Homeಮುಖಪುಟಪಹಲ್ಗಾಮ್‌ ದಾಳಿ ಖಂಡಿಸಿ ಇಂದು 'ಕಾಶ್ಮೀರ ಬಂದ್‌': ಆಡಳಿತ, ಪ್ರತಿಪಕ್ಷಗಳ ಬೆಂಬಲ

ಪಹಲ್ಗಾಮ್‌ ದಾಳಿ ಖಂಡಿಸಿ ಇಂದು ‘ಕಾಶ್ಮೀರ ಬಂದ್‌’: ಆಡಳಿತ, ಪ್ರತಿಪಕ್ಷಗಳ ಬೆಂಬಲ

- Advertisement -
- Advertisement -

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ 28 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆ, ಭಯೋತ್ಪಾದನೆ ವಿರುದ್ಧ ಬಲವಾದ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಜಮ್ಮು ಕಾಶ್ಮೀರದ ಹಲವಾರು ರಾಜಕೀಯ ಪಕ್ಷಗಳು ಬುಧವಾರ (ಏ.23) ‘ಕಾಶ್ಮೀರ ಬಂದ್‌’ಗೆ ಕರೆ ನೀಡಿವೆ.

ಆಡಳಿತರೂಢ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಪಕ್ಷವು ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರು ಮತ್ತು ಅವರ ದುಖಃತಪ್ತ ಕುಟುಂಬಗಳಿಗೆ ಬೆಂಬಲ ಸೂಚಿಸುವ ಸಂಕೇತವಾಗಿ ಬಂದ್ ಘೋಷಣೆ ಮಾಡಲಾಗಿದೆ. ಅದನ್ನು ಸಂಪೂರ್ಣ ಯಶಸ್ವಿಗೊಳಿಸುವಂತೆ ಜನರಿಗೆ ಮನವಿ ಮಾಡಿದೆ.

“ಈ ಬಂದ್ ಕೇವಲ ಒಂದು ಪ್ರತಿಭಟನೆಯಲ್ಲ, ಬದಲಾಗಿ ಅರ್ಥಹೀನ ಹಿಂಸಾಚಾರದ ವಿರುದ್ಧ ನೋವು ಮತ್ತು ಆಕ್ರೋಶದ ಸಾಮೂಹಿಕ ಅಭಿವ್ಯಕ್ತಿಯಾಗಿದೆ” ಎಂದು ಜೆಕೆಎನ್‌ಸಿ ಒತ್ತಿ ಹೇಳಿದೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಪಕ್ಷವು ತೀವ್ರವಾಗಿ ಖಂಡಿಸುತ್ತದೆ. ಅಧ್ಯಕ್ಷರ ಸೂಚನೆಯ ಮೇರೆಗೆ, ಪಕ್ಷವು ಕಾಶ್ಮೀರ ಬಂದ್‌ ಅನ್ನು ಬೆಂಬಲಿಸುತ್ತದೆ. ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಕರೆ ನೀಡಿರುವ ಈ ಬಂದ್ ಸಂಪೂರ್ಣ ಯಶಸ್ವಿಯಾಗುವಂತೆ ಸಹಕರಿಸಲು ನಾವು ಜಮ್ಮು ಕಾಶ್ಮೀರದ ಜನರಿಗೆ ಮನವಿ ಮಾಡುತ್ತೇವೆ” ಎಂದು ಜೆಕೆಎನ್‌ಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ

ಜಮ್ಮು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರ ಕುಟುಂಬಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ ಮತ್ತು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

“ಇದು ನಮ್ಮೆಲ್ಲರ ಮೇಲಿನ ದಾಳಿ” ಎಂದು ಕರೆದಿರುವ ಮೆಹಬೂಬಾ ಮುಫ್ತಿ “ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಪಹಲ್ಗಾಮ್‌ನಲ್ಲಿ ​​ಪ್ರವಾಸಿಗರ ಮೇಲಿನ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಾಳೆ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ. ಕ್ರೂರ ದಾಳಿಯಲ್ಲಿ ಸಾವನ್ನಪ್ಪಿದ ಮುಗ್ಧ ಜೀವಗಳಿಗೆ ಗೌರವ ಸಲ್ಲಿಸುವ ಸಂಕೇತವಾಗಿ ಈ ಬಂದ್‌ಗೆ ಬೆಂಬಲ ನೀಡಲು ಎಲ್ಲಾ ಕಾಶ್ಮೀರಿಗಳಿಗೆ ನಾನು ಮನವಿ ಮಾಡುತ್ತೇನೆ. ಇದು ಕೇವಲ ಕೆಲವು ಆಯ್ದ ಜನರ ಮೇಲಿನ ದಾಳಿಯಲ್ಲ, ಇದು ನಮ್ಮೆಲ್ಲರ ಮೇಲಿನ ದಾಳಿ. ಜನರ ದುಃಖ ಮತ್ತು ಆಕ್ರೋಶದ ಜೊತೆ ನಾವೂ ಇದ್ದೇವೆ. ಅಮಾಯಕರ ಹತ್ಯಾಕಾಂಡವನ್ನು ಖಂಡಿಸಿ ಈ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುತ್ತೇವೆ” ಎಂದು ಮುಫ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂದ್‌ಗೆ ಜೆಕೆಎಸ್‌ಎ ಬೆಂಬಲ

ಜಮ್ಮು ಕಾಶ್ಮೀರ ವಿದ್ಯಾರ್ಥಿ ಸಂಘ (ಜೆಕೆಎಸ್ಎ) ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ‘ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿ’ ಎಂದು ಕರೆದಿದ್ದು, ಬಂದ್‌ಗೆ ತನ್ನ ಬೆಂಬಲ ವ್ಯಕ್ತಪಡಿಸಿದೆ.

“ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಜಮ್ಮು ನಾಳೆ ಕರೆ ನೀಡಿರುವ ಬಂದ್‌ಗೆ ಜೆಕೆಎಸ್ಎ ಸಂಪೂರ್ಣ ಬೆಂಬಲ ನೀಡುತ್ತದೆ. ಈ ದುರಂತ ದಾಳಿ ಕೇವಲ ಕೆಲವು ವ್ಯಕ್ತಿಗಳ ಮೇಲಿನ ದಾಳಿಯಲ್ಲ; ಇದು ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿಯಾಗಿದೆ” ಎಂದು ಜೆಕೆಎಸ್ಎ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಬಂದ್‌ ಬೆಂಬಲಿಸಿದ ಹುರಿಯತ್ ಕಾನ್ಫರೆನ್ಸ್

ಆಲ್ ಪಾರ್ಟೀಸ್ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್, ಜಮ್ಮು ಕಾಶ್ಮೀರದ ಜನರು ಬಂದ್ ಬೆಂಬಲಿಸಬೇಕು ಮತ್ತು ಘೋರ ಕೃತ್ಯದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಬೇಕು ಎಂದು ಮನವಿ ಮಾಡಿದ್ದಾರೆ.

“ಯಾರು ಮುಗ್ದರನ್ನು ಕೊಂದಿದ್ದಾರೋ.. ಅವರು ಇಡೀ ಮಾನವಕುಲವನ್ನುಕೊಂದಂತೆ. ಪ್ರವಾಸಿಗರನ್ನು ಅತ್ಯಂತ ಭೀಕರ ರೀತಿಯಲ್ಲಿ ನಿರ್ದಯವಾಗಿ ಕೊಂದಿರುವುದು ಕಾಶ್ಮೀರದ ರಕ್ತಸಿಕ್ತ ಇತಿಹಾಸದಲ್ಲಿ ಮತ್ತೊಂದು ಹತ್ಯಾಕಾಂಡದ ದಿನ. ಕಾಶ್ಮೀರದ ಜನರಿಗೆ ಇಂತಹ ದುರಂತಗಳ ನೋವು ಮತ್ತು ದುಃಖ ತಿಳಿದಿದೆ. ಶಾಂತಿ, ಸದ್ಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಹೊಂದಿರುವ ಇಸ್ಲಾಂ ಧರ್ಮ ಇಂತಹ ಭೀಕರತೆಯನ್ನು ಒಪ್ಪುವುದಿಲ್ಲ. ಜಮ್ಮು ಕಾಶ್ಮೀರದ ಇಸ್ಲಾಮಿಕ್ ಸಮೂಹವು ಮುತಾಹಿದಾ ಮಜ್ಲಿಸ್ ಉಲೇಮಾ (ಎಂಎಂಯು) ಮೂಲಕ ಸಾವಿಗೀಡಾದವರ ಕುಟುಂಬಗಳ ಜೊತೆಗೆ ನಿಲ್ಲಲಿದೆ. ಜಮ್ಮು ಕಾಶ್ಮೀರದ ಜನರು ನಾಳೆ ಬಂದ್ ಮೂಲಕ ಈ ಘೋರ ಅಪರಾಧವನ್ನು ಶಾಂತಿಯುತವಾಗಿ ಪ್ರತಿಭಟಿಸುವಂತೆ ಮನವಿ ಮಾಡುತ್ತೇವೆ” ಎಂದು ಮಿರ್ವೈಜ್ ಫಾರೂಕ್ ಮಂಗಳವಾರ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಹಲವಾರು ಸ್ಥಳಗಳಲ್ಲಿ ಮಂಗಳವಾರ ರಾತ್ರಿ ಮೇಣದ ಬತ್ತಿ ಮೆರವಣಿಗೆ ನಡೆದಿದೆ. ಬಾರಾಮುಲ್ಲಾ, ಶ್ರೀನಗರ, ಪೂಂಚ್, ಕುಪ್ವಾರಾದ ಮತ್ತು ಅಖೂರ್ ಪ್ರದೇಶದ ಖೋಡ್ ಗ್ರಾಮದಲ್ಲಿ ಸ್ಥಳೀಯರು ಮೇಣದ ಬತ್ತಿ ಮೆರವಣಿಗೆ ನಡೆಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...