Homeಮುಖಪುಟಪಹಲ್ಗಾಮ್‌ ದಾಳಿ ಖಂಡಿಸಿ ಇಂದು 'ಕಾಶ್ಮೀರ ಬಂದ್‌': ಆಡಳಿತ, ಪ್ರತಿಪಕ್ಷಗಳ ಬೆಂಬಲ

ಪಹಲ್ಗಾಮ್‌ ದಾಳಿ ಖಂಡಿಸಿ ಇಂದು ‘ಕಾಶ್ಮೀರ ಬಂದ್‌’: ಆಡಳಿತ, ಪ್ರತಿಪಕ್ಷಗಳ ಬೆಂಬಲ

- Advertisement -
- Advertisement -

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ 28 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆ, ಭಯೋತ್ಪಾದನೆ ವಿರುದ್ಧ ಬಲವಾದ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಜಮ್ಮು ಕಾಶ್ಮೀರದ ಹಲವಾರು ರಾಜಕೀಯ ಪಕ್ಷಗಳು ಬುಧವಾರ (ಏ.23) ‘ಕಾಶ್ಮೀರ ಬಂದ್‌’ಗೆ ಕರೆ ನೀಡಿವೆ.

ಆಡಳಿತರೂಢ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಪಕ್ಷವು ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರು ಮತ್ತು ಅವರ ದುಖಃತಪ್ತ ಕುಟುಂಬಗಳಿಗೆ ಬೆಂಬಲ ಸೂಚಿಸುವ ಸಂಕೇತವಾಗಿ ಬಂದ್ ಘೋಷಣೆ ಮಾಡಲಾಗಿದೆ. ಅದನ್ನು ಸಂಪೂರ್ಣ ಯಶಸ್ವಿಗೊಳಿಸುವಂತೆ ಜನರಿಗೆ ಮನವಿ ಮಾಡಿದೆ.

“ಈ ಬಂದ್ ಕೇವಲ ಒಂದು ಪ್ರತಿಭಟನೆಯಲ್ಲ, ಬದಲಾಗಿ ಅರ್ಥಹೀನ ಹಿಂಸಾಚಾರದ ವಿರುದ್ಧ ನೋವು ಮತ್ತು ಆಕ್ರೋಶದ ಸಾಮೂಹಿಕ ಅಭಿವ್ಯಕ್ತಿಯಾಗಿದೆ” ಎಂದು ಜೆಕೆಎನ್‌ಸಿ ಒತ್ತಿ ಹೇಳಿದೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಪಕ್ಷವು ತೀವ್ರವಾಗಿ ಖಂಡಿಸುತ್ತದೆ. ಅಧ್ಯಕ್ಷರ ಸೂಚನೆಯ ಮೇರೆಗೆ, ಪಕ್ಷವು ಕಾಶ್ಮೀರ ಬಂದ್‌ ಅನ್ನು ಬೆಂಬಲಿಸುತ್ತದೆ. ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಕರೆ ನೀಡಿರುವ ಈ ಬಂದ್ ಸಂಪೂರ್ಣ ಯಶಸ್ವಿಯಾಗುವಂತೆ ಸಹಕರಿಸಲು ನಾವು ಜಮ್ಮು ಕಾಶ್ಮೀರದ ಜನರಿಗೆ ಮನವಿ ಮಾಡುತ್ತೇವೆ” ಎಂದು ಜೆಕೆಎನ್‌ಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ

ಜಮ್ಮು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರ ಕುಟುಂಬಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ ಮತ್ತು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

“ಇದು ನಮ್ಮೆಲ್ಲರ ಮೇಲಿನ ದಾಳಿ” ಎಂದು ಕರೆದಿರುವ ಮೆಹಬೂಬಾ ಮುಫ್ತಿ “ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಪಹಲ್ಗಾಮ್‌ನಲ್ಲಿ ​​ಪ್ರವಾಸಿಗರ ಮೇಲಿನ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಾಳೆ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ. ಕ್ರೂರ ದಾಳಿಯಲ್ಲಿ ಸಾವನ್ನಪ್ಪಿದ ಮುಗ್ಧ ಜೀವಗಳಿಗೆ ಗೌರವ ಸಲ್ಲಿಸುವ ಸಂಕೇತವಾಗಿ ಈ ಬಂದ್‌ಗೆ ಬೆಂಬಲ ನೀಡಲು ಎಲ್ಲಾ ಕಾಶ್ಮೀರಿಗಳಿಗೆ ನಾನು ಮನವಿ ಮಾಡುತ್ತೇನೆ. ಇದು ಕೇವಲ ಕೆಲವು ಆಯ್ದ ಜನರ ಮೇಲಿನ ದಾಳಿಯಲ್ಲ, ಇದು ನಮ್ಮೆಲ್ಲರ ಮೇಲಿನ ದಾಳಿ. ಜನರ ದುಃಖ ಮತ್ತು ಆಕ್ರೋಶದ ಜೊತೆ ನಾವೂ ಇದ್ದೇವೆ. ಅಮಾಯಕರ ಹತ್ಯಾಕಾಂಡವನ್ನು ಖಂಡಿಸಿ ಈ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುತ್ತೇವೆ” ಎಂದು ಮುಫ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂದ್‌ಗೆ ಜೆಕೆಎಸ್‌ಎ ಬೆಂಬಲ

ಜಮ್ಮು ಕಾಶ್ಮೀರ ವಿದ್ಯಾರ್ಥಿ ಸಂಘ (ಜೆಕೆಎಸ್ಎ) ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ‘ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿ’ ಎಂದು ಕರೆದಿದ್ದು, ಬಂದ್‌ಗೆ ತನ್ನ ಬೆಂಬಲ ವ್ಯಕ್ತಪಡಿಸಿದೆ.

“ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಜಮ್ಮು ನಾಳೆ ಕರೆ ನೀಡಿರುವ ಬಂದ್‌ಗೆ ಜೆಕೆಎಸ್ಎ ಸಂಪೂರ್ಣ ಬೆಂಬಲ ನೀಡುತ್ತದೆ. ಈ ದುರಂತ ದಾಳಿ ಕೇವಲ ಕೆಲವು ವ್ಯಕ್ತಿಗಳ ಮೇಲಿನ ದಾಳಿಯಲ್ಲ; ಇದು ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿಯಾಗಿದೆ” ಎಂದು ಜೆಕೆಎಸ್ಎ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಬಂದ್‌ ಬೆಂಬಲಿಸಿದ ಹುರಿಯತ್ ಕಾನ್ಫರೆನ್ಸ್

ಆಲ್ ಪಾರ್ಟೀಸ್ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್, ಜಮ್ಮು ಕಾಶ್ಮೀರದ ಜನರು ಬಂದ್ ಬೆಂಬಲಿಸಬೇಕು ಮತ್ತು ಘೋರ ಕೃತ್ಯದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಬೇಕು ಎಂದು ಮನವಿ ಮಾಡಿದ್ದಾರೆ.

“ಯಾರು ಮುಗ್ದರನ್ನು ಕೊಂದಿದ್ದಾರೋ.. ಅವರು ಇಡೀ ಮಾನವಕುಲವನ್ನುಕೊಂದಂತೆ. ಪ್ರವಾಸಿಗರನ್ನು ಅತ್ಯಂತ ಭೀಕರ ರೀತಿಯಲ್ಲಿ ನಿರ್ದಯವಾಗಿ ಕೊಂದಿರುವುದು ಕಾಶ್ಮೀರದ ರಕ್ತಸಿಕ್ತ ಇತಿಹಾಸದಲ್ಲಿ ಮತ್ತೊಂದು ಹತ್ಯಾಕಾಂಡದ ದಿನ. ಕಾಶ್ಮೀರದ ಜನರಿಗೆ ಇಂತಹ ದುರಂತಗಳ ನೋವು ಮತ್ತು ದುಃಖ ತಿಳಿದಿದೆ. ಶಾಂತಿ, ಸದ್ಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಹೊಂದಿರುವ ಇಸ್ಲಾಂ ಧರ್ಮ ಇಂತಹ ಭೀಕರತೆಯನ್ನು ಒಪ್ಪುವುದಿಲ್ಲ. ಜಮ್ಮು ಕಾಶ್ಮೀರದ ಇಸ್ಲಾಮಿಕ್ ಸಮೂಹವು ಮುತಾಹಿದಾ ಮಜ್ಲಿಸ್ ಉಲೇಮಾ (ಎಂಎಂಯು) ಮೂಲಕ ಸಾವಿಗೀಡಾದವರ ಕುಟುಂಬಗಳ ಜೊತೆಗೆ ನಿಲ್ಲಲಿದೆ. ಜಮ್ಮು ಕಾಶ್ಮೀರದ ಜನರು ನಾಳೆ ಬಂದ್ ಮೂಲಕ ಈ ಘೋರ ಅಪರಾಧವನ್ನು ಶಾಂತಿಯುತವಾಗಿ ಪ್ರತಿಭಟಿಸುವಂತೆ ಮನವಿ ಮಾಡುತ್ತೇವೆ” ಎಂದು ಮಿರ್ವೈಜ್ ಫಾರೂಕ್ ಮಂಗಳವಾರ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಹಲವಾರು ಸ್ಥಳಗಳಲ್ಲಿ ಮಂಗಳವಾರ ರಾತ್ರಿ ಮೇಣದ ಬತ್ತಿ ಮೆರವಣಿಗೆ ನಡೆದಿದೆ. ಬಾರಾಮುಲ್ಲಾ, ಶ್ರೀನಗರ, ಪೂಂಚ್, ಕುಪ್ವಾರಾದ ಮತ್ತು ಅಖೂರ್ ಪ್ರದೇಶದ ಖೋಡ್ ಗ್ರಾಮದಲ್ಲಿ ಸ್ಥಳೀಯರು ಮೇಣದ ಬತ್ತಿ ಮೆರವಣಿಗೆ ನಡೆಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...