Homeಕರ್ನಾಟಕ'ಕಾಶಿ ಮಥುರಾ ಬಾಕಿ ಹೈ’: ರಾಮಮಂದಿರ ಉದ್ಘಾಟನೆ ದಿನ ಬೆಂಗಳೂರಿನಲ್ಲಿ ಪ್ರಚೋದನಾಕಾರಿ ಘೋಷಣೆ

‘ಕಾಶಿ ಮಥುರಾ ಬಾಕಿ ಹೈ’: ರಾಮಮಂದಿರ ಉದ್ಘಾಟನೆ ದಿನ ಬೆಂಗಳೂರಿನಲ್ಲಿ ಪ್ರಚೋದನಾಕಾರಿ ಘೋಷಣೆ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಪ್ರತಿಷ್ಠಾಪನೆ ನಡೆಯುತ್ತಿತ್ತು. ಇದೇ ವೇಳೆ ಬೆಂಗಳೂರಿನ ಜಯನಗರದ ಬೀದಿಗಳಲ್ಲಿ ‘ಕಾಶಿ ಮಥುರಾ ಬಾಕಿ ಹೈ’ (ಕಾಶಿ ಮತ್ತು ಮಥುರಾ ಬಾಕಿ ಉಳಿದಿದೆ) ಎಂದು ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿರುವುದು ಬಹಿರಂಗವಾಗಿದೆ.

ಧಾರ್ಮಿಕ ಆಚರಣೆಗಳು ಸಾಮಾನ್ಯವಾಗಿ ದೇವಾಲಯಗಳಿಗೆ ಸೀಮಿತವಾಗಿರುತ್ತಿತ್ತು, ಆದರೆ ರಾಮಮಂದಿರ ಉದ್ಘಾಟನೆಯನ್ನು ಬೆಂಗಳೂರಿನ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಲಾಗಿದೆ. ಜೆಪಿ ನಗರ, ಬನಶಂಕರಿ ಮತ್ತು ಜಯನಗರ ಪ್ರದೇಶಗಳಲ್ಲಿ ಸಣ್ಣ ಟೆಂಟ್‌ಗಳನ್ನು ಹಾಕಲಾಗಿತ್ತು, ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗಿತ್ತು ಮತ್ತು ಭಕ್ತಿಗೀತೆಗಳನ್ನು ಹಾಡಲಾಗಿತ್ತು. ಇದೇ ವೇಳೆ ಬೆಂಗಳೂರಿನ ಜಯನಗರದ ಬೀದಿಗಳಲ್ಲಿ ‘ಕಾಶಿ ಮಥುರಾ ಬಾಕಿ ಹೈ’ (ಕಾಶಿ ಮತ್ತು ಮಥುರಾ ಬಾಕಿ ಉಳಿದಿದೆ) ಎಂದು ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿರುವುದು ಬಹಿರಂಗವಾಗಿದೆ. ಈ ಬಗ್ಗೆ ಪೊಲೀಸರು ಈವರೆಗೆ ಯಾವುದೇ ಪ್ರಕರಣ ದಾಖಲಿಸಿರುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಜಯನಗರ ಪೊಲೀಸ್ ಠಾಣೆ ಎದುರಿನ ವಿನಾಯಕ ದೇವಸ್ಥಾನದ ಹೊರಗೆ ಪ್ರಾಣಪ್ರತಿಷ್ಠಾನ ಕಾರ್ಯಕ್ರಮದ ನೇರಪ್ರದರ್ಶನ ನಡೆದಿದೆ. ಕಾರ್ಯಕ್ರಮದಲ್ಲಿ ಕನ್ನಡ ನಟಿ ತಾರಾ ಉಪಸ್ಥಿತರಿದ್ದರು. ಜಯನಗರ ನಿವಾಸಿಯೊಬ್ಬರು ಇದು ಭಾರತದ ಸುವರ್ಣಯುಗ, ಮೋದಿಜಿ ಇದನ್ನು ಸಾಧ್ಯವಾಗಿಸಿದ್ದಾರೆ. ಅಯೋಧ್ಯೆಯಲ್ಲಿ ಮಹಾಮಸ್ತಕಾಭಿಷೇಕವನ್ನು ವೀಕ್ಷಿಸುವುದು ಒಂದು ದೊಡ್ಡ ಗೌರವವಾಗಿದೆ ಆದರೆ ಅದು ಸಾಧ್ಯವಿಲ್ಲ, ಆದ್ದರಿಂದ ಸಮುದಾಯದೊಂದಿಗೆ ಇಲ್ಲಿ ವೀಕ್ಷಿಸುವುದರಿಂದ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಕಾಶಿ ಮತ್ತು ಮಥುರಾ ಕುರಿತ ಘೋಷಣೆಯ ಬಗ್ಗೆ ಕೇಳಿದಾಗ, ಕೇಸರಿ ಶಾಲು ಧರಿಸಿದ ನಿವಾಸಿಗಳಲ್ಲಿ ಒಬ್ಬರು, ಇದು ಕೇವಲ ಆರಂಭ. ಅವರು ಅನೇಕ ದೇವಾಲಯಗಳನ್ನು ನಾಶಪಡಿಸಿದರು ಮತ್ತು ಅಯೋಧ್ಯೆಯನ್ನು ನಾವು  ಮರಳಿ ಪಡೆದಿದ್ದೇವೆ. ಆದರೆ ಇದೀಗ, ಈ ಕ್ಷಣವನ್ನು ಆನಂದಿಸುವ ಸಮಯ ಎಂದು ಹೇಳಿದ್ದಾರೆ. ಅಲ್ಲಿದ್ದ ಕೆಲವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 22ರಂದು ರಜೆ ಘೋಷಿಸಿಲ್ಲ ಎಂದು ಟೀಕಿಸಿದ್ದಾರೆ. ಭಾರತೀಯ ಇತಿಹಾಸದಲ್ಲಿ ಇದು ಮಹತ್ವದ ದಿನವಾಗಿದೆ, ಸರ್ಕಾರ ರಜೆ ಘೋಷಿಸದಿದ್ದರೆ ಹೇಗೆ? ಎಂದು ತನ್ನ ಮಗಳ ಜೊತೆ ಬಂದಿದ್ದ 40 ವರ್ಷದ ಟೆಕ್ಕಿಯೊಬ್ಬರು ಪ್ರಶ್ನಿಸಿದ್ದಾರೆ.

