Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

ಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

- Advertisement -
- Advertisement -

ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಬರಹಗಾರರನ್ನು ಹೊರಗಿಟ್ಟು ಕನ್ನಡತನವನ್ನು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾದ ಮಹೇಶ ಜೋಶಿ ಮರೆತ್ತಿದ್ದಾರೆ ಎಂಬ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ಕಸಾಪ ಅಧ್ಯಕ್ಷರು, “ನಾನು ಗುರು ಗೋವಿಂದಭಟ್ಟರ ಮರಿಮೊಮ್ಮಗ, ನನಗಿಂತ ಜಾತ್ಯತೀತ ವ್ಯಕ್ತಿ ಬೇಕಾ?” ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಗುರು ಗೋವಿಂದ ಭಟ್ಟರಿಗೂ ಮಹೇಶ ಜೋಶಿಯವರಿಗೂ ಯಾವುದೇ ಸಂಬಂಧವಿಲ್ಲ ಎಂದು ‘ಈ ದಿನ.ಕಾಂ’ ವಿಶೇಷ ವರದಿ ಮಾಡಿದೆ.

ಪತ್ರಕರ್ತ ನವೀನ್ ಸೂರಿಂಜೆಯವರು ಬರೆದಿರುವ ವರದಿಯಲ್ಲಿ, “ಮಹೇಶ ಜೋಶಿಯವರು ಸುಳ್ಳನ್ನು ಹೇಳುತ್ತಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ. ಕಳಸದ ಗೋವಿಂದ ಭಟ್ಟರು ಮತ್ತು ಸಂತ ಶಿಶುನಾಳ ಶರೀಫರ ಗುರು-ಶಿಷ್ಯ ಸಂಬಂಧ ನಾಡಿನ ಅಸ್ಮಿತೆಗೆ ಬಹುದೊಡ್ಡ ಉದಾಹರಣೆ. ಆದರೆ ಗೋವಿಂದ ಭಟ್ಟರ ವಂಶಸ್ಥರೆಂದು ಮಹೇಶ ಜೋಶಿಯವರು ಹೇಳಿಕೊಂಡು ತಮ್ಮ ಕೋಮುವಾದಿ ಕಾರ್ಯಾಚರಣೆಯನ್ನು ಮರೆಮಾಚಲು ಯತ್ನಿಸುತ್ತಿರುವ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ‘ಈ ದಿನ’ ವರದಿ ವಿಶೇಷ ಬೆಳಕು ಚೆಲ್ಲಿದೆ.

ಶಿಥಿಲಾವಾಸ್ಥೆಯಲ್ಲಿದ್ದ ಗುರುಗೋವಿಂದ ಭಟ್ಟರ ಗರ್ಭಗುಡಿ ಕಟ್ಟಿಸಿದ ಕಾಳಪ್ಪ ಕೊಟ್ರಪ್ಪ ಪ್ಯಾಟಿ ಅವರ ಪುತ್ರ ಹಾಗೂ ಗುರುಗೋವಿಂದ ಭಟ್ಟರ ಗುಡಿ ಅಭಿವೃದ್ಧಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖಪ್ಪ ಕಾಳಪ್ಪ ಪ್ಯಾಟಿಯವರು ಪ್ರತಿಕ್ರಿಯಿಸಿದ್ದು, “ಗುರು ಗೋವಿಂದ ಭಟ್ಟರ ವಂಶಾವಳಿಗೂ, ಮಹೇಶ್ ಜೋಷಿಯವರ ವಂಶಾವಳಿಗೂ ಸಂಬಂಧವಿಲ್ಲ. ಅವೆರಡೂ ಬೇರೆ ಬೇರೆ ವಂಶಾವಳಿಗಳು. ಗುರು ಗೋವಿಂದ ಭಟ್ಟರ ಬಗ್ಗೆ ನಮ್ಮ ಹಿರಿಯರಲ್ಲಿ ಗೊಂದಲಗಳಿವೆ. ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇದ್ದರೇ ಎಂಬ ಪ್ರಶ್ನೆಗಳಿತ್ತು. ಆದರೆ ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇರಲಿಲ್ಲ. ಅವರ ಸಂಬಂಧಿಕರು ಯಾರೂ ಕೂಡಾ ಇಲ್ಲ” ಎಂದಿದ್ದಾರೆ.

“ಮಹೇಶ ಜೋಶಿ ಮತ್ತು ಗುರು ಗೋವಿಂದ ಭಟ್ಟರು ಇಬ್ಬರೂ ಬ್ರಾಹ್ಮಣರೇ ಎಂಬುದನ್ನು ಹೊರತುಪಡಿಸಿದರೆ ಇವರಿಬ್ಬರಿಗೂ ಇನ್ನಾವುದೇ ಸಂಬಂಧವೂ ಇಲ್ಲ. ಅವರು ಭಟ್ಟರು, ಇವರು ಜೋಷಿ. ಭಟ್ಟರೇ ಬೇರೆ, ಜೋಷಿಯವರೇ ಬೇರೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಮಹೇಶ್ ಜೋಷಿಯವರು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂಬುದಕ್ಕೆ ದಾಖಲೆ ಕೊಡಬೇಕು. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ ಎಂದೇ ನಾವು ತೀರ್ಮಾನಿಸಿರುವಾಗ ಈ ದೇವಸ್ಥಾನಕ್ಕೆ ಬಂದು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂದು ಹೇಳುವವರು ದಾಖಲೆ ನೀಡಬೇಕಾಗುತ್ತದೆ” ಎಂದು ಒತ್ತಾಯಿಸಿದ್ದಾರೆ.

