Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

ಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

- Advertisement -
- Advertisement -

ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಬರಹಗಾರರನ್ನು ಹೊರಗಿಟ್ಟು ಕನ್ನಡತನವನ್ನು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾದ ಮಹೇಶ ಜೋಶಿ ಮರೆತ್ತಿದ್ದಾರೆ ಎಂಬ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ಕಸಾಪ ಅಧ್ಯಕ್ಷರು, “ನಾನು ಗುರು ಗೋವಿಂದಭಟ್ಟರ ಮರಿಮೊಮ್ಮಗ, ನನಗಿಂತ ಜಾತ್ಯತೀತ ವ್ಯಕ್ತಿ ಬೇಕಾ?” ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಗುರು ಗೋವಿಂದ ಭಟ್ಟರಿಗೂ ಮಹೇಶ ಜೋಶಿಯವರಿಗೂ ಯಾವುದೇ ಸಂಬಂಧವಿಲ್ಲ ಎಂದು ‘ಈ ದಿನ.ಕಾಂ’ ವಿಶೇಷ ವರದಿ ಮಾಡಿದೆ.

ಪತ್ರಕರ್ತ ನವೀನ್ ಸೂರಿಂಜೆಯವರು ಬರೆದಿರುವ ವರದಿಯಲ್ಲಿ, “ಮಹೇಶ ಜೋಶಿಯವರು ಸುಳ್ಳನ್ನು ಹೇಳುತ್ತಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ. ಕಳಸದ ಗೋವಿಂದ ಭಟ್ಟರು ಮತ್ತು ಸಂತ ಶಿಶುನಾಳ ಶರೀಫರ ಗುರು-ಶಿಷ್ಯ ಸಂಬಂಧ ನಾಡಿನ ಅಸ್ಮಿತೆಗೆ ಬಹುದೊಡ್ಡ ಉದಾಹರಣೆ. ಆದರೆ ಗೋವಿಂದ ಭಟ್ಟರ ವಂಶಸ್ಥರೆಂದು ಮಹೇಶ ಜೋಶಿಯವರು ಹೇಳಿಕೊಂಡು ತಮ್ಮ ಕೋಮುವಾದಿ ಕಾರ್ಯಾಚರಣೆಯನ್ನು ಮರೆಮಾಚಲು ಯತ್ನಿಸುತ್ತಿರುವ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ‘ಈ ದಿನ’ ವರದಿ ವಿಶೇಷ ಬೆಳಕು ಚೆಲ್ಲಿದೆ.

ಶಿಥಿಲಾವಾಸ್ಥೆಯಲ್ಲಿದ್ದ ಗುರುಗೋವಿಂದ ಭಟ್ಟರ ಗರ್ಭಗುಡಿ ಕಟ್ಟಿಸಿದ ಕಾಳಪ್ಪ ಕೊಟ್ರಪ್ಪ ಪ್ಯಾಟಿ ಅವರ ಪುತ್ರ ಹಾಗೂ ಗುರುಗೋವಿಂದ ಭಟ್ಟರ ಗುಡಿ ಅಭಿವೃದ್ಧಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖಪ್ಪ ಕಾಳಪ್ಪ ಪ್ಯಾಟಿಯವರು ಪ್ರತಿಕ್ರಿಯಿಸಿದ್ದು, “ಗುರು ಗೋವಿಂದ ಭಟ್ಟರ ವಂಶಾವಳಿಗೂ, ಮಹೇಶ್ ಜೋಷಿಯವರ ವಂಶಾವಳಿಗೂ ಸಂಬಂಧವಿಲ್ಲ. ಅವೆರಡೂ ಬೇರೆ ಬೇರೆ ವಂಶಾವಳಿಗಳು. ಗುರು ಗೋವಿಂದ ಭಟ್ಟರ ಬಗ್ಗೆ ನಮ್ಮ ಹಿರಿಯರಲ್ಲಿ ಗೊಂದಲಗಳಿವೆ. ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇದ್ದರೇ ಎಂಬ ಪ್ರಶ್ನೆಗಳಿತ್ತು. ಆದರೆ ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇರಲಿಲ್ಲ. ಅವರ ಸಂಬಂಧಿಕರು ಯಾರೂ ಕೂಡಾ ಇಲ್ಲ” ಎಂದಿದ್ದಾರೆ.

“ಮಹೇಶ ಜೋಶಿ ಮತ್ತು ಗುರು ಗೋವಿಂದ ಭಟ್ಟರು ಇಬ್ಬರೂ ಬ್ರಾಹ್ಮಣರೇ ಎಂಬುದನ್ನು ಹೊರತುಪಡಿಸಿದರೆ ಇವರಿಬ್ಬರಿಗೂ ಇನ್ನಾವುದೇ ಸಂಬಂಧವೂ ಇಲ್ಲ. ಅವರು ಭಟ್ಟರು, ಇವರು ಜೋಷಿ. ಭಟ್ಟರೇ ಬೇರೆ, ಜೋಷಿಯವರೇ ಬೇರೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಮಹೇಶ್ ಜೋಷಿಯವರು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂಬುದಕ್ಕೆ ದಾಖಲೆ ಕೊಡಬೇಕು. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ ಎಂದೇ ನಾವು ತೀರ್ಮಾನಿಸಿರುವಾಗ ಈ ದೇವಸ್ಥಾನಕ್ಕೆ ಬಂದು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂದು ಹೇಳುವವರು ದಾಖಲೆ ನೀಡಬೇಕಾಗುತ್ತದೆ” ಎಂದು ಒತ್ತಾಯಿಸಿದ್ದಾರೆ.

