Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

ಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

- Advertisement -
- Advertisement -

ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಬರಹಗಾರರನ್ನು ಹೊರಗಿಟ್ಟು ಕನ್ನಡತನವನ್ನು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾದ ಮಹೇಶ ಜೋಶಿ ಮರೆತ್ತಿದ್ದಾರೆ ಎಂಬ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ಕಸಾಪ ಅಧ್ಯಕ್ಷರು, “ನಾನು ಗುರು ಗೋವಿಂದಭಟ್ಟರ ಮರಿಮೊಮ್ಮಗ, ನನಗಿಂತ ಜಾತ್ಯತೀತ ವ್ಯಕ್ತಿ ಬೇಕಾ?” ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಗುರು ಗೋವಿಂದ ಭಟ್ಟರಿಗೂ ಮಹೇಶ ಜೋಶಿಯವರಿಗೂ ಯಾವುದೇ ಸಂಬಂಧವಿಲ್ಲ ಎಂದು ‘ಈ ದಿನ.ಕಾಂ’ ವಿಶೇಷ ವರದಿ ಮಾಡಿದೆ.

ಪತ್ರಕರ್ತ ನವೀನ್ ಸೂರಿಂಜೆಯವರು ಬರೆದಿರುವ ವರದಿಯಲ್ಲಿ, “ಮಹೇಶ ಜೋಶಿಯವರು ಸುಳ್ಳನ್ನು ಹೇಳುತ್ತಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ. ಕಳಸದ ಗೋವಿಂದ ಭಟ್ಟರು ಮತ್ತು ಸಂತ ಶಿಶುನಾಳ ಶರೀಫರ ಗುರು-ಶಿಷ್ಯ ಸಂಬಂಧ ನಾಡಿನ ಅಸ್ಮಿತೆಗೆ ಬಹುದೊಡ್ಡ ಉದಾಹರಣೆ. ಆದರೆ ಗೋವಿಂದ ಭಟ್ಟರ ವಂಶಸ್ಥರೆಂದು ಮಹೇಶ ಜೋಶಿಯವರು ಹೇಳಿಕೊಂಡು ತಮ್ಮ ಕೋಮುವಾದಿ ಕಾರ್ಯಾಚರಣೆಯನ್ನು ಮರೆಮಾಚಲು ಯತ್ನಿಸುತ್ತಿರುವ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ‘ಈ ದಿನ’ ವರದಿ ವಿಶೇಷ ಬೆಳಕು ಚೆಲ್ಲಿದೆ.

ಶಿಥಿಲಾವಾಸ್ಥೆಯಲ್ಲಿದ್ದ ಗುರುಗೋವಿಂದ ಭಟ್ಟರ ಗರ್ಭಗುಡಿ ಕಟ್ಟಿಸಿದ ಕಾಳಪ್ಪ ಕೊಟ್ರಪ್ಪ ಪ್ಯಾಟಿ ಅವರ ಪುತ್ರ ಹಾಗೂ ಗುರುಗೋವಿಂದ ಭಟ್ಟರ ಗುಡಿ ಅಭಿವೃದ್ಧಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖಪ್ಪ ಕಾಳಪ್ಪ ಪ್ಯಾಟಿಯವರು ಪ್ರತಿಕ್ರಿಯಿಸಿದ್ದು, “ಗುರು ಗೋವಿಂದ ಭಟ್ಟರ ವಂಶಾವಳಿಗೂ, ಮಹೇಶ್ ಜೋಷಿಯವರ ವಂಶಾವಳಿಗೂ ಸಂಬಂಧವಿಲ್ಲ. ಅವೆರಡೂ ಬೇರೆ ಬೇರೆ ವಂಶಾವಳಿಗಳು. ಗುರು ಗೋವಿಂದ ಭಟ್ಟರ ಬಗ್ಗೆ ನಮ್ಮ ಹಿರಿಯರಲ್ಲಿ ಗೊಂದಲಗಳಿವೆ. ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇದ್ದರೇ ಎಂಬ ಪ್ರಶ್ನೆಗಳಿತ್ತು. ಆದರೆ ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇರಲಿಲ್ಲ. ಅವರ ಸಂಬಂಧಿಕರು ಯಾರೂ ಕೂಡಾ ಇಲ್ಲ” ಎಂದಿದ್ದಾರೆ.

“ಮಹೇಶ ಜೋಶಿ ಮತ್ತು ಗುರು ಗೋವಿಂದ ಭಟ್ಟರು ಇಬ್ಬರೂ ಬ್ರಾಹ್ಮಣರೇ ಎಂಬುದನ್ನು ಹೊರತುಪಡಿಸಿದರೆ ಇವರಿಬ್ಬರಿಗೂ ಇನ್ನಾವುದೇ ಸಂಬಂಧವೂ ಇಲ್ಲ. ಅವರು ಭಟ್ಟರು, ಇವರು ಜೋಷಿ. ಭಟ್ಟರೇ ಬೇರೆ, ಜೋಷಿಯವರೇ ಬೇರೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಮಹೇಶ್ ಜೋಷಿಯವರು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂಬುದಕ್ಕೆ ದಾಖಲೆ ಕೊಡಬೇಕು. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ ಎಂದೇ ನಾವು ತೀರ್ಮಾನಿಸಿರುವಾಗ ಈ ದೇವಸ್ಥಾನಕ್ಕೆ ಬಂದು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂದು ಹೇಳುವವರು ದಾಖಲೆ ನೀಡಬೇಕಾಗುತ್ತದೆ” ಎಂದು ಒತ್ತಾಯಿಸಿದ್ದಾರೆ.

