Homeಕರ್ನಾಟಕಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟು ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿದ್ದು, ಪ್ರತಿರೋಧವಾಗಿ ‘ಜನಸಾಹಿತ್ಯ ಸಮ್ಮೇಳನ’ದ ತಯಾರಿ ನಡೆಯುತ್ತಿದೆ.

ರಾಜ್ಯದ ಪ್ರಗತಿಪರ, ಜನಪರ, ನಾಡಿನ ಸೌಹಾರ್ದ ಪರಂಪರೆಯ ಬಗ್ಗೆ ನಂಬಿಕೆ ಇಟ್ಟುವ ಸಾವಿರಾರು ಮನಸ್ಸುಗಳು ಜ.8ರಂದು ಬೆಂಗಳೂರಿನ ಕೆ.ಆರ್‌.ಸರ್ಕಲ್ ಅಲುಮ್ನಿ ಹಾಲ್‌ನಲ್ಲಿ ‘ಜನಸಮ್ಮೇಳನ’ವನ್ನು ಆಯೋಜಿಸಿವೆ.

“ಇದೊಂದು ಕನ್ನಡದ ಮನಸ್ಸುಗಳ ತಕ್ಷಣದ ಪ್ರತಿಕ್ರಿಯೆ. ಇದು ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವೂ ಅಲ್ಲ, ಬಂಡಾಯವೂ ಅಲ್ಲ. ಇದೊಂದು ಪ್ರತಿರೋಧ ಸಮಾವೇಶ” ಎಂದು ಆಯೋಜಕರು ಹೇಳಿದ್ದಾರೆ.

“86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲೀಮರನ್ನು ಹೊರಗಿಡಲಾಗಿದೆ. ಇದು ಉದ್ದೇಶಪೂರ್ವಕವಾಗಿ ಕಸಾಪ ನಡೆಸಿರುವ ಕೃತ್ಯ. ಸರ್ಕಾರದ ಬಾಹ್ಯ ಶಕ್ತಿಗಳಾದ ಹಿಂದುತ್ವವಾದಿ ಸಂಘಟನೆಗಳು ಮುಸ್ಲಿಮರ ಮೇಲೆ ನೇರ ದಾಳಿ ನಡೆಸುತ್ತಿದ್ದರೆ ಕಸಾಪ ಈ ರೀತಿ ಅದೇ ಅದೇ ಅಜೆಂಡಾಗಳನ್ನು ಸಾಹಿತ್ಯ ಸಮ್ಮೇಳನದ ಮೂಲಕ ಜಾರಿ ಮಾಡಿದೆ. ಹಾಗಾಗಿ ನಾವು ತಕ್ಷಣದ ಪ್ರತಿರೋಧವನ್ನು ಅದೇ ದಿನ ಕೊಡುವುದು ಅಗತ್ಯವಾಗಿದೆ. ಇದು ಕನ್ನಡದ ಸಾಹಿತಿಗಳು, ಕವಿಗಳು, ಹೋರಾಟಗಾರರು ವ್ಯಕ್ತಪಡಿಸುವ ಪ್ರತಿಭಟನೆಯಾಗಿದೆ” ಎಂದು ಹೇಳಿದ್ದಾರೆ.

“ಜನಸಾಹಿತ್ಯ ಸಮ್ಮೇಳನ ಎಂಬ ಪ್ರತಿರೋಧ ಸಮಾವೇಶಕ್ಕೆ ಈಗಾಗಲೇ ನಾಡಿನ ಹಿರಿ-ಕಿರಿಯ ಸಾಹಿತಿ, ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲವು ಹಿರಿಯರು ನಿರಂತರ ಮಾರ್ಗದರ್ಶನ ಮಾಡುತ್ತಿದ್ದಾರೆ. ಹಿರಿಯರ ಸೂಚನೆಯಂತೆ ಜನವರಿ 08 ಭಾನುವಾರ 2023 ರಂದು ನಡೆಯುವ ಜನಸಾಹಿತ್ಯ ಸಮ್ಮೇಳನದ ಸಿದ್ದತೆ ನಡೆಯುತ್ತಿದೆ” ಎಂದಿದ್ದಾರೆ.

ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ಒಂದು ಕಾಲಕ್ಕೆ ಕನ್ನಡಿಗರ ಅಗತ್ಯಗಳನ್ನು ಈಡೇರಿಸಲು ಕನ್ನಡ ಸಾಹಿತ್ಯ ಪರಿಷತ್ತು ಕೆಲಸ ಮಾಡಿತ್ತು. ಕನ್ನಡದ ಧೀಮಂತ ಲೇಖಕರು ಅದರ ಅಧ್ಯಕ್ಷರೂ ಆಗಿದ್ದರು. ಆದರೆ ಈಗ ಪರಿಷತ್ತು ತನ್ನ ಸಾಧ್ಯತೆಗಳನ್ನು ತೀರಿಸಿಕೊಂಡು ಜಡವಾಗಿದೆ. 1992ರ ಆನಂತರ ಬೆಳೆದು ಬಂದ ಜಾಗತೀಕರಣ ಮತ್ತು ಕೋಮುವಾದವು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ಮೇಲೆ ಬೀರುತ್ತಿರುವ ಪರಿಣಾಮಗಳನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಅದಕ್ಕೆ ಗೊತ್ತಿಲ್ಲ. ಅದೀಗ ಸರಕಾರದ ಅನುದಾನ ಪಡೆದು ವರ್ಷಕ್ಕೊಂದು ಸಮ್ಮೇಳನ ನಡೆಸುವ ʼಈವೆಂಟ್ ಮೆನೇಜ್ಮೆಂಟ್ ಸಂಸ್ಥೆʼಯಾಗಿಯಷ್ಟೇ ಉಳಿದಿದೆ. ಸಾಂಸ್ಥೀಕರಣಗೊಂಡ ಯಾವುದೇ ಸಂಸ್ಥೆಯ ಗತಿಯಾದರೂ ಇಷ್ಟೇ. ಅದಕ್ಕೆ ಬಸವಣ್ಣ ʼಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲʼ ಎಂಬ ಮಾತನ್ನು ಹೇಳಿದ್ದ. ಸಾಹಿತ್ಯಿಕ ಸಂಸ್ಥೆಗಳು ಸರಕಾರದ ಅನುದಾನದಿಂದ ನಡೆದಾಗ ಅವು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತವೆ. ಚಂದ್ರಶೇಖರ ಪಾಟೀಲರಂಥ ಕೆಲವರು ಮಾತ್ರ ಅನುದಾನ ಪಡೆದೂ ಸೆಟೆದು ನಿಲ್ಲುವ ಧೈರ್ಯ ತೋರಿಸುತ್ತಾರೆ. ನಿರುಪಯುಕ್ತ ಸಂಸ್ಥೆಗಳ ಮೇಲೆ ಕಣ್ಣಿಟ್ಟ ಲೇಖಕರು ತಮ್ಮ ಅವಕಾಶಕ್ಕಾಗಿ ಕಾಯುತ್ತಾ ಜೀವನವನ್ನೇ ನಿರುಪಯುಕ್ತಗೊಳಿಸಿಕೊಳ್ಳುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇವತ್ತಿನ ಲೇಖಕರು ನಿಜಕ್ಕೂ ಗಂಭೀರವಾದ ಸಮಸ್ಯೆಗಳನ್ನು ಇದಿರಿಸುತ್ತಿದ್ದಾರೆ. ಅದರಲ್ಲಿಯೂ ದಲಿತರು, ಅಲ್ಪ ಸಂಖ್ಯಾಕರು ಮತ್ತು ಮಹಿಳೆಯವರು ಅಮಾನುಷ ಕ್ರೌ ರ್ಯಗಳಿಗೆ ಬಲಿಯಾಗುತ್ತಿದ್ದಾರೆ. ಮೀಸಲಾತಿಯನ್ನು ಯಾರ್ಯಾರೋ ಅಪಹರಿಸುತ್ತಿದ್ದಾರೆ. ಕನ್ನಡದ ಮಾಹಿತಿಗಳ ಮೂಲಕವೇ ಕನ್ನಡವನ್ನು ಕಟ್ಟಿದ ಅಪ್ರತಿಮ ಸಂಶೋಧಕ ಡಾ. ಎಂ ಎಂ ಕಲಬುರ್ಗಿ ತಮ್ಮ ಸಂಶೋಧನೆಯ ಸತ್ಯಗಳಿಂದಾಗಿಯೇ ಕೊಲೆಯಾದರು. ಗೌರಿಯ ಹತ್ಯೆಯಾಯಿತು. ಗಂಭೀರ ಲೇಖಕರು ಸಮಕಾಲೀನ ಸಮಾಜ ಏನನ್ನು ನಿರೀಕ್ಷಿಸುತ್ತದೆಯೋ ಅದನ್ನೇ ಹೇಳಬೇಕಾಗಿರುವ ಒತ್ತಡದಲ್ಲಿ ಸಿಲುಕಿಕೊಂಡಿದ್ದಾರೆ. ನಮ್ಮ ಚರಿತ್ರೆ ನಮಗೆ ಸಹನೆಯನ್ನು ಹೇಳಿಕೊಟ್ಟಿದೆ. ಈ ನೆಲದಲ್ಲಿ ನಡೆದ ಬಹುದೊಡ್ಡ ವಾಗ್ವಾದಗಳು ಇಂದು ನಮ್ಮ ಪ್ರಜಾಪ್ರಭುತ್ವದ ತಳಹದಿಯಾಗಿ ಕೆಲಸ ನಿರ್ವಹಿಸುತ್ತಿವೆ. ಆದರೆ ಈಗ ಏನನ್ನು ಹೇಳಿದರೆ ನಾನು ಅಪಾಯದಿಂದ ಪಾರಾಗಬಹುದು ಎಂದು ಯೋಚಿಸಿ ಬರೆಯಬೇಕಾದ ವಾತಾವರಣ ನಿರ್ಮಾಣವಾಗುತ್ತಿರುವಾಗ ನಮ್ಮ ಬರೆಹಗಳು ಪೇಲವವಾಗುವುದರಲ್ಲಿ ಅನುಮಾನವಿಲ್ಲ” ಎಂದು ತಿಳಿಸಿದ್ದಾರೆ.

