Homeಕರ್ನಾಟಕಕಾರವಾರ: ಕಿಮ್ಸ್‌ನಲ್ಲಿ ವಿಡಿಯೋ-ಆಡಿಯೋ ಗುದುಮುರಿಗೆ!!

ಕಾರವಾರ: ಕಿಮ್ಸ್‌ನಲ್ಲಿ ವಿಡಿಯೋ-ಆಡಿಯೋ ಗುದುಮುರಿಗೆ!!

- Advertisement -
- Advertisement -

ಕಾರವಾರದ ಮೆಡಿಕಲ್ ಕಾಲೇಜು ಉರುಫ್ ಕಿಮ್ಸ್ ಗಲೀಜು-ಗಲಾಟೆ-ಗುಳುಂಗಳಿಂದ ಗಬ್ಬೆದ್ದು ನಾರುತ್ತಿದೆ. ಈ ಕಿಮ್ಸ್ ಶುರುವಾದಾಗಿಂದಲೂ ಅಲ್ಲಿ ಆಡಳಿತದಲ್ಲಿ ‘ಕಾರವಾರ ರಿಪಬ್ಲಿಕ್’ ಕಿಂಗ್‍ಗಳು ಕೈಯಾಡಿಸುತ್ತಲೇ ಬಂದಿದ್ದಾರೆ. ಆರಂಭದಲ್ಲಿ ತಮ್ಮೊಂದಿಗೆ ಹೊಂದಿಕೊಂಡಿದ್ದ, ನಂತರ ಸೆಟೆದು ನಿಂತಿದ್ದ ಡೀನ್ ಕಮ್ ಡೈರೆಕ್ಟರ್ ಡಾ| ದೊಡ್ಮನಿಯನ್ನು ಎತ್ತಗಂಡಿ ಮಾಡಿಸಿ ಅನರ್ಹ ಡಾ| ಗಜಾನನ ನಾಯಕ್‍ನನ್ನು ಇದೇ ಕಾರವಾರ್ ರಿಪಬ್ಲಿಕ್ ಪ್ರತಿಷ್ಠಾಪಿಸಿಕೊಂಡಿತ್ತು. ಆತನಿಂದ ಜಿಲ್ಲಾ ಆಸ್ಪತ್ರೆ ನಂದನವನವಾಗುತ್ತದೆ; ರೋಗಿಗಳಿಗೆ ತೊಂದರೆ-ಕೊರತೆಯೆಂಬುದೇ ಆಗುವುದಿಲ್ಲ ಎಂಬಂತೆ ರಿಪಬ್ಲಿಕ್ ಮಾಫಿಯಾ ಬಿಂಬಿಸಿತ್ತು. ಆದರೆ ಎಂದೂ ಕ್ಲಿನಿಕಲ್ ಪ್ರಾಕ್ಟೀಸ್ ಮಾಡದ ಡಾ| ಗಜಾನನ ವಕ್ಕರಿಸಿದ್ದೇ ತಡ, ಕಿಮ್ಸ್‍ನಲ್ಲಿ ಸರಣಿ ಅವಾಂತರ-ಅನಾಹುತ-ಆಧ್ವಾನ ಆಗಹತ್ತಿದೆ……..

ಕಿಮ್ಸ್‍ನ ಕೋವಿಡ್-19 ವಾರ್ಡ್‍ಂತೂ ರೌರವ ನರಕ. ವಾರ್ಡ್ ತುಂಬ ಕಸ-ಕೊಚ್ಚೆ ಶುದ್ಧ ಕುಡಿಯುವ ನೀರಿಗೂ ಗತಿಯಿಲ್ಲ. ಹೈಜೀನಿಕ್ ಊಟ-ತಿಂಡಿ ಕೇಳಲೇಬೇಡಿ. ಡಾಕ್ಟರ್-ದಾದಿಯರು ಬಂದರೆ ಬಂದರು, ಇಲ್ಲದಿದ್ದರೆ ಇಲ್ಲ. ಸ್ವಚ್ಛತಾ ಕರ್ಮಚಾರಿಗಳಂತೂ ಕಾಣುವುದೇ ಇಲ್ಲ. ಕಿಮ್ಸ್ ಡೈರೆಕ್ಟರ್ ಡಾ| ಗಜಾನನ ಮತ್ತು ವೈದ್ಯಕೀಯ ಅಧೀಕ್ಷರು, ಡಾ| ಕುಡ್ತರ್‍ಕರ್ ಪಿಪಿಇ ಕಿಟ್ ಧರಿಸಿ ವಾರ್ಡಿಗೆ ಹೋದದ್ದೇ ಇಲ್ಲ!! ರೋಗ ನಿರೋಧಕ ಶಕ್ತಿಯಿದ್ದ ರೋಗಿ ಕಿಮ್ಸ್‍ನಿಂದ ಬಚಾವಾಗಿ ಬರಬೇಕೇ ಹೊರತು ಇಲ್ಲಿಯ ಶುಶ್ರೂಷೆಯಿಂದ ಬದುಕಲು ಸಾಧ್ಯವೇ ಇಲ್ಲ. ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಉತ್ಸಾಹಿ ಐಎಎಸ್ ಅಧಿಕಾರಿ ಮಹಮ್ಮದ್ ರೋಷನ್ ಕೋವಿಡ್ ಕೇಂದ್ರದ ಉಸ್ತುವಾರಿ ನೋಡಿಕೊಂಡಷ್ಟು ದಿನ ಯಾವುದೇ ಸಮಸ್ಯೆಯಿರಲಿಲ್ಲ.

