ ಕೇಂದ್ರದ ಉಸ್ತುವಾರಿ ನೋಡಿಕೊಂಡಷ್ಟು ದಿನ ಯಾವುದೇ ಸಮಸ್ಯೆಯಿರಲಿಲ್ಲ.

ಕಿಮ್ಸ್ ಡೈರೆಕ್ಟರ್ ಡಾ| ಗಜಾನನ ಮತ್ತು ಸುಪರಿಂಡೆಂಟೆಂಟ್ ಡಾ| ಕುಡ್ತರ್‍ಕರ್ ಕೋವಿಡ್ ಕೇಂದ್ರದ ಯಜಮಾನಿಕೆಗಾಗಿ ಲಾಬಿ ಮಾಡುತ್ತಿದ್ದಂತೆಯೇ ಜಿಲ್ಲಾಡಳಿತ ಅಂತರ ಕಾಯ್ದುಕೊಂಡಿತು. ಕೋವಿಡ್ ಕೇಂದ್ರ ಕಬ್ಜಾ ಮಾಡಿಕೊಂಡ ಡಾ| ಗಜಾನನ ಸಿಇಓ ರೊಷನ್‍ರ ಸಾಧನೆ ಶ್ರಮವೆಲ್ಲ ತನ್ನ ಸಾಹಸವೆಂಬಂತೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಕಾರವಾರದ ಅವರ ಜಾತಿವಂತರ ಪತ್ರಿಕೆಯಂತೂ ‘ಮೃತ್ಯುಂಜಯ’ ಎಂಬ ಹಾಸ್ಯಾಸ್ಪದ ಬಿರುದು ಕೊಟ್ಟುಬಿಟ್ಟಿತು.

ಸೋಂಕಿತರು ಗುಣವಾಗಿ ಹೋಗುವಾಗ ಹೂವು ಕೊಟ್ಟು ಚಪ್ಪಾಳೆ ಹೊಡೆದು ಫೋಟೋ ಸೆಷನ್ ನಡೆಸಿ ಕಾಳಜಿಯ ವೈದ್ಯಾಗ್ರೇಸನ ಪೋಸು ಕೊಡುತ್ತಿದ್ದವರ ಬಣ್ಣ ಕಳೆದ 10-7-2020ರಂದು ಬಯಲಾಗಿ ಹೋಯಿತು. ಬೆಂಗಳೂರಲ್ಲಿ ಚಾರ್ಟ್‍ಟೆಡ್ ಅಕೌಂಟೆಂಟ್ ಉದ್ಯೋಗ ಮಾಡಿಕೊಂಡಿದ್ದ ಕಾರವಾರದ ನಿತಿನ್ ನಾಯಕ್ ಎಂಬ ತರುಣ ಮೂರು ದಿನಗಳ ಹಿಂದೆ ಈ ಕೋವಿಡ್ ಕೇಂದ್ರಕ್ಕೆ ದಾಖಲಾಗಿದ್ದ. ಅಲ್ಲಿದ್ದ ಸೋಂಕಿತರೆಲ್ಲ ಹೀನಾಯ ಸ್ಥಿತಿಯಲ್ಲಿದ್ದರು; ಮೂರು ದಿನ ನಿತಿನ್ ಸಹ ಹಿಂಸೆ ಅನುಭವಿಸಿದ್ದಾನೆ. ಈತ ಇಡೀ ಉದ್ದಗಲಕ್ಕೆ ಓಡಾಡುತ್ತ ಅಲ್ಲಿಯ ಅವ್ಯವಸ್ಥೆ-ಅನೈರ್ಮಲ್ಯ-ಲೋಪ-ದೋಷ ಲೈವ್ ಕಮೆಂಟರಿ ಮೂಲಕ ತೋರಿಸುತ್ತ ವಿಡಿಯೋ ಮಾಡಿಸಿಕೊಂಡಿದ್ದಾನೆ. ಆತನಿಗೆ ವಾರ್ಡ್‍ನ ಇತರ ಸೋಂಕಿತರು ಶೂಟಿಂಗ್‍ಗೆ ನೆರವಾಗಿದ್ದಾರೆ. ವಾರ್ಡಿಗೆ ಡಾಕ್ಟರ್ಸ್-ದಾದಿಯರು ಮತ್ತ ಸ್ವಚ್ಛತಾ ಕರ್ಮಚಾರಿಗಳ್ಯಾರು ಬರುತ್ತಿಲ್ಲ; ರೋಗಿಗಳ ಮೇಲೆ ಯಾರಿಗೂ ನಿಗಾಇಲ್ಲ ಎಂದಿರುವ ನಿತಿನ್ ವಾರ್ಡ್ ತುಂಬ ತುಂಬಿರುವ ಬಯೋಲಾಜಿಕಲ್ ತ್ಯಾಜ್ಯ, ನೀರು ನಿಂತು ಕೊಚ್ಚೆ ನಿರ್ಮಾಣವಾಗಿರುವುದು, ಬಿಸಿ ನೀರಿಗೂ ಗತಿಯಿಲ್ಲದಿರುವುದು, ಶೌಚಾಲಯದ ದುರವಸ್ಥೆ-ಅಸಹ್ಯ, ಅತಿ ಅವಶ್ಯವಾದ ನೀರೂ ಸರಬರಾಜಾಗದಿರುವುದು, ಸ್ವಚ್ಛತೆಯಿಲ್ಲದ ಊಟ-ಉಪಹಾರದ ಕತೆ ಹೇಳುತ್ತ ಹೊರಜಗತ್ತಿಗೆ ಕಳುಹಿಸಿದ್ದಾನೆ. ಇದಕ್ಕಿಂತ ಮುಖ್ಯವಾಗಿ 4 ದಿನಗಳ ಹಿಂದೆ ಅಸುನೀಗಿದ್ದ ಶಿರಸಿಯ ವ್ಯಕ್ತಿಗೆ ಸೇರಿದ ಹಾಸಿಗೆ-ಸಾಮಾನುಗಳು ಆತ ಜೀವ ಬಿಟ್ಟಲ್ಲೇ ಬಿದ್ದಿರುವುದು ತೋರಿಸಿದ್ದಾನೆ. ಆತ ಈ ವೀಡಿಯೋ ಶೇರ್ ಮಾಡಿದ ಹತ್ತೇ ನಿಮಿಷದಲ್ಲಿ ವೈರಲ್ ಆಗಿದೆ.

