Homeಕರ್ನಾಟಕಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟು ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿದ್ದು, ಪ್ರತಿರೋಧವಾಗಿ ‘ಜನಸಾಹಿತ್ಯ ಸಮ್ಮೇಳನ’ದ ತಯಾರಿ ನಡೆಯುತ್ತಿದೆ.

ರಾಜ್ಯದ ಪ್ರಗತಿಪರ, ಜನಪರ, ನಾಡಿನ ಸೌಹಾರ್ದ ಪರಂಪರೆಯ ಬಗ್ಗೆ ನಂಬಿಕೆ ಇಟ್ಟುವ ಸಾವಿರಾರು ಮನಸ್ಸುಗಳು ಜ.8ರಂದು ಬೆಂಗಳೂರಿನ ಕೆ.ಆರ್‌.ಸರ್ಕಲ್ ಅಲುಮ್ನಿ ಹಾಲ್‌ನಲ್ಲಿ ‘ಜನಸಮ್ಮೇಳನ’ವನ್ನು ಆಯೋಜಿಸಿವೆ.

“ಇದೊಂದು ಕನ್ನಡದ ಮನಸ್ಸುಗಳ ತಕ್ಷಣದ ಪ್ರತಿಕ್ರಿಯೆ. ಇದು ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವೂ ಅಲ್ಲ, ಬಂಡಾಯವೂ ಅಲ್ಲ. ಇದೊಂದು ಪ್ರತಿರೋಧ ಸಮಾವೇಶ” ಎಂದು ಆಯೋಜಕರು ಹೇಳಿದ್ದಾರೆ.

“86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲೀಮರನ್ನು ಹೊರಗಿಡಲಾಗಿದೆ. ಇದು ಉದ್ದೇಶಪೂರ್ವಕವಾಗಿ ಕಸಾಪ ನಡೆಸಿರುವ ಕೃತ್ಯ. ಸರ್ಕಾರದ ಬಾಹ್ಯ ಶಕ್ತಿಗಳಾದ ಹಿಂದುತ್ವವಾದಿ ಸಂಘಟನೆಗಳು ಮುಸ್ಲಿಮರ ಮೇಲೆ ನೇರ ದಾಳಿ ನಡೆಸುತ್ತಿದ್ದರೆ ಕಸಾಪ ಈ ರೀತಿ ಅದೇ ಅದೇ ಅಜೆಂಡಾಗಳನ್ನು ಸಾಹಿತ್ಯ ಸಮ್ಮೇಳನದ ಮೂಲಕ ಜಾರಿ ಮಾಡಿದೆ. ಹಾಗಾಗಿ ನಾವು ತಕ್ಷಣದ ಪ್ರತಿರೋಧವನ್ನು ಅದೇ ದಿನ ಕೊಡುವುದು ಅಗತ್ಯವಾಗಿದೆ. ಇದು ಕನ್ನಡದ ಸಾಹಿತಿಗಳು, ಕವಿಗಳು, ಹೋರಾಟಗಾರರು ವ್ಯಕ್ತಪಡಿಸುವ ಪ್ರತಿಭಟನೆಯಾಗಿದೆ” ಎಂದು ಹೇಳಿದ್ದಾರೆ.

“ಜನಸಾಹಿತ್ಯ ಸಮ್ಮೇಳನ ಎಂಬ ಪ್ರತಿರೋಧ ಸಮಾವೇಶಕ್ಕೆ ಈಗಾಗಲೇ ನಾಡಿನ ಹಿರಿ-ಕಿರಿಯ ಸಾಹಿತಿ, ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲವು ಹಿರಿಯರು ನಿರಂತರ ಮಾರ್ಗದರ್ಶನ ಮಾಡುತ್ತಿದ್ದಾರೆ. ಹಿರಿಯರ ಸೂಚನೆಯಂತೆ ಜನವರಿ 08 ಭಾನುವಾರ 2023 ರಂದು ನಡೆಯುವ ಜನಸಾಹಿತ್ಯ ಸಮ್ಮೇಳನದ ಸಿದ್ದತೆ ನಡೆಯುತ್ತಿದೆ” ಎಂದಿದ್ದಾರೆ.

ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ಒಂದು ಕಾಲಕ್ಕೆ ಕನ್ನಡಿಗರ ಅಗತ್ಯಗಳನ್ನು ಈಡೇರಿಸಲು ಕನ್ನಡ ಸಾಹಿತ್ಯ ಪರಿಷತ್ತು ಕೆಲಸ ಮಾಡಿತ್ತು. ಕನ್ನಡದ ಧೀಮಂತ ಲೇಖಕರು ಅದರ ಅಧ್ಯಕ್ಷರೂ ಆಗಿದ್ದರು. ಆದರೆ ಈಗ ಪರಿಷತ್ತು ತನ್ನ ಸಾಧ್ಯತೆಗಳನ್ನು ತೀರಿಸಿಕೊಂಡು ಜಡವಾಗಿದೆ. 1992ರ ಆನಂತರ ಬೆಳೆದು ಬಂದ ಜಾಗತೀಕರಣ ಮತ್ತು ಕೋಮುವಾದವು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ಮೇಲೆ ಬೀರುತ್ತಿರುವ ಪರಿಣಾಮಗಳನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಅದಕ್ಕೆ ಗೊತ್ತಿಲ್ಲ. ಅದೀಗ ಸರಕಾರದ ಅನುದಾನ ಪಡೆದು ವರ್ಷಕ್ಕೊಂದು ಸಮ್ಮೇಳನ ನಡೆಸುವ ʼಈವೆಂಟ್ ಮೆನೇಜ್ಮೆಂಟ್ ಸಂಸ್ಥೆʼಯಾಗಿಯಷ್ಟೇ ಉಳಿದಿದೆ. ಸಾಂಸ್ಥೀಕರಣಗೊಂಡ ಯಾವುದೇ ಸಂಸ್ಥೆಯ ಗತಿಯಾದರೂ ಇಷ್ಟೇ. ಅದಕ್ಕೆ ಬಸವಣ್ಣ ʼಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲʼ ಎಂಬ ಮಾತನ್ನು ಹೇಳಿದ್ದ. ಸಾಹಿತ್ಯಿಕ ಸಂಸ್ಥೆಗಳು ಸರಕಾರದ ಅನುದಾನದಿಂದ ನಡೆದಾಗ ಅವು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತವೆ. ಚಂದ್ರಶೇಖರ ಪಾಟೀಲರಂಥ ಕೆಲವರು ಮಾತ್ರ ಅನುದಾನ ಪಡೆದೂ ಸೆಟೆದು ನಿಲ್ಲುವ ಧೈರ್ಯ ತೋರಿಸುತ್ತಾರೆ. ನಿರುಪಯುಕ್ತ ಸಂಸ್ಥೆಗಳ ಮೇಲೆ ಕಣ್ಣಿಟ್ಟ ಲೇಖಕರು ತಮ್ಮ ಅವಕಾಶಕ್ಕಾಗಿ ಕಾಯುತ್ತಾ ಜೀವನವನ್ನೇ ನಿರುಪಯುಕ್ತಗೊಳಿಸಿಕೊಳ್ಳುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇವತ್ತಿನ ಲೇಖಕರು ನಿಜಕ್ಕೂ ಗಂಭೀರವಾದ ಸಮಸ್ಯೆಗಳನ್ನು ಇದಿರಿಸುತ್ತಿದ್ದಾರೆ. ಅದರಲ್ಲಿಯೂ ದಲಿತರು, ಅಲ್ಪ ಸಂಖ್ಯಾಕರು ಮತ್ತು ಮಹಿಳೆಯವರು ಅಮಾನುಷ ಕ್ರೌ ರ್ಯಗಳಿಗೆ ಬಲಿಯಾಗುತ್ತಿದ್ದಾರೆ. ಮೀಸಲಾತಿಯನ್ನು ಯಾರ್ಯಾರೋ ಅಪಹರಿಸುತ್ತಿದ್ದಾರೆ. ಕನ್ನಡದ ಮಾಹಿತಿಗಳ ಮೂಲಕವೇ ಕನ್ನಡವನ್ನು ಕಟ್ಟಿದ ಅಪ್ರತಿಮ ಸಂಶೋಧಕ ಡಾ. ಎಂ ಎಂ ಕಲಬುರ್ಗಿ ತಮ್ಮ ಸಂಶೋಧನೆಯ ಸತ್ಯಗಳಿಂದಾಗಿಯೇ ಕೊಲೆಯಾದರು. ಗೌರಿಯ ಹತ್ಯೆಯಾಯಿತು. ಗಂಭೀರ ಲೇಖಕರು ಸಮಕಾಲೀನ ಸಮಾಜ ಏನನ್ನು ನಿರೀಕ್ಷಿಸುತ್ತದೆಯೋ ಅದನ್ನೇ ಹೇಳಬೇಕಾಗಿರುವ ಒತ್ತಡದಲ್ಲಿ ಸಿಲುಕಿಕೊಂಡಿದ್ದಾರೆ. ನಮ್ಮ ಚರಿತ್ರೆ ನಮಗೆ ಸಹನೆಯನ್ನು ಹೇಳಿಕೊಟ್ಟಿದೆ. ಈ ನೆಲದಲ್ಲಿ ನಡೆದ ಬಹುದೊಡ್ಡ ವಾಗ್ವಾದಗಳು ಇಂದು ನಮ್ಮ ಪ್ರಜಾಪ್ರಭುತ್ವದ ತಳಹದಿಯಾಗಿ ಕೆಲಸ ನಿರ್ವಹಿಸುತ್ತಿವೆ. ಆದರೆ ಈಗ ಏನನ್ನು ಹೇಳಿದರೆ ನಾನು ಅಪಾಯದಿಂದ ಪಾರಾಗಬಹುದು ಎಂದು ಯೋಚಿಸಿ ಬರೆಯಬೇಕಾದ ವಾತಾವರಣ ನಿರ್ಮಾಣವಾಗುತ್ತಿರುವಾಗ ನಮ್ಮ ಬರೆಹಗಳು ಪೇಲವವಾಗುವುದರಲ್ಲಿ ಅನುಮಾನವಿಲ್ಲ” ಎಂದು ತಿಳಿಸಿದ್ದಾರೆ.

