Homeಕರ್ನಾಟಕಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟು ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿದ್ದು, ಪ್ರತಿರೋಧವಾಗಿ ‘ಜನಸಾಹಿತ್ಯ ಸಮ್ಮೇಳನ’ದ ತಯಾರಿ ನಡೆಯುತ್ತಿದೆ.

ರಾಜ್ಯದ ಪ್ರಗತಿಪರ, ಜನಪರ, ನಾಡಿನ ಸೌಹಾರ್ದ ಪರಂಪರೆಯ ಬಗ್ಗೆ ನಂಬಿಕೆ ಇಟ್ಟುವ ಸಾವಿರಾರು ಮನಸ್ಸುಗಳು ಜ.8ರಂದು ಬೆಂಗಳೂರಿನ ಕೆ.ಆರ್‌.ಸರ್ಕಲ್ ಅಲುಮ್ನಿ ಹಾಲ್‌ನಲ್ಲಿ ‘ಜನಸಮ್ಮೇಳನ’ವನ್ನು ಆಯೋಜಿಸಿವೆ.

“ಇದೊಂದು ಕನ್ನಡದ ಮನಸ್ಸುಗಳ ತಕ್ಷಣದ ಪ್ರತಿಕ್ರಿಯೆ. ಇದು ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವೂ ಅಲ್ಲ, ಬಂಡಾಯವೂ ಅಲ್ಲ. ಇದೊಂದು ಪ್ರತಿರೋಧ ಸಮಾವೇಶ” ಎಂದು ಆಯೋಜಕರು ಹೇಳಿದ್ದಾರೆ.

“86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲೀಮರನ್ನು ಹೊರಗಿಡಲಾಗಿದೆ. ಇದು ಉದ್ದೇಶಪೂರ್ವಕವಾಗಿ ಕಸಾಪ ನಡೆಸಿರುವ ಕೃತ್ಯ. ಸರ್ಕಾರದ ಬಾಹ್ಯ ಶಕ್ತಿಗಳಾದ ಹಿಂದುತ್ವವಾದಿ ಸಂಘಟನೆಗಳು ಮುಸ್ಲಿಮರ ಮೇಲೆ ನೇರ ದಾಳಿ ನಡೆಸುತ್ತಿದ್ದರೆ ಕಸಾಪ ಈ ರೀತಿ ಅದೇ ಅದೇ ಅಜೆಂಡಾಗಳನ್ನು ಸಾಹಿತ್ಯ ಸಮ್ಮೇಳನದ ಮೂಲಕ ಜಾರಿ ಮಾಡಿದೆ. ಹಾಗಾಗಿ ನಾವು ತಕ್ಷಣದ ಪ್ರತಿರೋಧವನ್ನು ಅದೇ ದಿನ ಕೊಡುವುದು ಅಗತ್ಯವಾಗಿದೆ. ಇದು ಕನ್ನಡದ ಸಾಹಿತಿಗಳು, ಕವಿಗಳು, ಹೋರಾಟಗಾರರು ವ್ಯಕ್ತಪಡಿಸುವ ಪ್ರತಿಭಟನೆಯಾಗಿದೆ” ಎಂದು ಹೇಳಿದ್ದಾರೆ.

“ಜನಸಾಹಿತ್ಯ ಸಮ್ಮೇಳನ ಎಂಬ ಪ್ರತಿರೋಧ ಸಮಾವೇಶಕ್ಕೆ ಈಗಾಗಲೇ ನಾಡಿನ ಹಿರಿ-ಕಿರಿಯ ಸಾಹಿತಿ, ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲವು ಹಿರಿಯರು ನಿರಂತರ ಮಾರ್ಗದರ್ಶನ ಮಾಡುತ್ತಿದ್ದಾರೆ. ಹಿರಿಯರ ಸೂಚನೆಯಂತೆ ಜನವರಿ 08 ಭಾನುವಾರ 2023 ರಂದು ನಡೆಯುವ ಜನಸಾಹಿತ್ಯ ಸಮ್ಮೇಳನದ ಸಿದ್ದತೆ ನಡೆಯುತ್ತಿದೆ” ಎಂದಿದ್ದಾರೆ.

ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ಒಂದು ಕಾಲಕ್ಕೆ ಕನ್ನಡಿಗರ ಅಗತ್ಯಗಳನ್ನು ಈಡೇರಿಸಲು ಕನ್ನಡ ಸಾಹಿತ್ಯ ಪರಿಷತ್ತು ಕೆಲಸ ಮಾಡಿತ್ತು. ಕನ್ನಡದ ಧೀಮಂತ ಲೇಖಕರು ಅದರ ಅಧ್ಯಕ್ಷರೂ ಆಗಿದ್ದರು. ಆದರೆ ಈಗ ಪರಿಷತ್ತು ತನ್ನ ಸಾಧ್ಯತೆಗಳನ್ನು ತೀರಿಸಿಕೊಂಡು ಜಡವಾಗಿದೆ. 1992ರ ಆನಂತರ ಬೆಳೆದು ಬಂದ ಜಾಗತೀಕರಣ ಮತ್ತು ಕೋಮುವಾದವು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ಮೇಲೆ ಬೀರುತ್ತಿರುವ ಪರಿಣಾಮಗಳನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಅದಕ್ಕೆ ಗೊತ್ತಿಲ್ಲ. ಅದೀಗ ಸರಕಾರದ ಅನುದಾನ ಪಡೆದು ವರ್ಷಕ್ಕೊಂದು ಸಮ್ಮೇಳನ ನಡೆಸುವ ʼಈವೆಂಟ್ ಮೆನೇಜ್ಮೆಂಟ್ ಸಂಸ್ಥೆʼಯಾಗಿಯಷ್ಟೇ ಉಳಿದಿದೆ. ಸಾಂಸ್ಥೀಕರಣಗೊಂಡ ಯಾವುದೇ ಸಂಸ್ಥೆಯ ಗತಿಯಾದರೂ ಇಷ್ಟೇ. ಅದಕ್ಕೆ ಬಸವಣ್ಣ ʼಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲʼ ಎಂಬ ಮಾತನ್ನು ಹೇಳಿದ್ದ. ಸಾಹಿತ್ಯಿಕ ಸಂಸ್ಥೆಗಳು ಸರಕಾರದ ಅನುದಾನದಿಂದ ನಡೆದಾಗ ಅವು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತವೆ. ಚಂದ್ರಶೇಖರ ಪಾಟೀಲರಂಥ ಕೆಲವರು ಮಾತ್ರ ಅನುದಾನ ಪಡೆದೂ ಸೆಟೆದು ನಿಲ್ಲುವ ಧೈರ್ಯ ತೋರಿಸುತ್ತಾರೆ. ನಿರುಪಯುಕ್ತ ಸಂಸ್ಥೆಗಳ ಮೇಲೆ ಕಣ್ಣಿಟ್ಟ ಲೇಖಕರು ತಮ್ಮ ಅವಕಾಶಕ್ಕಾಗಿ ಕಾಯುತ್ತಾ ಜೀವನವನ್ನೇ ನಿರುಪಯುಕ್ತಗೊಳಿಸಿಕೊಳ್ಳುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇವತ್ತಿನ ಲೇಖಕರು ನಿಜಕ್ಕೂ ಗಂಭೀರವಾದ ಸಮಸ್ಯೆಗಳನ್ನು ಇದಿರಿಸುತ್ತಿದ್ದಾರೆ. ಅದರಲ್ಲಿಯೂ ದಲಿತರು, ಅಲ್ಪ ಸಂಖ್ಯಾಕರು ಮತ್ತು ಮಹಿಳೆಯವರು ಅಮಾನುಷ ಕ್ರೌ ರ್ಯಗಳಿಗೆ ಬಲಿಯಾಗುತ್ತಿದ್ದಾರೆ. ಮೀಸಲಾತಿಯನ್ನು ಯಾರ್ಯಾರೋ ಅಪಹರಿಸುತ್ತಿದ್ದಾರೆ. ಕನ್ನಡದ ಮಾಹಿತಿಗಳ ಮೂಲಕವೇ ಕನ್ನಡವನ್ನು ಕಟ್ಟಿದ ಅಪ್ರತಿಮ ಸಂಶೋಧಕ ಡಾ. ಎಂ ಎಂ ಕಲಬುರ್ಗಿ ತಮ್ಮ ಸಂಶೋಧನೆಯ ಸತ್ಯಗಳಿಂದಾಗಿಯೇ ಕೊಲೆಯಾದರು. ಗೌರಿಯ ಹತ್ಯೆಯಾಯಿತು. ಗಂಭೀರ ಲೇಖಕರು ಸಮಕಾಲೀನ ಸಮಾಜ ಏನನ್ನು ನಿರೀಕ್ಷಿಸುತ್ತದೆಯೋ ಅದನ್ನೇ ಹೇಳಬೇಕಾಗಿರುವ ಒತ್ತಡದಲ್ಲಿ ಸಿಲುಕಿಕೊಂಡಿದ್ದಾರೆ. ನಮ್ಮ ಚರಿತ್ರೆ ನಮಗೆ ಸಹನೆಯನ್ನು ಹೇಳಿಕೊಟ್ಟಿದೆ. ಈ ನೆಲದಲ್ಲಿ ನಡೆದ ಬಹುದೊಡ್ಡ ವಾಗ್ವಾದಗಳು ಇಂದು ನಮ್ಮ ಪ್ರಜಾಪ್ರಭುತ್ವದ ತಳಹದಿಯಾಗಿ ಕೆಲಸ ನಿರ್ವಹಿಸುತ್ತಿವೆ. ಆದರೆ ಈಗ ಏನನ್ನು ಹೇಳಿದರೆ ನಾನು ಅಪಾಯದಿಂದ ಪಾರಾಗಬಹುದು ಎಂದು ಯೋಚಿಸಿ ಬರೆಯಬೇಕಾದ ವಾತಾವರಣ ನಿರ್ಮಾಣವಾಗುತ್ತಿರುವಾಗ ನಮ್ಮ ಬರೆಹಗಳು ಪೇಲವವಾಗುವುದರಲ್ಲಿ ಅನುಮಾನವಿಲ್ಲ” ಎಂದು ತಿಳಿಸಿದ್ದಾರೆ.

