Homeಕರ್ನಾಟಕಕಾರವಾರ: ಕಿಮ್ಸ್‌ನಲ್ಲಿ ವಿಡಿಯೋ-ಆಡಿಯೋ ಗುದುಮುರಿಗೆ!!

ಕಾರವಾರ: ಕಿಮ್ಸ್‌ನಲ್ಲಿ ವಿಡಿಯೋ-ಆಡಿಯೋ ಗುದುಮುರಿಗೆ!!

- Advertisement -
- Advertisement -

ಕಾರವಾರದ ಮೆಡಿಕಲ್ ಕಾಲೇಜು ಉರುಫ್ ಕಿಮ್ಸ್ ಗಲೀಜು-ಗಲಾಟೆ-ಗುಳುಂಗಳಿಂದ ಗಬ್ಬೆದ್ದು ನಾರುತ್ತಿದೆ. ಈ ಕಿಮ್ಸ್ ಶುರುವಾದಾಗಿಂದಲೂ ಅಲ್ಲಿ ಆಡಳಿತದಲ್ಲಿ ‘ಕಾರವಾರ ರಿಪಬ್ಲಿಕ್’ ಕಿಂಗ್‍ಗಳು ಕೈಯಾಡಿಸುತ್ತಲೇ ಬಂದಿದ್ದಾರೆ. ಆರಂಭದಲ್ಲಿ ತಮ್ಮೊಂದಿಗೆ ಹೊಂದಿಕೊಂಡಿದ್ದ, ನಂತರ ಸೆಟೆದು ನಿಂತಿದ್ದ ಡೀನ್ ಕಮ್ ಡೈರೆಕ್ಟರ್ ಡಾ| ದೊಡ್ಮನಿಯನ್ನು ಎತ್ತಗಂಡಿ ಮಾಡಿಸಿ ಅನರ್ಹ ಡಾ| ಗಜಾನನ ನಾಯಕ್‍ನನ್ನು ಇದೇ ಕಾರವಾರ್ ರಿಪಬ್ಲಿಕ್ ಪ್ರತಿಷ್ಠಾಪಿಸಿಕೊಂಡಿತ್ತು. ಆತನಿಂದ ಜಿಲ್ಲಾ ಆಸ್ಪತ್ರೆ ನಂದನವನವಾಗುತ್ತದೆ; ರೋಗಿಗಳಿಗೆ ತೊಂದರೆ-ಕೊರತೆಯೆಂಬುದೇ ಆಗುವುದಿಲ್ಲ ಎಂಬಂತೆ ರಿಪಬ್ಲಿಕ್ ಮಾಫಿಯಾ ಬಿಂಬಿಸಿತ್ತು. ಆದರೆ ಎಂದೂ ಕ್ಲಿನಿಕಲ್ ಪ್ರಾಕ್ಟೀಸ್ ಮಾಡದ ಡಾ| ಗಜಾನನ ವಕ್ಕರಿಸಿದ್ದೇ ತಡ, ಕಿಮ್ಸ್‍ನಲ್ಲಿ ಸರಣಿ ಅವಾಂತರ-ಅನಾಹುತ-ಆಧ್ವಾನ ಆಗಹತ್ತಿದೆ……..

ಕಿಮ್ಸ್‍ನ ಕೋವಿಡ್-19 ವಾರ್ಡ್‍ಂತೂ ರೌರವ ನರಕ. ವಾರ್ಡ್ ತುಂಬ ಕಸ-ಕೊಚ್ಚೆ ಶುದ್ಧ ಕುಡಿಯುವ ನೀರಿಗೂ ಗತಿಯಿಲ್ಲ. ಹೈಜೀನಿಕ್ ಊಟ-ತಿಂಡಿ ಕೇಳಲೇಬೇಡಿ. ಡಾಕ್ಟರ್-ದಾದಿಯರು ಬಂದರೆ ಬಂದರು, ಇಲ್ಲದಿದ್ದರೆ ಇಲ್ಲ. ಸ್ವಚ್ಛತಾ ಕರ್ಮಚಾರಿಗಳಂತೂ ಕಾಣುವುದೇ ಇಲ್ಲ. ಕಿಮ್ಸ್ ಡೈರೆಕ್ಟರ್ ಡಾ| ಗಜಾನನ ಮತ್ತು ವೈದ್ಯಕೀಯ ಅಧೀಕ್ಷರು, ಡಾ| ಕುಡ್ತರ್‍ಕರ್ ಪಿಪಿಇ ಕಿಟ್ ಧರಿಸಿ ವಾರ್ಡಿಗೆ ಹೋದದ್ದೇ ಇಲ್ಲ!! ರೋಗ ನಿರೋಧಕ ಶಕ್ತಿಯಿದ್ದ ರೋಗಿ ಕಿಮ್ಸ್‍ನಿಂದ ಬಚಾವಾಗಿ ಬರಬೇಕೇ ಹೊರತು ಇಲ್ಲಿಯ ಶುಶ್ರೂಷೆಯಿಂದ ಬದುಕಲು ಸಾಧ್ಯವೇ ಇಲ್ಲ. ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಉತ್ಸಾಹಿ ಐಎಎಸ್ ಅಧಿಕಾರಿ ಮಹಮ್ಮದ್ ರೋಷನ್ ಕೋವಿಡ್ ಕೇಂದ್ರದ ಉಸ್ತುವಾರಿ ನೋಡಿಕೊಂಡಷ್ಟು ದಿನ ಯಾವುದೇ ಸಮಸ್ಯೆಯಿರಲಿಲ್ಲ.

