Homeಕರ್ನಾಟಕಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

ಕಸಾಪ ನೂತನ ಅಧ್ಯಕ್ಷರ ಶುದ್ಧ ಕನ್ನಡ ವ್ಯಾಮೋಹ ಮತ್ತು ಭಾಷೆಯ ಜಾಯಮಾನ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್‌ನ ನೂತನ ಅಧ್ಯಕ್ಷರಾದ ಮಹೇಶ್ ಜೋಶಿಯವರು ಇತ್ತೀಚೆಗೆ ಧಾರಾವಾಡದಲ್ಲಿ ಸಮಾರಂಭವೊಂದರಲ್ಲಿ ಮಾತನಾಡುತ್ತಾ, “ನಮ್ಮಲ್ಲಿ ಪ್ರದೇಶಗಳಿಗೆ ಅನುಗುಣವಾಗಿ ಉಚ್ಚಾರಣೆ ಬದಲಾಗುತ್ತವೆ. ಆದರೆ ಶುದ್ಧ ಹಾಗೂ ಸ್ಪಷ್ಟ ಕನ್ನಡವನ್ನು ನಾವು ಉಳಿಸಬೇಕು. ಇಡೀ ಜಗತ್ತಿನಲ್ಲಿ ಸಂಸ್ಕೃತ ಹಾಗೂ ಕನ್ನಡ ಭಾಷೆಗಳು ಮಾತ್ರ ಅತ್ಯಂತ ಶುದ್ಧ ಎಂಬ ಕೀರ್ತಿಗೆ ಪಾತ್ರವಾಗಿವೆ. ನಾವು ಅದರ ವೈಶಿಷ್ಟ್ಯವನ್ನು ಕಾಪಾಡಬೇಕಿದೆ” ಎಂದಿದ್ದಾರೆ.

ಮುಂದುವರಿದು, “ರಾಜಧಾನಿ ಬೆಂಗಳೂರಿನಲ್ಲಿ ‘ಅ’ಕಾರ ಹಾಗೂ ‘ಹ’ಕಾರ ವ್ಯತ್ಯಾಸ ತಿಳಿದ ಕನ್ನಡಿಗರು, ಶುದ್ಧ ಕನ್ನಡ ಕನ್ನಡ ಗೊತ್ತಿರುವವರ ಸಂಖ್ಯೆ ಶೇ 26ರಷ್ಟು ಮಾತ್ರ” ಎಂದು ಹೇಳಿರುವುದು ಕನ್ನಡಿಗರ ವಿರೋಧಕ್ಕೆ ಕಾರಣವಾಗಿದೆ. ಕನ್ನಡದಲ್ಲಿ ‘ಹ’ ಎಂಬುದಿಲ್ಲ, ಅದು ಸಂಸ್ಕೃತದಿಂದ ಬಂದ ಪದ ಎಂಬ ಚರ್ಚೆಗಳಿವೆ. ಯಾವುದೇ ಭಾಷೆಯಲ್ಲಿ ಶುದ್ಧ, ಅಶುದ್ಧ ಎಂಬುದಿಲ್ಲ ಎಂದು ಭಾಷಾ ವಿಜ್ಞಾನಿಗಳು, ವಿಚಾರವಂತರು ಹೇಳುತ್ತಲೇ ಬಂದಿದ್ದಾರೆ.

ಜನಪದರ ಭಾಷಾ ಬಳಕೆಯನ್ನು ಅಲ್ಲಗಳೆದು ಶಿಷ್ಟ ಭಾಷೆಯನ್ನೇ ಶುದ್ಧ ಎಂದು ಪ್ರತಿಪಾದಿಸುವವರು ಮಾತ್ರ ಕನ್ನಡದಲ್ಲಿ ‘ಶುದ್ಧ, ಅಶುದ್ಧ’, ‘ಅ’ಕಾರ, ‘ಹ’ಕಾರಗಳ ಉಚ್ಚಾರಣೆ ಇತ್ಯಾದಿಗಳ ಮೇಲೆ ವಿವಾದ ಸೃಷ್ಟಿಸುವುದು ನಡೆಯುತ್ತಲೇ ಇದೆ.

