Homeಕರ್ನಾಟಕಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟು ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿದ್ದು, ಪ್ರತಿರೋಧವಾಗಿ ‘ಜನಸಾಹಿತ್ಯ ಸಮ್ಮೇಳನ’ದ ತಯಾರಿ ನಡೆಯುತ್ತಿದೆ.

ರಾಜ್ಯದ ಪ್ರಗತಿಪರ, ಜನಪರ, ನಾಡಿನ ಸೌಹಾರ್ದ ಪರಂಪರೆಯ ಬಗ್ಗೆ ನಂಬಿಕೆ ಇಟ್ಟುವ ಸಾವಿರಾರು ಮನಸ್ಸುಗಳು ಜ.8ರಂದು ಬೆಂಗಳೂರಿನ ಕೆ.ಆರ್‌.ಸರ್ಕಲ್ ಅಲುಮ್ನಿ ಹಾಲ್‌ನಲ್ಲಿ ‘ಜನಸಮ್ಮೇಳನ’ವನ್ನು ಆಯೋಜಿಸಿವೆ.

“ಇದೊಂದು ಕನ್ನಡದ ಮನಸ್ಸುಗಳ ತಕ್ಷಣದ ಪ್ರತಿಕ್ರಿಯೆ. ಇದು ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವೂ ಅಲ್ಲ, ಬಂಡಾಯವೂ ಅಲ್ಲ. ಇದೊಂದು ಪ್ರತಿರೋಧ ಸಮಾವೇಶ” ಎಂದು ಆಯೋಜಕರು ಹೇಳಿದ್ದಾರೆ.

“86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲೀಮರನ್ನು ಹೊರಗಿಡಲಾಗಿದೆ. ಇದು ಉದ್ದೇಶಪೂರ್ವಕವಾಗಿ ಕಸಾಪ ನಡೆಸಿರುವ ಕೃತ್ಯ. ಸರ್ಕಾರದ ಬಾಹ್ಯ ಶಕ್ತಿಗಳಾದ ಹಿಂದುತ್ವವಾದಿ ಸಂಘಟನೆಗಳು ಮುಸ್ಲಿಮರ ಮೇಲೆ ನೇರ ದಾಳಿ ನಡೆಸುತ್ತಿದ್ದರೆ ಕಸಾಪ ಈ ರೀತಿ ಅದೇ ಅದೇ ಅಜೆಂಡಾಗಳನ್ನು ಸಾಹಿತ್ಯ ಸಮ್ಮೇಳನದ ಮೂಲಕ ಜಾರಿ ಮಾಡಿದೆ. ಹಾಗಾಗಿ ನಾವು ತಕ್ಷಣದ ಪ್ರತಿರೋಧವನ್ನು ಅದೇ ದಿನ ಕೊಡುವುದು ಅಗತ್ಯವಾಗಿದೆ. ಇದು ಕನ್ನಡದ ಸಾಹಿತಿಗಳು, ಕವಿಗಳು, ಹೋರಾಟಗಾರರು ವ್ಯಕ್ತಪಡಿಸುವ ಪ್ರತಿಭಟನೆಯಾಗಿದೆ” ಎಂದು ಹೇಳಿದ್ದಾರೆ.

“ಜನಸಾಹಿತ್ಯ ಸಮ್ಮೇಳನ ಎಂಬ ಪ್ರತಿರೋಧ ಸಮಾವೇಶಕ್ಕೆ ಈಗಾಗಲೇ ನಾಡಿನ ಹಿರಿ-ಕಿರಿಯ ಸಾಹಿತಿ, ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲವು ಹಿರಿಯರು ನಿರಂತರ ಮಾರ್ಗದರ್ಶನ ಮಾಡುತ್ತಿದ್ದಾರೆ. ಹಿರಿಯರ ಸೂಚನೆಯಂತೆ ಜನವರಿ 08 ಭಾನುವಾರ 2023 ರಂದು ನಡೆಯುವ ಜನಸಾಹಿತ್ಯ ಸಮ್ಮೇಳನದ ಸಿದ್ದತೆ ನಡೆಯುತ್ತಿದೆ” ಎಂದಿದ್ದಾರೆ.

ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ಒಂದು ಕಾಲಕ್ಕೆ ಕನ್ನಡಿಗರ ಅಗತ್ಯಗಳನ್ನು ಈಡೇರಿಸಲು ಕನ್ನಡ ಸಾಹಿತ್ಯ ಪರಿಷತ್ತು ಕೆಲಸ ಮಾಡಿತ್ತು. ಕನ್ನಡದ ಧೀಮಂತ ಲೇಖಕರು ಅದರ ಅಧ್ಯಕ್ಷರೂ ಆಗಿದ್ದರು. ಆದರೆ ಈಗ ಪರಿಷತ್ತು ತನ್ನ ಸಾಧ್ಯತೆಗಳನ್ನು ತೀರಿಸಿಕೊಂಡು ಜಡವಾಗಿದೆ. 1992ರ ಆನಂತರ ಬೆಳೆದು ಬಂದ ಜಾಗತೀಕರಣ ಮತ್ತು ಕೋಮುವಾದವು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ಮೇಲೆ ಬೀರುತ್ತಿರುವ ಪರಿಣಾಮಗಳನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಅದಕ್ಕೆ ಗೊತ್ತಿಲ್ಲ. ಅದೀಗ ಸರಕಾರದ ಅನುದಾನ ಪಡೆದು ವರ್ಷಕ್ಕೊಂದು ಸಮ್ಮೇಳನ ನಡೆಸುವ ʼಈವೆಂಟ್ ಮೆನೇಜ್ಮೆಂಟ್ ಸಂಸ್ಥೆʼಯಾಗಿಯಷ್ಟೇ ಉಳಿದಿದೆ. ಸಾಂಸ್ಥೀಕರಣಗೊಂಡ ಯಾವುದೇ ಸಂಸ್ಥೆಯ ಗತಿಯಾದರೂ ಇಷ್ಟೇ. ಅದಕ್ಕೆ ಬಸವಣ್ಣ ʼಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲʼ ಎಂಬ ಮಾತನ್ನು ಹೇಳಿದ್ದ. ಸಾಹಿತ್ಯಿಕ ಸಂಸ್ಥೆಗಳು ಸರಕಾರದ ಅನುದಾನದಿಂದ ನಡೆದಾಗ ಅವು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತವೆ. ಚಂದ್ರಶೇಖರ ಪಾಟೀಲರಂಥ ಕೆಲವರು ಮಾತ್ರ ಅನುದಾನ ಪಡೆದೂ ಸೆಟೆದು ನಿಲ್ಲುವ ಧೈರ್ಯ ತೋರಿಸುತ್ತಾರೆ. ನಿರುಪಯುಕ್ತ ಸಂಸ್ಥೆಗಳ ಮೇಲೆ ಕಣ್ಣಿಟ್ಟ ಲೇಖಕರು ತಮ್ಮ ಅವಕಾಶಕ್ಕಾಗಿ ಕಾಯುತ್ತಾ ಜೀವನವನ್ನೇ ನಿರುಪಯುಕ್ತಗೊಳಿಸಿಕೊಳ್ಳುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇವತ್ತಿನ ಲೇಖಕರು ನಿಜಕ್ಕೂ ಗಂಭೀರವಾದ ಸಮಸ್ಯೆಗಳನ್ನು ಇದಿರಿಸುತ್ತಿದ್ದಾರೆ. ಅದರಲ್ಲಿಯೂ ದಲಿತರು, ಅಲ್ಪ ಸಂಖ್ಯಾಕರು ಮತ್ತು ಮಹಿಳೆಯವರು ಅಮಾನುಷ ಕ್ರೌ ರ್ಯಗಳಿಗೆ ಬಲಿಯಾಗುತ್ತಿದ್ದಾರೆ. ಮೀಸಲಾತಿಯನ್ನು ಯಾರ್ಯಾರೋ ಅಪಹರಿಸುತ್ತಿದ್ದಾರೆ. ಕನ್ನಡದ ಮಾಹಿತಿಗಳ ಮೂಲಕವೇ ಕನ್ನಡವನ್ನು ಕಟ್ಟಿದ ಅಪ್ರತಿಮ ಸಂಶೋಧಕ ಡಾ. ಎಂ ಎಂ ಕಲಬುರ್ಗಿ ತಮ್ಮ ಸಂಶೋಧನೆಯ ಸತ್ಯಗಳಿಂದಾಗಿಯೇ ಕೊಲೆಯಾದರು. ಗೌರಿಯ ಹತ್ಯೆಯಾಯಿತು. ಗಂಭೀರ ಲೇಖಕರು ಸಮಕಾಲೀನ ಸಮಾಜ ಏನನ್ನು ನಿರೀಕ್ಷಿಸುತ್ತದೆಯೋ ಅದನ್ನೇ ಹೇಳಬೇಕಾಗಿರುವ ಒತ್ತಡದಲ್ಲಿ ಸಿಲುಕಿಕೊಂಡಿದ್ದಾರೆ. ನಮ್ಮ ಚರಿತ್ರೆ ನಮಗೆ ಸಹನೆಯನ್ನು ಹೇಳಿಕೊಟ್ಟಿದೆ. ಈ ನೆಲದಲ್ಲಿ ನಡೆದ ಬಹುದೊಡ್ಡ ವಾಗ್ವಾದಗಳು ಇಂದು ನಮ್ಮ ಪ್ರಜಾಪ್ರಭುತ್ವದ ತಳಹದಿಯಾಗಿ ಕೆಲಸ ನಿರ್ವಹಿಸುತ್ತಿವೆ. ಆದರೆ ಈಗ ಏನನ್ನು ಹೇಳಿದರೆ ನಾನು ಅಪಾಯದಿಂದ ಪಾರಾಗಬಹುದು ಎಂದು ಯೋಚಿಸಿ ಬರೆಯಬೇಕಾದ ವಾತಾವರಣ ನಿರ್ಮಾಣವಾಗುತ್ತಿರುವಾಗ ನಮ್ಮ ಬರೆಹಗಳು ಪೇಲವವಾಗುವುದರಲ್ಲಿ ಅನುಮಾನವಿಲ್ಲ” ಎಂದು ತಿಳಿಸಿದ್ದಾರೆ.