ಕಿಮ್ಸ್ ಡೈರೆಕ್ಟರ್ ಡಾ| ಗಜಾನನ ಮತ್ತು ಸುಪರಿಂಡೆಂಟೆಂಟ್ ಡಾ| ಕುಡ್ತರ್‍ಕರ್ ಕೋವಿಡ್ ಕೇಂದ್ರದ ಯಜಮಾನಿಕೆಗಾಗಿ ಲಾಬಿ ಮಾಡುತ್ತಿದ್ದಂತೆಯೇ ಜಿಲ್ಲಾಡಳಿತ ಅಂತರ ಕಾಯ್ದುಕೊಂಡಿತು. ಕೋವಿಡ್ ಕೇಂದ್ರ ಕಬ್ಜಾ ಮಾಡಿಕೊಂಡ ಡಾ| ಗಜಾನನ ಸಿಇಓ ರೊಷನ್‍ರ ಸಾಧನೆ ಶ್ರಮವೆಲ್ಲ ತನ್ನ ಸಾಹಸವೆಂಬಂತೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಕಾರವಾರದ ಅವರ ಜಾತಿವಂತರ ಪತ್ರಿಕೆಯಂತೂ ‘ಮೃತ್ಯುಂಜಯ’ ಎಂಬ ಹಾಸ್ಯಾಸ್ಪದ ಬಿರುದು ಕೊಟ್ಟುಬಿಟ್ಟಿತು.