“ಗುರು ಗೋವಿಂದ ಭಟ್ಟರ ದೇವಸ್ಥಾನದಲ್ಲಿ ಈ ಹಿಂದೆ ಅವರ ವಂಶಸ್ಥರು ಪೂಜಾದಿಗಳನ್ನು ಮಾಡುತ್ತಿದ್ದರು. ಅವರ ವಂಶಸ್ಥರು ನಶಿಸಿ ಹೋದ್ದರಿಂದ ನಾವುಗಳು ಜೋಷಿ ಮನೆತನದವರನ್ನು ಕರೆದುಕೊಂಡು ಬಂದು ಅರ್ಚನೆ ಮಾಡುತ್ತಿದ್ದೇವೆ. ಈ ದೇವಸ್ಥಾನದ ಅರ್ಚಕರ ವಂಶಕ್ಕೂ ಮಹೇಶ್ ಜೋಷಿಗೂ ಸಂಬಂಧವಿದ್ದರೂ ಇರಬಹುದು. ಗುರುಗೋವಿಂದ ಭಟ್ಟರ ವಂಶಕ್ಕೂ ಮಹೇಶ್ ಜೋಷಿ ವಂಶಕ್ಕೂ ಸಂಬಂಧವಿಲ್ಲ” ಎಂದಿದ್ದಾರೆ.

ಗುರುಗೋವಿಂದ ಭಟ್ಟರ ಊರಾಗಿರುವ ಕಳಸ ಗ್ರಾಮದ ಹಿರಿಯ ಮುಖಂಡರೂ, ಗುರುಗೋವಿಂದ ಭಟ್ಟರ ದೇವಸ್ಥಾನ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಮಾತನಾಡುತ್ತಾ, “ಜೋಷಿಗೂ ಭಟ್ಟರಿಗೂ ಬ್ರಾಹ್ಮಣರು ಎಂಬುದನ್ನು ಹೊರತುಪಡಿಸಿದರೆ ಬೇರೆ ಸಂಬಂಧ ಇಲ್ಲ. ಗುರು ಗೋವಿಂದ ಭಟ್ಟರ ಮನೆತನದವರು ಯಾರೂ ಇಲ್ಲ. ಮಹೇಶ್ ಜೋಷಿ ಗುರು ಗೋವಿಂದ ಭಟ್ಟರ ಮನೆತನದವರಲ್ಲ. ಜೋಷಿ ಮನೆತನದವರು ಈ ದೇವಸ್ಥಾನದ ಪೂಜೆ ಮಾತ್ರ ಮಾಡುತ್ತಾರೆ. ಜೋಷಿ ಮನೆತನಕ್ಕೂ ನಮ್ಮ ಗುರುಗೋವಿಂದ ಭಟ್ಟ ದೇವಸ್ಥಾನಕ್ಕಾಗಲೀ, ಮನೆತನಕ್ಕಾಗಲೀ ಸಂಬಂಧವಿಲ್ಲ” ಎಂದು ತಿಳಿಸಿದ್ದಾರೆ.

ಈ ವರದಿಗೆ ಸಂಬಂಧಿಸಿದಂತೆ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿತು. ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ. ಮುಸ್ಲಿಂ ಸಮುದಾಯವನ್ನು ಸಮ್ಮೇಳನದಿಂದ ಹೊರಗಿಟ್ಟಿರುವ ವಿವಾದ ಶುರುವಾದಾಗಿನಿಂದ ನಾಲ್ಕಾರು ಸಲ ಜೋಶಿಯವರಿಗೆ ಕರೆ ಮಾಡಲಾಗಿದ್ದು, ಈವರೆಗೆ ಒಂದಕ್ಕೂ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪೆಂಡಾಲ್ ದೋಸಿಗೆ, ಗೋವಿಂದ ಬಟ್ಟರ ಲಿಂಕೂ ಸಿಗಲಿಲ್ಲವಾ? ಮನುವಾದಿಗಳು ಸುಮ್ಮನಾಗುವುದಿಲ್ಲ. ಬೇರೆ ಯಾವುದಾದರೂ ದಾರಿ ಹುಡುಕುತ್ತಾರೆ. ಸದ್ಯಕ್ಕೆ ಗೋವಿಂದ ಬಟ್ಟರು ಇವನಿಂದ ಬಚಾವಾದರಲ್ಲ. ಅದು ಕನ್ನಡಿಗರಿಗೆ ಸಮಾದಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...