Homeಮುಖಪುಟಪಹಲ್ಗಾಮ್‌ ದಾಳಿ ಖಂಡಿಸಿ ಇಂದು 'ಕಾಶ್ಮೀರ ಬಂದ್‌': ಆಡಳಿತ, ಪ್ರತಿಪಕ್ಷಗಳ ಬೆಂಬಲ

ಪಹಲ್ಗಾಮ್‌ ದಾಳಿ ಖಂಡಿಸಿ ಇಂದು ‘ಕಾಶ್ಮೀರ ಬಂದ್‌’: ಆಡಳಿತ, ಪ್ರತಿಪಕ್ಷಗಳ ಬೆಂಬಲ

- Advertisement -
- Advertisement -

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ 28 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆ, ಭಯೋತ್ಪಾದನೆ ವಿರುದ್ಧ ಬಲವಾದ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಜಮ್ಮು ಕಾಶ್ಮೀರದ ಹಲವಾರು ರಾಜಕೀಯ ಪಕ್ಷಗಳು ಬುಧವಾರ (ಏ.23) ‘ಕಾಶ್ಮೀರ ಬಂದ್‌’ಗೆ ಕರೆ ನೀಡಿವೆ.

ಆಡಳಿತರೂಢ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಪಕ್ಷವು ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರು ಮತ್ತು ಅವರ ದುಖಃತಪ್ತ ಕುಟುಂಬಗಳಿಗೆ ಬೆಂಬಲ ಸೂಚಿಸುವ ಸಂಕೇತವಾಗಿ ಬಂದ್ ಘೋಷಣೆ ಮಾಡಲಾಗಿದೆ. ಅದನ್ನು ಸಂಪೂರ್ಣ ಯಶಸ್ವಿಗೊಳಿಸುವಂತೆ ಜನರಿಗೆ ಮನವಿ ಮಾಡಿದೆ.

“ಈ ಬಂದ್ ಕೇವಲ ಒಂದು ಪ್ರತಿಭಟನೆಯಲ್ಲ, ಬದಲಾಗಿ ಅರ್ಥಹೀನ ಹಿಂಸಾಚಾರದ ವಿರುದ್ಧ ನೋವು ಮತ್ತು ಆಕ್ರೋಶದ ಸಾಮೂಹಿಕ ಅಭಿವ್ಯಕ್ತಿಯಾಗಿದೆ” ಎಂದು ಜೆಕೆಎನ್‌ಸಿ ಒತ್ತಿ ಹೇಳಿದೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಪಕ್ಷವು ತೀವ್ರವಾಗಿ ಖಂಡಿಸುತ್ತದೆ. ಅಧ್ಯಕ್ಷರ ಸೂಚನೆಯ ಮೇರೆಗೆ, ಪಕ್ಷವು ಕಾಶ್ಮೀರ ಬಂದ್‌ ಅನ್ನು ಬೆಂಬಲಿಸುತ್ತದೆ. ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಕರೆ ನೀಡಿರುವ ಈ ಬಂದ್ ಸಂಪೂರ್ಣ ಯಶಸ್ವಿಯಾಗುವಂತೆ ಸಹಕರಿಸಲು ನಾವು ಜಮ್ಮು ಕಾಶ್ಮೀರದ ಜನರಿಗೆ ಮನವಿ ಮಾಡುತ್ತೇವೆ” ಎಂದು ಜೆಕೆಎನ್‌ಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ

ಜಮ್ಮು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರ ಕುಟುಂಬಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ ಮತ್ತು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

“ಇದು ನಮ್ಮೆಲ್ಲರ ಮೇಲಿನ ದಾಳಿ” ಎಂದು ಕರೆದಿರುವ ಮೆಹಬೂಬಾ ಮುಫ್ತಿ “ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಪಹಲ್ಗಾಮ್‌ನಲ್ಲಿ ​​ಪ್ರವಾಸಿಗರ ಮೇಲಿನ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಾಳೆ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ. ಕ್ರೂರ ದಾಳಿಯಲ್ಲಿ ಸಾವನ್ನಪ್ಪಿದ ಮುಗ್ಧ ಜೀವಗಳಿಗೆ ಗೌರವ ಸಲ್ಲಿಸುವ ಸಂಕೇತವಾಗಿ ಈ ಬಂದ್‌ಗೆ ಬೆಂಬಲ ನೀಡಲು ಎಲ್ಲಾ ಕಾಶ್ಮೀರಿಗಳಿಗೆ ನಾನು ಮನವಿ ಮಾಡುತ್ತೇನೆ. ಇದು ಕೇವಲ ಕೆಲವು ಆಯ್ದ ಜನರ ಮೇಲಿನ ದಾಳಿಯಲ್ಲ, ಇದು ನಮ್ಮೆಲ್ಲರ ಮೇಲಿನ ದಾಳಿ. ಜನರ ದುಃಖ ಮತ್ತು ಆಕ್ರೋಶದ ಜೊತೆ ನಾವೂ ಇದ್ದೇವೆ. ಅಮಾಯಕರ ಹತ್ಯಾಕಾಂಡವನ್ನು ಖಂಡಿಸಿ ಈ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುತ್ತೇವೆ” ಎಂದು ಮುಫ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂದ್‌ಗೆ ಜೆಕೆಎಸ್‌ಎ ಬೆಂಬಲ

ಜಮ್ಮು ಕಾಶ್ಮೀರ ವಿದ್ಯಾರ್ಥಿ ಸಂಘ (ಜೆಕೆಎಸ್ಎ) ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ‘ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿ’ ಎಂದು ಕರೆದಿದ್ದು, ಬಂದ್‌ಗೆ ತನ್ನ ಬೆಂಬಲ ವ್ಯಕ್ತಪಡಿಸಿದೆ.

“ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಜಮ್ಮು ನಾಳೆ ಕರೆ ನೀಡಿರುವ ಬಂದ್‌ಗೆ ಜೆಕೆಎಸ್ಎ ಸಂಪೂರ್ಣ ಬೆಂಬಲ ನೀಡುತ್ತದೆ. ಈ ದುರಂತ ದಾಳಿ ಕೇವಲ ಕೆಲವು ವ್ಯಕ್ತಿಗಳ ಮೇಲಿನ ದಾಳಿಯಲ್ಲ; ಇದು ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿಯಾಗಿದೆ” ಎಂದು ಜೆಕೆಎಸ್ಎ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಬಂದ್‌ ಬೆಂಬಲಿಸಿದ ಹುರಿಯತ್ ಕಾನ್ಫರೆನ್ಸ್

ಆಲ್ ಪಾರ್ಟೀಸ್ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್, ಜಮ್ಮು ಕಾಶ್ಮೀರದ ಜನರು ಬಂದ್ ಬೆಂಬಲಿಸಬೇಕು ಮತ್ತು ಘೋರ ಕೃತ್ಯದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಬೇಕು ಎಂದು ಮನವಿ ಮಾಡಿದ್ದಾರೆ.

“ಯಾರು ಮುಗ್ದರನ್ನು ಕೊಂದಿದ್ದಾರೋ.. ಅವರು ಇಡೀ ಮಾನವಕುಲವನ್ನುಕೊಂದಂತೆ. ಪ್ರವಾಸಿಗರನ್ನು ಅತ್ಯಂತ ಭೀಕರ ರೀತಿಯಲ್ಲಿ ನಿರ್ದಯವಾಗಿ ಕೊಂದಿರುವುದು ಕಾಶ್ಮೀರದ ರಕ್ತಸಿಕ್ತ ಇತಿಹಾಸದಲ್ಲಿ ಮತ್ತೊಂದು ಹತ್ಯಾಕಾಂಡದ ದಿನ. ಕಾಶ್ಮೀರದ ಜನರಿಗೆ ಇಂತಹ ದುರಂತಗಳ ನೋವು ಮತ್ತು ದುಃಖ ತಿಳಿದಿದೆ. ಶಾಂತಿ, ಸದ್ಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಹೊಂದಿರುವ ಇಸ್ಲಾಂ ಧರ್ಮ ಇಂತಹ ಭೀಕರತೆಯನ್ನು ಒಪ್ಪುವುದಿಲ್ಲ. ಜಮ್ಮು ಕಾಶ್ಮೀರದ ಇಸ್ಲಾಮಿಕ್ ಸಮೂಹವು ಮುತಾಹಿದಾ ಮಜ್ಲಿಸ್ ಉಲೇಮಾ (ಎಂಎಂಯು) ಮೂಲಕ ಸಾವಿಗೀಡಾದವರ ಕುಟುಂಬಗಳ ಜೊತೆಗೆ ನಿಲ್ಲಲಿದೆ. ಜಮ್ಮು ಕಾಶ್ಮೀರದ ಜನರು ನಾಳೆ ಬಂದ್ ಮೂಲಕ ಈ ಘೋರ ಅಪರಾಧವನ್ನು ಶಾಂತಿಯುತವಾಗಿ ಪ್ರತಿಭಟಿಸುವಂತೆ ಮನವಿ ಮಾಡುತ್ತೇವೆ” ಎಂದು ಮಿರ್ವೈಜ್ ಫಾರೂಕ್ ಮಂಗಳವಾರ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಹಲವಾರು ಸ್ಥಳಗಳಲ್ಲಿ ಮಂಗಳವಾರ ರಾತ್ರಿ ಮೇಣದ ಬತ್ತಿ ಮೆರವಣಿಗೆ ನಡೆದಿದೆ. ಬಾರಾಮುಲ್ಲಾ, ಶ್ರೀನಗರ, ಪೂಂಚ್, ಕುಪ್ವಾರಾದ ಮತ್ತು ಅಖೂರ್ ಪ್ರದೇಶದ ಖೋಡ್ ಗ್ರಾಮದಲ್ಲಿ ಸ್ಥಳೀಯರು ಮೇಣದ ಬತ್ತಿ ಮೆರವಣಿಗೆ ನಡೆಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...