ಸೋಂಕಿತರು ಗುಣವಾಗಿ ಹೋಗುವಾಗ ಹೂವು ಕೊಟ್ಟು ಚಪ್ಪಾಳೆ ಹೊಡೆದು ಫೋಟೋ ಸೆಷನ್ ನಡೆಸಿ ಕಾಳಜಿಯ ವೈದ್ಯಾಗ್ರೇಸನ ಪೋಸು ಕೊಡುತ್ತಿದ್ದವರ ಬಣ್ಣ ಕಳೆದ 10-7-2020ರಂದು ಬಯಲಾಗಿ ಹೋಯಿತು. ಬೆಂಗಳೂರಲ್ಲಿ ಚಾರ್ಟ್‍ಟೆಡ್ ಅಕೌಂಟೆಂಟ್ ಉದ್ಯೋಗ ಮಾಡಿಕೊಂಡಿದ್ದ ಕಾರವಾರದ ನಿತಿನ್ ನಾಯಕ್ ಎಂಬ ತರುಣ ಮೂರು ದಿನಗಳ ಹಿಂದೆ ಈ ಕೋವಿಡ್ ಕೇಂದ್ರಕ್ಕೆ ದಾಖಲಾಗಿದ್ದ. ಅಲ್ಲಿದ್ದ ಸೋಂಕಿತರೆಲ್ಲ ಹೀನಾಯ ಸ್ಥಿತಿಯಲ್ಲಿದ್ದರು; ಮೂರು ದಿನ ನಿತಿನ್ ಸಹ ಹಿಂಸೆ ಅನುಭವಿಸಿದ್ದಾನೆ. ಈತ ಇಡೀ ಉದ್ದಗಲಕ್ಕೆ ಓಡಾಡುತ್ತ ಅಲ್ಲಿಯ ಅವ್ಯವಸ್ಥೆ-ಅನೈರ್ಮಲ್ಯ-ಲೋಪ-ದೋಷ ಲೈವ್ ಕಮೆಂಟರಿ ಮೂಲಕ ತೋರಿಸುತ್ತ ವಿಡಿಯೋ ಮಾಡಿಸಿಕೊಂಡಿದ್ದಾನೆ. ಆತನಿಗೆ ವಾರ್ಡ್‍ನ ಇತರ ಸೋಂಕಿತರು ಶೂಟಿಂಗ್‍ಗೆ ನೆರವಾಗಿದ್ದಾರೆ. ವಾರ್ಡಿಗೆ ಡಾಕ್ಟರ್ಸ್-ದಾದಿಯರು ಮತ್ತ ಸ್ವಚ್ಛತಾ ಕರ್ಮಚಾರಿಗಳ್ಯಾರು ಬರುತ್ತಿಲ್ಲ; ರೋಗಿಗಳ ಮೇಲೆ ಯಾರಿಗೂ ನಿಗಾಇಲ್ಲ ಎಂದಿರುವ ನಿತಿನ್ ವಾರ್ಡ್ ತುಂಬ ತುಂಬಿರುವ ಬಯೋಲಾಜಿಕಲ್ ತ್ಯಾಜ್ಯ, ನೀರು ನಿಂತು ಕೊಚ್ಚೆ ನಿರ್ಮಾಣವಾಗಿರುವುದು, ಬಿಸಿ ನೀರಿಗೂ ಗತಿಯಿಲ್ಲದಿರುವುದು, ಶೌಚಾಲಯದ ದುರವಸ್ಥೆ-ಅಸಹ್ಯ, ಅತಿ ಅವಶ್ಯವಾದ ನೀರೂ ಸರಬರಾಜಾಗದಿರುವುದು, ಸ್ವಚ್ಛತೆಯಿಲ್ಲದ ಊಟ-ಉಪಹಾರದ ಕತೆ ಹೇಳುತ್ತ ಹೊರಜಗತ್ತಿಗೆ ಕಳುಹಿಸಿದ್ದಾನೆ. ಇದಕ್ಕಿಂತ ಮುಖ್ಯವಾಗಿ 4 ದಿನಗಳ ಹಿಂದೆ ಅಸುನೀಗಿದ್ದ ಶಿರಸಿಯ ವ್ಯಕ್ತಿಗೆ ಸೇರಿದ ಹಾಸಿಗೆ-ಸಾಮಾನುಗಳು ಆತ ಜೀವ ಬಿಟ್ಟಲ್ಲೇ ಬಿದ್ದಿರುವುದು ತೋರಿಸಿದ್ದಾನೆ. ಆತ ಈ ವೀಡಿಯೋ ಶೇರ್ ಮಾಡಿದ ಹತ್ತೇ ನಿಮಿಷದಲ್ಲಿ ವೈರಲ್ ಆಗಿದೆ.

ಅಲ್ಲಿಗೆ ಡೀನ್ ಡಾ|ಗಜಾನನರ ಗ್ಯಾಂಗಿನ ಕರ್ಮಕಾಂಡ ಜಗಜ್ಜಾಹೀರಾಗಿ ಹೋಗಿದೆ. ಇದರಿಂದ ಕಂಗಾಲಾದ ಅವರ ಮರುದಿನವೇ ಗುಣಪಟ್ಟು ಬಿಡುಗಡೆಯಾದ ಸೋಂಕಿತರಿಂದ ಆಸ್ಪತ್ರೆಯಲ್ಲಿ ಅತ್ಯುತ್ತಮ ವ್ಯವಸ್ಥೆಯಿದೆ…. ಹಣ್ಣು.. ಮೊಟ್ಟೆ… ಭರ್ಜರಿ ಊಟ ಕೊಡಲಾಗುತ್ತದೆ.. ವೈದ್ಯರು-ದಾದಿಯರು ಕಾಳಜಿ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ.. ಎಂದೆಲ್ಲಾ ಹೇಳಿಸಿ ವೀಡಿಯೋ ಮಾಡಿಸಿದ್ದಾರೆ. ಈ ವಿಡಿಯೋದಲ್ಲಿ ಬೇಡವೆಂದರೂ ಡಾ| ಗಜಾನನ ಮತ್ತು ಡಾ| ಕುಡ್ತರ್ಕರ್ ಕಾಣಿಸುತ್ತಾರೆ. ಪ್ರತಿದಿನ ಸಂಜೆ ನಾಲ್ಕು ಗಂಟೆಗೆ ತ್ಯಾಜ್ಯ ಹೊರಸಾಗಿಸಲಾಗುತ್ತದೆಂದು ಡಾ| ಗಜಾನನ ಹೇಳಿದ್ದಾರೆ. ಆದರೆ ವಾರ್ಡ್‍ನ ಮೂಲೆ ಮೂಲೆಯಲ್ಲಿ ನಾಲ್ಕೈದು ದಿನ ಸಂಗ್ರಹವಾಗುವಷ್ಟು ತ್ಯಾಜ್ಯ ತುಂಬಿರುವುದು ಅವರು ಹಸೀ ಸುಳ್ಳು ಹೇಳುತ್ತಿದ್ದಾರೆಂಬುದನ್ನು ಸಾಬೀತುಪಡಿಸುತ್ತದೆ.

