Homeಕರ್ನಾಟಕ'ಕಾಶಿ ಮಥುರಾ ಬಾಕಿ ಹೈ’: ರಾಮಮಂದಿರ ಉದ್ಘಾಟನೆ ದಿನ ಬೆಂಗಳೂರಿನಲ್ಲಿ ಪ್ರಚೋದನಾಕಾರಿ ಘೋಷಣೆ

‘ಕಾಶಿ ಮಥುರಾ ಬಾಕಿ ಹೈ’: ರಾಮಮಂದಿರ ಉದ್ಘಾಟನೆ ದಿನ ಬೆಂಗಳೂರಿನಲ್ಲಿ ಪ್ರಚೋದನಾಕಾರಿ ಘೋಷಣೆ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಪ್ರತಿಷ್ಠಾಪನೆ ನಡೆಯುತ್ತಿತ್ತು. ಇದೇ ವೇಳೆ ಬೆಂಗಳೂರಿನ ಜಯನಗರದ ಬೀದಿಗಳಲ್ಲಿ ‘ಕಾಶಿ ಮಥುರಾ ಬಾಕಿ ಹೈ’ (ಕಾಶಿ ಮತ್ತು ಮಥುರಾ ಬಾಕಿ ಉಳಿದಿದೆ) ಎಂದು ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿರುವುದು ಬಹಿರಂಗವಾಗಿದೆ.

ಧಾರ್ಮಿಕ ಆಚರಣೆಗಳು ಸಾಮಾನ್ಯವಾಗಿ ದೇವಾಲಯಗಳಿಗೆ ಸೀಮಿತವಾಗಿರುತ್ತಿತ್ತು, ಆದರೆ ರಾಮಮಂದಿರ ಉದ್ಘಾಟನೆಯನ್ನು ಬೆಂಗಳೂರಿನ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಲಾಗಿದೆ. ಜೆಪಿ ನಗರ, ಬನಶಂಕರಿ ಮತ್ತು ಜಯನಗರ ಪ್ರದೇಶಗಳಲ್ಲಿ ಸಣ್ಣ ಟೆಂಟ್‌ಗಳನ್ನು ಹಾಕಲಾಗಿತ್ತು, ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗಿತ್ತು ಮತ್ತು ಭಕ್ತಿಗೀತೆಗಳನ್ನು ಹಾಡಲಾಗಿತ್ತು. ಇದೇ ವೇಳೆ ಬೆಂಗಳೂರಿನ ಜಯನಗರದ ಬೀದಿಗಳಲ್ಲಿ ‘ಕಾಶಿ ಮಥುರಾ ಬಾಕಿ ಹೈ’ (ಕಾಶಿ ಮತ್ತು ಮಥುರಾ ಬಾಕಿ ಉಳಿದಿದೆ) ಎಂದು ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿರುವುದು ಬಹಿರಂಗವಾಗಿದೆ. ಈ ಬಗ್ಗೆ ಪೊಲೀಸರು ಈವರೆಗೆ ಯಾವುದೇ ಪ್ರಕರಣ ದಾಖಲಿಸಿರುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಜಯನಗರ ಪೊಲೀಸ್ ಠಾಣೆ ಎದುರಿನ ವಿನಾಯಕ ದೇವಸ್ಥಾನದ ಹೊರಗೆ ಪ್ರಾಣಪ್ರತಿಷ್ಠಾನ ಕಾರ್ಯಕ್ರಮದ ನೇರಪ್ರದರ್ಶನ ನಡೆದಿದೆ. ಕಾರ್ಯಕ್ರಮದಲ್ಲಿ ಕನ್ನಡ ನಟಿ ತಾರಾ ಉಪಸ್ಥಿತರಿದ್ದರು. ಜಯನಗರ ನಿವಾಸಿಯೊಬ್ಬರು ಇದು ಭಾರತದ ಸುವರ್ಣಯುಗ, ಮೋದಿಜಿ ಇದನ್ನು ಸಾಧ್ಯವಾಗಿಸಿದ್ದಾರೆ. ಅಯೋಧ್ಯೆಯಲ್ಲಿ ಮಹಾಮಸ್ತಕಾಭಿಷೇಕವನ್ನು ವೀಕ್ಷಿಸುವುದು ಒಂದು ದೊಡ್ಡ ಗೌರವವಾಗಿದೆ ಆದರೆ ಅದು ಸಾಧ್ಯವಿಲ್ಲ, ಆದ್ದರಿಂದ ಸಮುದಾಯದೊಂದಿಗೆ ಇಲ್ಲಿ ವೀಕ್ಷಿಸುವುದರಿಂದ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಕಾಶಿ ಮತ್ತು ಮಥುರಾ ಕುರಿತ ಘೋಷಣೆಯ ಬಗ್ಗೆ ಕೇಳಿದಾಗ, ಕೇಸರಿ ಶಾಲು ಧರಿಸಿದ ನಿವಾಸಿಗಳಲ್ಲಿ ಒಬ್ಬರು, ಇದು ಕೇವಲ ಆರಂಭ. ಅವರು ಅನೇಕ ದೇವಾಲಯಗಳನ್ನು ನಾಶಪಡಿಸಿದರು ಮತ್ತು ಅಯೋಧ್ಯೆಯನ್ನು ನಾವು  ಮರಳಿ ಪಡೆದಿದ್ದೇವೆ. ಆದರೆ ಇದೀಗ, ಈ ಕ್ಷಣವನ್ನು ಆನಂದಿಸುವ ಸಮಯ ಎಂದು ಹೇಳಿದ್ದಾರೆ. ಅಲ್ಲಿದ್ದ ಕೆಲವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 22ರಂದು ರಜೆ ಘೋಷಿಸಿಲ್ಲ ಎಂದು ಟೀಕಿಸಿದ್ದಾರೆ. ಭಾರತೀಯ ಇತಿಹಾಸದಲ್ಲಿ ಇದು ಮಹತ್ವದ ದಿನವಾಗಿದೆ, ಸರ್ಕಾರ ರಜೆ ಘೋಷಿಸದಿದ್ದರೆ ಹೇಗೆ? ಎಂದು ತನ್ನ ಮಗಳ ಜೊತೆ ಬಂದಿದ್ದ 40 ವರ್ಷದ ಟೆಕ್ಕಿಯೊಬ್ಬರು ಪ್ರಶ್ನಿಸಿದ್ದಾರೆ.