ಕಿಮ್ಸ್ ಡೈರೆಕ್ಟರ್ ಡಾ| ಗಜಾನನ ಮತ್ತು ಸುಪರಿಂಡೆಂಟೆಂಟ್ ಡಾ| ಕುಡ್ತರ್‍ಕರ್ ಕೋವಿಡ್ ಕೇಂದ್ರದ ಯಜಮಾನಿಕೆಗಾಗಿ ಲಾಬಿ ಮಾಡುತ್ತಿದ್ದಂತೆಯೇ ಜಿಲ್ಲಾಡಳಿತ ಅಂತರ ಕಾಯ್ದುಕೊಂಡಿತು. ಕೋವಿಡ್ ಕೇಂದ್ರ ಕಬ್ಜಾ ಮಾಡಿಕೊಂಡ ಡಾ| ಗಜಾನನ ಸಿಇಓ ರೊಷನ್‍ರ ಸಾಧನೆ ಶ್ರಮವೆಲ್ಲ ತನ್ನ ಸಾಹಸವೆಂಬಂತೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಕಾರವಾರದ ಅವರ ಜಾತಿವಂತರ ಪತ್ರಿಕೆಯಂತೂ ‘ಮೃತ್ಯುಂಜಯ’ ಎಂಬ ಹಾಸ್ಯಾಸ್ಪದ ಬಿರುದು ಕೊಟ್ಟುಬಿಟ್ಟಿತು.

