Homeಕರ್ನಾಟಕಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ಮುಸ್ಲಿಂ ಲೇಖಕರನ್ನು ಹೊರಗಿಟ್ಟು ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿದ್ದು, ಪ್ರತಿರೋಧವಾಗಿ ‘ಜನಸಾಹಿತ್ಯ ಸಮ್ಮೇಳನ’ದ ತಯಾರಿ ನಡೆಯುತ್ತಿದೆ.

ರಾಜ್ಯದ ಪ್ರಗತಿಪರ, ಜನಪರ, ನಾಡಿನ ಸೌಹಾರ್ದ ಪರಂಪರೆಯ ಬಗ್ಗೆ ನಂಬಿಕೆ ಇಟ್ಟುವ ಸಾವಿರಾರು ಮನಸ್ಸುಗಳು ಜ.8ರಂದು ಬೆಂಗಳೂರಿನ ಕೆ.ಆರ್‌.ಸರ್ಕಲ್ ಅಲುಮ್ನಿ ಹಾಲ್‌ನಲ್ಲಿ ‘ಜನಸಮ್ಮೇಳನ’ವನ್ನು ಆಯೋಜಿಸಿವೆ.

“ಇದೊಂದು ಕನ್ನಡದ ಮನಸ್ಸುಗಳ ತಕ್ಷಣದ ಪ್ರತಿಕ್ರಿಯೆ. ಇದು ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವೂ ಅಲ್ಲ, ಬಂಡಾಯವೂ ಅಲ್ಲ. ಇದೊಂದು ಪ್ರತಿರೋಧ ಸಮಾವೇಶ” ಎಂದು ಆಯೋಜಕರು ಹೇಳಿದ್ದಾರೆ.

“86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲೀಮರನ್ನು ಹೊರಗಿಡಲಾಗಿದೆ. ಇದು ಉದ್ದೇಶಪೂರ್ವಕವಾಗಿ ಕಸಾಪ ನಡೆಸಿರುವ ಕೃತ್ಯ. ಸರ್ಕಾರದ ಬಾಹ್ಯ ಶಕ್ತಿಗಳಾದ ಹಿಂದುತ್ವವಾದಿ ಸಂಘಟನೆಗಳು ಮುಸ್ಲಿಮರ ಮೇಲೆ ನೇರ ದಾಳಿ ನಡೆಸುತ್ತಿದ್ದರೆ ಕಸಾಪ ಈ ರೀತಿ ಅದೇ ಅದೇ ಅಜೆಂಡಾಗಳನ್ನು ಸಾಹಿತ್ಯ ಸಮ್ಮೇಳನದ ಮೂಲಕ ಜಾರಿ ಮಾಡಿದೆ. ಹಾಗಾಗಿ ನಾವು ತಕ್ಷಣದ ಪ್ರತಿರೋಧವನ್ನು ಅದೇ ದಿನ ಕೊಡುವುದು ಅಗತ್ಯವಾಗಿದೆ. ಇದು ಕನ್ನಡದ ಸಾಹಿತಿಗಳು, ಕವಿಗಳು, ಹೋರಾಟಗಾರರು ವ್ಯಕ್ತಪಡಿಸುವ ಪ್ರತಿಭಟನೆಯಾಗಿದೆ” ಎಂದು ಹೇಳಿದ್ದಾರೆ.

“ಜನಸಾಹಿತ್ಯ ಸಮ್ಮೇಳನ ಎಂಬ ಪ್ರತಿರೋಧ ಸಮಾವೇಶಕ್ಕೆ ಈಗಾಗಲೇ ನಾಡಿನ ಹಿರಿ-ಕಿರಿಯ ಸಾಹಿತಿ, ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲವು ಹಿರಿಯರು ನಿರಂತರ ಮಾರ್ಗದರ್ಶನ ಮಾಡುತ್ತಿದ್ದಾರೆ. ಹಿರಿಯರ ಸೂಚನೆಯಂತೆ ಜನವರಿ 08 ಭಾನುವಾರ 2023 ರಂದು ನಡೆಯುವ ಜನಸಾಹಿತ್ಯ ಸಮ್ಮೇಳನದ ಸಿದ್ದತೆ ನಡೆಯುತ್ತಿದೆ” ಎಂದಿದ್ದಾರೆ.

ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ಒಂದು ಕಾಲಕ್ಕೆ ಕನ್ನಡಿಗರ ಅಗತ್ಯಗಳನ್ನು ಈಡೇರಿಸಲು ಕನ್ನಡ ಸಾಹಿತ್ಯ ಪರಿಷತ್ತು ಕೆಲಸ ಮಾಡಿತ್ತು. ಕನ್ನಡದ ಧೀಮಂತ ಲೇಖಕರು ಅದರ ಅಧ್ಯಕ್ಷರೂ ಆಗಿದ್ದರು. ಆದರೆ ಈಗ ಪರಿಷತ್ತು ತನ್ನ ಸಾಧ್ಯತೆಗಳನ್ನು ತೀರಿಸಿಕೊಂಡು ಜಡವಾಗಿದೆ. 1992ರ ಆನಂತರ ಬೆಳೆದು ಬಂದ ಜಾಗತೀಕರಣ ಮತ್ತು ಕೋಮುವಾದವು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ಮೇಲೆ ಬೀರುತ್ತಿರುವ ಪರಿಣಾಮಗಳನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಅದಕ್ಕೆ ಗೊತ್ತಿಲ್ಲ. ಅದೀಗ ಸರಕಾರದ ಅನುದಾನ ಪಡೆದು ವರ್ಷಕ್ಕೊಂದು ಸಮ್ಮೇಳನ ನಡೆಸುವ ʼಈವೆಂಟ್ ಮೆನೇಜ್ಮೆಂಟ್ ಸಂಸ್ಥೆʼಯಾಗಿಯಷ್ಟೇ ಉಳಿದಿದೆ. ಸಾಂಸ್ಥೀಕರಣಗೊಂಡ ಯಾವುದೇ ಸಂಸ್ಥೆಯ ಗತಿಯಾದರೂ ಇಷ್ಟೇ. ಅದಕ್ಕೆ ಬಸವಣ್ಣ ʼಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲʼ ಎಂಬ ಮಾತನ್ನು ಹೇಳಿದ್ದ. ಸಾಹಿತ್ಯಿಕ ಸಂಸ್ಥೆಗಳು ಸರಕಾರದ ಅನುದಾನದಿಂದ ನಡೆದಾಗ ಅವು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತವೆ. ಚಂದ್ರಶೇಖರ ಪಾಟೀಲರಂಥ ಕೆಲವರು ಮಾತ್ರ ಅನುದಾನ ಪಡೆದೂ ಸೆಟೆದು ನಿಲ್ಲುವ ಧೈರ್ಯ ತೋರಿಸುತ್ತಾರೆ. ನಿರುಪಯುಕ್ತ ಸಂಸ್ಥೆಗಳ ಮೇಲೆ ಕಣ್ಣಿಟ್ಟ ಲೇಖಕರು ತಮ್ಮ ಅವಕಾಶಕ್ಕಾಗಿ ಕಾಯುತ್ತಾ ಜೀವನವನ್ನೇ ನಿರುಪಯುಕ್ತಗೊಳಿಸಿಕೊಳ್ಳುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇವತ್ತಿನ ಲೇಖಕರು ನಿಜಕ್ಕೂ ಗಂಭೀರವಾದ ಸಮಸ್ಯೆಗಳನ್ನು ಇದಿರಿಸುತ್ತಿದ್ದಾರೆ. ಅದರಲ್ಲಿಯೂ ದಲಿತರು, ಅಲ್ಪ ಸಂಖ್ಯಾಕರು ಮತ್ತು ಮಹಿಳೆಯವರು ಅಮಾನುಷ ಕ್ರೌ ರ್ಯಗಳಿಗೆ ಬಲಿಯಾಗುತ್ತಿದ್ದಾರೆ. ಮೀಸಲಾತಿಯನ್ನು ಯಾರ್ಯಾರೋ ಅಪಹರಿಸುತ್ತಿದ್ದಾರೆ. ಕನ್ನಡದ ಮಾಹಿತಿಗಳ ಮೂಲಕವೇ ಕನ್ನಡವನ್ನು ಕಟ್ಟಿದ ಅಪ್ರತಿಮ ಸಂಶೋಧಕ ಡಾ. ಎಂ ಎಂ ಕಲಬುರ್ಗಿ ತಮ್ಮ ಸಂಶೋಧನೆಯ ಸತ್ಯಗಳಿಂದಾಗಿಯೇ ಕೊಲೆಯಾದರು. ಗೌರಿಯ ಹತ್ಯೆಯಾಯಿತು. ಗಂಭೀರ ಲೇಖಕರು ಸಮಕಾಲೀನ ಸಮಾಜ ಏನನ್ನು ನಿರೀಕ್ಷಿಸುತ್ತದೆಯೋ ಅದನ್ನೇ ಹೇಳಬೇಕಾಗಿರುವ ಒತ್ತಡದಲ್ಲಿ ಸಿಲುಕಿಕೊಂಡಿದ್ದಾರೆ. ನಮ್ಮ ಚರಿತ್ರೆ ನಮಗೆ ಸಹನೆಯನ್ನು ಹೇಳಿಕೊಟ್ಟಿದೆ. ಈ ನೆಲದಲ್ಲಿ ನಡೆದ ಬಹುದೊಡ್ಡ ವಾಗ್ವಾದಗಳು ಇಂದು ನಮ್ಮ ಪ್ರಜಾಪ್ರಭುತ್ವದ ತಳಹದಿಯಾಗಿ ಕೆಲಸ ನಿರ್ವಹಿಸುತ್ತಿವೆ. ಆದರೆ ಈಗ ಏನನ್ನು ಹೇಳಿದರೆ ನಾನು ಅಪಾಯದಿಂದ ಪಾರಾಗಬಹುದು ಎಂದು ಯೋಚಿಸಿ ಬರೆಯಬೇಕಾದ ವಾತಾವರಣ ನಿರ್ಮಾಣವಾಗುತ್ತಿರುವಾಗ ನಮ್ಮ ಬರೆಹಗಳು ಪೇಲವವಾಗುವುದರಲ್ಲಿ ಅನುಮಾನವಿಲ್ಲ” ಎಂದು ತಿಳಿಸಿದ್ದಾರೆ.