ಎಂಜಿ ರಸ್ತೆಯಲ್ಲಿರುವ ನವರಥನ್ ಜ್ಯುವೆಲ್ಲರ್ಸ್‌ನ ಸಿಬ್ಬಂದಿಗಳು ತಮ್ಮ ಅಂಗಡಿಯ ಮುಂದೆ ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ, ರಸ್ತೆಯಲ್ಲಿ ಪಟಾಕಿ ಸಿಡಿಸುತ್ತಾ, ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ನೃತ್ಯ ಮಾಡಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ಬಳಿ ರಾಮ, ಸೀತೆ, ಲಕ್ಷ್ಮಣ, ಹನುಮಾನ್ ವೇಷಧರಿಸಿ ಕಲಾವಿದರು ಮೆರವಣಿಗೆ ನಡೆಸಿದ್ದಾರೆ.

ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಸಮಾರಂಭವು ಸೋಮವಾರ ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಿ 12.28ಕ್ಕೆ ಪೂರ್ಣಗೊಂಡಿತ್ತು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಬೆನ್‌ ಪಟೇಲ್‌, ಯೋಗಿ ಆದಿತ್ಯನಾಥ್‌ ಸೇರಿ ಹಲವರು ಉಪಸ್ಥಿತರಿದ್ದರು.

ರಾಮಮಂದಿರದಂತೆಯೇ ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯು ವಿವಾದಿತ ಕೇಂದ್ರವಾಗಿದೆ. ವಾರಣಾಸಿ, ಜ್ಞಾನವಾಪಿ ಮಸೀದಿಯು ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪದಲ್ಲಿದೆ. ಇದನ್ನು ದೇವಾಲಯದ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. ಮಥುರಾ ಪ್ರಕರಣದಲ್ಲಿ 1,670ರಲ್ಲಿ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ನಿರ್ಮಿಸಲಾದ ಶಾಹಿ ಈದ್ಗಾ ಮಸೀದಿಯು ಕೃಷ್ಣ ಜನ್ಮಸ್ಥಾನದ ದೇವಸ್ಥಾನದ ಪಕ್ಕದಲ್ಲಿರುವ ಕೃಷ್ಣನ ಜನ್ಮಸ್ಥಳದಲ್ಲಿದೆ ಎಂದು ಹಿಂದೂ ಅರ್ಜಿದಾರರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ. ಈ ಪ್ರಕರಣಗಳು ಕೋರ್ಟ್‌ನಲ್ಲಿದೆ.

ಇದನ್ನು ಓದಿ: ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...