Homeಮುಖಪುಟಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

ಕಾಶಿ, ಮಥುರಾ ಅಭಿಯಾನ: ಭಾಗವತ್ ಹೇಳಿಕೆಗೆ ಸಿಪಿಐ(ಎಂ) ಖಂಡನೆ

- Advertisement -
- Advertisement -

ಕಾಶಿ-ಮಥುರಾ ಅಭಿಯಾನಗಳನ್ನು ಮತ್ತೆ ಪ್ರಚೋದಿಸಲು ಪ್ರಯತ್ನಿಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ತೀವ್ರವಾಗಿ ಖಂಡಿಸಿದೆ. ಭಾಗವತ್ ಅವರ ಹೇಳಿಕೆಗಳು ‘ಭಾರತದ ಸಂವಿಧಾನದ ಬಗ್ಗೆ ಆರ್‌ಎಸ್‌ಎಸ್‌ನ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತವೆ ಮತ್ತು ನೆಲದ ಕಾನೂನನ್ನು ಉಲ್ಲಂಘಿಸುತ್ತವೆ’ ಎಂದು ಹೇಳಿದೆ.

ಗುರುವಾರ (ಆ.28) ದೆಹಲಿಯ ವಿಜ್ಞಾನ ಭವನದಲ್ಲಿ ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಮೂರು ದಿನಗಳ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ನಮ್ಮ ಸ್ವಯಂಸೇವಕರು ಕಾಶಿ, ಮಥುರಾ ಚಳುವಳಿಗಳಿಗೆ ಸೇರಲು ಸ್ವತಂತ್ರರು. ಮುಸ್ಲಿಮರು ‘ಸಹೋದರತ್ವ’ ಕ್ಕಾಗಿ ಈ ಮೂರನ್ನು ತ್ಯಜಿಸಬೇಕು” ಎಂದು ಹೇಳಿಕೆ ಕೊಟ್ಟಿದ್ದರು.

“ಆರ್‌ಎಸ್‌ಎಸ್ ದೇವಾಲಯ ಚಳುವಳಿಗಳಿಗೆ ಸೇರುವುದಿಲ್ಲ; ಆರ್‌ಎಸ್‌ಎಸ್ ಕೈ ಜೋಡಿಸಿದ ಏಕೈಕ ಚಳುವಳಿಯೆಂದರೆ ಅದು, ರಾಮ ಮಂದಿರ ಚಳುವಳಿ. ನಾವು ಅದನ್ನು ಕೊನೆಯವರೆಗೂ ಮುನ್ನಡೆಸಿದ್ದೇವೆ. ಸಂಘ ಇನ್ನು ಮುಂದೆ ಯಾವುದೇ (ದೇವಾಲಯ) ಚಳುವಳಿಗಳಿಗೆ ಸೇರುವುದಿಲ್ಲ. ಹಿಂದೂಗಳ ಭಾವನೆಯಲ್ಲಿ ಎರಡು ಜನ್ಮಸ್ಥಳಗಳಾಗಿ ಮತ್ತು ಒಂದು ವಾಸಸ್ಥಳವಾಗಿ ಕಾಶಿ-ಮಥುರಾ ಮತ್ತು ಅಯೋಧ್ಯೆ ಹೆಚ್ಚಿನ ಮಹತ್ವವನ್ನು ಹೊಂದಿವೆ. ಆದ್ದರಿಂದ, ಹಿಂದೂ ಸಮಾಜವು ಈ ಸ್ಥಳಗಳಿಗಾಗಿ ಆಗ್ರಹಿಸುತ್ತದೆ” ಎಂದು ಭಾಗವತ್ ಹೇಳಿದ್ದರು.

“ಆರ್‌ಎಸ್‌ಎಸ್ ಈ ಚಳುವಳಿಗಳ ಭಾಗವಾಗುವುದಿಲ್ಲ, ಆದರೆ ಸ್ವಯಂಸೇವಕರು ಸೇರಲು ಸ್ವತಂತ್ರರು” ಎಂದು ತಿಳಿಸಿದ್ದರು.

ಹಿಂದೂಗಳು ಎಲ್ಲಾ ಸ್ಥಳಗಳಲ್ಲಿ ದೇವಾಲಯಗಳನ್ನು ಹುಡುಕಬಾರದು. ಆದರೆ, ಮುಸ್ಲಿಮರು ಸಹೋದರತ್ವಕ್ಕಾಗಿ ಈ ಮೂರನ್ನು ತ್ಯಜಿಸಬೇಕು ಎಂದು ಎಂದಿದ್ದರು.

“ನಾವು ಎಲ್ಲಾ ಸ್ಥಳಗಳಲ್ಲಿ ಶಿವಲಿಂಗ ಅಥವಾ ಮಂದಿರವನ್ನು ಹುಡುಕಬಾರದು. ನಾನು ಹಿಂದೂ ಸಂಘಟನೆಯ ಮುಖ್ಯಸ್ಥನಾಗಿ ಈ ಘೋಷಣೆ ಮಾಡುತ್ತಿದ್ದರೆ, ಇನ್ನೊಂದು ಕಡೆಯವರು ಈ ಮೂರನ್ನು ಕೈಬಿಡಬೇಕು. ಇದು ಸಹೋದರತ್ವಕ್ಕೆ ಒಂದು ದೊಡ್ಡ ಹೆಜ್ಜೆಯಾಗಲಿದೆ” ಎಂದು ಭಾಗವತ್ ಹೇಳಿದ್ದರು.