ಸೋಂಕಿತರು ಗುಣವಾಗಿ ಹೋಗುವಾಗ ಹೂವು ಕೊಟ್ಟು ಚಪ್ಪಾಳೆ ಹೊಡೆದು ಫೋಟೋ ಸೆಷನ್ ನಡೆಸಿ ಕಾಳಜಿಯ ವೈದ್ಯಾಗ್ರೇಸನ ಪೋಸು ಕೊಡುತ್ತಿದ್ದವರ ಬಣ್ಣ ಕಳೆದ 10-7-2020ರಂದು ಬಯಲಾಗಿ ಹೋಯಿತು. ಬೆಂಗಳೂರಲ್ಲಿ ಚಾರ್ಟ್‍ಟೆಡ್ ಅಕೌಂಟೆಂಟ್ ಉದ್ಯೋಗ ಮಾಡಿಕೊಂಡಿದ್ದ ಕಾರವಾರದ ನಿತಿನ್ ನಾಯಕ್ ಎಂಬ ತರುಣ ಮೂರು ದಿನಗಳ ಹಿಂದೆ ಈ ಕೋವಿಡ್ ಕೇಂದ್ರಕ್ಕೆ ದಾಖಲಾಗಿದ್ದ. ಅಲ್ಲಿದ್ದ ಸೋಂಕಿತರೆಲ್ಲ ಹೀನಾಯ ಸ್ಥಿತಿಯಲ್ಲಿದ್ದರು; ಮೂರು ದಿನ ನಿತಿನ್ ಸಹ ಹಿಂಸೆ ಅನುಭವಿಸಿದ್ದಾನೆ. ಈತ ಇಡೀ ಉದ್ದಗಲಕ್ಕೆ ಓಡಾಡುತ್ತ ಅಲ್ಲಿಯ ಅವ್ಯವಸ್ಥೆ-ಅನೈರ್ಮಲ್ಯ-ಲೋಪ-ದೋಷ ಲೈವ್ ಕಮೆಂಟರಿ ಮೂಲಕ ತೋರಿಸುತ್ತ ವಿಡಿಯೋ ಮಾಡಿಸಿಕೊಂಡಿದ್ದಾನೆ. ಆತನಿಗೆ ವಾರ್ಡ್‍ನ ಇತರ ಸೋಂಕಿತರು ಶೂಟಿಂಗ್‍ಗೆ ನೆರವಾಗಿದ್ದಾರೆ. ವಾರ್ಡಿಗೆ ಡಾಕ್ಟರ್ಸ್-ದಾದಿಯರು ಮತ್ತ ಸ್ವಚ್ಛತಾ ಕರ್ಮಚಾರಿಗಳ್ಯಾರು ಬರುತ್ತಿಲ್ಲ; ರೋಗಿಗಳ ಮೇಲೆ ಯಾರಿಗೂ ನಿಗಾಇಲ್ಲ ಎಂದಿರುವ ನಿತಿನ್ ವಾರ್ಡ್ ತುಂಬ ತುಂಬಿರುವ ಬಯೋಲಾಜಿಕಲ್ ತ್ಯಾಜ್ಯ, ನೀರು ನಿಂತು ಕೊಚ್ಚೆ ನಿರ್ಮಾಣವಾಗಿರುವುದು, ಬಿಸಿ ನೀರಿಗೂ ಗತಿಯಿಲ್ಲದಿರುವುದು, ಶೌಚಾಲಯದ ದುರವಸ್ಥೆ-ಅಸಹ್ಯ, ಅತಿ ಅವಶ್ಯವಾದ ನೀರೂ ಸರಬರಾಜಾಗದಿರುವುದು, ಸ್ವಚ್ಛತೆಯಿಲ್ಲದ ಊಟ-ಉಪಹಾರದ ಕತೆ ಹೇಳುತ್ತ ಹೊರಜಗತ್ತಿಗೆ ಕಳುಹಿಸಿದ್ದಾನೆ. ಇದಕ್ಕಿಂತ ಮುಖ್ಯವಾಗಿ 4 ದಿನಗಳ ಹಿಂದೆ ಅಸುನೀಗಿದ್ದ ಶಿರಸಿಯ ವ್ಯಕ್ತಿಗೆ ಸೇರಿದ ಹಾಸಿಗೆ-ಸಾಮಾನುಗಳು ಆತ ಜೀವ ಬಿಟ್ಟಲ್ಲೇ ಬಿದ್ದಿರುವುದು ತೋರಿಸಿದ್ದಾನೆ. ಆತ ಈ ವೀಡಿಯೋ ಶೇರ್ ಮಾಡಿದ ಹತ್ತೇ ನಿಮಿಷದಲ್ಲಿ ವೈರಲ್ ಆಗಿದೆ.

ಅಲ್ಲಿಗೆ ಡೀನ್ ಡಾ|ಗಜಾನನರ ಗ್ಯಾಂಗಿನ ಕರ್ಮಕಾಂಡ ಜಗಜ್ಜಾಹೀರಾಗಿ ಹೋಗಿದೆ. ಇದರಿಂದ ಕಂಗಾಲಾದ ಅವರ ಮರುದಿನವೇ ಗುಣಪಟ್ಟು ಬಿಡುಗಡೆಯಾದ ಸೋಂಕಿತರಿಂದ ಆಸ್ಪತ್ರೆಯಲ್ಲಿ ಅತ್ಯುತ್ತಮ ವ್ಯವಸ್ಥೆಯಿದೆ…. ಹಣ್ಣು.. ಮೊಟ್ಟೆ… ಭರ್ಜರಿ ಊಟ ಕೊಡಲಾಗುತ್ತದೆ.. ವೈದ್ಯರು-ದಾದಿಯರು ಕಾಳಜಿ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ.. ಎಂದೆಲ್ಲಾ ಹೇಳಿಸಿ ವೀಡಿಯೋ ಮಾಡಿಸಿದ್ದಾರೆ. ಈ ವಿಡಿಯೋದಲ್ಲಿ ಬೇಡವೆಂದರೂ ಡಾ| ಗಜಾನನ ಮತ್ತು ಡಾ| ಕುಡ್ತರ್ಕರ್ ಕಾಣಿಸುತ್ತಾರೆ. ಪ್ರತಿದಿನ ಸಂಜೆ ನಾಲ್ಕು ಗಂಟೆಗೆ ತ್ಯಾಜ್ಯ ಹೊರಸಾಗಿಸಲಾಗುತ್ತದೆಂದು ಡಾ| ಗಜಾನನ ಹೇಳಿದ್ದಾರೆ. ಆದರೆ ವಾರ್ಡ್‍ನ ಮೂಲೆ ಮೂಲೆಯಲ್ಲಿ ನಾಲ್ಕೈದು ದಿನ ಸಂಗ್ರಹವಾಗುವಷ್ಟು ತ್ಯಾಜ್ಯ ತುಂಬಿರುವುದು ಅವರು ಹಸೀ ಸುಳ್ಳು ಹೇಳುತ್ತಿದ್ದಾರೆಂಬುದನ್ನು ಸಾಬೀತುಪಡಿಸುತ್ತದೆ.