ಅಲ್ಲಿಗೆ ಡೀನ್ ಡಾ|ಗಜಾನನರ ಗ್ಯಾಂಗಿನ ಕರ್ಮಕಾಂಡ ಜಗಜ್ಜಾಹೀರಾಗಿ ಹೋಗಿದೆ. ಇದರಿಂದ ಕಂಗಾಲಾದ ಅವರ ಮರುದಿನವೇ ಗುಣಪಟ್ಟು ಬಿಡುಗಡೆಯಾದ ಸೋಂಕಿತರಿಂದ ಆಸ್ಪತ್ರೆಯಲ್ಲಿ ಅತ್ಯುತ್ತಮ ವ್ಯವಸ್ಥೆಯಿದೆ…. ಹಣ್ಣು.. ಮೊಟ್ಟೆ… ಭರ್ಜರಿ ಊಟ ಕೊಡಲಾಗುತ್ತದೆ.. ವೈದ್ಯರು-ದಾದಿಯರು ಕಾಳಜಿ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ.. ಎಂದೆಲ್ಲಾ ಹೇಳಿಸಿ ವೀಡಿಯೋ ಮಾಡಿಸಿದ್ದಾರೆ. ಈ ವಿಡಿಯೋದಲ್ಲಿ ಬೇಡವೆಂದರೂ ಡಾ| ಗಜಾನನ ಮತ್ತು ಡಾ| ಕುಡ್ತರ್ಕರ್ ಕಾಣಿಸುತ್ತಾರೆ. ಪ್ರತಿದಿನ ಸಂಜೆ ನಾಲ್ಕು ಗಂಟೆಗೆ ತ್ಯಾಜ್ಯ ಹೊರಸಾಗಿಸಲಾಗುತ್ತದೆಂದು ಡಾ| ಗಜಾನನ ಹೇಳಿದ್ದಾರೆ. ಆದರೆ ವಾರ್ಡ್‍ನ ಮೂಲೆ ಮೂಲೆಯಲ್ಲಿ ನಾಲ್ಕೈದು ದಿನ ಸಂಗ್ರಹವಾಗುವಷ್ಟು ತ್ಯಾಜ್ಯ ತುಂಬಿರುವುದು ಅವರು ಹಸೀ ಸುಳ್ಳು ಹೇಳುತ್ತಿದ್ದಾರೆಂಬುದನ್ನು ಸಾಬೀತುಪಡಿಸುತ್ತದೆ.