“ಬಹುಶಃ ಕನ್ನಡ ಎಂದೂ ಇಂಥ ಪರಿಸ್ಥಿತಿಯನ್ನು ಇದಿರಿಸಿಲ್ಲ. ಅರಿಕೇಸರಿಯ ಆಸ್ಥಾನ ಕವಿಯಾಗಿದ್ದ ಪಂಪನಿಗೆ ‘ಓಲಗಿಸಿ ಬಾಳ್ವುದು ಕಷ್ಟಂ ಇಳಾಧಿನಾಥರಾ’ ಎಂದು ಹೇಳುವ ಧೈರ್ಯವಿತ್ತು. ವಿಜಯನಗರದ ಅರಸೊತ್ತಿಗೆಯನ್ನು ಕಣ್ಣಾರೆ ಕಂಡ ಕುಮಾರವ್ಯಾಸನು ‘ಅರಸು ರಾಕ್ಷಸ, ಮಂತ್ರಿಯೆಂಬುವ ಮೊರೆವ ಹುಲಿ, ಪರಿವಾರ ಹದ್ದಿನ ನೆರವಿ, ಬಡವರ ಬಿನ್ನಪವನಿನ್ನಾರು ಕೇಳುವರು, ಉರಿವುರಿವುತಿದೆ ದೇಶ, ನಾವಿನ್ನಿರಲು ಬಾರದು’ ಎಂದು ಗುಡುಗಿದ್ದ. ಹಂಪಿಯ ಅಪಾರ ಸಂಪತ್ತನ್ನು ತಾತ್ವಿಕವಾಗಿ ನಿರಾಕರಿಸುವ ಪುರಂದರದಾಸರು – ʼಲೊಳಲೊಟ್ಟೆ, ಎಲ್ಲಾ ಲೊಳಲೊಟ್ಟೆ, ಆನೆಕುದುರೆ ಎಲ್ಲ ಲೊಳಲೊಟ್ಟೆ, ಸೇನೆ ಭಂಡಾರವು ಲೊಳಲೊಟ್ಟೆ, ಮುತ್ತು ಮಾಣಿಕ್ಯ ಲೊಳಲೊಟ್ಟೆ, ಛತ್ರಚಾಮರ ಧ್ವಜ ಲೊಳಲೊಟ್ಟೆ’ ಎಂದು ಹಾಡಿಕೊಂಡು ಬರಿ ಲಂಗೋಟಿಯಲ್ಲಿಯೇ ಮುತ್ತು ರತ್ನ ಮಾರುವ ವಿಜಯನಗರದ ಬೀದಿಗಳಲ್ಲಿ ಓಡಾಡಿದರು. ಸಾಲಗುಂದ ಗುರು ಖಾದರಿ ಪೀರನು ‘ಮಸೀದಿ ಎಂಬುದು ಹಾಳಾದ ಜಾಗ, ಅದರ ಗೊಡವಿ ನಿನಗ್ಯಾಕಂತೆ ? ಎಂದು ಸಡ್ಡು ಹೊಡೆಯುತ್ತಾನೆ. ಆದರೆ ಈಗ ಕನ್ನಡದ ಹಾದಿ ಬದಲಿದಂತಿದೆ. ಈ ಕುರಿತು ನಾವೆಲ್ಲ ಅರೆಕ್ಷಣ ನಿಂತು, ಯೋಚಿಸಿ, ಮುಂದುವರೆಯಬೇಕಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೀಸಲಾತಿ ಯಾರೊಬ್ಬರ ಮೂಲಭೂತ ಹಕ್ಕು ಅಲ್ಲ.. ಮಹನೀಯರೆ, ಕೆನೆಪದರ ತೆಗೆಯುವ ಬಗ್ಗೆ ಏನಕ್ಕೆ ಮಾತಾಡುವುದಿಲ್ಲ ನೀವು?

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...