Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

ಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

- Advertisement -
- Advertisement -

ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಬರಹಗಾರರನ್ನು ಹೊರಗಿಟ್ಟು ಕನ್ನಡತನವನ್ನು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾದ ಮಹೇಶ ಜೋಶಿ ಮರೆತ್ತಿದ್ದಾರೆ ಎಂಬ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ಕಸಾಪ ಅಧ್ಯಕ್ಷರು, “ನಾನು ಗುರು ಗೋವಿಂದಭಟ್ಟರ ಮರಿಮೊಮ್ಮಗ, ನನಗಿಂತ ಜಾತ್ಯತೀತ ವ್ಯಕ್ತಿ ಬೇಕಾ?” ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಗುರು ಗೋವಿಂದ ಭಟ್ಟರಿಗೂ ಮಹೇಶ ಜೋಶಿಯವರಿಗೂ ಯಾವುದೇ ಸಂಬಂಧವಿಲ್ಲ ಎಂದು ‘ಈ ದಿನ.ಕಾಂ’ ವಿಶೇಷ ವರದಿ ಮಾಡಿದೆ.

ಪತ್ರಕರ್ತ ನವೀನ್ ಸೂರಿಂಜೆಯವರು ಬರೆದಿರುವ ವರದಿಯಲ್ಲಿ, “ಮಹೇಶ ಜೋಶಿಯವರು ಸುಳ್ಳನ್ನು ಹೇಳುತ್ತಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ. ಕಳಸದ ಗೋವಿಂದ ಭಟ್ಟರು ಮತ್ತು ಸಂತ ಶಿಶುನಾಳ ಶರೀಫರ ಗುರು-ಶಿಷ್ಯ ಸಂಬಂಧ ನಾಡಿನ ಅಸ್ಮಿತೆಗೆ ಬಹುದೊಡ್ಡ ಉದಾಹರಣೆ. ಆದರೆ ಗೋವಿಂದ ಭಟ್ಟರ ವಂಶಸ್ಥರೆಂದು ಮಹೇಶ ಜೋಶಿಯವರು ಹೇಳಿಕೊಂಡು ತಮ್ಮ ಕೋಮುವಾದಿ ಕಾರ್ಯಾಚರಣೆಯನ್ನು ಮರೆಮಾಚಲು ಯತ್ನಿಸುತ್ತಿರುವ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ‘ಈ ದಿನ’ ವರದಿ ವಿಶೇಷ ಬೆಳಕು ಚೆಲ್ಲಿದೆ.

ಶಿಥಿಲಾವಾಸ್ಥೆಯಲ್ಲಿದ್ದ ಗುರುಗೋವಿಂದ ಭಟ್ಟರ ಗರ್ಭಗುಡಿ ಕಟ್ಟಿಸಿದ ಕಾಳಪ್ಪ ಕೊಟ್ರಪ್ಪ ಪ್ಯಾಟಿ ಅವರ ಪುತ್ರ ಹಾಗೂ ಗುರುಗೋವಿಂದ ಭಟ್ಟರ ಗುಡಿ ಅಭಿವೃದ್ಧಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖಪ್ಪ ಕಾಳಪ್ಪ ಪ್ಯಾಟಿಯವರು ಪ್ರತಿಕ್ರಿಯಿಸಿದ್ದು, “ಗುರು ಗೋವಿಂದ ಭಟ್ಟರ ವಂಶಾವಳಿಗೂ, ಮಹೇಶ್ ಜೋಷಿಯವರ ವಂಶಾವಳಿಗೂ ಸಂಬಂಧವಿಲ್ಲ. ಅವೆರಡೂ ಬೇರೆ ಬೇರೆ ವಂಶಾವಳಿಗಳು. ಗುರು ಗೋವಿಂದ ಭಟ್ಟರ ಬಗ್ಗೆ ನಮ್ಮ ಹಿರಿಯರಲ್ಲಿ ಗೊಂದಲಗಳಿವೆ. ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇದ್ದರೇ ಎಂಬ ಪ್ರಶ್ನೆಗಳಿತ್ತು. ಆದರೆ ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇರಲಿಲ್ಲ. ಅವರ ಸಂಬಂಧಿಕರು ಯಾರೂ ಕೂಡಾ ಇಲ್ಲ” ಎಂದಿದ್ದಾರೆ.

“ಮಹೇಶ ಜೋಶಿ ಮತ್ತು ಗುರು ಗೋವಿಂದ ಭಟ್ಟರು ಇಬ್ಬರೂ ಬ್ರಾಹ್ಮಣರೇ ಎಂಬುದನ್ನು ಹೊರತುಪಡಿಸಿದರೆ ಇವರಿಬ್ಬರಿಗೂ ಇನ್ನಾವುದೇ ಸಂಬಂಧವೂ ಇಲ್ಲ. ಅವರು ಭಟ್ಟರು, ಇವರು ಜೋಷಿ. ಭಟ್ಟರೇ ಬೇರೆ, ಜೋಷಿಯವರೇ ಬೇರೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಮಹೇಶ್ ಜೋಷಿಯವರು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂಬುದಕ್ಕೆ ದಾಖಲೆ ಕೊಡಬೇಕು. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ ಎಂದೇ ನಾವು ತೀರ್ಮಾನಿಸಿರುವಾಗ ಈ ದೇವಸ್ಥಾನಕ್ಕೆ ಬಂದು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂದು ಹೇಳುವವರು ದಾಖಲೆ ನೀಡಬೇಕಾಗುತ್ತದೆ” ಎಂದು ಒತ್ತಾಯಿಸಿದ್ದಾರೆ.

