Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

ಕಸಾಪ ಅಧ್ಯಕ್ಷ ಮಹೇಶ ಜೋಶಿ, ಗುರುಗೋವಿಂದ ಭಟ್ಟರ ಮರಿಮೊಮ್ಮಗ ಎಂಬುದು ಸುಳ್ಳು: ವರದಿ

- Advertisement -
- Advertisement -

ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಬರಹಗಾರರನ್ನು ಹೊರಗಿಟ್ಟು ಕನ್ನಡತನವನ್ನು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾದ ಮಹೇಶ ಜೋಶಿ ಮರೆತ್ತಿದ್ದಾರೆ ಎಂಬ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ಕಸಾಪ ಅಧ್ಯಕ್ಷರು, “ನಾನು ಗುರು ಗೋವಿಂದಭಟ್ಟರ ಮರಿಮೊಮ್ಮಗ, ನನಗಿಂತ ಜಾತ್ಯತೀತ ವ್ಯಕ್ತಿ ಬೇಕಾ?” ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಗುರು ಗೋವಿಂದ ಭಟ್ಟರಿಗೂ ಮಹೇಶ ಜೋಶಿಯವರಿಗೂ ಯಾವುದೇ ಸಂಬಂಧವಿಲ್ಲ ಎಂದು ‘ಈ ದಿನ.ಕಾಂ’ ವಿಶೇಷ ವರದಿ ಮಾಡಿದೆ.

ಪತ್ರಕರ್ತ ನವೀನ್ ಸೂರಿಂಜೆಯವರು ಬರೆದಿರುವ ವರದಿಯಲ್ಲಿ, “ಮಹೇಶ ಜೋಶಿಯವರು ಸುಳ್ಳನ್ನು ಹೇಳುತ್ತಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ. ಕಳಸದ ಗೋವಿಂದ ಭಟ್ಟರು ಮತ್ತು ಸಂತ ಶಿಶುನಾಳ ಶರೀಫರ ಗುರು-ಶಿಷ್ಯ ಸಂಬಂಧ ನಾಡಿನ ಅಸ್ಮಿತೆಗೆ ಬಹುದೊಡ್ಡ ಉದಾಹರಣೆ. ಆದರೆ ಗೋವಿಂದ ಭಟ್ಟರ ವಂಶಸ್ಥರೆಂದು ಮಹೇಶ ಜೋಶಿಯವರು ಹೇಳಿಕೊಂಡು ತಮ್ಮ ಕೋಮುವಾದಿ ಕಾರ್ಯಾಚರಣೆಯನ್ನು ಮರೆಮಾಚಲು ಯತ್ನಿಸುತ್ತಿರುವ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ‘ಈ ದಿನ’ ವರದಿ ವಿಶೇಷ ಬೆಳಕು ಚೆಲ್ಲಿದೆ.

ಶಿಥಿಲಾವಾಸ್ಥೆಯಲ್ಲಿದ್ದ ಗುರುಗೋವಿಂದ ಭಟ್ಟರ ಗರ್ಭಗುಡಿ ಕಟ್ಟಿಸಿದ ಕಾಳಪ್ಪ ಕೊಟ್ರಪ್ಪ ಪ್ಯಾಟಿ ಅವರ ಪುತ್ರ ಹಾಗೂ ಗುರುಗೋವಿಂದ ಭಟ್ಟರ ಗುಡಿ ಅಭಿವೃದ್ಧಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖಪ್ಪ ಕಾಳಪ್ಪ ಪ್ಯಾಟಿಯವರು ಪ್ರತಿಕ್ರಿಯಿಸಿದ್ದು, “ಗುರು ಗೋವಿಂದ ಭಟ್ಟರ ವಂಶಾವಳಿಗೂ, ಮಹೇಶ್ ಜೋಷಿಯವರ ವಂಶಾವಳಿಗೂ ಸಂಬಂಧವಿಲ್ಲ. ಅವೆರಡೂ ಬೇರೆ ಬೇರೆ ವಂಶಾವಳಿಗಳು. ಗುರು ಗೋವಿಂದ ಭಟ್ಟರ ಬಗ್ಗೆ ನಮ್ಮ ಹಿರಿಯರಲ್ಲಿ ಗೊಂದಲಗಳಿವೆ. ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇದ್ದರೇ ಎಂಬ ಪ್ರಶ್ನೆಗಳಿತ್ತು. ಆದರೆ ಗೋವಿಂದ ಭಟ್ಟರಿಗೆ ಅಣ್ಣ, ತಮ್ಮ ಇರಲಿಲ್ಲ. ಅವರ ಸಂಬಂಧಿಕರು ಯಾರೂ ಕೂಡಾ ಇಲ್ಲ” ಎಂದಿದ್ದಾರೆ.

