Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

ಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

- Advertisement -
- Advertisement -

ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಬರಹಗಾರರನ್ನು ಹೊರಗಿಟ್ಟು ಕನ್ನಡತನವನ್ನು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾದ ಮಹೇಶ ಜೋಶಿ ಮರೆತ್ತಿದ್ದಾರೆ ಎಂಬ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ಕಸಾಪ ಅಧ್ಯಕ್ಷರು, “ನಾನು ಗುರು ಗೋವಿಂದಭಟ್ಟರ ಮರಿಮೊಮ್ಮಗ, ನನಗಿಂತ ಜಾತ್ಯತೀತ ವ್ಯಕ್ತಿ ಬೇಕಾ?” ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಗುರು ಗೋವಿಂದ ಭಟ್ಟರಿಗೂ ಮಹೇಶ ಜೋಶಿಯವರಿಗೂ ಯಾವುದೇ ಸಂಬಂಧವಿಲ್ಲ ಎಂದು ‘ಈ ದಿನ.ಕಾಂ’ ವಿಶೇಷ ವರದಿ ಮಾಡಿದೆ.

ಪತ್ರಕರ್ತ ನವೀನ್ ಸೂರಿಂಜೆಯವರು ಬರೆದಿರುವ ವರದಿಯಲ್ಲಿ, “ಮಹೇಶ ಜೋಶಿಯವರು ಸುಳ್ಳನ್ನು ಹೇಳುತ್ತಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ. ಕಳಸದ ಗೋವಿಂದ ಭಟ್ಟರು ಮತ್ತು ಸಂತ ಶಿಶುನಾಳ ಶರೀಫರ ಗುರು-ಶಿಷ್ಯ ಸಂಬಂಧ ನಾಡಿನ ಅಸ್ಮಿತೆಗೆ ಬಹುದೊಡ್ಡ ಉದಾಹರಣೆ. ಆದರೆ ಗೋವಿಂದ ಭಟ್ಟರ ವಂಶಸ್ಥರೆಂದು ಮಹೇಶ ಜೋಶಿಯವರು ಹೇಳಿಕೊಂಡು ತಮ್ಮ ಕೋಮುವಾದಿ ಕಾರ್ಯಾಚರಣೆಯನ್ನು ಮರೆಮಾಚಲು ಯತ್ನಿಸುತ್ತಿರುವ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ‘ಈ ದಿನ’ ವರದಿ ವಿಶೇಷ ಬೆಳಕು ಚೆಲ್ಲಿದೆ.

ಶಿಥಿಲಾವಾಸ್ಥೆಯಲ್ಲಿದ್ದ ಗುರುಗೋವಿಂದ ಭಟ್ಟರ ಗರ್ಭಗುಡಿ ಕಟ್ಟಿಸಿದ ಕಾಳಪ್ಪ ಕೊಟ್ರಪ್ಪ ಪ್ಯಾಟಿ ಅವರ ಪುತ್ರ ಹಾಗೂ ಗುರುಗೋವಿಂದ ಭಟ್ಟರ ಗುಡಿ ಅಭಿವೃದ್ಧಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖಪ್ಪ ಕಾಳಪ್ಪ ಪ್ಯಾಟಿಯವರು ಪ್ರತಿಕ್ರಿಯಿಸಿದ್ದು, “ಗುರು ಗೋವಿಂದ ಭಟ್ಟರ ವಂಶಾವಳಿಗೂ, ಮಹೇಶ್ ಜೋಷಿಯವರ ವಂಶಾವಳಿಗೂ ಸಂಬಂಧವಿಲ್ಲ. ಅವೆರಡೂ ಬೇರೆ ಬೇರೆ ವಂಶಾವಳಿಗಳು. ಗುರು ಗೋವಿಂದ ಭಟ್ಟರ ಬಗ್ಗೆ ನಮ್ಮ ಹಿರಿಯರಲ್ಲಿ ಗೊಂದಲಗಳಿವೆ. ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇದ್ದರೇ ಎಂಬ ಪ್ರಶ್ನೆಗಳಿತ್ತು. ಆದರೆ ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇರಲಿಲ್ಲ. ಅವರ ಸಂಬಂಧಿಕರು ಯಾರೂ ಕೂಡಾ ಇಲ್ಲ” ಎಂದಿದ್ದಾರೆ.

“ಮಹೇಶ ಜೋಶಿ ಮತ್ತು ಗುರು ಗೋವಿಂದ ಭಟ್ಟರು ಇಬ್ಬರೂ ಬ್ರಾಹ್ಮಣರೇ ಎಂಬುದನ್ನು ಹೊರತುಪಡಿಸಿದರೆ ಇವರಿಬ್ಬರಿಗೂ ಇನ್ನಾವುದೇ ಸಂಬಂಧವೂ ಇಲ್ಲ. ಅವರು ಭಟ್ಟರು, ಇವರು ಜೋಷಿ. ಭಟ್ಟರೇ ಬೇರೆ, ಜೋಷಿಯವರೇ ಬೇರೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಮಹೇಶ್ ಜೋಷಿಯವರು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂಬುದಕ್ಕೆ ದಾಖಲೆ ಕೊಡಬೇಕು. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ ಎಂದೇ ನಾವು ತೀರ್ಮಾನಿಸಿರುವಾಗ ಈ ದೇವಸ್ಥಾನಕ್ಕೆ ಬಂದು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂದು ಹೇಳುವವರು ದಾಖಲೆ ನೀಡಬೇಕಾಗುತ್ತದೆ” ಎಂದು ಒತ್ತಾಯಿಸಿದ್ದಾರೆ.