ಇಷ್ಟಕ್ಕೇ ಅವರ ಹತಾಶೆ-ಆಕ್ರೋಶ ನಿಂತಿಲ್ಲ. ಅವ್ಯವಸ್ಥೆಯ ವಿಡಿಯೋ ಮಾಡಿದ ತರುಣ ಮತ್ತವನಿಗೆ ಸಹಾಯ ಮಾಡಿದ ಸೋಂಕಿತರನ್ನು ಆಸ್ಪತ್ರೆಯ ಬಾಗಿಲಿಗೆ ಕರೆಸಿಕೊಂಡಿದ್ದಾರೆ. ಗಾಜಿನ ಗೋಡೆಯ ಆಚೆ ನಿಂತು ಪಕ್ಕ ರೌಡಿಯಂತೆ ಹಾರಾಡಿ, ಸೋಂಕಿತರೊಂದಿಗೆ ಜಗಳವಾಡಿದ್ದಾರೆ. ವಿಡಿಯೋ ಮಾಡಿದ್ದಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರ ವಿಡಿಯೋ ಕೂಡ ಕ್ಷಣಾರ್ಧದಲ್ಲಿ ವೈರಲ್ ಆಗಿಹೋಗಿದೆ. ಈ ಎಲ್ಲಾ ವಿಡಿಯೋಗಳು, ಫೋಟೋಗಳು ನಮಗೆ ಲಭ್ಯವಾಗಿವೆ. ಈ ಪುರಾವೆಗಳಿಂದ ಡೀನ್ ಸಾಹೇಬರ ‘ಯೋಗ್ಯತೆ’ ಊರಿಗೆಲ್ಲ ಪಕ್ಕ ಆಗಿದೆ!! ಅವರ ಪರವಾಗಿ ಪತ್ರಕರ್ತ ಮಾಧವ ನಾಯ್ಕರೇಕೆ ವಕಾಲತ್ತು ವಹಿಸುತ್ತಿದ್ದಾರೆ ಎಂಬುದೇ ಸೋಜಿಗದ ಸಂಗತಿ.

ವಿಡಿಯೋ ಧೀರ ನಿತಿನ್ ಮಾಧವನಾಯ್ಕ್‍ರ ಜಾತಿ ಬಂಧು. ಆತನ ತಂದೆ ಕಾರವಾರದ ಪ್ರಮುಖ ರಾಜಕಾರಣಿ. ಹೀಗಾಗಿ ನಿತಿನ್‍ಗೆ ಪೂಸಿ ಹೊಡೆಯಬೇಕಾಗಿ ಬಂತು. ಮಾಧವನಾಯ್ಕ್ ನಿನಗೆ ಸಪೋರ್ಟ್ ಮಾಡ್ತೇನೆ ಎಂದು ನಿತಿನ್‍ಗೆ ಹೇಳಿದ್ದಂತೆ ಕಾಣುತ್ತಿದೆ. ಆದರೆ ಅವರೇ ಮರುದಿನ ನಿತಿನ್ ವಿಡಿಯೋ ಮಾಡಿದ್ದು ತಪ್ಪು ಎಂದು ಹೇಳಿಕೆ ಬದಲಾಯಿಸಿದ್ದರು. ಇದರಿಂದ ಕೆರಳಿದ ನಿತಿನ್ ಮಾಧವನಾಯ್ಕ್‍ರಿಗೆ ಫೋನಾಯಿಸಿ “ಇದೆಂಥ ವಿಶ್ವಾಸ ದ್ರೋಹ ಸಾರ್” ಎಂದಿದ್ದಾನೆ. ಕಕ್ಕಾಬಿಕ್ಕಿಯಾದ ಮಾಧವ ಏನೋ ಸಮಜಾಯಿಷಿ ಕೊಟ್ಟಿದ್ದಾರೆ. ನಿತಿನ್ ತನ್ನನ್ನು ನಾಲ್ಕು ದಿನದಿಂದ ಒಬ್ಬೇ ಒಬ್ಬ ಡಾಕ್ಟರ್ ಅಥವಾ ನರ್ಸ್ ಮಾತಾಡಿಸಿಲ್ಲ, ತಾನು ಕೊಳಚೆಯಲ್ಲಿದ್ದೇನೆ ಎಂದಿದ್ದಾನೆ. ಹಾಗಿದ್ದರೆ ಡಾ.ಗಜಾನನರಿಗೆ ಫೋನ್ ಸಂಪರ್ಕ ಮಡುತ್ತೇನೆ ನೀನೇ ಮಾತಾಡು ಎಂದಿದ್ದಾನೆ. ಮೂವರ ನಡುವೆ ಬರೋಬ್ಬರಿ ಮುವ್ವತ್ತಾ ಮೂರುವರೆ ನಿಮಿಷ ಕಾನ್ಫರೆನ್ಸ್ ಸಂಭಾಷಣೆ ನಡೆದಿದೆ.