“ಗುರು ಗೋವಿಂದ ಭಟ್ಟರ ದೇವಸ್ಥಾನದಲ್ಲಿ ಈ ಹಿಂದೆ ಅವರ ವಂಶಸ್ಥರು ಪೂಜಾದಿಗಳನ್ನು ಮಾಡುತ್ತಿದ್ದರು. ಅವರ ವಂಶಸ್ಥರು ನಶಿಸಿ ಹೋದ್ದರಿಂದ ನಾವುಗಳು ಜೋಷಿ ಮನೆತನದವರನ್ನು ಕರೆದುಕೊಂಡು ಬಂದು ಅರ್ಚನೆ ಮಾಡುತ್ತಿದ್ದೇವೆ. ಈ ದೇವಸ್ಥಾನದ ಅರ್ಚಕರ ವಂಶಕ್ಕೂ ಮಹೇಶ್ ಜೋಷಿಗೂ ಸಂಬಂಧವಿದ್ದರೂ ಇರಬಹುದು. ಗುರುಗೋವಿಂದ ಭಟ್ಟರ ವಂಶಕ್ಕೂ ಮಹೇಶ್ ಜೋಷಿ ವಂಶಕ್ಕೂ ಸಂಬಂಧವಿಲ್ಲ” ಎಂದಿದ್ದಾರೆ.

ಗುರುಗೋವಿಂದ ಭಟ್ಟರ ಊರಾಗಿರುವ ಕಳಸ ಗ್ರಾಮದ ಹಿರಿಯ ಮುಖಂಡರೂ, ಗುರುಗೋವಿಂದ ಭಟ್ಟರ ದೇವಸ್ಥಾನ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಮಾತನಾಡುತ್ತಾ, “ಜೋಷಿಗೂ ಭಟ್ಟರಿಗೂ ಬ್ರಾಹ್ಮಣರು ಎಂಬುದನ್ನು ಹೊರತುಪಡಿಸಿದರೆ ಬೇರೆ ಸಂಬಂಧ ಇಲ್ಲ. ಗುರು ಗೋವಿಂದ ಭಟ್ಟರ ಮನೆತನದವರು ಯಾರೂ ಇಲ್ಲ. ಮಹೇಶ್ ಜೋಷಿ ಗುರು ಗೋವಿಂದ ಭಟ್ಟರ ಮನೆತನದವರಲ್ಲ. ಜೋಷಿ ಮನೆತನದವರು ಈ ದೇವಸ್ಥಾನದ ಪೂಜೆ ಮಾತ್ರ ಮಾಡುತ್ತಾರೆ. ಜೋಷಿ ಮನೆತನಕ್ಕೂ ನಮ್ಮ ಗುರುಗೋವಿಂದ ಭಟ್ಟ ದೇವಸ್ಥಾನಕ್ಕಾಗಲೀ, ಮನೆತನಕ್ಕಾಗಲೀ ಸಂಬಂಧವಿಲ್ಲ” ಎಂದು ತಿಳಿಸಿದ್ದಾರೆ.

ಈ ವರದಿಗೆ ಸಂಬಂಧಿಸಿದಂತೆ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿತು. ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ. ಮುಸ್ಲಿಂ ಸಮುದಾಯವನ್ನು ಸಮ್ಮೇಳನದಿಂದ ಹೊರಗಿಟ್ಟಿರುವ ವಿವಾದ ಶುರುವಾದಾಗಿನಿಂದ ನಾಲ್ಕಾರು ಸಲ ಜೋಶಿಯವರಿಗೆ ಕರೆ ಮಾಡಲಾಗಿದ್ದು, ಈವರೆಗೆ ಒಂದಕ್ಕೂ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪೆಂಡಾಲ್ ದೋಸಿಗೆ, ಗೋವಿಂದ ಬಟ್ಟರ ಲಿಂಕೂ ಸಿಗಲಿಲ್ಲವಾ? ಮನುವಾದಿಗಳು ಸುಮ್ಮನಾಗುವುದಿಲ್ಲ. ಬೇರೆ ಯಾವುದಾದರೂ ದಾರಿ ಹುಡುಕುತ್ತಾರೆ. ಸದ್ಯಕ್ಕೆ ಗೋವಿಂದ ಬಟ್ಟರು ಇವನಿಂದ ಬಚಾವಾದರಲ್ಲ. ಅದು ಕನ್ನಡಿಗರಿಗೆ ಸಮಾದಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...