“ಮಹೇಶ ಜೋಶಿ ಮತ್ತು ಗುರು ಗೋವಿಂದ ಭಟ್ಟರು ಇಬ್ಬರೂ ಬ್ರಾಹ್ಮಣರೇ ಎಂಬುದನ್ನು ಹೊರತುಪಡಿಸಿದರೆ ಇವರಿಬ್ಬರಿಗೂ ಇನ್ನಾವುದೇ ಸಂಬಂಧವೂ ಇಲ್ಲ. ಅವರು ಭಟ್ಟರು, ಇವರು ಜೋಷಿ. ಭಟ್ಟರೇ ಬೇರೆ, ಜೋಷಿಯವರೇ ಬೇರೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಮಹೇಶ್ ಜೋಷಿಯವರು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂಬುದಕ್ಕೆ ದಾಖಲೆ ಕೊಡಬೇಕು. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ. ಗುರು ಗೋವಿಂದ ಭಟ್ಟರ ವಂಶಸ್ಥರು ಯಾರೂ ಇಲ್ಲ ಎಂದೇ ನಾವು ತೀರ್ಮಾನಿಸಿರುವಾಗ ಈ ದೇವಸ್ಥಾನಕ್ಕೆ ಬಂದು ತಾನು ಗುರು ಗೋವಿಂದ ಭಟ್ಟರ ವಂಶಸ್ಥ ಎಂದು ಹೇಳುವವರು ದಾಖಲೆ ನೀಡಬೇಕಾಗುತ್ತದೆ” ಎಂದು ಒತ್ತಾಯಿಸಿದ್ದಾರೆ.

“ಗುರು ಗೋವಿಂದ ಭಟ್ಟರ ದೇವಸ್ಥಾನದಲ್ಲಿ ಈ ಹಿಂದೆ ಅವರ ವಂಶಸ್ಥರು ಪೂಜಾದಿಗಳನ್ನು ಮಾಡುತ್ತಿದ್ದರು. ಅವರ ವಂಶಸ್ಥರು ನಶಿಸಿ ಹೋದ್ದರಿಂದ ನಾವುಗಳು ಜೋಷಿ ಮನೆತನದವರನ್ನು ಕರೆದುಕೊಂಡು ಬಂದು ಅರ್ಚನೆ ಮಾಡುತ್ತಿದ್ದೇವೆ. ಈ ದೇವಸ್ಥಾನದ ಅರ್ಚಕರ ವಂಶಕ್ಕೂ ಮಹೇಶ್ ಜೋಷಿಗೂ ಸಂಬಂಧವಿದ್ದರೂ ಇರಬಹುದು. ಗುರುಗೋವಿಂದ ಭಟ್ಟರ ವಂಶಕ್ಕೂ ಮಹೇಶ್ ಜೋಷಿ ವಂಶಕ್ಕೂ ಸಂಬಂಧವಿಲ್ಲ” ಎಂದಿದ್ದಾರೆ.

ಗುರುಗೋವಿಂದ ಭಟ್ಟರ ಊರಾಗಿರುವ ಕಳಸ ಗ್ರಾಮದ ಹಿರಿಯ ಮುಖಂಡರೂ, ಗುರುಗೋವಿಂದ ಭಟ್ಟರ ದೇವಸ್ಥಾನ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಮಾತನಾಡುತ್ತಾ, “ಜೋಷಿಗೂ ಭಟ್ಟರಿಗೂ ಬ್ರಾಹ್ಮಣರು ಎಂಬುದನ್ನು ಹೊರತುಪಡಿಸಿದರೆ ಬೇರೆ ಸಂಬಂಧ ಇಲ್ಲ. ಗುರು ಗೋವಿಂದ ಭಟ್ಟರ ಮನೆತನದವರು ಯಾರೂ ಇಲ್ಲ. ಮಹೇಶ್ ಜೋಷಿ ಗುರು ಗೋವಿಂದ ಭಟ್ಟರ ಮನೆತನದವರಲ್ಲ. ಜೋಷಿ ಮನೆತನದವರು ಈ ದೇವಸ್ಥಾನದ ಪೂಜೆ ಮಾತ್ರ ಮಾಡುತ್ತಾರೆ. ಜೋಷಿ ಮನೆತನಕ್ಕೂ ನಮ್ಮ ಗುರುಗೋವಿಂದ ಭಟ್ಟ ದೇವಸ್ಥಾನಕ್ಕಾಗಲೀ, ಮನೆತನಕ್ಕಾಗಲೀ ಸಂಬಂಧವಿಲ್ಲ” ಎಂದು ತಿಳಿಸಿದ್ದಾರೆ.

ಈ ವರದಿಗೆ ಸಂಬಂಧಿಸಿದಂತೆ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿತು. ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ. ಮುಸ್ಲಿಂ ಸಮುದಾಯವನ್ನು ಸಮ್ಮೇಳನದಿಂದ ಹೊರಗಿಟ್ಟಿರುವ ವಿವಾದ ಶುರುವಾದಾಗಿನಿಂದ ನಾಲ್ಕಾರು ಸಲ ಜೋಶಿಯವರಿಗೆ ಕರೆ ಮಾಡಲಾಗಿದ್ದು, ಈವರೆಗೆ ಒಂದಕ್ಕೂ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪೆಂಡಾಲ್ ದೋಸಿಗೆ, ಗೋವಿಂದ ಬಟ್ಟರ ಲಿಂಕೂ ಸಿಗಲಿಲ್ಲವಾ? ಮನುವಾದಿಗಳು ಸುಮ್ಮನಾಗುವುದಿಲ್ಲ. ಬೇರೆ ಯಾವುದಾದರೂ ದಾರಿ ಹುಡುಕುತ್ತಾರೆ. ಸದ್ಯಕ್ಕೆ ಗೋವಿಂದ ಬಟ್ಟರು ಇವನಿಂದ ಬಚಾವಾದರಲ್ಲ. ಅದು ಕನ್ನಡಿಗರಿಗೆ ಸಮಾದಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...