ಇಷ್ಟಕ್ಕೇ ಅವರ ಹತಾಶೆ-ಆಕ್ರೋಶ ನಿಂತಿಲ್ಲ. ಅವ್ಯವಸ್ಥೆಯ ವಿಡಿಯೋ ಮಾಡಿದ ತರುಣ ಮತ್ತವನಿಗೆ ಸಹಾಯ ಮಾಡಿದ ಸೋಂಕಿತರನ್ನು ಆಸ್ಪತ್ರೆಯ ಬಾಗಿಲಿಗೆ ಕರೆಸಿಕೊಂಡಿದ್ದಾರೆ. ಗಾಜಿನ ಗೋಡೆಯ ಆಚೆ ನಿಂತು ಪಕ್ಕ ರೌಡಿಯಂತೆ ಹಾರಾಡಿ, ಸೋಂಕಿತರೊಂದಿಗೆ ಜಗಳವಾಡಿದ್ದಾರೆ. ವಿಡಿಯೋ ಮಾಡಿದ್ದಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರ ವಿಡಿಯೋ ಕೂಡ ಕ್ಷಣಾರ್ಧದಲ್ಲಿ ವೈರಲ್ ಆಗಿಹೋಗಿದೆ. ಈ ಎಲ್ಲಾ ವಿಡಿಯೋಗಳು, ಫೋಟೋಗಳು ನಮಗೆ ಲಭ್ಯವಾಗಿವೆ. ಈ ಪುರಾವೆಗಳಿಂದ ಡೀನ್ ಸಾಹೇಬರ ‘ಯೋಗ್ಯತೆ’ ಊರಿಗೆಲ್ಲ ಪಕ್ಕ ಆಗಿದೆ!! ಅವರ ಪರವಾಗಿ ಪತ್ರಕರ್ತ ಮಾಧವ ನಾಯ್ಕರೇಕೆ ವಕಾಲತ್ತು ವಹಿಸುತ್ತಿದ್ದಾರೆ ಎಂಬುದೇ ಸೋಜಿಗದ ಸಂಗತಿ.