ನಿತಿನ್‍ನ ಒಂದು ಪ್ರಶ್ನೆಗೂ ಉತ್ತರಿಸಲಾಗದೆ ಡಾ| ಗಜಾನನ ಮತ್ತು ಮಾಧವ ನಾಯ್ಕ್ ತಡವರಿಸಿದ್ದಾರೆ! ಈ ಆಡಿಯೋ ಸಹ ಜಿಲ್ಲೆಯಲ್ಲಿ ಹಿಟ್ ಆಗಿದೆ! ಈ ವಿಡಿಯೋ ಮತ್ತು ಆಡಿಯೋ ವಾರ್ ಜಿಲ್ಲಾಧಿಕಾರಿ ಡಾ| ಹರೀಶ್‍ಕುಮಾರ್ ಮತ್ತು ಶಾಸಕಿ ರೂಪಾಲಿ ನಾಯ್ಕ್ “ಸುಮ್ಮನೆ” ನೋಡಿದ್ದು ಅನೇಕ ಅನುಮಾನ ಮೂಡಿಸಿದೆ. ‘ಕೊರೊನಾ ಸಂಹಾರ ಸೈನ್ಯ’ದ ಸುಪ್ರೀಂ ಕಮಾಂಡರ್ ಆಗಿರುವ ಜಿಲ್ಲಾಧಿಕಾರಿ ಕಿಮ್ಸ್‍ನ ಕರ್ಮಕಾಂಡ ಕಂಡೂ ಕಾಣದಂತಿರುವುದೇಕೆ? ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡ್ತೇನೆಂದು ಭರವಸೆ ನೀಡುವ ಶಾಸಕಿ ರೂಪಾಲಿಯಮ್ಮ ಕೋವಿಡ್ ರೋಗಿಗಳಿಗೆ ಕೊಡಬೇಕಾದ ಮೊಟ್ಟೆ ಸಿಗದಿದ್ದರೂ ಕೇಳುತ್ತಿಲ್ಲ! ಹೀಗಿರುವಾಗ ಅದ್ಹೇಗೆ ಕಿಮ್ಸ್‍ನ ಅವ್ಯವಹಾರ-ಅವಾಂತರ ಪ್ರಶ್ನಿಸಿಯಾರು? ಒಟ್ಟಿನಲ್ಲಿ ಸಾವಿರಾರು ರೂಪಾಯಿ ಅನುದಾನದ ಕಿಮ್ಸ್‍ನ ಕೋವಿಡ್ ವಾರ್ಡ್‍ನಲ್ಲಿ ಬೇಲಿಯೇ ಹೊಲ ಮೇಯುತ್ತಿದೆ.


ಇದನ್ನು ಓದಿ: ಕರ್ನಾಟಕದ ಕೊರೊನಾ ಡಾಕ್ಟರ್ ಏನು ಹೇಳುತ್ತಾರೆ? ಡಾ.ಆಸಿಮ ಬಾನು ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...