ಕಳೆದ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯೂ ಇಂತಹದ್ದೇ ವಿವಾದಕ್ಕೆ ಕಾರಣವಾಗಿತ್ತು. ಈಗ ಕಸಾಪ ಅಧ್ಯಕ್ಷರು ಶುದ್ಧ ಕನ್ನಡದ ವರಸೆ ಶುರು ಮಾಡಿ, ಟೀಕೆಗೆ ಒಳಗಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ ಆಯೋಜಿಸಿದ್ದಾಗ ಚಿಂತಕರು ‘ನಾನುಗೌರಿ.ಕಾಂ’ ಜೊತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು. ಈ ಅಭಿಪ್ರಾಯಗಳು ಮಹೇಶ್‌ ಜೋಶಿಯವರ ವಿಚಾರಕ್ಕೂ ಅನ್ವಯವಾಗುತ್ತಿರುವುದರಿಂದ ಪರಿಷ್ಕರಿಸಿ ಮರು ಪ್ರಕಟಿಸಲಾಗುತ್ತಿದೆ.

‘ನಾನುಗೌರಿ.ಕಾಂ’ನೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ವಿಮರ್ಶಕ ಪ್ರೊ.ರಾಜೇಂದ್ರ ಚೆನ್ನಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರು, ಚಿಂತಕರಾದ ಡಾ.ಬಂಜಗೆರೆ ಜಯಪ್ರಕಾಶ್‌, ಭಾಷಾತಜ್ಞ ಡಾ.ರಂಗನಾಥ್‌ ಕಂಟನಕುಂಟೆ ಅವರು ಹಂಚಿಕೊಂಡ ವಿಚಾರಗಳು ಇಲ್ಲಿವೆ.


ಇದನ್ನೂ ಓದಿರಿ: ಬರಿದೇ ಬಾರಿಸದಿರು ತಂಬೂರಿ


ಕನ್ನಡದಲ್ಲಿ ಶೇ. 19ರಷ್ಟು ಪದಗಳು ಮಾತ್ರ ಕನ್ನಡದ್ದಾಗಿವೆ : ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಜೀವಂತ ಭಾಷೆಯೊಳಗೆ ಶುದ್ಧವಾದ ಭಾಷೆ ಎಂಬುದು ಯಾವುದೂ ಇಲ್ಲ. ಜಗತ್ತಿನ ಯಾವುದಾದರೂ ಭಾಷೆ ಮಡಿವಂತಿಕೆಯನ್ನು ಇಟ್ಟುಕೊಂಡರೆ ಆ ಭಾಷೆ ಸಾಯುತ್ತದೆ. ಅದಕ್ಕೆ ಬಹುದೊಡ್ಡ ಉದಾಹರಣೆ ಸಂಸ್ಕೃತ. ಅದು ಸತ್ತಿದೆ. ಸಂಸ್ಕೃತಕ್ಕೆ ಜೀವ ಕೊಡಲಿಕ್ಕೆ ಪ್ರಯತ್ನ ಪಟ್ಟರೂ ಅದು ಗ್ರಂಥಿಕವಾಗಿ ಉಳಿಯುತ್ತದೆ ಹೊರತು, ಮೌಖಿಕವಾಗಿ ಬಳಕೆಗೆ ಬರುವುದಿಲ್ಲ, ಬಳಕೆಗೆ ಬಂದಿದೆ ಎಂದು ಹೇಳುತ್ತಿದ್ದರೆ ಅದು ದೊಡ್ಡ ಸುಳ್ಳು.

ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಕನ್ನಡದಲ್ಲಿ ಇಂದು ಕನ್ನಡ ಶಬ್ದಗಳು ಉಳಿದಿರುವುದು ಶೇ. 19ರಷ್ಟು ಮಾತ್ರ. ಮಿಕ್ಕೆಲ್ಲವೂ ಅನ್ಯಭಾಷೆಯ ಶಬ್ದಗಳಾಗಿವೆ. ಹೇರಳವಾಗಿ ಸಂಸ್ಕೃತದಿಂದ ಕನ್ನಡ ಶಬ್ದಗಳನ್ನು ತೆಗೆದುಕೊಂಡಿದ್ದೇವೆ. ‘ಅನ್ನ’ ಕನ್ನಡ ಅಲ್ಲ, ‘ಸೂರ್ಯ’ ಕನ್ನಡ ಅಲ್ಲ, ‘ಚಂದ್ರ’ ಕನ್ನಡ ಅಲ್ಲ, ‘ಲೋಕ’ ಕನ್ನಡ ಅಲ್ಲ. ಇವೆಲ್ಲವೂ ಸಂಸ್ಕೃತದಿಂದ ಬಂದಿರುವ ಪದಗಳು. ‘ಸುಮಾರು’ ಎನ್ನುವ ಶಬ್ದವೂ ಕನ್ನಡ ಅಲ್ಲ. ‘ಸುಮಾರು’ ಎಂಬ ಶಬ್ದವನ್ನು ಫ್ರೆಂಚ್‌ನಿಂದ ತೆಗೆದುಕೊಳ್ಳಲಾಗಿದೆ. ಪೊಲೀಸ್ ಎಂಬ ಶಬ್ದಕ್ಕೆ ‘ಆರಕ್ಷಕ’ ಎಂದು ಬಳಸುತ್ತಾರೆ. ‘ಆರಕ್ಷಕ’ ಸಂಸ್ಕೃತ ಶಬ್ದ. ‘ಪೊಲೀಸ್‌’ ಇಂಗ್ಲಿಷ್‌ ಶಬ್ದ. ಕನ್ನಡಿಗರಿಗೆ ಗೊತ್ತಿರುವುದು ‘ಪೊಲೀಸ್‌’ ಹೊರತು, ‘ಆರಕ್ಷಕ’ ಅಲ್ಲ. ಕನ್ನಡಿಗರಿಗೆ ಗೊತ್ತಿರುವುದು ‘ಇಂಜಿನಿಯರ್‌ ’ಶಬ್ದವೇ ಹೊರತು, ‘ಅಭಿಯಂತರ’ ಅಲ್ಲ. ಆದ್ದರಿಂದ ‘ಇಂಜಿನಿಯರ್‌’, ‘ಪೊಲೀಸ್‌’, ‘ಕಾಲೇಜ್‌’ ಇಂತಹ ಶಬ್ದಗಳೆಲ್ಲವೂ ಕನ್ನಡವಾಗಿಬಿಟ್ಟಿವೆ. ಈ ಶಬ್ದಗಳಲ್ಲದ ಸಂಸ್ಕೃತ ಶಬ್ದಗಳು ಕನ್ನಡ ಆಗಿಲ್ಲ.

