Homeಕರ್ನಾಟಕ'ಕಾಶಿ ಮಥುರಾ ಬಾಕಿ ಹೈ’: ರಾಮಮಂದಿರ ಉದ್ಘಾಟನೆ ದಿನ ಬೆಂಗಳೂರಿನಲ್ಲಿ ಪ್ರಚೋದನಾಕಾರಿ ಘೋಷಣೆ

‘ಕಾಶಿ ಮಥುರಾ ಬಾಕಿ ಹೈ’: ರಾಮಮಂದಿರ ಉದ್ಘಾಟನೆ ದಿನ ಬೆಂಗಳೂರಿನಲ್ಲಿ ಪ್ರಚೋದನಾಕಾರಿ ಘೋಷಣೆ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಪ್ರತಿಷ್ಠಾಪನೆ ನಡೆಯುತ್ತಿತ್ತು. ಇದೇ ವೇಳೆ ಬೆಂಗಳೂರಿನ ಜಯನಗರದ ಬೀದಿಗಳಲ್ಲಿ ‘ಕಾಶಿ ಮಥುರಾ ಬಾಕಿ ಹೈ’ (ಕಾಶಿ ಮತ್ತು ಮಥುರಾ ಬಾಕಿ ಉಳಿದಿದೆ) ಎಂದು ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿರುವುದು ಬಹಿರಂಗವಾಗಿದೆ.

ಧಾರ್ಮಿಕ ಆಚರಣೆಗಳು ಸಾಮಾನ್ಯವಾಗಿ ದೇವಾಲಯಗಳಿಗೆ ಸೀಮಿತವಾಗಿರುತ್ತಿತ್ತು, ಆದರೆ ರಾಮಮಂದಿರ ಉದ್ಘಾಟನೆಯನ್ನು ಬೆಂಗಳೂರಿನ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಲಾಗಿದೆ. ಜೆಪಿ ನಗರ, ಬನಶಂಕರಿ ಮತ್ತು ಜಯನಗರ ಪ್ರದೇಶಗಳಲ್ಲಿ ಸಣ್ಣ ಟೆಂಟ್‌ಗಳನ್ನು ಹಾಕಲಾಗಿತ್ತು, ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗಿತ್ತು ಮತ್ತು ಭಕ್ತಿಗೀತೆಗಳನ್ನು ಹಾಡಲಾಗಿತ್ತು. ಇದೇ ವೇಳೆ ಬೆಂಗಳೂರಿನ ಜಯನಗರದ ಬೀದಿಗಳಲ್ಲಿ ‘ಕಾಶಿ ಮಥುರಾ ಬಾಕಿ ಹೈ’ (ಕಾಶಿ ಮತ್ತು ಮಥುರಾ ಬಾಕಿ ಉಳಿದಿದೆ) ಎಂದು ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿರುವುದು ಬಹಿರಂಗವಾಗಿದೆ. ಈ ಬಗ್ಗೆ ಪೊಲೀಸರು ಈವರೆಗೆ ಯಾವುದೇ ಪ್ರಕರಣ ದಾಖಲಿಸಿರುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಜಯನಗರ ಪೊಲೀಸ್ ಠಾಣೆ ಎದುರಿನ ವಿನಾಯಕ ದೇವಸ್ಥಾನದ ಹೊರಗೆ ಪ್ರಾಣಪ್ರತಿಷ್ಠಾನ ಕಾರ್ಯಕ್ರಮದ ನೇರಪ್ರದರ್ಶನ ನಡೆದಿದೆ. ಕಾರ್ಯಕ್ರಮದಲ್ಲಿ ಕನ್ನಡ ನಟಿ ತಾರಾ ಉಪಸ್ಥಿತರಿದ್ದರು. ಜಯನಗರ ನಿವಾಸಿಯೊಬ್ಬರು ಇದು ಭಾರತದ ಸುವರ್ಣಯುಗ, ಮೋದಿಜಿ ಇದನ್ನು ಸಾಧ್ಯವಾಗಿಸಿದ್ದಾರೆ. ಅಯೋಧ್ಯೆಯಲ್ಲಿ ಮಹಾಮಸ್ತಕಾಭಿಷೇಕವನ್ನು ವೀಕ್ಷಿಸುವುದು ಒಂದು ದೊಡ್ಡ ಗೌರವವಾಗಿದೆ ಆದರೆ ಅದು ಸಾಧ್ಯವಿಲ್ಲ, ಆದ್ದರಿಂದ ಸಮುದಾಯದೊಂದಿಗೆ ಇಲ್ಲಿ ವೀಕ್ಷಿಸುವುದರಿಂದ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಕಾಶಿ ಮತ್ತು ಮಥುರಾ ಕುರಿತ ಘೋಷಣೆಯ ಬಗ್ಗೆ ಕೇಳಿದಾಗ, ಕೇಸರಿ ಶಾಲು ಧರಿಸಿದ ನಿವಾಸಿಗಳಲ್ಲಿ ಒಬ್ಬರು, ಇದು ಕೇವಲ ಆರಂಭ. ಅವರು ಅನೇಕ ದೇವಾಲಯಗಳನ್ನು ನಾಶಪಡಿಸಿದರು ಮತ್ತು ಅಯೋಧ್ಯೆಯನ್ನು ನಾವು  ಮರಳಿ ಪಡೆದಿದ್ದೇವೆ. ಆದರೆ ಇದೀಗ, ಈ ಕ್ಷಣವನ್ನು ಆನಂದಿಸುವ ಸಮಯ ಎಂದು ಹೇಳಿದ್ದಾರೆ. ಅಲ್ಲಿದ್ದ ಕೆಲವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 22ರಂದು ರಜೆ ಘೋಷಿಸಿಲ್ಲ ಎಂದು ಟೀಕಿಸಿದ್ದಾರೆ. ಭಾರತೀಯ ಇತಿಹಾಸದಲ್ಲಿ ಇದು ಮಹತ್ವದ ದಿನವಾಗಿದೆ, ಸರ್ಕಾರ ರಜೆ ಘೋಷಿಸದಿದ್ದರೆ ಹೇಗೆ? ಎಂದು ತನ್ನ ಮಗಳ ಜೊತೆ ಬಂದಿದ್ದ 40 ವರ್ಷದ ಟೆಕ್ಕಿಯೊಬ್ಬರು ಪ್ರಶ್ನಿಸಿದ್ದಾರೆ.