“ಬಹುಶಃ ಕನ್ನಡ ಎಂದೂ ಇಂಥ ಪರಿಸ್ಥಿತಿಯನ್ನು ಇದಿರಿಸಿಲ್ಲ. ಅರಿಕೇಸರಿಯ ಆಸ್ಥಾನ ಕವಿಯಾಗಿದ್ದ ಪಂಪನಿಗೆ ‘ಓಲಗಿಸಿ ಬಾಳ್ವುದು ಕಷ್ಟಂ ಇಳಾಧಿನಾಥರಾ’ ಎಂದು ಹೇಳುವ ಧೈರ್ಯವಿತ್ತು. ವಿಜಯನಗರದ ಅರಸೊತ್ತಿಗೆಯನ್ನು ಕಣ್ಣಾರೆ ಕಂಡ ಕುಮಾರವ್ಯಾಸನು ‘ಅರಸು ರಾಕ್ಷಸ, ಮಂತ್ರಿಯೆಂಬುವ ಮೊರೆವ ಹುಲಿ, ಪರಿವಾರ ಹದ್ದಿನ ನೆರವಿ, ಬಡವರ ಬಿನ್ನಪವನಿನ್ನಾರು ಕೇಳುವರು, ಉರಿವುರಿವುತಿದೆ ದೇಶ, ನಾವಿನ್ನಿರಲು ಬಾರದು’ ಎಂದು ಗುಡುಗಿದ್ದ. ಹಂಪಿಯ ಅಪಾರ ಸಂಪತ್ತನ್ನು ತಾತ್ವಿಕವಾಗಿ ನಿರಾಕರಿಸುವ ಪುರಂದರದಾಸರು – ʼಲೊಳಲೊಟ್ಟೆ, ಎಲ್ಲಾ ಲೊಳಲೊಟ್ಟೆ, ಆನೆಕುದುರೆ ಎಲ್ಲ ಲೊಳಲೊಟ್ಟೆ, ಸೇನೆ ಭಂಡಾರವು ಲೊಳಲೊಟ್ಟೆ, ಮುತ್ತು ಮಾಣಿಕ್ಯ ಲೊಳಲೊಟ್ಟೆ, ಛತ್ರಚಾಮರ ಧ್ವಜ ಲೊಳಲೊಟ್ಟೆ’ ಎಂದು ಹಾಡಿಕೊಂಡು ಬರಿ ಲಂಗೋಟಿಯಲ್ಲಿಯೇ ಮುತ್ತು ರತ್ನ ಮಾರುವ ವಿಜಯನಗರದ ಬೀದಿಗಳಲ್ಲಿ ಓಡಾಡಿದರು. ಸಾಲಗುಂದ ಗುರು ಖಾದರಿ ಪೀರನು ‘ಮಸೀದಿ ಎಂಬುದು ಹಾಳಾದ ಜಾಗ, ಅದರ ಗೊಡವಿ ನಿನಗ್ಯಾಕಂತೆ ? ಎಂದು ಸಡ್ಡು ಹೊಡೆಯುತ್ತಾನೆ. ಆದರೆ ಈಗ ಕನ್ನಡದ ಹಾದಿ ಬದಲಿದಂತಿದೆ. ಈ ಕುರಿತು ನಾವೆಲ್ಲ ಅರೆಕ್ಷಣ ನಿಂತು, ಯೋಚಿಸಿ, ಮುಂದುವರೆಯಬೇಕಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೀಸಲಾತಿ ಯಾರೊಬ್ಬರ ಮೂಲಭೂತ ಹಕ್ಕು ಅಲ್ಲ.. ಮಹನೀಯರೆ, ಕೆನೆಪದರ ತೆಗೆಯುವ ಬಗ್ಗೆ ಏನಕ್ಕೆ ಮಾತಾಡುವುದಿಲ್ಲ ನೀವು?

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...