ಭಾಷೆ ನಿರಂತರ ಬದಲಾಗುವ ವಿದ್ಯಮಾನ: ಪ್ರೊ.ರಾಜೇಂದ್ರ ಚೆನ್ನಿ

ಭಾಷೆಯನ್ನು ಅಧ್ಯಯನ ಮಾಡುವ ಎಲ್ಲ ಭಾಷಾ ತಜ್ಞರಿಗೆ ಗೊತ್ತಿರುವ ಹಾಗೆ ಭಾಷೆ ಎನ್ನುವುದು ನಿರಂತರವಾಗಿರುವ ಬದಲಾಗುತ್ತಿರುವ, ಹೆಚ್ಚು ಕಡಿಮೆ ದಿನ ದಿನವೂ ಪರಿವರ್ತನೆಯಾಗುವ ಒಂದು ವಿದ್ಯಮಾನವಾಗಿದೆ. ಹೀಗಾಗಿ ಜಗತ್ತಿನ ಯಾವುದೇ ಭಾಷೆ (ಅದು ಗ್ರೀಕ್‌, ಲ್ಯಾಟೀನ್‌ ಥರದ ಕ್ಲಾಸಿಕಲ್‌ ಭಾಷೆಗಳಾಗಿರಬಹುದು ಅಥವಾ ಲಿಪಿ ಇಲ್ಲದೆ ಆಡುಮಾತಿನಲ್ಲಿರುವ ಭಾಷೆಯೇ ಆಗಿರಬಹುದು) ಯಾವಾಗಲೂ ಬದಲಾಗುತ್ತಿರುತ್ತವೆ, ಬೆಳೆಯುತ್ತಿರುತ್ತವೆ, ಅವುಗಳಲ್ಲಿ ಬೇರೆ ಬೇರೆ ಭಾಷೆಗಳಿಂದ, ಬೇರೆ ಬೇರೆ ಸಾಮಾಜಿಕ ಲೋಕಗಳಿಂದ ಹೊಸ ಶಬ್ದಗಳು, ಹೊಸ ಅಭಿವ್ಯಕ್ತಿಯ ಕ್ರಮಗಳು ಸೇರಿಕೊಳ್ಳುತ್ತಿರುತ್ತವೆ. ಇತಿಹಾಸ ಹೇಳುವಂತೆ ಯಾವುದೇ ಭಾಷೆ ಶುದ್ಧ ಭಾಷೆ ಅಲ್ಲವೇ ಅಲ್ಲ.

ಪ್ರೊ.ರಾಜೇಂದ್ರ ಚೆನ್ನಿ

ಶುದ್ಧ ಅನ್ನುವಂತಹದ್ದು, ಭಾಷೆ ಬೆಳೆದು, ಬಹಳ ವರ್ಷಗಳಾದ ಮೇಲೆ, ಕೆಲವು ಶಾಸ್ತ್ರಜ್ಞರು, ಪಂಡಿತರು ಸೇರಿಕೊಂಡು ಮಾಡಿದ್ದಾಗಿದೆ. ಇದು ಭಾಷೆಯ ಮೂಲ ಲಕ್ಷಣ ಅಲ್ಲ. ಶುದ್ಧ, ಅಶುದ್ಧ ಎನ್ನುವುದು ಶಾಸ್ತ್ರ ಮತ್ತು ವ್ಯಾಕರಣಗಳಿಂದ ಬರುವಂತಹ ಕೃತ್ತಿಮ ಚೌಕಟ್ಟು. ಯಾವುದೇ ಭಾಷೆಯಾದರೂ ಶುದ್ಧ, ಅಶುದ್ಧ ಎಂಬುದು ಚರ್ಚೆಗೆ ಬಂದರೆ ಸಮಾಜದಲ್ಲಿರುವ ಅಸಮಾನತೆ ಪ್ರವೇಶಿಸುತ್ತದೆ. ಇಂಗ್ಲಿಷ್‌ ಅನ್ನೇ ಉದಾಹರಣೆಯಾಗಿ ನೋಡುವುದಾದರೆ ಬಿಬಿಸಿಯಲ್ಲಿ ಕೇಳುವುದು, ಪುಸ್ತಕದಲ್ಲಿ ಓದುವುದು ಮಾತ್ರ ಇಂಗ್ಲಿಷ್‌ ಭಾಷೆ ಅಲ್ಲ. ಕನ್ನಡ ಭಾಷೆಯಲ್ಲಿರುವಂತೆಯೇ ಪ್ರಾದೇಶಿಕ ವೈವಿಧ್ಯಗಳಿವೆ. ಅಲ್ಲಿ ಬಡಜನರು ಮಾತನಾಡುವ ಕ್ರಮವೇ ಬೇರೆ, ಶ್ರೀಮಂತ, ಶಿಕ್ಷಿತ ಜನರು ಮಾತನಾಡುವ ಕ್ರಮವೇ ಬೇರೆ. ಅಶಿಕ್ಷಿತ, ಕೆಳವರ್ಗಗಳಲ್ಲಿನವರು, ಸಾಮಾನ್ಯರು ಬಳಸುವ ಭಾಷೆಯನ್ನು ಅಶುದ್ಧ ಎನ್ನುವಂತಹದ್ದು ಫ್ಯಾಸಿಸ್ಟ್‌ ಮನೋಭಾವ. ಇದನ್ನು ಯಾವಾಗಲೂ ವಿರೋಧಿಸಬೇಕು. ಸಂಸ್ಕೃತದಿಂದ ಬಂದಿರುವ ಪದಗಳೇ ಶುದ್ಧ ಕನ್ನಡ (ಅಚ್ಚ ಕನ್ನಡ), ನಮ್ಮ ಆಡುಮಾತಿನ ಭಾಷೆಯನ್ನು ಅಶುದ್ಧ ಕನ್ನಡ ಎನ್ನುವ ಕಡೆಗೆ ಇರುವ ಇವರು ಹೋಗುತ್ತಾರೆ ಅನಿಸುತ್ತದೆ.