ಎಂಜಿ ರಸ್ತೆಯಲ್ಲಿರುವ ನವರಥನ್ ಜ್ಯುವೆಲ್ಲರ್ಸ್‌ನ ಸಿಬ್ಬಂದಿಗಳು ತಮ್ಮ ಅಂಗಡಿಯ ಮುಂದೆ ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ, ರಸ್ತೆಯಲ್ಲಿ ಪಟಾಕಿ ಸಿಡಿಸುತ್ತಾ, ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ನೃತ್ಯ ಮಾಡಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ಬಳಿ ರಾಮ, ಸೀತೆ, ಲಕ್ಷ್ಮಣ, ಹನುಮಾನ್ ವೇಷಧರಿಸಿ ಕಲಾವಿದರು ಮೆರವಣಿಗೆ ನಡೆಸಿದ್ದಾರೆ.

ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಸಮಾರಂಭವು ಸೋಮವಾರ ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಿ 12.28ಕ್ಕೆ ಪೂರ್ಣಗೊಂಡಿತ್ತು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಬೆನ್‌ ಪಟೇಲ್‌, ಯೋಗಿ ಆದಿತ್ಯನಾಥ್‌ ಸೇರಿ ಹಲವರು ಉಪಸ್ಥಿತರಿದ್ದರು.

ರಾಮಮಂದಿರದಂತೆಯೇ ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯು ವಿವಾದಿತ ಕೇಂದ್ರವಾಗಿದೆ. ವಾರಣಾಸಿ, ಜ್ಞಾನವಾಪಿ ಮಸೀದಿಯು ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪದಲ್ಲಿದೆ. ಇದನ್ನು ದೇವಾಲಯದ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. ಮಥುರಾ ಪ್ರಕರಣದಲ್ಲಿ 1,670ರಲ್ಲಿ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ನಿರ್ಮಿಸಲಾದ ಶಾಹಿ ಈದ್ಗಾ ಮಸೀದಿಯು ಕೃಷ್ಣ ಜನ್ಮಸ್ಥಾನದ ದೇವಸ್ಥಾನದ ಪಕ್ಕದಲ್ಲಿರುವ ಕೃಷ್ಣನ ಜನ್ಮಸ್ಥಳದಲ್ಲಿದೆ ಎಂದು ಹಿಂದೂ ಅರ್ಜಿದಾರರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ. ಈ ಪ್ರಕರಣಗಳು ಕೋರ್ಟ್‌ನಲ್ಲಿದೆ.

ಇದನ್ನು ಓದಿ: ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...