ಇಷ್ಟಕ್ಕೇ ಅವರ ಹತಾಶೆ-ಆಕ್ರೋಶ ನಿಂತಿಲ್ಲ. ಅವ್ಯವಸ್ಥೆಯ ವಿಡಿಯೋ ಮಾಡಿದ ತರುಣ ಮತ್ತವನಿಗೆ ಸಹಾಯ ಮಾಡಿದ ಸೋಂಕಿತರನ್ನು ಆಸ್ಪತ್ರೆಯ ಬಾಗಿಲಿಗೆ ಕರೆಸಿಕೊಂಡಿದ್ದಾರೆ. ಗಾಜಿನ ಗೋಡೆಯ ಆಚೆ ನಿಂತು ಪಕ್ಕ ರೌಡಿಯಂತೆ ಹಾರಾಡಿ, ಸೋಂಕಿತರೊಂದಿಗೆ ಜಗಳವಾಡಿದ್ದಾರೆ. ವಿಡಿಯೋ ಮಾಡಿದ್ದಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರ ವಿಡಿಯೋ ಕೂಡ ಕ್ಷಣಾರ್ಧದಲ್ಲಿ ವೈರಲ್ ಆಗಿಹೋಗಿದೆ. ಈ ಎಲ್ಲಾ ವಿಡಿಯೋಗಳು, ಫೋಟೋಗಳು ನಮಗೆ ಲಭ್ಯವಾಗಿವೆ. ಈ ಪುರಾವೆಗಳಿಂದ ಡೀನ್ ಸಾಹೇಬರ ‘ಯೋಗ್ಯತೆ’ ಊರಿಗೆಲ್ಲ ಪಕ್ಕ ಆಗಿದೆ!! ಅವರ ಪರವಾಗಿ ಪತ್ರಕರ್ತ ಮಾಧವ ನಾಯ್ಕರೇಕೆ ವಕಾಲತ್ತು ವಹಿಸುತ್ತಿದ್ದಾರೆ ಎಂಬುದೇ ಸೋಜಿಗದ ಸಂಗತಿ.