“ಗುರು ಗೋವಿಂದ ಭಟ್ಟರ ದೇವಸ್ಥಾನದಲ್ಲಿ ಈ ಹಿಂದೆ ಅವರ ವಂಶಸ್ಥರು ಪೂಜಾದಿಗಳನ್ನು ಮಾಡುತ್ತಿದ್ದರು. ಅವರ ವಂಶಸ್ಥರು ನಶಿಸಿ ಹೋದ್ದರಿಂದ ನಾವುಗಳು ಜೋಷಿ ಮನೆತನದವರನ್ನು ಕರೆದುಕೊಂಡು ಬಂದು ಅರ್ಚನೆ ಮಾಡುತ್ತಿದ್ದೇವೆ. ಈ ದೇವಸ್ಥಾನದ ಅರ್ಚಕರ ವಂಶಕ್ಕೂ ಮಹೇಶ್ ಜೋಷಿಗೂ ಸಂಬಂಧವಿದ್ದರೂ ಇರಬಹುದು. ಗುರುಗೋವಿಂದ ಭಟ್ಟರ ವಂಶಕ್ಕೂ ಮಹೇಶ್ ಜೋಷಿ ವಂಶಕ್ಕೂ ಸಂಬಂಧವಿಲ್ಲ” ಎಂದಿದ್ದಾರೆ.

ಗುರುಗೋವಿಂದ ಭಟ್ಟರ ಊರಾಗಿರುವ ಕಳಸ ಗ್ರಾಮದ ಹಿರಿಯ ಮುಖಂಡರೂ, ಗುರುಗೋವಿಂದ ಭಟ್ಟರ ದೇವಸ್ಥಾನ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಮಾತನಾಡುತ್ತಾ, “ಜೋಷಿಗೂ ಭಟ್ಟರಿಗೂ ಬ್ರಾಹ್ಮಣರು ಎಂಬುದನ್ನು ಹೊರತುಪಡಿಸಿದರೆ ಬೇರೆ ಸಂಬಂಧ ಇಲ್ಲ. ಗುರು ಗೋವಿಂದ ಭಟ್ಟರ ಮನೆತನದವರು ಯಾರೂ ಇಲ್ಲ. ಮಹೇಶ್ ಜೋಷಿ ಗುರು ಗೋವಿಂದ ಭಟ್ಟರ ಮನೆತನದವರಲ್ಲ. ಜೋಷಿ ಮನೆತನದವರು ಈ ದೇವಸ್ಥಾನದ ಪೂಜೆ ಮಾತ್ರ ಮಾಡುತ್ತಾರೆ. ಜೋಷಿ ಮನೆತನಕ್ಕೂ ನಮ್ಮ ಗುರುಗೋವಿಂದ ಭಟ್ಟ ದೇವಸ್ಥಾನಕ್ಕಾಗಲೀ, ಮನೆತನಕ್ಕಾಗಲೀ ಸಂಬಂಧವಿಲ್ಲ” ಎಂದು ತಿಳಿಸಿದ್ದಾರೆ.

ಈ ವರದಿಗೆ ಸಂಬಂಧಿಸಿದಂತೆ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿತು. ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ. ಮುಸ್ಲಿಂ ಸಮುದಾಯವನ್ನು ಸಮ್ಮೇಳನದಿಂದ ಹೊರಗಿಟ್ಟಿರುವ ವಿವಾದ ಶುರುವಾದಾಗಿನಿಂದ ನಾಲ್ಕಾರು ಸಲ ಜೋಶಿಯವರಿಗೆ ಕರೆ ಮಾಡಲಾಗಿದ್ದು, ಈವರೆಗೆ ಒಂದಕ್ಕೂ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪೆಂಡಾಲ್ ದೋಸಿಗೆ, ಗೋವಿಂದ ಬಟ್ಟರ ಲಿಂಕೂ ಸಿಗಲಿಲ್ಲವಾ? ಮನುವಾದಿಗಳು ಸುಮ್ಮನಾಗುವುದಿಲ್ಲ. ಬೇರೆ ಯಾವುದಾದರೂ ದಾರಿ ಹುಡುಕುತ್ತಾರೆ. ಸದ್ಯಕ್ಕೆ ಗೋವಿಂದ ಬಟ್ಟರು ಇವನಿಂದ ಬಚಾವಾದರಲ್ಲ. ಅದು ಕನ್ನಡಿಗರಿಗೆ ಸಮಾದಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...