“ಗುರು ಗೋವಿಂದ ಭಟ್ಟರ ದೇವಸ್ಥಾನದಲ್ಲಿ ಈ ಹಿಂದೆ ಅವರ ವಂಶಸ್ಥರು ಪೂಜಾದಿಗಳನ್ನು ಮಾಡುತ್ತಿದ್ದರು. ಅವರ ವಂಶಸ್ಥರು ನಶಿಸಿ ಹೋದ್ದರಿಂದ ನಾವುಗಳು ಜೋಷಿ ಮನೆತನದವರನ್ನು ಕರೆದುಕೊಂಡು ಬಂದು ಅರ್ಚನೆ ಮಾಡುತ್ತಿದ್ದೇವೆ. ಈ ದೇವಸ್ಥಾನದ ಅರ್ಚಕರ ವಂಶಕ್ಕೂ ಮಹೇಶ್ ಜೋಷಿಗೂ ಸಂಬಂಧವಿದ್ದರೂ ಇರಬಹುದು. ಗುರುಗೋವಿಂದ ಭಟ್ಟರ ವಂಶಕ್ಕೂ ಮಹೇಶ್ ಜೋಷಿ ವಂಶಕ್ಕೂ ಸಂಬಂಧವಿಲ್ಲ” ಎಂದಿದ್ದಾರೆ.

ಗುರುಗೋವಿಂದ ಭಟ್ಟರ ಊರಾಗಿರುವ ಕಳಸ ಗ್ರಾಮದ ಹಿರಿಯ ಮುಖಂಡರೂ, ಗುರುಗೋವಿಂದ ಭಟ್ಟರ ದೇವಸ್ಥಾನ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಮಾತನಾಡುತ್ತಾ, “ಜೋಷಿಗೂ ಭಟ್ಟರಿಗೂ ಬ್ರಾಹ್ಮಣರು ಎಂಬುದನ್ನು ಹೊರತುಪಡಿಸಿದರೆ ಬೇರೆ ಸಂಬಂಧ ಇಲ್ಲ. ಗುರು ಗೋವಿಂದ ಭಟ್ಟರ ಮನೆತನದವರು ಯಾರೂ ಇಲ್ಲ. ಮಹೇಶ್ ಜೋಷಿ ಗುರು ಗೋವಿಂದ ಭಟ್ಟರ ಮನೆತನದವರಲ್ಲ. ಜೋಷಿ ಮನೆತನದವರು ಈ ದೇವಸ್ಥಾನದ ಪೂಜೆ ಮಾತ್ರ ಮಾಡುತ್ತಾರೆ. ಜೋಷಿ ಮನೆತನಕ್ಕೂ ನಮ್ಮ ಗುರುಗೋವಿಂದ ಭಟ್ಟ ದೇವಸ್ಥಾನಕ್ಕಾಗಲೀ, ಮನೆತನಕ್ಕಾಗಲೀ ಸಂಬಂಧವಿಲ್ಲ” ಎಂದು ತಿಳಿಸಿದ್ದಾರೆ.

ಈ ವರದಿಗೆ ಸಂಬಂಧಿಸಿದಂತೆ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿತು. ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ. ಮುಸ್ಲಿಂ ಸಮುದಾಯವನ್ನು ಸಮ್ಮೇಳನದಿಂದ ಹೊರಗಿಟ್ಟಿರುವ ವಿವಾದ ಶುರುವಾದಾಗಿನಿಂದ ನಾಲ್ಕಾರು ಸಲ ಜೋಶಿಯವರಿಗೆ ಕರೆ ಮಾಡಲಾಗಿದ್ದು, ಈವರೆಗೆ ಒಂದಕ್ಕೂ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪೆಂಡಾಲ್ ದೋಸಿಗೆ, ಗೋವಿಂದ ಬಟ್ಟರ ಲಿಂಕೂ ಸಿಗಲಿಲ್ಲವಾ? ಮನುವಾದಿಗಳು ಸುಮ್ಮನಾಗುವುದಿಲ್ಲ. ಬೇರೆ ಯಾವುದಾದರೂ ದಾರಿ ಹುಡುಕುತ್ತಾರೆ. ಸದ್ಯಕ್ಕೆ ಗೋವಿಂದ ಬಟ್ಟರು ಇವನಿಂದ ಬಚಾವಾದರಲ್ಲ. ಅದು ಕನ್ನಡಿಗರಿಗೆ ಸಮಾದಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...