ವಿಡಿಯೋ ಧೀರ ನಿತಿನ್ ಮಾಧವನಾಯ್ಕ್‍ರ ಜಾತಿ ಬಂಧು. ಆತನ ತಂದೆ ಕಾರವಾರದ ಪ್ರಮುಖ ರಾಜಕಾರಣಿ. ಹೀಗಾಗಿ ನಿತಿನ್‍ಗೆ ಪೂಸಿ ಹೊಡೆಯಬೇಕಾಗಿ ಬಂತು. ಮಾಧವನಾಯ್ಕ್ ನಿನಗೆ ಸಪೋರ್ಟ್ ಮಾಡ್ತೇನೆ ಎಂದು ನಿತಿನ್‍ಗೆ ಹೇಳಿದ್ದಂತೆ ಕಾಣುತ್ತಿದೆ. ಆದರೆ ಅವರೇ ಮರುದಿನ ನಿತಿನ್ ವಿಡಿಯೋ ಮಾಡಿದ್ದು ತಪ್ಪು ಎಂದು ಹೇಳಿಕೆ ಬದಲಾಯಿಸಿದ್ದರು. ಇದರಿಂದ ಕೆರಳಿದ ನಿತಿನ್ ಮಾಧವನಾಯ್ಕ್‍ರಿಗೆ ಫೋನಾಯಿಸಿ “ಇದೆಂಥ ವಿಶ್ವಾಸ ದ್ರೋಹ ಸಾರ್” ಎಂದಿದ್ದಾನೆ. ಕಕ್ಕಾಬಿಕ್ಕಿಯಾದ ಮಾಧವ ಏನೋ ಸಮಜಾಯಿಷಿ ಕೊಟ್ಟಿದ್ದಾರೆ. ನಿತಿನ್ ತನ್ನನ್ನು ನಾಲ್ಕು ದಿನದಿಂದ ಒಬ್ಬೇ ಒಬ್ಬ ಡಾಕ್ಟರ್ ಅಥವಾ ನರ್ಸ್ ಮಾತಾಡಿಸಿಲ್ಲ, ತಾನು ಕೊಳಚೆಯಲ್ಲಿದ್ದೇನೆ ಎಂದಿದ್ದಾನೆ. ಹಾಗಿದ್ದರೆ ಡಾ.ಗಜಾನನರಿಗೆ ಫೋನ್ ಸಂಪರ್ಕ ಮಡುತ್ತೇನೆ ನೀನೇ ಮಾತಾಡು ಎಂದಿದ್ದಾನೆ. ಮೂವರ ನಡುವೆ ಬರೋಬ್ಬರಿ ಮುವ್ವತ್ತಾ ಮೂರುವರೆ ನಿಮಿಷ ಕಾನ್ಫರೆನ್ಸ್ ಸಂಭಾಷಣೆ ನಡೆದಿದೆ.

ನಿತಿನ್‍ನ ಒಂದು ಪ್ರಶ್ನೆಗೂ ಉತ್ತರಿಸಲಾಗದೆ ಡಾ| ಗಜಾನನ ಮತ್ತು ಮಾಧವ ನಾಯ್ಕ್ ತಡವರಿಸಿದ್ದಾರೆ! ಈ ಆಡಿಯೋ ಸಹ ಜಿಲ್ಲೆಯಲ್ಲಿ ಹಿಟ್ ಆಗಿದೆ! ಈ ವಿಡಿಯೋ ಮತ್ತು ಆಡಿಯೋ ವಾರ್ ಜಿಲ್ಲಾಧಿಕಾರಿ ಡಾ| ಹರೀಶ್‍ಕುಮಾರ್ ಮತ್ತು ಶಾಸಕಿ ರೂಪಾಲಿ ನಾಯ್ಕ್ “ಸುಮ್ಮನೆ” ನೋಡಿದ್ದು ಅನೇಕ ಅನುಮಾನ ಮೂಡಿಸಿದೆ. ‘ಕೊರೊನಾ ಸಂಹಾರ ಸೈನ್ಯ’ದ ಸುಪ್ರೀಂ ಕಮಾಂಡರ್ ಆಗಿರುವ ಜಿಲ್ಲಾಧಿಕಾರಿ ಕಿಮ್ಸ್‍ನ ಕರ್ಮಕಾಂಡ ಕಂಡೂ ಕಾಣದಂತಿರುವುದೇಕೆ? ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡ್ತೇನೆಂದು ಭರವಸೆ ನೀಡುವ ಶಾಸಕಿ ರೂಪಾಲಿಯಮ್ಮ ಕೋವಿಡ್ ರೋಗಿಗಳಿಗೆ ಕೊಡಬೇಕಾದ ಮೊಟ್ಟೆ ಸಿಗದಿದ್ದರೂ ಕೇಳುತ್ತಿಲ್ಲ! ಹೀಗಿರುವಾಗ ಅದ್ಹೇಗೆ ಕಿಮ್ಸ್‍ನ ಅವ್ಯವಹಾರ-ಅವಾಂತರ ಪ್ರಶ್ನಿಸಿಯಾರು? ಒಟ್ಟಿನಲ್ಲಿ ಸಾವಿರಾರು ರೂಪಾಯಿ ಅನುದಾನದ ಕಿಮ್ಸ್‍ನ ಕೋವಿಡ್ ವಾರ್ಡ್‍ನಲ್ಲಿ ಬೇಲಿಯೇ ಹೊಲ ಮೇಯುತ್ತಿದೆ.


ಇದನ್ನು ಓದಿ: ಕರ್ನಾಟಕದ ಕೊರೊನಾ ಡಾಕ್ಟರ್ ಏನು ಹೇಳುತ್ತಾರೆ? ಡಾ.ಆಸಿಮ ಬಾನು ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...