ವಿಡಿಯೋ ಧೀರ ನಿತಿನ್ ಮಾಧವನಾಯ್ಕ್‍ರ ಜಾತಿ ಬಂಧು. ಆತನ ತಂದೆ ಕಾರವಾರದ ಪ್ರಮುಖ ರಾಜಕಾರಣಿ. ಹೀಗಾಗಿ ನಿತಿನ್‍ಗೆ ಪೂಸಿ ಹೊಡೆಯಬೇಕಾಗಿ ಬಂತು. ಮಾಧವನಾಯ್ಕ್ ನಿನಗೆ ಸಪೋರ್ಟ್ ಮಾಡ್ತೇನೆ ಎಂದು ನಿತಿನ್‍ಗೆ ಹೇಳಿದ್ದಂತೆ ಕಾಣುತ್ತಿದೆ. ಆದರೆ ಅವರೇ ಮರುದಿನ ನಿತಿನ್ ವಿಡಿಯೋ ಮಾಡಿದ್ದು ತಪ್ಪು ಎಂದು ಹೇಳಿಕೆ ಬದಲಾಯಿಸಿದ್ದರು. ಇದರಿಂದ ಕೆರಳಿದ ನಿತಿನ್ ಮಾಧವನಾಯ್ಕ್‍ರಿಗೆ ಫೋನಾಯಿಸಿ “ಇದೆಂಥ ವಿಶ್ವಾಸ ದ್ರೋಹ ಸಾರ್” ಎಂದಿದ್ದಾನೆ. ಕಕ್ಕಾಬಿಕ್ಕಿಯಾದ ಮಾಧವ ಏನೋ ಸಮಜಾಯಿಷಿ ಕೊಟ್ಟಿದ್ದಾರೆ. ನಿತಿನ್ ತನ್ನನ್ನು ನಾಲ್ಕು ದಿನದಿಂದ ಒಬ್ಬೇ ಒಬ್ಬ ಡಾಕ್ಟರ್ ಅಥವಾ ನರ್ಸ್ ಮಾತಾಡಿಸಿಲ್ಲ, ತಾನು ಕೊಳಚೆಯಲ್ಲಿದ್ದೇನೆ ಎಂದಿದ್ದಾನೆ. ಹಾಗಿದ್ದರೆ ಡಾ.ಗಜಾನನರಿಗೆ ಫೋನ್ ಸಂಪರ್ಕ ಮಡುತ್ತೇನೆ ನೀನೇ ಮಾತಾಡು ಎಂದಿದ್ದಾನೆ. ಮೂವರ ನಡುವೆ ಬರೋಬ್ಬರಿ ಮುವ್ವತ್ತಾ ಮೂರುವರೆ ನಿಮಿಷ ಕಾನ್ಫರೆನ್ಸ್ ಸಂಭಾಷಣೆ ನಡೆದಿದೆ.

ನಿತಿನ್‍ನ ಒಂದು ಪ್ರಶ್ನೆಗೂ ಉತ್ತರಿಸಲಾಗದೆ ಡಾ| ಗಜಾನನ ಮತ್ತು ಮಾಧವ ನಾಯ್ಕ್ ತಡವರಿಸಿದ್ದಾರೆ! ಈ ಆಡಿಯೋ ಸಹ ಜಿಲ್ಲೆಯಲ್ಲಿ ಹಿಟ್ ಆಗಿದೆ! ಈ ವಿಡಿಯೋ ಮತ್ತು ಆಡಿಯೋ ವಾರ್ ಜಿಲ್ಲಾಧಿಕಾರಿ ಡಾ| ಹರೀಶ್‍ಕುಮಾರ್ ಮತ್ತು ಶಾಸಕಿ ರೂಪಾಲಿ ನಾಯ್ಕ್ “ಸುಮ್ಮನೆ” ನೋಡಿದ್ದು ಅನೇಕ ಅನುಮಾನ ಮೂಡಿಸಿದೆ. ‘ಕೊರೊನಾ ಸಂಹಾರ ಸೈನ್ಯ’ದ ಸುಪ್ರೀಂ ಕಮಾಂಡರ್ ಆಗಿರುವ ಜಿಲ್ಲಾಧಿಕಾರಿ ಕಿಮ್ಸ್‍ನ ಕರ್ಮಕಾಂಡ ಕಂಡೂ ಕಾಣದಂತಿರುವುದೇಕೆ? ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡ್ತೇನೆಂದು ಭರವಸೆ ನೀಡುವ ಶಾಸಕಿ ರೂಪಾಲಿಯಮ್ಮ ಕೋವಿಡ್ ರೋಗಿಗಳಿಗೆ ಕೊಡಬೇಕಾದ ಮೊಟ್ಟೆ ಸಿಗದಿದ್ದರೂ ಕೇಳುತ್ತಿಲ್ಲ! ಹೀಗಿರುವಾಗ ಅದ್ಹೇಗೆ ಕಿಮ್ಸ್‍ನ ಅವ್ಯವಹಾರ-ಅವಾಂತರ ಪ್ರಶ್ನಿಸಿಯಾರು? ಒಟ್ಟಿನಲ್ಲಿ ಸಾವಿರಾರು ರೂಪಾಯಿ ಅನುದಾನದ ಕಿಮ್ಸ್‍ನ ಕೋವಿಡ್ ವಾರ್ಡ್‍ನಲ್ಲಿ ಬೇಲಿಯೇ ಹೊಲ ಮೇಯುತ್ತಿದೆ.


ಇದನ್ನು ಓದಿ: ಕರ್ನಾಟಕದ ಕೊರೊನಾ ಡಾಕ್ಟರ್ ಏನು ಹೇಳುತ್ತಾರೆ? ಡಾ.ಆಸಿಮ ಬಾನು ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...