ಇದನ್ನೂ ಓದಿರಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ


ಭಾಷಾ ಜಾಯಮಾನದ ಅರಿವಿರಲಿ: ಬಂಜಗೆರೆ

ಜನ ಬಳಸುವ ಒಂದು ಭಾಷೆ ಇರುತ್ತದೆ. ಆ ಭಾಷೆ ಯಾವ್ಯಾವ ಶಬ್ದಗಳನ್ನು ತನ್ನೊಳಗೆ ಒಳಗೊಳ್ಳುತ್ತದೆಯೋ ಅದೆಲ್ಲವೂ ಕೂಡ ಬಳಸುತ್ತಾ ಬಳಸುತ್ತಾ ಭಾಷೆಯ ಜಾಯಮಾನಕ್ಕೆ ಬಂದು ಬಿಡುತ್ತವೆ. ಕೆಲವು ಅಕ್ಷರಸ್ಥರು ಕನ್ನಡಕ್ಕೆ ಕೃತಕವಾಗಿ ಇಂಗ್ಲಿಷ್ ಭಾಷೆಯ ಶಬ್ದಗಳನ್ನು ಸೇರಿಸುತ್ತಿರುತ್ತಾರೆ. ಅದು ಜನಸಾಮಾನ್ಯರ ಕ್ರಮ ಅಲ್ಲ. ಜನಸಾಮಾನ್ಯರು ಮಾತನಾಡುವಾಗ ಕೆಲವು ಉರ್ದು ಪದ, ಪಾರ್ಸಿ ಪದ, ಕೆಲವು ಇಂಗ್ಲಿಷ್ ಪದ ಸೇರಬಹುದು.

ಸಾಮಾನ್ಯವಾಗಿ ಎರವಲು ತೆಗೆದುಕೊಂಡಾಗ ಅವರು ಕನ್ನಡದ ಜಾಯಮಾನಕ್ಕೆ ಆ ಪದವನ್ನು ಒಗ್ಗಿಸಿಬಿಡುತ್ತಾರೆ. ತತ್ಸಮವೋ, ತದ್ಭವವೋ ಆಗಿಬಿಡುತ್ತದೆ. ಬಸ್ಸು, ಕಾರು ಇದಕ್ಕೆ ಉದಾಹರಣೆಗಳು. ಆದರೆ ಕೃತಕವಾಗಿ, ವಿಪರೀತ ಇಂಗ್ಲಿಷ್‌ ಪದಗಳನ್ನು ಸೇರಿಸಿ ಮಾತನಾಡುವುದು ಕನ್ನಡ ಜಾಯಮಾನವಲ್ಲ. ಈ ವಿವೇಕವನ್ನು ನಾವು ಇಟ್ಟುಕೊಳ್ಳಬೇಕು.

