Homeಕರ್ನಾಟಕಕಾರವಾರ: ಕಾಂಗ್ರೆಸ್ ಕಾರ್ಯಕರ್ತನಿಗೆ PSIನಿಂದ ಥಳಿತ ಆರೋಪ - ಠಾಣೆಗೆ ಮುತ್ತಿಗೆ

ಕಾರವಾರ: ಕಾಂಗ್ರೆಸ್ ಕಾರ್ಯಕರ್ತನಿಗೆ PSIನಿಂದ ಥಳಿತ ಆರೋಪ – ಠಾಣೆಗೆ ಮುತ್ತಿಗೆ

- Advertisement -
- Advertisement -

ಕಾರ್ಕಳದಲ್ಲಿ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪಿ.ಎಸ್.ಐ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಅಲ್ಲೋಕಲ್ಲೋಲವನ್ನೆ ಸೃಷ್ಠಿಸಿತ್ತು. ಅಂಥದ್ದೇ ಭಯಾನಕ ಘಟನೆಯೊಂದು ಈಗ ಕಾರವಾರದಲ್ಲಿ ನಡೆದಿದೆ. ಶಾಸಕಿ ರೂಪಾಲಿ ನಾಯ್ಕ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿ ಬರೆಯುತ್ತಾರೆಂಬ ನೆಪದಿಂದ ಸ್ಥಳೀಯ ಕಾಂಗ್ರೆಸ್ ಜಾಲತಾಣದ ಮುಖ್ಯಸ್ಥನಾದ ಅಜಯ್ ಸಿಂಗ್ಲಿ ಮೇಲೆ ನಗರ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ಸಂತೋಷಕುಮಾರ್ ತೀವ್ರ ಹಲ್ಲೆ ನಡೆಸಿದ್ದಾರೆ ಎಂದು ಎಮ್.ಲ್.ಸಿ. ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೇಸಿಗರು ಪ್ರತಿಭಟನೆ ನಡೆಸಿದ್ದಾರೆ.

ಕಾರ್ಕಳದಲ್ಲಿ ಲಗೇಜ್ ರಿಕ್ಷಾ ಓಡಿಸಿ ಜಿವನ ನಡೆಸುತ್ತಿದ್ದ ರಾಧಾಕೃಷ್ಣ ನಾಯಕ್ ಸಾಮಾಜಿಕ ಜಾಲತಾಣದಲ್ಲಿ ಸಂಘಪರಿವಾರದ ವಿರುದ್ಧ ಬರೆಯುತ್ತಿದ್ದರು. ಅವರ ಖಾತೆಯಿಂದ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅದು ನಾನಲ್ಲ, ನನ್ನ ಹೆಸರಿನಲ್ಲಿ ಕಿಡಿಗೇಡಿಗಳು ಖಾತೆ ರಚಿಸಿದ್ದಾರೆ ಎಂದು ರಾಧಾಕೃಷ್ಣ ಸ್ಪಷ್ಟೀಕರಣ ನೀಡಿದರೂ ಸಹ ಪಿಎಸ್‌ಐ ಹೊಡೆದಿದ್ದಾರೆ ಎಂದು ಆರೋಪಿಸಿದ್ದರು.

ಕೆಲವು ದಿನಗಳ ಹಿಂದೆ ಕಾರವಾರ ನಗರ ಠಾಣೆಯಲ್ಲಿ ಶಾಸಕಿ ರೂಪಾಲಿ ನಾಯ್ಕಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಲಾಗಿದೆ ಎಂದು ದೂರೊಂದು ದಾಖಲಾಗಿತ್ತು. ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತ ಅಜಯ್ ಸಿಂಗ್ಲಿಯನ್ನು ಠಾಣೆಗೆ ಕರೆಸಿಕೊಂಡು ಪಿ.ಎಸ್.ಐ ಸಂತೋಷಕುಮಾರ್ ಆ ಹುಡುಗನನ್ನು ನಿರ್ದಯವಾಗಿ ಥಳಿಸಿದ್ದಾರೆಂದು ಹರಿಪ್ರಸಾದ್ ಆರೋಪಿಸಿದ್ದಾರೆ. ಆತ ಸರ್ಕಾರಿ ಕಾರ್ಯಕ್ರಮದ ಕುರಿತು ಟೀಕಿಸಿದ್ದಾನೆಯೆ ಹೊರತು ವ್ಯಕ್ತಿಗತವಾಗಿ ಯಾರನ್ನು ಅವಹೇಳನ ಮಾಡಿಲ್ಲ. ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹರಿಪ್ರಸಾದ್ ಆಗ್ರಹಿಸಿದರು.

ಪೊಲೀಸ್ ಅಧಿಕಾರ ದುರ್ಬಳಕೆ ಮಾಡಿ ದೌರ್ಜನ್ಯ ನಡೆಸಲಾಗಿದೆ. ಯಾವುದೆ ಅಧಿಕಾರಿಯ ನಿಷ್ಟೆ ಸಂವಿಧಾನಕ್ಕೆ ಇರಬೇಕೆ ವಿನಃ ವ್ಯಕ್ತಿಗೆ ಇರಬಾರದು. ಅಸಹಾಯಕ ಹುಡುಗನ ಮೇಲೆ ಹಲ್ಲೆ ಮಾಡಿದ ಪೋಲಿಸ್ ಅಧಿಕಾರಿ ವಿರುದ್ಧ ಪೋಲಿಸ್ ಮಹಾನಿರ್ದೆಶಕರಿಗೆ ದೂರು ಕೊಡಲಾಗುವುದು. ಅಲ್ಲಿಯೂ ಸರಿಯಾದ ಉತ್ತರ ಸಿಗದಿದ್ದರೆ ಗೃಹ ಮಂತ್ರಿ ಬಳಿ ಹೋಗಲಾಗುವುದು ಎಂದು ಹರಿಪ್ರಸಾದ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಬರೆಯುವರ ಮೇಲೆಯೂ ಕಂಪ್ಲೇಟ್ ಕೊಡಲಾಗಿದೆ; ಕ್ರಮ ಕೈಗೊಳ್ಳದಿದ್ದರೆ ಡಿಜಿಗೆ ದೂರು ನೀಡುತ್ತೇವೆಂದು ಹರಿಪ್ರಸಾದ್ ಹೇಳಿದ್ದಾರೆ.


ಇದನ್ನೂ ಓದಿ: ಪೆಗಾಸಸ್ ಹಗರಣ: ಅಮಿತ್ ಶಾ ಮೇಲೆ ನೇರ ಆರೋಪ ಹೊರಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...