“ಬಹುಶಃ ಕನ್ನಡ ಎಂದೂ ಇಂಥ ಪರಿಸ್ಥಿತಿಯನ್ನು ಇದಿರಿಸಿಲ್ಲ. ಅರಿಕೇಸರಿಯ ಆಸ್ಥಾನ ಕವಿಯಾಗಿದ್ದ ಪಂಪನಿಗೆ ‘ಓಲಗಿಸಿ ಬಾಳ್ವುದು ಕಷ್ಟಂ ಇಳಾಧಿನಾಥರಾ’ ಎಂದು ಹೇಳುವ ಧೈರ್ಯವಿತ್ತು. ವಿಜಯನಗರದ ಅರಸೊತ್ತಿಗೆಯನ್ನು ಕಣ್ಣಾರೆ ಕಂಡ ಕುಮಾರವ್ಯಾಸನು ‘ಅರಸು ರಾಕ್ಷಸ, ಮಂತ್ರಿಯೆಂಬುವ ಮೊರೆವ ಹುಲಿ, ಪರಿವಾರ ಹದ್ದಿನ ನೆರವಿ, ಬಡವರ ಬಿನ್ನಪವನಿನ್ನಾರು ಕೇಳುವರು, ಉರಿವುರಿವುತಿದೆ ದೇಶ, ನಾವಿನ್ನಿರಲು ಬಾರದು’ ಎಂದು ಗುಡುಗಿದ್ದ. ಹಂಪಿಯ ಅಪಾರ ಸಂಪತ್ತನ್ನು ತಾತ್ವಿಕವಾಗಿ ನಿರಾಕರಿಸುವ ಪುರಂದರದಾಸರು – ʼಲೊಳಲೊಟ್ಟೆ, ಎಲ್ಲಾ ಲೊಳಲೊಟ್ಟೆ, ಆನೆಕುದುರೆ ಎಲ್ಲ ಲೊಳಲೊಟ್ಟೆ, ಸೇನೆ ಭಂಡಾರವು ಲೊಳಲೊಟ್ಟೆ, ಮುತ್ತು ಮಾಣಿಕ್ಯ ಲೊಳಲೊಟ್ಟೆ, ಛತ್ರಚಾಮರ ಧ್ವಜ ಲೊಳಲೊಟ್ಟೆ’ ಎಂದು ಹಾಡಿಕೊಂಡು ಬರಿ ಲಂಗೋಟಿಯಲ್ಲಿಯೇ ಮುತ್ತು ರತ್ನ ಮಾರುವ ವಿಜಯನಗರದ ಬೀದಿಗಳಲ್ಲಿ ಓಡಾಡಿದರು. ಸಾಲಗುಂದ ಗುರು ಖಾದರಿ ಪೀರನು ‘ಮಸೀದಿ ಎಂಬುದು ಹಾಳಾದ ಜಾಗ, ಅದರ ಗೊಡವಿ ನಿನಗ್ಯಾಕಂತೆ ? ಎಂದು ಸಡ್ಡು ಹೊಡೆಯುತ್ತಾನೆ. ಆದರೆ ಈಗ ಕನ್ನಡದ ಹಾದಿ ಬದಲಿದಂತಿದೆ. ಈ ಕುರಿತು ನಾವೆಲ್ಲ ಅರೆಕ್ಷಣ ನಿಂತು, ಯೋಚಿಸಿ, ಮುಂದುವರೆಯಬೇಕಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೀಸಲಾತಿ ಯಾರೊಬ್ಬರ ಮೂಲಭೂತ ಹಕ್ಕು ಅಲ್ಲ.. ಮಹನೀಯರೆ, ಕೆನೆಪದರ ತೆಗೆಯುವ ಬಗ್ಗೆ ಏನಕ್ಕೆ ಮಾತಾಡುವುದಿಲ್ಲ ನೀವು?

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...