“ಬಹುಶಃ ಕನ್ನಡ ಎಂದೂ ಇಂಥ ಪರಿಸ್ಥಿತಿಯನ್ನು ಇದಿರಿಸಿಲ್ಲ. ಅರಿಕೇಸರಿಯ ಆಸ್ಥಾನ ಕವಿಯಾಗಿದ್ದ ಪಂಪನಿಗೆ ‘ಓಲಗಿಸಿ ಬಾಳ್ವುದು ಕಷ್ಟಂ ಇಳಾಧಿನಾಥರಾ’ ಎಂದು ಹೇಳುವ ಧೈರ್ಯವಿತ್ತು. ವಿಜಯನಗರದ ಅರಸೊತ್ತಿಗೆಯನ್ನು ಕಣ್ಣಾರೆ ಕಂಡ ಕುಮಾರವ್ಯಾಸನು ‘ಅರಸು ರಾಕ್ಷಸ, ಮಂತ್ರಿಯೆಂಬುವ ಮೊರೆವ ಹುಲಿ, ಪರಿವಾರ ಹದ್ದಿನ ನೆರವಿ, ಬಡವರ ಬಿನ್ನಪವನಿನ್ನಾರು ಕೇಳುವರು, ಉರಿವುರಿವುತಿದೆ ದೇಶ, ನಾವಿನ್ನಿರಲು ಬಾರದು’ ಎಂದು ಗುಡುಗಿದ್ದ. ಹಂಪಿಯ ಅಪಾರ ಸಂಪತ್ತನ್ನು ತಾತ್ವಿಕವಾಗಿ ನಿರಾಕರಿಸುವ ಪುರಂದರದಾಸರು – ʼಲೊಳಲೊಟ್ಟೆ, ಎಲ್ಲಾ ಲೊಳಲೊಟ್ಟೆ, ಆನೆಕುದುರೆ ಎಲ್ಲ ಲೊಳಲೊಟ್ಟೆ, ಸೇನೆ ಭಂಡಾರವು ಲೊಳಲೊಟ್ಟೆ, ಮುತ್ತು ಮಾಣಿಕ್ಯ ಲೊಳಲೊಟ್ಟೆ, ಛತ್ರಚಾಮರ ಧ್ವಜ ಲೊಳಲೊಟ್ಟೆ’ ಎಂದು ಹಾಡಿಕೊಂಡು ಬರಿ ಲಂಗೋಟಿಯಲ್ಲಿಯೇ ಮುತ್ತು ರತ್ನ ಮಾರುವ ವಿಜಯನಗರದ ಬೀದಿಗಳಲ್ಲಿ ಓಡಾಡಿದರು. ಸಾಲಗುಂದ ಗುರು ಖಾದರಿ ಪೀರನು ‘ಮಸೀದಿ ಎಂಬುದು ಹಾಳಾದ ಜಾಗ, ಅದರ ಗೊಡವಿ ನಿನಗ್ಯಾಕಂತೆ ? ಎಂದು ಸಡ್ಡು ಹೊಡೆಯುತ್ತಾನೆ. ಆದರೆ ಈಗ ಕನ್ನಡದ ಹಾದಿ ಬದಲಿದಂತಿದೆ. ಈ ಕುರಿತು ನಾವೆಲ್ಲ ಅರೆಕ್ಷಣ ನಿಂತು, ಯೋಚಿಸಿ, ಮುಂದುವರೆಯಬೇಕಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೀಸಲಾತಿ ಯಾರೊಬ್ಬರ ಮೂಲಭೂತ ಹಕ್ಕು ಅಲ್ಲ.. ಮಹನೀಯರೆ, ಕೆನೆಪದರ ತೆಗೆಯುವ ಬಗ್ಗೆ ಏನಕ್ಕೆ ಮಾತಾಡುವುದಿಲ್ಲ ನೀವು?

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...