ಆರೆಸ್ಸೆಸ್ ಭಾಗಿಯಾಗಿದ್ದ ಬಾಬರಿ ಮಸೀದಿ ಧ್ವಂಸ ಕೃತ್ಯದ ನಂತರ, 1947 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಯಾವುದೇ ಧಾರ್ಮಿಕ ಸ್ಥಳವನ್ನು ಬದಲಾಯಿಸುವುದನ್ನು ನಿಷೇಧಿಸುವ ಕಾನೂನನ್ನು ಸಂಸತ್ತು ಅಂಗೀಕರಿಸಿತು ಎಂದು ಸಿಪಿಐ(ಎಂ) ಎತ್ತಿ ತೋರಿಸಿದೆ.

ಬಾಬರಿ ಧ್ವಂಸದ ನಂತರ, ವಿವಿಧ ಹಿಂದುತ್ವ ಶಕ್ತಿಗಳು ನಿರಂತರವಾಗಿ “ಅಯೋಧ್ಯಾ ತೋ ಸಿರ್ಫ್ ಜಾನ್‌ ಕಿ ಹೈ, ಕಾಶಿ-ಮಥುರಾ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗುತ್ತಿವೆ. ಇದರ ಅರ್ಥ “ಅಯೋಧ್ಯಾ ಕೇವಲ ಟ್ರೇಲರ್, ಕಾಶಿ ಮತ್ತು ಮಥುರಾ ಇನ್ನೂ ಉಳಿದಿವೆ” ಎಂದಾಗಿದೆ. ಇದು ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಉಲ್ಲೇಖಿಸಿದ ಘೋಷಣೆಯಾಗಿದೆ.

“ಇಂತಹ ಬೇಡಿಕೆಗಳು ಕೋಮು ಭಾವನೆಗಳನ್ನು ಕೆರಳಿಸುವ, ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯುವ ಮತ್ತು ಧಾರ್ಮಿಕ ಆಧಾರದ ಮೇಲೆ ಸಮಾಜವನ್ನು ಧ್ರುವೀಕರಿಸುವ ಗುರಿಯನ್ನು ಹೊಂದಿವೆ” ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಪ್ರಕಟಣೆಯಲ್ಲಿ ಹೇಳಿದೆ.

“ಮುಂಬರುವ ಚುನಾವಣೆಗಳಿಗೆ ಮುಂಚಿತವಾಗಿ ಜನಾಕ್ರೋಶದಿಂದ ಬಿಜೆಪಿ ಸರ್ಕಾರವನ್ನು ರಕ್ಷಿಸಲು ಆರ್‌ಎಸ್‌ಎಸ್ ಮುಖ್ಯಸ್ಥರು ವಿಭಜನಕಾರಿ ವಿಷಯಗಳನ್ನು ಮುನ್ನೆಲೆ ತರುತ್ತಿದ್ದಾರೆ. ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ಕೋಮು ವಿಭಜನೆಯನ್ನು ಪ್ರಚೋದಿಸುತ್ತಿವೆ” ಎಂದು ಸಿಪಿಐ(ಎಂ) ಕಿಡಿಕಾರಿದೆ.

“ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆ, ದುರ್ಬಲಗೊಳ್ಳುತ್ತಿರುವ ಆರ್ಥಿಕತೆ, ರೈತರು ಮತ್ತು ಕಾರ್ಮಿಕರ ಮೇಲೆ ಹೆಚ್ಚುತ್ತಿರುವ ದಾಳಿಗಳು ಮತ್ತು ಚುನಾವಣಾ ದುರುಪಯೋಗಗಳಿಂದ ಜನರು ಬಿಜೆಪಿ ನೇತೃತ್ವದ ಸರ್ಕಾರದ ಬಗ್ಗೆ ಹೆಚ್ಚು ಹೆಚ್ಚು ಭ್ರಮನಿರಸನಗೊಳ್ಳುತ್ತಿದ್ದಾರೆ. ಅದರ ವೈಫಲ್ಯಗಳನ್ನು ಹೆಚ್ಚು ಸ್ಪಷ್ಟವಾಗಿ ನೋಡುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಆರೆಸ್ಸೆಸ್‌ನ ವಿಭಜಕ ನೀತಿಗಳ ವಿರುದ್ಧ ‘ಜಾಗರೂಕರಾಗಿರಿ’. ಭಾರತದ ಏಕತೆ ಮತ್ತು ಸಮಗ್ರತೆಯು ಅತ್ಯಂತ ಮಹತ್ವದ್ದಾಗಿದೆ. ಅದನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಬೇಕು” ಎಂದು ಸಿಪಿಐ(ಎಂ) ದೇಶದ ಜನರಿಗೆ ಒತ್ತಿ ಹೇಳಿದೆ.

ಇದನ್ನು ಸಾಧಿಸಲು, ‘ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ಮೂಲಕ ವಿಶಾಲವಾದ ಪ್ರತಿರೋಧವನ್ನು ನಿರ್ಮಿಸುವುದು ತುರ್ತಾಗಿ ಅಗತ್ಯವಾಗಿದೆ’ ಎಂದಿದೆ.

‘ಭಾರತೀಯ ಮಹಿಳೆಯರ ಮೇಲೆ ಹೊರೆಯಾಕಬೇಡಿ..’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...