ಬಂಜಗೆರೆ ಜಯಪ್ರಕಾಶ್‌

ಸರಿ-ತಪ್ಪು ಇದೆ, ಶುದ್ಧ-ಅಶುದ್ಧ ಇಲ್ಲ: ಭಾಷಾತಜ್ಞ ರಂಗನಾಥ್‌ ಕಂಟನಕುಂಟೆ

ಭಾಷೆ ಒಳಗೆ ಶುದ್ಧ, ಅಶುದ್ಧ ಎಂಬುದು ತಪ್ಪು ಕಲ್ಪನೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಆದರೆ ಭಾಷೆಯಲ್ಲಿ ಸರಿ, ತಪ್ಪು ಎಂಬುದಿದೆ. ಉದಾಹರಣೆಗೆ ‘ತಿಮ್ಮ’ ಎಂಬುದನ್ನು ‘ತಮ್ಮ’ ಎಂದು ಬರೆಯಲು ಬರುವುದಿಲ್ಲ. ವ್ಯಾಕರಣದಲ್ಲಿ ಅದು ತಪ್ಪಾಗುತ್ತದೆ. ಶುದ್ಧ, ಅಶುದ್ಧ ಎಂದು ಬಂದಾಗ ಅಲ್ಪಪ್ರಾಣ, ಮಹಾಪ್ರಾಣದ ಪ್ರಶ್ನೆ ಬರುತ್ತದೆ. ‘ಶುದ್ಧ’ ಎಂದು ಕರೆಯಬೇಕಾ, ‘ಶುದ್ದ’ ಎಂದು ಕರೆಯಬೇಕಾ ಎಂಬ ಪ್ರಶ್ನೆ ಬರುತ್ತದೆ. ‘ಪ್ರಕಾಸ’ ಎಂದು ಕರೆಯಬೇಕಾ, ‘ಪ್ರಕಾಶ’ ಎಂದು ಕರೆಯಬೇಕಾ ಎಂಬ ಪ್ರಶ್ನೆ ಬರುತ್ತದೆ.

ರಂಗನಾಥ್ ಕಂಟನಕುಂಟೆ

ಕನ್ನಡದಲ್ಲಿ ‘ಪ್ರಕಾಸ,’ ‘ಪ್ರಕಾಶ’ ಎರಡೂ ಬಳಕೆಯಲ್ಲಿವೆ. ಮಳವಳ್ಳಿ, ಮಂಡ್ಯ ರಾಮನಗರ, ಚೆನ್ನಪಟ್ಟಣ ಈ ಭಾಗದಲ್ಲಿ ಪ್ರಕಾಸ, ರಮೇಸ ಎನ್ನುತ್ತಾರೆ. ಇದನ್ನು ತಪ್ಪು ಎಂದು ಹೇಳಲು ಬರಲ್ಲ. ಅದು ಪ್ರಾದೇಶಿಕ ಗುರುತು. ನಮ್ಮಲ್ಲಿ ತಿಳಿವಳಿಕೆ ಇಲ್ಲದವರು ‘ಪ್ರಕಾಸ’ ಎಂದರೆ ನಗುತ್ತಾರೆ. ಹೀಗಾಗಿ ಶುದ್ಧ, ಅಶುದ್ಧ ಎನ್ನಲು ಬರುವುದಿಲ್ಲ. ವ್ಯಾಕರಣ ಮೂಲ ನಿಯಮಗಳನ್ನು ಉಲ್ಲಂಘಿಸಲು ಆಗಲ್ಲ.

ಬಸ್ಸು, ರೈಲು, ಕಾರು, ಕಂಪ್ಯೂಟರ್ ಈ ರೀತಿ ಈ ಪದಗಳನ್ನು ಕನ್ನಡದ್ದಾಗಿಯೇ ಬಳಸುತ್ತೇವೆ. ಈ ರೀತಿ ಬಳಸುವುದರಿಂದ ಕನ್ನಡ ಕೆಟ್ಟು ಹೋಯಿತು ಎಂದು ಕೆಲವರು ಹೇಳುತ್ತಾರೆ. ಹಾಗೆ ಹೇಳಲು ಸಾಧ್ಯವಿಲ್ಲ. ಎಲ್ಲ ಕಾಲದಲ್ಲೂ, ಎಲ್ಲ ಭಾಷೆಯಲ್ಲೂ ಕೊಡುಕೊಳುಗೆ ನಡೆಯುತ್ತಲೇ ಇರುತ್ತದೆ. ಹಿಂದಿಯಲ್ಲಿರುವ ಶೇ. 75ರಷ್ಟು ಪದಗಳು ಸಂಸ್ಕೃತದ್ದಾಗಿವೆ. ಸಂಸ್ಕೃತದಲ್ಲಿರುವ ಪದಗಳು ಪಾಕೃತ, ಪಾಳಿ ಇತ್ಯಾದಿ ಭಾಷೆಗಳದ್ದು. ಇಂಗ್ಲಿಷ್‌ನಲ್ಲಿರುವ ಪದಗಳು ಹೆಚ್ಚಿನವು ಲ್ಯಾಟೀನ್‌, ಗ್ರೀಕ್‌ ಭಾಷೆಯದ್ದಾಗಿವೆ.