“ಬಹುಶಃ ಕನ್ನಡ ಎಂದೂ ಇಂಥ ಪರಿಸ್ಥಿತಿಯನ್ನು ಇದಿರಿಸಿಲ್ಲ. ಅರಿಕೇಸರಿಯ ಆಸ್ಥಾನ ಕವಿಯಾಗಿದ್ದ ಪಂಪನಿಗೆ ‘ಓಲಗಿಸಿ ಬಾಳ್ವುದು ಕಷ್ಟಂ ಇಳಾಧಿನಾಥರಾ’ ಎಂದು ಹೇಳುವ ಧೈರ್ಯವಿತ್ತು. ವಿಜಯನಗರದ ಅರಸೊತ್ತಿಗೆಯನ್ನು ಕಣ್ಣಾರೆ ಕಂಡ ಕುಮಾರವ್ಯಾಸನು ‘ಅರಸು ರಾಕ್ಷಸ, ಮಂತ್ರಿಯೆಂಬುವ ಮೊರೆವ ಹುಲಿ, ಪರಿವಾರ ಹದ್ದಿನ ನೆರವಿ, ಬಡವರ ಬಿನ್ನಪವನಿನ್ನಾರು ಕೇಳುವರು, ಉರಿವುರಿವುತಿದೆ ದೇಶ, ನಾವಿನ್ನಿರಲು ಬಾರದು’ ಎಂದು ಗುಡುಗಿದ್ದ. ಹಂಪಿಯ ಅಪಾರ ಸಂಪತ್ತನ್ನು ತಾತ್ವಿಕವಾಗಿ ನಿರಾಕರಿಸುವ ಪುರಂದರದಾಸರು – ʼಲೊಳಲೊಟ್ಟೆ, ಎಲ್ಲಾ ಲೊಳಲೊಟ್ಟೆ, ಆನೆಕುದುರೆ ಎಲ್ಲ ಲೊಳಲೊಟ್ಟೆ, ಸೇನೆ ಭಂಡಾರವು ಲೊಳಲೊಟ್ಟೆ, ಮುತ್ತು ಮಾಣಿಕ್ಯ ಲೊಳಲೊಟ್ಟೆ, ಛತ್ರಚಾಮರ ಧ್ವಜ ಲೊಳಲೊಟ್ಟೆ’ ಎಂದು ಹಾಡಿಕೊಂಡು ಬರಿ ಲಂಗೋಟಿಯಲ್ಲಿಯೇ ಮುತ್ತು ರತ್ನ ಮಾರುವ ವಿಜಯನಗರದ ಬೀದಿಗಳಲ್ಲಿ ಓಡಾಡಿದರು. ಸಾಲಗುಂದ ಗುರು ಖಾದರಿ ಪೀರನು ‘ಮಸೀದಿ ಎಂಬುದು ಹಾಳಾದ ಜಾಗ, ಅದರ ಗೊಡವಿ ನಿನಗ್ಯಾಕಂತೆ ? ಎಂದು ಸಡ್ಡು ಹೊಡೆಯುತ್ತಾನೆ. ಆದರೆ ಈಗ ಕನ್ನಡದ ಹಾದಿ ಬದಲಿದಂತಿದೆ. ಈ ಕುರಿತು ನಾವೆಲ್ಲ ಅರೆಕ್ಷಣ ನಿಂತು, ಯೋಚಿಸಿ, ಮುಂದುವರೆಯಬೇಕಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೀಸಲಾತಿ ಯಾರೊಬ್ಬರ ಮೂಲಭೂತ ಹಕ್ಕು ಅಲ್ಲ.. ಮಹನೀಯರೆ, ಕೆನೆಪದರ ತೆಗೆಯುವ ಬಗ್ಗೆ ಏನಕ್ಕೆ ಮಾತಾಡುವುದಿಲ್ಲ ನೀವು?

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...