“ಗುರು ಗೋವಿಂದ ಭಟ್ಟರ ದೇವಸ್ಥಾನದಲ್ಲಿ ಈ ಹಿಂದೆ ಅವರ ವಂಶಸ್ಥರು ಪೂಜಾದಿಗಳನ್ನು ಮಾಡುತ್ತಿದ್ದರು. ಅವರ ವಂಶಸ್ಥರು ನಶಿಸಿ ಹೋದ್ದರಿಂದ ನಾವುಗಳು ಜೋಷಿ ಮನೆತನದವರನ್ನು ಕರೆದುಕೊಂಡು ಬಂದು ಅರ್ಚನೆ ಮಾಡುತ್ತಿದ್ದೇವೆ. ಈ ದೇವಸ್ಥಾನದ ಅರ್ಚಕರ ವಂಶಕ್ಕೂ ಮಹೇಶ್ ಜೋಷಿಗೂ ಸಂಬಂಧವಿದ್ದರೂ ಇರಬಹುದು. ಗುರುಗೋವಿಂದ ಭಟ್ಟರ ವಂಶಕ್ಕೂ ಮಹೇಶ್ ಜೋಷಿ ವಂಶಕ್ಕೂ ಸಂಬಂಧವಿಲ್ಲ” ಎಂದಿದ್ದಾರೆ.

ಗುರುಗೋವಿಂದ ಭಟ್ಟರ ಊರಾಗಿರುವ ಕಳಸ ಗ್ರಾಮದ ಹಿರಿಯ ಮುಖಂಡರೂ, ಗುರುಗೋವಿಂದ ಭಟ್ಟರ ದೇವಸ್ಥಾನ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಮಾತನಾಡುತ್ತಾ, “ಜೋಷಿಗೂ ಭಟ್ಟರಿಗೂ ಬ್ರಾಹ್ಮಣರು ಎಂಬುದನ್ನು ಹೊರತುಪಡಿಸಿದರೆ ಬೇರೆ ಸಂಬಂಧ ಇಲ್ಲ. ಗುರು ಗೋವಿಂದ ಭಟ್ಟರ ಮನೆತನದವರು ಯಾರೂ ಇಲ್ಲ. ಮಹೇಶ್ ಜೋಷಿ ಗುರು ಗೋವಿಂದ ಭಟ್ಟರ ಮನೆತನದವರಲ್ಲ. ಜೋಷಿ ಮನೆತನದವರು ಈ ದೇವಸ್ಥಾನದ ಪೂಜೆ ಮಾತ್ರ ಮಾಡುತ್ತಾರೆ. ಜೋಷಿ ಮನೆತನಕ್ಕೂ ನಮ್ಮ ಗುರುಗೋವಿಂದ ಭಟ್ಟ ದೇವಸ್ಥಾನಕ್ಕಾಗಲೀ, ಮನೆತನಕ್ಕಾಗಲೀ ಸಂಬಂಧವಿಲ್ಲ” ಎಂದು ತಿಳಿಸಿದ್ದಾರೆ.

ಈ ವರದಿಗೆ ಸಂಬಂಧಿಸಿದಂತೆ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿತು. ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ. ಮುಸ್ಲಿಂ ಸಮುದಾಯವನ್ನು ಸಮ್ಮೇಳನದಿಂದ ಹೊರಗಿಟ್ಟಿರುವ ವಿವಾದ ಶುರುವಾದಾಗಿನಿಂದ ನಾಲ್ಕಾರು ಸಲ ಜೋಶಿಯವರಿಗೆ ಕರೆ ಮಾಡಲಾಗಿದ್ದು, ಈವರೆಗೆ ಒಂದಕ್ಕೂ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪೆಂಡಾಲ್ ದೋಸಿಗೆ, ಗೋವಿಂದ ಬಟ್ಟರ ಲಿಂಕೂ ಸಿಗಲಿಲ್ಲವಾ? ಮನುವಾದಿಗಳು ಸುಮ್ಮನಾಗುವುದಿಲ್ಲ. ಬೇರೆ ಯಾವುದಾದರೂ ದಾರಿ ಹುಡುಕುತ್ತಾರೆ. ಸದ್ಯಕ್ಕೆ ಗೋವಿಂದ ಬಟ್ಟರು ಇವನಿಂದ ಬಚಾವಾದರಲ್ಲ. ಅದು ಕನ್ನಡಿಗರಿಗೆ ಸಮಾದಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...