‘ಅ’ಕಾರ, ‘ಹ’ ಜಾರ ತಾರತಮ್ಯ ಸಂಸ್ಕೃತದ ಸೃಷ್ಟಿ

ಕಸಾಪ ಅಧ್ಯಕ್ಷರ ಹೇಳಿಕೆಗೆ ತಿರುಗೇಟು ನೀಡಿರುವ ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಮುಖಂಡ ಹನಕೆರೆ ಅಭಿಗೌಡ ಅವರು, ” ಕನ್ನಡದಲ್ಲಿ ‘ಹ’ ಅನ್ನುವುದೆ ಇಲ್ಲ , ಇದನ್ನು ಕುತಂತ್ರ ಸಂಸ್ಕ್ರುತ ದವರು ತುರುಕಿದ್ದಾರೆ. ಕಾಲಕಾಲಕ್ಕೆ ನುಡಿ ಸುದಾರಣೆ ಯೆಸರಲ್ಲಿ ದ್ರಾವಿಡರ ನುಡಿ ಕನ್ನಡ ಓದಲು ಬರೆಯಲು ಕಶ್ಟವಾಗುವಂತೆ ಕುತಂತ್ರದಿಂದ ಸಂಸ್ಕ್ರುತ ಯೇರಲಾಗಿದೆ ತುರುಕಲಾಗಿದೆ. ಈಗಲೂ ನಡೆಯುತಿದೆ. ಅಲ್ಪಪ್ರಾಣ ಮಾಪ್ರಾಣ, ‘ಅ’ ಕಾರ , ‘ಹ’ ಕಾರ ಎಂಬ ತಾರತಮ್ಯ ಸ್ರುಶ್ಟಿಸಲಾಗಿದೆ. ಸಂಸ್ಕ್ರುತ ದ ಮೂಲ ಗುಣವೆ ತಾರತಮ್ಯ ಸ್ರುಶ್ಟಿಸುವುದು. ಕನ್ನಡದಲ್ಲಿರುವುದು 33 ಅಕ್ಶರಗಳು ಮಾತ್ರ (ಅ ಆ ಇ ಈ ಉ ಊ ಎ ಏ ಐ ಒ ಓ ಔ ಅಂ. ಕ ಗ ಚ ಜ. ಟ ಡ ಣ. ತ ದ ನ. ಪ ಬ ಮ. ಯ ರ ಲ ವ ಶ ಸ ಳ). ನಮ್ಮ ಬರವಣಿಗೆಯಲ್ಲಿ ತಾರತಮ್ಯ ಬಿಟ್ಟು ಮತ್ತು ಸಾದ್ಯವಾದಶ್ಟು ಸಂಸ್ಕ್ರುತ ಯಿಂದಿ ಪದಗಳ ಬಿಟ್ಟು ಬರೆದಿದ್ದೇವೆ, ನೀವು ಇದೇ ರೀತಿ ಬರೆಯಿರಿ” ಎಂದು ತಿಳಿಸಿದ್ದಾರೆ. ಜೊತೆಗೆ ಮಹಾಪ್ರಾಣ ಬಳಕೆಯನ್ನು ಅವರು ತಮ್ಮ ಪೋಸ್ಟ್‌ನಲ್ಲಿ ಬಳಸುವುದನ್ನು ನಿಲ್ಲಿಸಿದ್ದಾರೆ.

ಹನಕೆರೆ ಅಭಿಗೌಡ

ಇದನ್ನೂ ಓದಿರಿ: ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...