ಎಂಜಿ ರಸ್ತೆಯಲ್ಲಿರುವ ನವರಥನ್ ಜ್ಯುವೆಲ್ಲರ್ಸ್‌ನ ಸಿಬ್ಬಂದಿಗಳು ತಮ್ಮ ಅಂಗಡಿಯ ಮುಂದೆ ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ, ರಸ್ತೆಯಲ್ಲಿ ಪಟಾಕಿ ಸಿಡಿಸುತ್ತಾ, ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ನೃತ್ಯ ಮಾಡಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ಬಳಿ ರಾಮ, ಸೀತೆ, ಲಕ್ಷ್ಮಣ, ಹನುಮಾನ್ ವೇಷಧರಿಸಿ ಕಲಾವಿದರು ಮೆರವಣಿಗೆ ನಡೆಸಿದ್ದಾರೆ.

ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಸಮಾರಂಭವು ಸೋಮವಾರ ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಿ 12.28ಕ್ಕೆ ಪೂರ್ಣಗೊಂಡಿತ್ತು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಬೆನ್‌ ಪಟೇಲ್‌, ಯೋಗಿ ಆದಿತ್ಯನಾಥ್‌ ಸೇರಿ ಹಲವರು ಉಪಸ್ಥಿತರಿದ್ದರು.

ರಾಮಮಂದಿರದಂತೆಯೇ ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯು ವಿವಾದಿತ ಕೇಂದ್ರವಾಗಿದೆ. ವಾರಣಾಸಿ, ಜ್ಞಾನವಾಪಿ ಮಸೀದಿಯು ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪದಲ್ಲಿದೆ. ಇದನ್ನು ದೇವಾಲಯದ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. ಮಥುರಾ ಪ್ರಕರಣದಲ್ಲಿ 1,670ರಲ್ಲಿ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ನಿರ್ಮಿಸಲಾದ ಶಾಹಿ ಈದ್ಗಾ ಮಸೀದಿಯು ಕೃಷ್ಣ ಜನ್ಮಸ್ಥಾನದ ದೇವಸ್ಥಾನದ ಪಕ್ಕದಲ್ಲಿರುವ ಕೃಷ್ಣನ ಜನ್ಮಸ್ಥಳದಲ್ಲಿದೆ ಎಂದು ಹಿಂದೂ ಅರ್ಜಿದಾರರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ. ಈ ಪ್ರಕರಣಗಳು ಕೋರ್ಟ್‌ನಲ್ಲಿದೆ.

ಇದನ್ನು ಓದಿ: ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...